Homeಕರ್ನಾಟಕರೈತರ ಗಣರಾಜ್ಯೋತ್ಸವ: ತುಮಕೂರಿನಲ್ಲಿ ಟ್ರಾಕ್ಟರ್‌‌‌‌ ತಡೆದ ಪೊಲೀಸರು

ರೈತರ ಗಣರಾಜ್ಯೋತ್ಸವ: ತುಮಕೂರಿನಲ್ಲಿ ಟ್ರಾಕ್ಟರ್‌‌‌‌ ತಡೆದ ಪೊಲೀಸರು

ಸರ್ಕಾರ ಪೊಲೀಸರನ್ನು ಮುಂದಿಟ್ಟುಕೊಂಡು ಪ್ರತಿಭಟನೆಯನ್ನು ತಡೆಯಲು ಮುಂದಾದರೂ ಟ್ರಾಕ್ಟರ್‌‌‌‌ಗಳು ಬೆಂಗಳೂರಿಗೆ ತೆರಳಲಿವೆ ಎಂದು ರೈತರು ಎಚ್ಚರಿಸಿದ್ದಾರೆ.

- Advertisement -
- Advertisement -

ರೈತರ ಟ್ರ್ಯಾಕ್ಟರ್‌‌ ಪರೇಡ್‌ಗೆ ಅನುಮತಿ ನೀಡಿ ಪೊಲೀಸರ ಮೂಲಕ ಟ್ರಾಕ್ಟರ್‌‌‌‌‌ಗಳು ಬೆಂಗಳೂರು ಕಡೆಗೆ ಹೋಗದಂತೆ ನಿಯಂತ್ರಿಸಲು ಹೊರಟಿರುವ ರಾಜ್ಯ ಸರ್ಕಾರದ ದ್ವಂದ್ವ ನೀತಿಯ ಬಗ್ಗೆ ರೈತ ಸಂಘಟನೆಗಳಿಂದ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಟ್ರಾಕ್ಟರ್‌‌‌‌ ಪರೇಡ್ ನಡೆಸಬಹುದು. ಅದಕ್ಕೆ ಪೊಲೀಸರ ಅನುಮತಿ ಅಗತ್ಯ ಎಂದು ಸರ್ಕಾರ ಹೇಳಿತ್ತು. ಈಗ ಪೊಲೀಸರನ್ನು ಛೂಬಿಟ್ಟು ಟ್ರಾಕ್ಟರ್‌‌‌‌ಗಳು ಬೆಂಗಳೂರಿಗೆ ತೆರಳದಂತೆ ಅಲ್ಲಲ್ಲಿ ತಡೆಯುವ ಕೆಲಸ ನಡೆಯುತ್ತಿದೆ. ಇದು ಪ್ರಜಾಪ್ರಭುತ್ವ ಮೌಲ್ಯಗಳಿಗೆ ವಿರುದ್ಧ ನಡೆಯಾಗಿದೆ ಎಂದು ರೈತ ಸಂಘಟನೆಗಳು ವಿರೋಧ ವ್ಯಕ್ತಪಡಿಸಿವೆ.

ತುಮಕೂರು ಜಿಲ್ಲೆಯ ವಿವಿಧ ತಾಲೂಕುಗಳಿಂದ ರೈತರು ಸ್ವಯಂ ಪ್ರೇರಿತರಾಗಿ ತಮ್ಮ ಟ್ರಾಕ್ಟರ್‌‌‌‌ಗಳನ್ನು ಬೆಂಗಳೂರಿಗೆ ತೆಗೆದುಕೊಂಡು ಹೊರಟಿದ್ದರು. ತಿಪಟೂರಿನಿಂದ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ ಮುಖಂಡರು ಮತ್ತು ಕಾರ್ಯಕರ್ತರು ಟ್ರಾಕ್ಟರ್‌‌‌‌ಗಳಲ್ಲಿ ಬೆಂಗಳೂರಿಗೆ ತೆರಳುತ್ತಿದ್ದರು. ಮಾರ್ಗ ಮಧ್ಯೆ ಅಂದರೆ ಕೆ.ಬಿ. ಕ್ರಾಸ್‌ನಲ್ಲಿ ಪರೇಡ್ ಗೆ ತೆರಳುತ್ತಿದ್ದ ಟ್ರಾಕ್ಟರ್‌‌‌‌ಗಳನ್ನು ಪೊಲೀಸರು ತಡೆಹಿಡಿದು ರೈತರಿಗೆ ಅನಗತ್ಯ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಲಾಗಿದೆ.

ಇದನ್ನೂ ಓದಿ: ಮಹಾರಾಷ್ಟ್ರದ 21 ಜಿಲ್ಲೆಯಿಂದ ಮುಂಬೈಗೆ ಭೋರ್ಗರೆದ ರೈತರ ದಂಡು

ಕೆ.ಬಿ. ಕ್ರಾಸ್‌ನಲ್ಲಿ ಹತ್ತುಕ್ಕೂ ಹೆಚ್ಚು ಟ್ರಾಕ್ಟರ್‌‌‌‌ಗಳನ್ನು ತಡೆಯುತ್ತಿದ್ದಂತೆ ರೈತ ಮುಖಂಡರು ಪೊಲೀಸರಿಗೆ ಮನವಿ ಮಾಡಿ ಶಾಂತಿಯುತ ಪರೇಡ್‌ಗೆ ತೆರಳುತ್ತಿದ್ದೇವೆ. ಯಾವುದೇ ಸಮಸ್ಯೆಯಾಗದಂತೆ ಬೆಂಗಳೂರಿಗೆ ತೆರಳುತ್ತೇವೆ. ಮುಂದೆ ಹೋಗಲು ಅವಕಾಶ ಕೊಡಿ ಎಂದು ಕೆ.ಬಿ.ಕ್ರಾಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್‌ಗೆ ಮನವಿ ಮಾಡಿದ್ದಾರೆ. ತಮ್ಮ ನಾಯಕರಿಗೂ ಫೋನ್ ಮಾಡಿ ವಿಷಯ ತಿಳಿಸಿದ್ದಾರೆ. ಮೊದಲು ಬಿಡುತ್ತೇವೆ ಎಂದು ಹೇಳಿದ ಸಬ್‌ಇನ್ಸ್‌ಪೆಕ್ಟರ್ ನಂತರ ಸರ್ಕಲ್ ಇನ್ಸ್‌ಪೆಕ್ಟರ್ ಬರಬೇಕು, ಅಲ್ಲಿಯವರೆಗೂ ಮುಂದೆ ಹೋಗುವಂತಿಲ್ಲ ಎಂದು ರೈತರ ಮೇಲೆ ದೌರ್ಜನ್ಯಕ್ಕೆ ಮುಂದಾದರು ಎಂದು ಹೇಳಲಾಗಿದೆ.

ರೈತರ ಮನವಿಗೂ ಸಬ್ ಇನ್ಸ್‌ಪೆಕ್ಟರ್ ಸ್ಪಂದಿಸದಿದ್ದಾಗ ರೈತರು ಪೊಲೀಸರೊಂದಿಗೆ ವಾಗ್ವಾದಕ್ಕೆ ಇಳಿದರು. ಪೊಲೀಸರು ದೌರ್ಜನ್ಯ ನಡೆಸುವುದನ್ನು ನಿಲ್ಲಿಸಬೇಕು. ಸರ್ಕಾರ ಪ್ರತಿಭಟನೆಯನ್ನು ಹತ್ತಿಕ್ಕಲು ಹೊರಟಿದೆ. ಇದು ಪ್ರಜಾಪ್ರಭುತ್ವಕ್ಕೆ ಮಸಿ ಬಳಿದಂತೆ ಆಗಿದೆ. ಸರ್ಕಾರಕ್ಕೆ ಧಿಕ್ಕಾರ. ಶಾಂತಿಯುತ ಪ್ರತಿಭಟನೆಗೂ ಪೊಲೀಸರು ಅನುಮತಿ ನೀಡುತ್ತಿಲ್ಲ. ಟ್ರಾಕ್ಟರ್‌‌‌‌ಗಳನ್ನು ತಡೆದು ರೈತರ ಹಕ್ಕುಗಳನ್ನು ಕಿತ್ತುಕೊಳ್ಳಲು ಹೊರಟಿದೆ. ಇದನ್ನು ಖಂಡಿಸುತ್ತೇವೆ ಎಂದು ಬೆಂಗಳೂರಿಗೆ ತೆರಳುತ್ತಿದ್ದ ಪೊಲೀಸರಿಂದ ತಡೆಗೆ ಒಳಗಾದ ರೈತ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದರು.

ಇದನ್ನೂ ಓದಿ: ಪೊಲೀಸರು ರೈತರ ಟ್ರ್ಯಾಕ್ಟರ್‌ಗಳನ್ನು ತಡೆದರೆ ರಾಜ್ಯಾದ್ಯಂತ ರಸ್ತೆ ಬಂದ್: ಬಡಗಲಪುರ ನಾಗೇಂದ್ರ ಎಚ್ಚರಿಕೆ

ರೈತ ಸಂಘದ ತುಮಕೂರು ಜಿಲ್ಲಾಧ್ಯಕ್ಷ ಆನಂದ್ ಪಟೇಲ್ ನಾನುಗೌರಿ.ಕಾಂ ಜೊತೆ ದೂರವಾಣಿಯಲ್ಲಿ ಮಾತನಾಡಿ, “ಸರ್ಕಾರ ಸರ್ವಾಧಿಕಾರದಿಂದ ವರ್ತಿಸುತ್ತಿದೆ. ರೈತರು ಶಾಂತಿಯುತವಾಗಿ ಯಾರಿಗೂ ತೊಂದರೆ ಕೊಡದಂತೆ ಬೆಂಗಳೂರಿಗೆ ತೆರಳುತ್ತಿದ್ದಾರೆ. ಅವರನ್ನು ಕೆ.ಬಿ.ಕ್ರಾಸ್‌ನಲ್ಲಿ ಪೊಲೀಸರು ತಡೆದಿರುವುದು ಖಂಡನೀಯ. ಸಬ್ ಇನ್ಸ್‌‌ಪೆಕ್ಟರ್‌‌ಗೆ ಮನವಿ ಮಾಡಿದರೂ ಕೇಳುತ್ತಿಲ್ಲ. ರಾಜ್ಯ ಸರ್ಕಾರ  ಪೊಲೀಸರ ಮೂಲಕ ಪ್ರತಿಭಟನೆಯನ್ನು ಹತ್ತಿಕ್ಕಲು ಹೊರಟಿದೆ. ಮೊದಲು ಪರೇಡ್‌ಗೆ ಅನುಮತಿ ನೀಡಿತು. ಈಗ ಪೊಲೀಸರ ಮೂಲಕ ಟ್ರ್ಯಾಕ್ಟರ್ ಪರೇಡ್ ನಡೆಯುವುದನ್ನು ತಡೆಯುತ್ತಿದೆ. ಇದು ಸರ್ಕಾರದ ದ್ವಂದ್ವ ನಿಲುವು. ಸರ್ಕಾರ ವಿವಾದಿತ ಕೃಷಿ ಕಾನೂನುಗಳನ್ನು ವಾಪಸ್ ಪಡೆಯಬೇಕು. ಅಲ್ಲಿಯವರೆಗೂ ಪ್ರತಿಭಟನೆ ನಿಲ್ಲಿಸುವುದಿಲ್ಲ” ಎಂದು ಎಚ್ಚರಿಕೆ ನೀಡಿದರು.

ತುಮಕೂರು ಜಿಲ್ಲೆಯಲ್ಲಿ ಬೆಂಗಳೂರಿಗೆ ತೆರಳುತ್ತಿದ್ದ ಟ್ರ್ಯಾಕ್ಟರ್‌ಗಳನ್ನು ಪೊಲೀಸರು ತಡೆದಿರುವ ಕ್ರಮಕ್ಕೆ ರೈತ ಸಂಘಟನೆಯ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದು ಈ ಸರ್ಕಾರ ರೈತರನ್ನು ಮುಗಿಸಲು ಹೊರಟಿದೆ. ಬಂಡವಾಳಶಾಹಿಗಳಿಗೆ ಮಣೆ ಹಾಕುತ್ತಿದೆ. ಬಡ ರೈತರನ್ನು ಕೃಷಿಯಿಂದ ವಿಮುಖಗೊಳ್ಳುವಂತೆ ಮಾಡಿ ಕಾರ್ಪೋರೇಟ್ ಕೃಷಿಗೆ ರತ್ನಗಂಬಳಿ ಹಾಸಲು ಹೊರಟಿದೆ. ಕೃಷಿ ಕಾಯ್ದೆಗಳು ಸಂಪೂರ್ಣ ಜಾರಿಯಾದರೆ ಇಡೀ ಜನತೆ ತೀವ್ರ ಸಂಕಷ್ಟಕ್ಕೆ ಗುರಿಯಾಗಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: ಟ್ರಾಕ್ಟರ್‌ ರ್‍ಯಾಲಿ: ರೈತರು ತಮಗೆ ತಾವೇ ಅಳವಡಿಸಿಕೊಂಡ ಮಾರ್ಗಸೂಚಿಗಳು ಇಲ್ಲಿವೆ!

ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಜಿಲ್ಲಾಧ್ಯಕ್ಷ ಎ.ಗೋವಿಂದರಾಜು ಮಾತನಾಡಿ, “ಟ್ರಾಕ್ಟರ್‌‌‌‌ ತಡೆದಿರುವ ಕ್ರಮ ಖಂಡನೀಯ. ಸರ್ಕಾರಕ್ಕೆ ಗೌರವ ಇದ್ದರೆ ರೈತರನ್ನು ಗೌರವದಿಂದ ನಡೆಸಿಕೊಳ್ಳಬೇಕು.  ಟ್ರಾಕ್ಟರ್‌‌‌‌ ತಡೆಯುವುದರಿಂದ ಚಳವಳಿಯನ್ನು ಹತ್ತಿಕ್ಕಲು ಸಾಧ್ಯವಿಲ್ಲ ಎಂಬುದನ್ನು ಸರ್ಕಾರ ಅರ್ಥ ಮಾಡಿ ಕೊಳ್ಳಬೇಕು. ರೈತರೊಂದಿಗೆ ಪೊಲೀಸರು ಸೌಜನ್ಯದಿಂದ ನಡೆದುಕೊಳ್ಳಬೇಕು. ಎಲ್ಲಿ ಜನರನ್ನು ತಡೆಯಲಾಗುವುದೊ ಅಲ್ಲೇ ಪ್ರತಿಭಟನೆ ತೀವ್ರಗೊಳ್ಳಲಿದೆ. ಅಹಿಂಸಾ ಮಾರ್ಗದಲ್ಲಿ ಪ್ರತಿಭಟನೆ ನಡೆಯುತ್ತಿದೆ. ನಾವು ಹಿಂಸೆಗೆ ಅವಕಾಶ ನೀಡುವುದಿಲ್ಲ. ಹಾಗಾಗಿ ಸರ್ಕಾರ ಮತ್ತು ಪೊಲೀಸರು ರೈತರನ್ನು ಗೌರವದಿಂದ ಕಾಣಬೇಕು ಮತ್ತು ಟ್ರಾಕ್ಟರ್‌‌‌‌ಗಳು ಬೆಂಗಳೂರಿಗೆ ತೆರಳಲು ಅನುವು ಮಾಡಿಕೊಡಬೇಕು” ಎಂದು ಆಗ್ರಹಿಸಿದರು.

“ಚಳವಳಿಯನ್ನು ಹತ್ತಿಕ್ಕಲು ಸರ್ಕಾರ ವಾಮಮಾರ್ಗ ಹಿಡಿಯುತ್ತಿದೆ. ಟ್ರಾಕ್ಟರ್‌‌‌‌ ಮಾಲಿಕರನ್ನು ಹೆದರಿಸುವ ಕೆಲಸ ಮಾಡುತ್ತಿದೆ. ಆರ್.ಟಿ.ಒ ಅಧಿಕಾರಿಗಳು ಟ್ರಾಕ್ಟರ್‌‌‌‌ಗಳ ದಾಖಲೆಗಳನ್ನು ಕೇಳುವ ಮೂಲಕ ಮಾಲಿಕರನ್ನು ಬೆದರಿಸುವ ಕೆಲಸ ಮಾಡುತ್ತಿದ್ದಾರೆ, ಇದು ಖಂಡನೀಯ. ಲಕ್ಷಾಂತರ ವಾಹನಗಳು ನಿತ್ಯವೂ ಯಾವುದೇ ದಾಖಲೆಗಳು ಇಲ್ಲದೆ ಸಂಚರಿಸುತ್ತಿವೆ. ಅವುಗಳ ದಾಖಲೆ ಕೇಳದ ಆರ್.ಟಿ.ಓ ಅಧಿಕಾರಿಗಳು ಈಗ ಟ್ರಾಕ್ಟರ್‌‌‌‌ ದಾಖಲೆ ಕೇಳುತ್ತಿರುವುದು ನಾಚಿಕೆಗೇಡಿನ ಸಂಗತಿ. ಚಳವಳಿಯನ್ನು ಹತ್ತಿಕ್ಕುವ ಹುನ್ನಾರ ನಿಲ್ಲಬೇಕು. ಸರ್ಕಾರ ಪೊಲೀಸರನ್ನು ಮುಂದಿಟ್ಟುಕೊಂಡು ಪ್ರತಿಭಟನೆಯನ್ನು ತಡೆಯಲು ಮುಂದಾದರೂ ಟ್ರಾಕ್ಟರ್‌‌‌‌ಗಳು ಬೆಂಗಳೂರಿಗೆ ತೆರಳಲಿವೆ” ಎಂದು ಎಚ್ಚರಿಸಿದ್ದಾರೆ.

ಇದನ್ನೂ ಓದಿ: ಗೆದ್ದ ಅನ್ನದಾತನ ಹಠ: ಟ್ರಾಕ್ಟರ್‌ ರ್‍ಯಾಲಿಗೆ ದೆಹಲಿ ಪೊಲೀಸರ ಅನುಮತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...

ತಿರುವನಂತಪುರಂ | 20 ಬಿಜೆಪಿ ಕೌನ್ಸಿಲರ್‌ಗಳ ಪ್ರಮಾಣವಚನ ಅಸಿಂಧು : ಹೈಕೋರ್ಟ್ ಮಹತ್ವದ ಆದೇಶ

ತಿರುವನಂತಪುರಂ ಮಹಾನಗರ ಪಾಲಿಕೆಯ 20 ಬಿಜೆಪಿ ಕೌನ್ಸಿಲರ್‌ಗಳಿಗೆ ನಾಲ್ಕು ವಾರಗಳ ಒಳಗೆ ಮತ್ತೊಮ್ಮೆ ಪ್ರಮಾಣವಚನ ಸ್ವೀಕರಿಸುವಂತೆ ಕೇರಳ ಹೈಕೋರ್ಟ್ ಬುಧವಾರ (ಜೂ.24) ಆದೇಶಿಸಿದೆ. ಜನವರಿ ತಿಂಗಳಲ್ಲಿ ಕೌನ್ಸಿಲರ್‌ಗಳ ಪ್ರಮಾಣವಚನ ನಡೆದಿತ್ತು. ಡೆಪ್ಯುಟಿ ಮೇಯರ್...

ಎಸ್‌ಐಆರ್‌ನಿಂದ ಹೊರಗಿಡಲಾದ ಜನರಿಗೆ ಪಡಿತರ ನಿರಾಕರಣೆ ಪ್ರಶ್ನಿಸಿದ ಅರ್ಜಿ ತಿರಸ್ಕರಿಸಿದ ಸುಪ್ರೀಂ; ಕಲ್ಕತ್ತಾ ಹೈಕೋರ್ಟ್‌ಗೆ ಹೋಗಲು ಸೂಚನೆ

ನವದೆಹಲಿ: ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲಾದ ವ್ಯಕ್ತಿಗಳಿಗೆ ಸಾರ್ವಜನಿಕ ವಿತರಣಾ ವ್ಯವಸ್ಥೆಯ (ಪಿಡಿಎಸ್) ಪಡಿತರ ಸೌಲಭ್ಯ ಸೇರಿದಂತೆ ಇತರೆ ಕಲ್ಯಾಣ ಯೋಜನೆಗಳನ್ನು ನಿರಾಕರಿಸುತ್ತಿರುವ ಪಶ್ಚಿಮ ಬಂಗಾಳ...

ಪಶ್ಚಿಮ ಬಂಗಾಳ: ಸರ್ಕಾರಿ ಶಾಲಾ ಬಿಸಿಯೂಟದ ಜವಾಬ್ದಾರಿ ಇಸ್ಕಾನ್‌ಗೆ, ಊಟದಿಂದ ‘ಮೊಟ್ಟೆ’ ಔಟ್

ಪಶ್ಚಿಮ ಬಂಗಾಳದ ಸರ್ಕಾರಿ ಶಾಲೆಗಳ ಬಿಸಿಯೂಟದ ಮೆನುವಿನಲ್ಲಿ ಇನ್ಮೇಲೆ ಮೊಟ್ಟೆಗಳು ಇರುವುದಿಲ್ಲ. ಅವುಗಳ ಬದಲಿಗೆ ಮಕ್ಕಳಿಗೆ ಪನೀರ್ ಮತ್ತು ರಾಜ್ಮಾವನ್ನು ನೀಡಲಾಗುತ್ತದೆ. ಕೋಲ್ಕತ್ತಾ ಮಹಾನಗರ ಪಾಲಿಕೆ ವ್ಯಾಪ್ತಿಯ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ...

ಕಿರಣ್ ರಿಜಿಜು ‘ಸೇಫ್‌’ವಾದ ಅಲ್ಲಗಳೆದ ಸರಣಿ ಮುಸ್ಲಿಂ ವಿರೋಧಿ ಹಿಂಸಾಚಾರಾಗಳು

ಜೂನ್ 15, 2026ರಂದು ಪ್ರಕಟಗೊಂಡ ಇಂಡಿಯನ್ ಎಕ್ಸ್‌ಪ್ರೆಸ್‌ನ 'ಐಡಿಯಾ ಎಕ್ಸ್‌ಚೇಂಜ್' ಕಾರ್ಯಕ್ರಮದ ಸಂದರ್ಶನವೊಂದರಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು, “ಭಾರತದಲ್ಲಿ ಮುಸ್ಲಿಮರು ಸುರಕ್ಷಿತವಾಗಿಲ್ಲ ಎಂದು ಹೇಳುವ ಮೂಲಕ ನೀವು ದೇಶದ ಚಾರಿತ್ರ್ಯಕ್ಕೆ...

ರಾಮ ಮಂದಿರ ದೇಣಿಗೆ ದುರುಪಯೋಗ ವಿವಾದ; ಪ್ರಾಥಮಿಕ ವರದಿ ಸಲ್ಲಿಸಿದ ಎಸ್‌ಐಟಿ

ಅಯೋಧ್ಯೆಯ ರಾಮ ಮಂದಿರದಲ್ಲಿ ಸ್ವೀಕರಿಸಿದ ದೇಣಿಗೆಯ ದುರುಪಯೋಗದ ಆರೋಪದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಜೂನ್ 23 ಮಂಗಳವಾರ ಉತ್ತರ ಪ್ರದೇಶ ಸರ್ಕಾರಕ್ಕೆ ತನ್ನ ಪ್ರಾಥಮಿಕ ತನಿಖಾ ವರದಿಯನ್ನು ಸಲ್ಲಿಸಿದೆ...

ಮುಖ್ಯಮಂತ್ರಿ ಸುವೇಂದು ಅಧಿಕಾರಿಗೆ ನೋಟಿಸ್ ಜಾರಿ ಮಾಡಿದ ಕಲ್ಕತ್ತಾ ಹೈಕೋರ್ಟ್

ಭವಾನಿಪುರ ವಿಧಾನಸಭಾ ಕ್ಷೇತ್ರದ ಇತ್ತೀಚಿನ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ಅವರ ಆಯ್ಕೆಯನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಹಾಗೂ ಟಿಎಂಸಿ (TMC) ನಾಯಕಿ ಮಮತಾ ಬ್ಯಾನರ್ಜಿ ಸಲ್ಲಿಕೆ ಮಾಡಿರುವ ಚುನಾವಣಾ ಅರ್ಜಿಗೆ ಸಂಬಂಧಿಸಿದಂತೆ ಕಲ್ಕತ್ತಾ...

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ...