Homeಕರ್ನಾಟಕರೈತರ ಗಣರಾಜ್ಯೋತ್ಸವ: ತುಮಕೂರಿನಲ್ಲಿ ಟ್ರಾಕ್ಟರ್‌‌‌‌ ತಡೆದ ಪೊಲೀಸರು

ರೈತರ ಗಣರಾಜ್ಯೋತ್ಸವ: ತುಮಕೂರಿನಲ್ಲಿ ಟ್ರಾಕ್ಟರ್‌‌‌‌ ತಡೆದ ಪೊಲೀಸರು

ಸರ್ಕಾರ ಪೊಲೀಸರನ್ನು ಮುಂದಿಟ್ಟುಕೊಂಡು ಪ್ರತಿಭಟನೆಯನ್ನು ತಡೆಯಲು ಮುಂದಾದರೂ ಟ್ರಾಕ್ಟರ್‌‌‌‌ಗಳು ಬೆಂಗಳೂರಿಗೆ ತೆರಳಲಿವೆ ಎಂದು ರೈತರು ಎಚ್ಚರಿಸಿದ್ದಾರೆ.

- Advertisement -
- Advertisement -

ರೈತರ ಟ್ರ್ಯಾಕ್ಟರ್‌‌ ಪರೇಡ್‌ಗೆ ಅನುಮತಿ ನೀಡಿ ಪೊಲೀಸರ ಮೂಲಕ ಟ್ರಾಕ್ಟರ್‌‌‌‌‌ಗಳು ಬೆಂಗಳೂರು ಕಡೆಗೆ ಹೋಗದಂತೆ ನಿಯಂತ್ರಿಸಲು ಹೊರಟಿರುವ ರಾಜ್ಯ ಸರ್ಕಾರದ ದ್ವಂದ್ವ ನೀತಿಯ ಬಗ್ಗೆ ರೈತ ಸಂಘಟನೆಗಳಿಂದ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಟ್ರಾಕ್ಟರ್‌‌‌‌ ಪರೇಡ್ ನಡೆಸಬಹುದು. ಅದಕ್ಕೆ ಪೊಲೀಸರ ಅನುಮತಿ ಅಗತ್ಯ ಎಂದು ಸರ್ಕಾರ ಹೇಳಿತ್ತು. ಈಗ ಪೊಲೀಸರನ್ನು ಛೂಬಿಟ್ಟು ಟ್ರಾಕ್ಟರ್‌‌‌‌ಗಳು ಬೆಂಗಳೂರಿಗೆ ತೆರಳದಂತೆ ಅಲ್ಲಲ್ಲಿ ತಡೆಯುವ ಕೆಲಸ ನಡೆಯುತ್ತಿದೆ. ಇದು ಪ್ರಜಾಪ್ರಭುತ್ವ ಮೌಲ್ಯಗಳಿಗೆ ವಿರುದ್ಧ ನಡೆಯಾಗಿದೆ ಎಂದು ರೈತ ಸಂಘಟನೆಗಳು ವಿರೋಧ ವ್ಯಕ್ತಪಡಿಸಿವೆ.

ತುಮಕೂರು ಜಿಲ್ಲೆಯ ವಿವಿಧ ತಾಲೂಕುಗಳಿಂದ ರೈತರು ಸ್ವಯಂ ಪ್ರೇರಿತರಾಗಿ ತಮ್ಮ ಟ್ರಾಕ್ಟರ್‌‌‌‌ಗಳನ್ನು ಬೆಂಗಳೂರಿಗೆ ತೆಗೆದುಕೊಂಡು ಹೊರಟಿದ್ದರು. ತಿಪಟೂರಿನಿಂದ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ ಮುಖಂಡರು ಮತ್ತು ಕಾರ್ಯಕರ್ತರು ಟ್ರಾಕ್ಟರ್‌‌‌‌ಗಳಲ್ಲಿ ಬೆಂಗಳೂರಿಗೆ ತೆರಳುತ್ತಿದ್ದರು. ಮಾರ್ಗ ಮಧ್ಯೆ ಅಂದರೆ ಕೆ.ಬಿ. ಕ್ರಾಸ್‌ನಲ್ಲಿ ಪರೇಡ್ ಗೆ ತೆರಳುತ್ತಿದ್ದ ಟ್ರಾಕ್ಟರ್‌‌‌‌ಗಳನ್ನು ಪೊಲೀಸರು ತಡೆಹಿಡಿದು ರೈತರಿಗೆ ಅನಗತ್ಯ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಲಾಗಿದೆ.

ಇದನ್ನೂ ಓದಿ: ಮಹಾರಾಷ್ಟ್ರದ 21 ಜಿಲ್ಲೆಯಿಂದ ಮುಂಬೈಗೆ ಭೋರ್ಗರೆದ ರೈತರ ದಂಡು

ಕೆ.ಬಿ. ಕ್ರಾಸ್‌ನಲ್ಲಿ ಹತ್ತುಕ್ಕೂ ಹೆಚ್ಚು ಟ್ರಾಕ್ಟರ್‌‌‌‌ಗಳನ್ನು ತಡೆಯುತ್ತಿದ್ದಂತೆ ರೈತ ಮುಖಂಡರು ಪೊಲೀಸರಿಗೆ ಮನವಿ ಮಾಡಿ ಶಾಂತಿಯುತ ಪರೇಡ್‌ಗೆ ತೆರಳುತ್ತಿದ್ದೇವೆ. ಯಾವುದೇ ಸಮಸ್ಯೆಯಾಗದಂತೆ ಬೆಂಗಳೂರಿಗೆ ತೆರಳುತ್ತೇವೆ. ಮುಂದೆ ಹೋಗಲು ಅವಕಾಶ ಕೊಡಿ ಎಂದು ಕೆ.ಬಿ.ಕ್ರಾಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್‌ಗೆ ಮನವಿ ಮಾಡಿದ್ದಾರೆ. ತಮ್ಮ ನಾಯಕರಿಗೂ ಫೋನ್ ಮಾಡಿ ವಿಷಯ ತಿಳಿಸಿದ್ದಾರೆ. ಮೊದಲು ಬಿಡುತ್ತೇವೆ ಎಂದು ಹೇಳಿದ ಸಬ್‌ಇನ್ಸ್‌ಪೆಕ್ಟರ್ ನಂತರ ಸರ್ಕಲ್ ಇನ್ಸ್‌ಪೆಕ್ಟರ್ ಬರಬೇಕು, ಅಲ್ಲಿಯವರೆಗೂ ಮುಂದೆ ಹೋಗುವಂತಿಲ್ಲ ಎಂದು ರೈತರ ಮೇಲೆ ದೌರ್ಜನ್ಯಕ್ಕೆ ಮುಂದಾದರು ಎಂದು ಹೇಳಲಾಗಿದೆ.

ರೈತರ ಮನವಿಗೂ ಸಬ್ ಇನ್ಸ್‌ಪೆಕ್ಟರ್ ಸ್ಪಂದಿಸದಿದ್ದಾಗ ರೈತರು ಪೊಲೀಸರೊಂದಿಗೆ ವಾಗ್ವಾದಕ್ಕೆ ಇಳಿದರು. ಪೊಲೀಸರು ದೌರ್ಜನ್ಯ ನಡೆಸುವುದನ್ನು ನಿಲ್ಲಿಸಬೇಕು. ಸರ್ಕಾರ ಪ್ರತಿಭಟನೆಯನ್ನು ಹತ್ತಿಕ್ಕಲು ಹೊರಟಿದೆ. ಇದು ಪ್ರಜಾಪ್ರಭುತ್ವಕ್ಕೆ ಮಸಿ ಬಳಿದಂತೆ ಆಗಿದೆ. ಸರ್ಕಾರಕ್ಕೆ ಧಿಕ್ಕಾರ. ಶಾಂತಿಯುತ ಪ್ರತಿಭಟನೆಗೂ ಪೊಲೀಸರು ಅನುಮತಿ ನೀಡುತ್ತಿಲ್ಲ. ಟ್ರಾಕ್ಟರ್‌‌‌‌ಗಳನ್ನು ತಡೆದು ರೈತರ ಹಕ್ಕುಗಳನ್ನು ಕಿತ್ತುಕೊಳ್ಳಲು ಹೊರಟಿದೆ. ಇದನ್ನು ಖಂಡಿಸುತ್ತೇವೆ ಎಂದು ಬೆಂಗಳೂರಿಗೆ ತೆರಳುತ್ತಿದ್ದ ಪೊಲೀಸರಿಂದ ತಡೆಗೆ ಒಳಗಾದ ರೈತ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದರು.

ಇದನ್ನೂ ಓದಿ: ಪೊಲೀಸರು ರೈತರ ಟ್ರ್ಯಾಕ್ಟರ್‌ಗಳನ್ನು ತಡೆದರೆ ರಾಜ್ಯಾದ್ಯಂತ ರಸ್ತೆ ಬಂದ್: ಬಡಗಲಪುರ ನಾಗೇಂದ್ರ ಎಚ್ಚರಿಕೆ

ರೈತ ಸಂಘದ ತುಮಕೂರು ಜಿಲ್ಲಾಧ್ಯಕ್ಷ ಆನಂದ್ ಪಟೇಲ್ ನಾನುಗೌರಿ.ಕಾಂ ಜೊತೆ ದೂರವಾಣಿಯಲ್ಲಿ ಮಾತನಾಡಿ, “ಸರ್ಕಾರ ಸರ್ವಾಧಿಕಾರದಿಂದ ವರ್ತಿಸುತ್ತಿದೆ. ರೈತರು ಶಾಂತಿಯುತವಾಗಿ ಯಾರಿಗೂ ತೊಂದರೆ ಕೊಡದಂತೆ ಬೆಂಗಳೂರಿಗೆ ತೆರಳುತ್ತಿದ್ದಾರೆ. ಅವರನ್ನು ಕೆ.ಬಿ.ಕ್ರಾಸ್‌ನಲ್ಲಿ ಪೊಲೀಸರು ತಡೆದಿರುವುದು ಖಂಡನೀಯ. ಸಬ್ ಇನ್ಸ್‌‌ಪೆಕ್ಟರ್‌‌ಗೆ ಮನವಿ ಮಾಡಿದರೂ ಕೇಳುತ್ತಿಲ್ಲ. ರಾಜ್ಯ ಸರ್ಕಾರ  ಪೊಲೀಸರ ಮೂಲಕ ಪ್ರತಿಭಟನೆಯನ್ನು ಹತ್ತಿಕ್ಕಲು ಹೊರಟಿದೆ. ಮೊದಲು ಪರೇಡ್‌ಗೆ ಅನುಮತಿ ನೀಡಿತು. ಈಗ ಪೊಲೀಸರ ಮೂಲಕ ಟ್ರ್ಯಾಕ್ಟರ್ ಪರೇಡ್ ನಡೆಯುವುದನ್ನು ತಡೆಯುತ್ತಿದೆ. ಇದು ಸರ್ಕಾರದ ದ್ವಂದ್ವ ನಿಲುವು. ಸರ್ಕಾರ ವಿವಾದಿತ ಕೃಷಿ ಕಾನೂನುಗಳನ್ನು ವಾಪಸ್ ಪಡೆಯಬೇಕು. ಅಲ್ಲಿಯವರೆಗೂ ಪ್ರತಿಭಟನೆ ನಿಲ್ಲಿಸುವುದಿಲ್ಲ” ಎಂದು ಎಚ್ಚರಿಕೆ ನೀಡಿದರು.

ತುಮಕೂರು ಜಿಲ್ಲೆಯಲ್ಲಿ ಬೆಂಗಳೂರಿಗೆ ತೆರಳುತ್ತಿದ್ದ ಟ್ರ್ಯಾಕ್ಟರ್‌ಗಳನ್ನು ಪೊಲೀಸರು ತಡೆದಿರುವ ಕ್ರಮಕ್ಕೆ ರೈತ ಸಂಘಟನೆಯ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದು ಈ ಸರ್ಕಾರ ರೈತರನ್ನು ಮುಗಿಸಲು ಹೊರಟಿದೆ. ಬಂಡವಾಳಶಾಹಿಗಳಿಗೆ ಮಣೆ ಹಾಕುತ್ತಿದೆ. ಬಡ ರೈತರನ್ನು ಕೃಷಿಯಿಂದ ವಿಮುಖಗೊಳ್ಳುವಂತೆ ಮಾಡಿ ಕಾರ್ಪೋರೇಟ್ ಕೃಷಿಗೆ ರತ್ನಗಂಬಳಿ ಹಾಸಲು ಹೊರಟಿದೆ. ಕೃಷಿ ಕಾಯ್ದೆಗಳು ಸಂಪೂರ್ಣ ಜಾರಿಯಾದರೆ ಇಡೀ ಜನತೆ ತೀವ್ರ ಸಂಕಷ್ಟಕ್ಕೆ ಗುರಿಯಾಗಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: ಟ್ರಾಕ್ಟರ್‌ ರ್‍ಯಾಲಿ: ರೈತರು ತಮಗೆ ತಾವೇ ಅಳವಡಿಸಿಕೊಂಡ ಮಾರ್ಗಸೂಚಿಗಳು ಇಲ್ಲಿವೆ!

ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಜಿಲ್ಲಾಧ್ಯಕ್ಷ ಎ.ಗೋವಿಂದರಾಜು ಮಾತನಾಡಿ, “ಟ್ರಾಕ್ಟರ್‌‌‌‌ ತಡೆದಿರುವ ಕ್ರಮ ಖಂಡನೀಯ. ಸರ್ಕಾರಕ್ಕೆ ಗೌರವ ಇದ್ದರೆ ರೈತರನ್ನು ಗೌರವದಿಂದ ನಡೆಸಿಕೊಳ್ಳಬೇಕು.  ಟ್ರಾಕ್ಟರ್‌‌‌‌ ತಡೆಯುವುದರಿಂದ ಚಳವಳಿಯನ್ನು ಹತ್ತಿಕ್ಕಲು ಸಾಧ್ಯವಿಲ್ಲ ಎಂಬುದನ್ನು ಸರ್ಕಾರ ಅರ್ಥ ಮಾಡಿ ಕೊಳ್ಳಬೇಕು. ರೈತರೊಂದಿಗೆ ಪೊಲೀಸರು ಸೌಜನ್ಯದಿಂದ ನಡೆದುಕೊಳ್ಳಬೇಕು. ಎಲ್ಲಿ ಜನರನ್ನು ತಡೆಯಲಾಗುವುದೊ ಅಲ್ಲೇ ಪ್ರತಿಭಟನೆ ತೀವ್ರಗೊಳ್ಳಲಿದೆ. ಅಹಿಂಸಾ ಮಾರ್ಗದಲ್ಲಿ ಪ್ರತಿಭಟನೆ ನಡೆಯುತ್ತಿದೆ. ನಾವು ಹಿಂಸೆಗೆ ಅವಕಾಶ ನೀಡುವುದಿಲ್ಲ. ಹಾಗಾಗಿ ಸರ್ಕಾರ ಮತ್ತು ಪೊಲೀಸರು ರೈತರನ್ನು ಗೌರವದಿಂದ ಕಾಣಬೇಕು ಮತ್ತು ಟ್ರಾಕ್ಟರ್‌‌‌‌ಗಳು ಬೆಂಗಳೂರಿಗೆ ತೆರಳಲು ಅನುವು ಮಾಡಿಕೊಡಬೇಕು” ಎಂದು ಆಗ್ರಹಿಸಿದರು.

“ಚಳವಳಿಯನ್ನು ಹತ್ತಿಕ್ಕಲು ಸರ್ಕಾರ ವಾಮಮಾರ್ಗ ಹಿಡಿಯುತ್ತಿದೆ. ಟ್ರಾಕ್ಟರ್‌‌‌‌ ಮಾಲಿಕರನ್ನು ಹೆದರಿಸುವ ಕೆಲಸ ಮಾಡುತ್ತಿದೆ. ಆರ್.ಟಿ.ಒ ಅಧಿಕಾರಿಗಳು ಟ್ರಾಕ್ಟರ್‌‌‌‌ಗಳ ದಾಖಲೆಗಳನ್ನು ಕೇಳುವ ಮೂಲಕ ಮಾಲಿಕರನ್ನು ಬೆದರಿಸುವ ಕೆಲಸ ಮಾಡುತ್ತಿದ್ದಾರೆ, ಇದು ಖಂಡನೀಯ. ಲಕ್ಷಾಂತರ ವಾಹನಗಳು ನಿತ್ಯವೂ ಯಾವುದೇ ದಾಖಲೆಗಳು ಇಲ್ಲದೆ ಸಂಚರಿಸುತ್ತಿವೆ. ಅವುಗಳ ದಾಖಲೆ ಕೇಳದ ಆರ್.ಟಿ.ಓ ಅಧಿಕಾರಿಗಳು ಈಗ ಟ್ರಾಕ್ಟರ್‌‌‌‌ ದಾಖಲೆ ಕೇಳುತ್ತಿರುವುದು ನಾಚಿಕೆಗೇಡಿನ ಸಂಗತಿ. ಚಳವಳಿಯನ್ನು ಹತ್ತಿಕ್ಕುವ ಹುನ್ನಾರ ನಿಲ್ಲಬೇಕು. ಸರ್ಕಾರ ಪೊಲೀಸರನ್ನು ಮುಂದಿಟ್ಟುಕೊಂಡು ಪ್ರತಿಭಟನೆಯನ್ನು ತಡೆಯಲು ಮುಂದಾದರೂ ಟ್ರಾಕ್ಟರ್‌‌‌‌ಗಳು ಬೆಂಗಳೂರಿಗೆ ತೆರಳಲಿವೆ” ಎಂದು ಎಚ್ಚರಿಸಿದ್ದಾರೆ.

ಇದನ್ನೂ ಓದಿ: ಗೆದ್ದ ಅನ್ನದಾತನ ಹಠ: ಟ್ರಾಕ್ಟರ್‌ ರ್‍ಯಾಲಿಗೆ ದೆಹಲಿ ಪೊಲೀಸರ ಅನುಮತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...