Homeಕರ್ನಾಟಕರೈತರ ಗಣರಾಜ್ಯೋತ್ಸವ: ತುಮಕೂರಿನಲ್ಲಿ ಟ್ರಾಕ್ಟರ್‌‌‌‌ ತಡೆದ ಪೊಲೀಸರು

ರೈತರ ಗಣರಾಜ್ಯೋತ್ಸವ: ತುಮಕೂರಿನಲ್ಲಿ ಟ್ರಾಕ್ಟರ್‌‌‌‌ ತಡೆದ ಪೊಲೀಸರು

ಸರ್ಕಾರ ಪೊಲೀಸರನ್ನು ಮುಂದಿಟ್ಟುಕೊಂಡು ಪ್ರತಿಭಟನೆಯನ್ನು ತಡೆಯಲು ಮುಂದಾದರೂ ಟ್ರಾಕ್ಟರ್‌‌‌‌ಗಳು ಬೆಂಗಳೂರಿಗೆ ತೆರಳಲಿವೆ ಎಂದು ರೈತರು ಎಚ್ಚರಿಸಿದ್ದಾರೆ.

- Advertisement -
- Advertisement -

ರೈತರ ಟ್ರ್ಯಾಕ್ಟರ್‌‌ ಪರೇಡ್‌ಗೆ ಅನುಮತಿ ನೀಡಿ ಪೊಲೀಸರ ಮೂಲಕ ಟ್ರಾಕ್ಟರ್‌‌‌‌‌ಗಳು ಬೆಂಗಳೂರು ಕಡೆಗೆ ಹೋಗದಂತೆ ನಿಯಂತ್ರಿಸಲು ಹೊರಟಿರುವ ರಾಜ್ಯ ಸರ್ಕಾರದ ದ್ವಂದ್ವ ನೀತಿಯ ಬಗ್ಗೆ ರೈತ ಸಂಘಟನೆಗಳಿಂದ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಟ್ರಾಕ್ಟರ್‌‌‌‌ ಪರೇಡ್ ನಡೆಸಬಹುದು. ಅದಕ್ಕೆ ಪೊಲೀಸರ ಅನುಮತಿ ಅಗತ್ಯ ಎಂದು ಸರ್ಕಾರ ಹೇಳಿತ್ತು. ಈಗ ಪೊಲೀಸರನ್ನು ಛೂಬಿಟ್ಟು ಟ್ರಾಕ್ಟರ್‌‌‌‌ಗಳು ಬೆಂಗಳೂರಿಗೆ ತೆರಳದಂತೆ ಅಲ್ಲಲ್ಲಿ ತಡೆಯುವ ಕೆಲಸ ನಡೆಯುತ್ತಿದೆ. ಇದು ಪ್ರಜಾಪ್ರಭುತ್ವ ಮೌಲ್ಯಗಳಿಗೆ ವಿರುದ್ಧ ನಡೆಯಾಗಿದೆ ಎಂದು ರೈತ ಸಂಘಟನೆಗಳು ವಿರೋಧ ವ್ಯಕ್ತಪಡಿಸಿವೆ.

ತುಮಕೂರು ಜಿಲ್ಲೆಯ ವಿವಿಧ ತಾಲೂಕುಗಳಿಂದ ರೈತರು ಸ್ವಯಂ ಪ್ರೇರಿತರಾಗಿ ತಮ್ಮ ಟ್ರಾಕ್ಟರ್‌‌‌‌ಗಳನ್ನು ಬೆಂಗಳೂರಿಗೆ ತೆಗೆದುಕೊಂಡು ಹೊರಟಿದ್ದರು. ತಿಪಟೂರಿನಿಂದ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ ಮುಖಂಡರು ಮತ್ತು ಕಾರ್ಯಕರ್ತರು ಟ್ರಾಕ್ಟರ್‌‌‌‌ಗಳಲ್ಲಿ ಬೆಂಗಳೂರಿಗೆ ತೆರಳುತ್ತಿದ್ದರು. ಮಾರ್ಗ ಮಧ್ಯೆ ಅಂದರೆ ಕೆ.ಬಿ. ಕ್ರಾಸ್‌ನಲ್ಲಿ ಪರೇಡ್ ಗೆ ತೆರಳುತ್ತಿದ್ದ ಟ್ರಾಕ್ಟರ್‌‌‌‌ಗಳನ್ನು ಪೊಲೀಸರು ತಡೆಹಿಡಿದು ರೈತರಿಗೆ ಅನಗತ್ಯ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಲಾಗಿದೆ.

ಇದನ್ನೂ ಓದಿ: ಮಹಾರಾಷ್ಟ್ರದ 21 ಜಿಲ್ಲೆಯಿಂದ ಮುಂಬೈಗೆ ಭೋರ್ಗರೆದ ರೈತರ ದಂಡು

ಕೆ.ಬಿ. ಕ್ರಾಸ್‌ನಲ್ಲಿ ಹತ್ತುಕ್ಕೂ ಹೆಚ್ಚು ಟ್ರಾಕ್ಟರ್‌‌‌‌ಗಳನ್ನು ತಡೆಯುತ್ತಿದ್ದಂತೆ ರೈತ ಮುಖಂಡರು ಪೊಲೀಸರಿಗೆ ಮನವಿ ಮಾಡಿ ಶಾಂತಿಯುತ ಪರೇಡ್‌ಗೆ ತೆರಳುತ್ತಿದ್ದೇವೆ. ಯಾವುದೇ ಸಮಸ್ಯೆಯಾಗದಂತೆ ಬೆಂಗಳೂರಿಗೆ ತೆರಳುತ್ತೇವೆ. ಮುಂದೆ ಹೋಗಲು ಅವಕಾಶ ಕೊಡಿ ಎಂದು ಕೆ.ಬಿ.ಕ್ರಾಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್‌ಗೆ ಮನವಿ ಮಾಡಿದ್ದಾರೆ. ತಮ್ಮ ನಾಯಕರಿಗೂ ಫೋನ್ ಮಾಡಿ ವಿಷಯ ತಿಳಿಸಿದ್ದಾರೆ. ಮೊದಲು ಬಿಡುತ್ತೇವೆ ಎಂದು ಹೇಳಿದ ಸಬ್‌ಇನ್ಸ್‌ಪೆಕ್ಟರ್ ನಂತರ ಸರ್ಕಲ್ ಇನ್ಸ್‌ಪೆಕ್ಟರ್ ಬರಬೇಕು, ಅಲ್ಲಿಯವರೆಗೂ ಮುಂದೆ ಹೋಗುವಂತಿಲ್ಲ ಎಂದು ರೈತರ ಮೇಲೆ ದೌರ್ಜನ್ಯಕ್ಕೆ ಮುಂದಾದರು ಎಂದು ಹೇಳಲಾಗಿದೆ.

ರೈತರ ಮನವಿಗೂ ಸಬ್ ಇನ್ಸ್‌ಪೆಕ್ಟರ್ ಸ್ಪಂದಿಸದಿದ್ದಾಗ ರೈತರು ಪೊಲೀಸರೊಂದಿಗೆ ವಾಗ್ವಾದಕ್ಕೆ ಇಳಿದರು. ಪೊಲೀಸರು ದೌರ್ಜನ್ಯ ನಡೆಸುವುದನ್ನು ನಿಲ್ಲಿಸಬೇಕು. ಸರ್ಕಾರ ಪ್ರತಿಭಟನೆಯನ್ನು ಹತ್ತಿಕ್ಕಲು ಹೊರಟಿದೆ. ಇದು ಪ್ರಜಾಪ್ರಭುತ್ವಕ್ಕೆ ಮಸಿ ಬಳಿದಂತೆ ಆಗಿದೆ. ಸರ್ಕಾರಕ್ಕೆ ಧಿಕ್ಕಾರ. ಶಾಂತಿಯುತ ಪ್ರತಿಭಟನೆಗೂ ಪೊಲೀಸರು ಅನುಮತಿ ನೀಡುತ್ತಿಲ್ಲ. ಟ್ರಾಕ್ಟರ್‌‌‌‌ಗಳನ್ನು ತಡೆದು ರೈತರ ಹಕ್ಕುಗಳನ್ನು ಕಿತ್ತುಕೊಳ್ಳಲು ಹೊರಟಿದೆ. ಇದನ್ನು ಖಂಡಿಸುತ್ತೇವೆ ಎಂದು ಬೆಂಗಳೂರಿಗೆ ತೆರಳುತ್ತಿದ್ದ ಪೊಲೀಸರಿಂದ ತಡೆಗೆ ಒಳಗಾದ ರೈತ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದರು.

ಇದನ್ನೂ ಓದಿ: ಪೊಲೀಸರು ರೈತರ ಟ್ರ್ಯಾಕ್ಟರ್‌ಗಳನ್ನು ತಡೆದರೆ ರಾಜ್ಯಾದ್ಯಂತ ರಸ್ತೆ ಬಂದ್: ಬಡಗಲಪುರ ನಾಗೇಂದ್ರ ಎಚ್ಚರಿಕೆ

ರೈತ ಸಂಘದ ತುಮಕೂರು ಜಿಲ್ಲಾಧ್ಯಕ್ಷ ಆನಂದ್ ಪಟೇಲ್ ನಾನುಗೌರಿ.ಕಾಂ ಜೊತೆ ದೂರವಾಣಿಯಲ್ಲಿ ಮಾತನಾಡಿ, “ಸರ್ಕಾರ ಸರ್ವಾಧಿಕಾರದಿಂದ ವರ್ತಿಸುತ್ತಿದೆ. ರೈತರು ಶಾಂತಿಯುತವಾಗಿ ಯಾರಿಗೂ ತೊಂದರೆ ಕೊಡದಂತೆ ಬೆಂಗಳೂರಿಗೆ ತೆರಳುತ್ತಿದ್ದಾರೆ. ಅವರನ್ನು ಕೆ.ಬಿ.ಕ್ರಾಸ್‌ನಲ್ಲಿ ಪೊಲೀಸರು ತಡೆದಿರುವುದು ಖಂಡನೀಯ. ಸಬ್ ಇನ್ಸ್‌‌ಪೆಕ್ಟರ್‌‌ಗೆ ಮನವಿ ಮಾಡಿದರೂ ಕೇಳುತ್ತಿಲ್ಲ. ರಾಜ್ಯ ಸರ್ಕಾರ  ಪೊಲೀಸರ ಮೂಲಕ ಪ್ರತಿಭಟನೆಯನ್ನು ಹತ್ತಿಕ್ಕಲು ಹೊರಟಿದೆ. ಮೊದಲು ಪರೇಡ್‌ಗೆ ಅನುಮತಿ ನೀಡಿತು. ಈಗ ಪೊಲೀಸರ ಮೂಲಕ ಟ್ರ್ಯಾಕ್ಟರ್ ಪರೇಡ್ ನಡೆಯುವುದನ್ನು ತಡೆಯುತ್ತಿದೆ. ಇದು ಸರ್ಕಾರದ ದ್ವಂದ್ವ ನಿಲುವು. ಸರ್ಕಾರ ವಿವಾದಿತ ಕೃಷಿ ಕಾನೂನುಗಳನ್ನು ವಾಪಸ್ ಪಡೆಯಬೇಕು. ಅಲ್ಲಿಯವರೆಗೂ ಪ್ರತಿಭಟನೆ ನಿಲ್ಲಿಸುವುದಿಲ್ಲ” ಎಂದು ಎಚ್ಚರಿಕೆ ನೀಡಿದರು.

ತುಮಕೂರು ಜಿಲ್ಲೆಯಲ್ಲಿ ಬೆಂಗಳೂರಿಗೆ ತೆರಳುತ್ತಿದ್ದ ಟ್ರ್ಯಾಕ್ಟರ್‌ಗಳನ್ನು ಪೊಲೀಸರು ತಡೆದಿರುವ ಕ್ರಮಕ್ಕೆ ರೈತ ಸಂಘಟನೆಯ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದು ಈ ಸರ್ಕಾರ ರೈತರನ್ನು ಮುಗಿಸಲು ಹೊರಟಿದೆ. ಬಂಡವಾಳಶಾಹಿಗಳಿಗೆ ಮಣೆ ಹಾಕುತ್ತಿದೆ. ಬಡ ರೈತರನ್ನು ಕೃಷಿಯಿಂದ ವಿಮುಖಗೊಳ್ಳುವಂತೆ ಮಾಡಿ ಕಾರ್ಪೋರೇಟ್ ಕೃಷಿಗೆ ರತ್ನಗಂಬಳಿ ಹಾಸಲು ಹೊರಟಿದೆ. ಕೃಷಿ ಕಾಯ್ದೆಗಳು ಸಂಪೂರ್ಣ ಜಾರಿಯಾದರೆ ಇಡೀ ಜನತೆ ತೀವ್ರ ಸಂಕಷ್ಟಕ್ಕೆ ಗುರಿಯಾಗಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: ಟ್ರಾಕ್ಟರ್‌ ರ್‍ಯಾಲಿ: ರೈತರು ತಮಗೆ ತಾವೇ ಅಳವಡಿಸಿಕೊಂಡ ಮಾರ್ಗಸೂಚಿಗಳು ಇಲ್ಲಿವೆ!

ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಜಿಲ್ಲಾಧ್ಯಕ್ಷ ಎ.ಗೋವಿಂದರಾಜು ಮಾತನಾಡಿ, “ಟ್ರಾಕ್ಟರ್‌‌‌‌ ತಡೆದಿರುವ ಕ್ರಮ ಖಂಡನೀಯ. ಸರ್ಕಾರಕ್ಕೆ ಗೌರವ ಇದ್ದರೆ ರೈತರನ್ನು ಗೌರವದಿಂದ ನಡೆಸಿಕೊಳ್ಳಬೇಕು.  ಟ್ರಾಕ್ಟರ್‌‌‌‌ ತಡೆಯುವುದರಿಂದ ಚಳವಳಿಯನ್ನು ಹತ್ತಿಕ್ಕಲು ಸಾಧ್ಯವಿಲ್ಲ ಎಂಬುದನ್ನು ಸರ್ಕಾರ ಅರ್ಥ ಮಾಡಿ ಕೊಳ್ಳಬೇಕು. ರೈತರೊಂದಿಗೆ ಪೊಲೀಸರು ಸೌಜನ್ಯದಿಂದ ನಡೆದುಕೊಳ್ಳಬೇಕು. ಎಲ್ಲಿ ಜನರನ್ನು ತಡೆಯಲಾಗುವುದೊ ಅಲ್ಲೇ ಪ್ರತಿಭಟನೆ ತೀವ್ರಗೊಳ್ಳಲಿದೆ. ಅಹಿಂಸಾ ಮಾರ್ಗದಲ್ಲಿ ಪ್ರತಿಭಟನೆ ನಡೆಯುತ್ತಿದೆ. ನಾವು ಹಿಂಸೆಗೆ ಅವಕಾಶ ನೀಡುವುದಿಲ್ಲ. ಹಾಗಾಗಿ ಸರ್ಕಾರ ಮತ್ತು ಪೊಲೀಸರು ರೈತರನ್ನು ಗೌರವದಿಂದ ಕಾಣಬೇಕು ಮತ್ತು ಟ್ರಾಕ್ಟರ್‌‌‌‌ಗಳು ಬೆಂಗಳೂರಿಗೆ ತೆರಳಲು ಅನುವು ಮಾಡಿಕೊಡಬೇಕು” ಎಂದು ಆಗ್ರಹಿಸಿದರು.

“ಚಳವಳಿಯನ್ನು ಹತ್ತಿಕ್ಕಲು ಸರ್ಕಾರ ವಾಮಮಾರ್ಗ ಹಿಡಿಯುತ್ತಿದೆ. ಟ್ರಾಕ್ಟರ್‌‌‌‌ ಮಾಲಿಕರನ್ನು ಹೆದರಿಸುವ ಕೆಲಸ ಮಾಡುತ್ತಿದೆ. ಆರ್.ಟಿ.ಒ ಅಧಿಕಾರಿಗಳು ಟ್ರಾಕ್ಟರ್‌‌‌‌ಗಳ ದಾಖಲೆಗಳನ್ನು ಕೇಳುವ ಮೂಲಕ ಮಾಲಿಕರನ್ನು ಬೆದರಿಸುವ ಕೆಲಸ ಮಾಡುತ್ತಿದ್ದಾರೆ, ಇದು ಖಂಡನೀಯ. ಲಕ್ಷಾಂತರ ವಾಹನಗಳು ನಿತ್ಯವೂ ಯಾವುದೇ ದಾಖಲೆಗಳು ಇಲ್ಲದೆ ಸಂಚರಿಸುತ್ತಿವೆ. ಅವುಗಳ ದಾಖಲೆ ಕೇಳದ ಆರ್.ಟಿ.ಓ ಅಧಿಕಾರಿಗಳು ಈಗ ಟ್ರಾಕ್ಟರ್‌‌‌‌ ದಾಖಲೆ ಕೇಳುತ್ತಿರುವುದು ನಾಚಿಕೆಗೇಡಿನ ಸಂಗತಿ. ಚಳವಳಿಯನ್ನು ಹತ್ತಿಕ್ಕುವ ಹುನ್ನಾರ ನಿಲ್ಲಬೇಕು. ಸರ್ಕಾರ ಪೊಲೀಸರನ್ನು ಮುಂದಿಟ್ಟುಕೊಂಡು ಪ್ರತಿಭಟನೆಯನ್ನು ತಡೆಯಲು ಮುಂದಾದರೂ ಟ್ರಾಕ್ಟರ್‌‌‌‌ಗಳು ಬೆಂಗಳೂರಿಗೆ ತೆರಳಲಿವೆ” ಎಂದು ಎಚ್ಚರಿಸಿದ್ದಾರೆ.

ಇದನ್ನೂ ಓದಿ: ಗೆದ್ದ ಅನ್ನದಾತನ ಹಠ: ಟ್ರಾಕ್ಟರ್‌ ರ್‍ಯಾಲಿಗೆ ದೆಹಲಿ ಪೊಲೀಸರ ಅನುಮತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...