Homeಮುಖಪುಟರೈತ ಹೋರಾಟ ತಡೆಗೆ ಹಲವು ಕುತಂತ್ರಗಳು, ಜಗ್ಗದ ಅನ್ನದಾತರು: ವಿಶೇಷ ವರದಿ

ರೈತ ಹೋರಾಟ ತಡೆಗೆ ಹಲವು ಕುತಂತ್ರಗಳು, ಜಗ್ಗದ ಅನ್ನದಾತರು: ವಿಶೇಷ ವರದಿ

ಸರ್ಕಾರ ಇಂಟರ್‌ನೆಟ್ ಸಂಪರ್ಕ ತೆಗೆದುಹಾಕಿದ ಮೇಲೆ ರೈತ ಮುಖಂಡರು ತಮ್ಮ ವ್ಯಾನ್‌ಗಳಲ್ಲಿ ತೆರಳಿ ಮಾಹಿತಿ ನೀಡಲು ಆರಂಭಿಸಿದರು. ಯಾವ ಯಾವ ಗಡಿಗಳಲ್ಲಿ ಏನು ನಡೆಯುತ್ತಿದೆ ಎಂಬ ಬಗ್ಗೆ ಮಾಹಿತಿ ನೀಡುತ್ತಾ, ಪ್ರತಿಭಟನೆ ಹತ್ತಿಕ್ಕಲು ಆಡಳಿತ ವ್ಯವಸ್ಥೆ ಕುತಂತ್ರ ನಡೆಸುತ್ತಿದೆ ಎಂಬುದನ್ನು ಮನವರಿಕೆ ಮಾಡಿಕೊಡುವಲ್ಲಿ ಯಶಸ್ವಿಯಾದರು.

- Advertisement -
- Advertisement -

ಜನವರಿ 26ರ ಈ ಬಾರಿಯ ಕಿಸಾನ್ ಗಣರಾಜ್ಯೋತ್ಸವ ಮಾಧ್ಯಮಗಳಲ್ಲಿ ಹೆಚ್ಚು ಚರ್ಚಿತವಾಗುತ್ತಿದೆ. ಟ್ರ್ಯಾಕ್ಟರ್ ಪರೇಡ್ ಬಳಿಕ ದೇಶದಲ್ಲಿ ರೈತ ಪ್ರತಿಭಟನೆ ಮತ್ತೊಂದು ಸ್ವರೂಪ ಪಡೆದುಕೊಂಡಿದೆ. ವಿದೇಶಿ ಸರ್ಕಾರ ಹಾಗೂ ಮಾಧ್ಯಮಗಳು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು, ದೇಶದ ನಾಗರಿಕರು ಹಲವು ರೀತಿಯಲ್ಲಿ ಈ ಹೋರಾಟವನ್ನು ನೋಡುತ್ತಿದ್ದಾರೆ. ಇಷ್ಟು ದಿನ ಸಿಂಘು ಮತ್ತು ಟಿಕ್ರಿ ಗಡಿಗಳು ಹೆಚ್ಚು ಸದ್ದಾಗುತ್ತಿದ್ದವು. ಆದರೆ ಈ ಬಾರಿ ಗಾಝಿಪುರ್ ಗಡಿಯ ಪ್ರತಿಭಟನೆ ಎಲ್ಲರ ಗಮನ ಸೆಳೆದಿದ್ದು, ಕೇಂದ್ರಬಿಂದುವಾಗಿ ಪರಿಣಮಿಸಿದೆ.

ಆಡಳಿತ ವ್ಯವಸ್ಥೆ ಹೋರಾಟವನ್ನು ಹತ್ತಿಕ್ಕುವ ಹಲವು ಪ್ರಯತ್ನಗಳನ್ನು ನಡೆಸುತ್ತಿದೆ. ಬಜೆಟ್ ಅಧಿವೇಶನದ ನೆಪ ಇಟ್ಟುಕೊಂಡು ರೈತ ಮುಖಂಡರ ಜೊತೆಗಿನ ಮಾತುಕತೆಯನ್ನು ಮುಂದೂಡಲಾಗಿದೆ. ಈ ನಡುವೆಯೇ ಪ್ರತಿಭಟನಾಕಾರರನ್ನು ಒಕ್ಕಲೆಬ್ಬಿಸುವ ಪ್ರಯತ್ನಗಳು ಹಲವು ಬಾರಿ ನಡೆದು ವಿಫಲವಾಗಿವೆ. ಸಾಮಾಜಿಕ ಮಾಧ್ಯಮಗಳು ಮತ್ತು ಸ್ವತಂತ್ರ ಸುದ್ದಿ ಮಾಧ್ಯಮಗಳ ವರದಿಗಳಿಂದಾಗಿ ಪ್ರತಿಭಟನೆ ದೇಶ ವಿದೇಶಗಳಲ್ಲಿ ಮತ್ತಷ್ಟು ಜನರ ಗಮನ ಸೆಳೆದಿದೆ.

ಟ್ರ್ಯಾಕ್ಟರ್ ಪರೇಡ್‌ನ ಕೆಂಪುಕೋಟೆಯಲ್ಲಿ ಸಿಖ್ ಧ್ವಜ ಹಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ರೈತ ನಾಯಕರ ಮೇಲೆ ದೂರು ದಾಖಲಿಸಲಾಗಿತ್ತು. ಘಟನೆಯ ನೈತಿಕ ಹೊಣೆ ಹೊತ್ತು ಸಂಯುಕ್ತ ಕಿಸಾನ್ ಮೋರ್ಚಾದ ನಾಯಕರು ಫೆಬ್ರವರಿ ಒಂದರಂದು ನಡೆಯಬೇಕಿದ್ದ ಪಾರ್ಲಿಮೆಂಟ್ ಚಲೋ ಪಾದಯಾತ್ರೆಯನ್ನು ಮುಂದೂಡಿದ್ದರು. ಜೊತೆಗೆ ಹುತಾತ್ಮ ದಿನದಂದು (ಜನವರಿ 30) ಉಪವಾಸ ಸತ್ಯಾಗ್ರಹ ನಡೆಸಿದರು.

ಇತ್ತ, ಕಿಸಾನ್ ಗಣರಾಜ್ಯೋತ್ಸವದ ಘಟನೆಯ ಲಾಭ ಪಡೆಯಲು ಮುಂದಾದ ಸರ್ಕಾರ, ಕೊಂಚ ಮಟ್ಟಿಗೆ ಕಡಿಮೆ ಸಂಖ್ಯೆಯ ರೈತರಿದ್ದ ದೆಹಲಿ-ಉತ್ತರ ಪ್ರದೇಶ ಹೆದ್ದಾರಿಯ ಚಿಲ್ಲಾ ಬಾರ್ಡರ್‌ನಲ್ಲಿ ರೈತರನ್ನು ಬಲವಂತವಾಗಿ ಹೊರಹಾಕಲು ಪ್ರಯತ್ನಿಸಿತು. ಪೊಲೀಸರ ಸಹಾಯದೊಂದಿದೆ ರೈತರನ್ನು ಹೆದರಿಸಿ, ಲಾಠಿ ಪ್ರಹಾರ ನಡೆಸಿ ಅಲ್ಲಿಂದ ಓಡಿಸಲಾಯಿತು. ತಮ್ಮ ಟೆಂಟ್, ಟ್ರ್ಯಾಲಿಗಳನ್ನು ಅಲ್ಲಿಯೇ ಬಿಟ್ಟು ಹಲವು ರೈತರು ಚಿಲ್ಲಾ ಬಾರ್ಡರ್ನಿಂದ ತಮ್ಮ ಹಳ್ಳಿಗಳಿಗೆ, ಮತ್ತೆ ಕೆಲವರು ಗಾಜಿಪುರ್ ಬಾರ್ಡರ್‌ಗಳಿಗೆ ತಲುಪಿದರು. ಅಲ್ಲಿದ್ದ ಅನ್ಯರಾಜ್ಯದ ಜನರನ್ನು ರೈತರು ತಮ್ಮ ಮನೆಗಳಿಗೆ ಕರೆದುಕೊಂಡು ಹೋದ ಘಟನೆಗಳು ಸಂಭವಿಸಿವೆ.

ಚಿಲ್ಲಾ ಬಾರ್ಡರ್‌ನಲ್ಲಿ ರೈತರನ್ನು ಒಕ್ಕಲೆಬ್ಬಿಸಿದ ಖುಷಿಯಲ್ಲಿ ಗಾಝಿಪುರ್ ಬಾರ್ಡರ್ ಕಡೆಗೆ ಸರ್ಕಾರದ ಗಮನ ಹರಿಯಿತು. ಅಲ್ಲಿಗೆ ವಿದ್ಯುಚ್ಛಕ್ತಿ ಮತ್ತು ನೀರಿನ ಸರಬರಾಜನ್ನು ಉತ್ತರ ಪ್ರದೇಶ ಸರ್ಕಾರ ನಿಲ್ಲಿಸಿತು. ಪೊಲೀಸರು ರೈತರನ್ನು ಓಡಿಸಲು ಪ್ರಯತ್ನ ನಡೆಸಿದರು. ಆದರೆ, ಅವರ ಈ ಪ್ರಯತ್ನ ಸರ್ಕಾರ ಮತ್ತು ಪೊಲೀಸರಿಗೆ ಮುಳುವಾಗಿ ಬದಲಾಯಿತು.

ರೈತರ ಮೇಲೆ ಪೊಲೀಸರ ದೌರ್ಜನ್ಯ ಖಂಡಿಸಿ ಭಾರತೀಯ ಕಿಸಾನ್ ಯೂನಿಯನ್ ಟಿಕಾಯತ್ ಬಣದ ಮುಖಂಡ ರಾಕೇಶ್ ಟಿಕಾಯತ್ ಮಾಡಿದ ಭಾವುಕ ಭಾಷಣ ಇಡೀ ಉತ್ತರಪ್ರದೇಶದ ರೈತರಲ್ಲಿ ಹೊಸ ಹುರುಪು ತುಂಬಿತು. ರಾಕೇಶ್ ಟಿಕಾಯತ್ ಅವರ ಕಣ್ಣೀರು ಗಾಝಿಪುರ್ ಪ್ರತಿಭಟನಾ ಸ್ಥಳಕ್ಕೆ ರೈತರ ಸಾಗರವನ್ನೇ ಹರಿಸಿತು. ಟಿಕಾಯತ್ ಮಾತು ಕೇಳಿ ಸಿಂಘು ಮತ್ತು ಟಿಕ್ರಿ ಗಡಿ ಭಾಗಗಳಿಂದ ಪ್ರತಿಭಟನಾ ನಿರತ ಯುವಜನತೆ ರಾತ್ರೋರಾತ್ರಿ ತಮ್ಮ ಟ್ರ್ಯಾಲಿಗಳಲ್ಲಿ ಗಾಜಿಪುರ್ ಗಡಿಯನ್ನು ತಲುಪಿ ರೈತರಿಗೆ ರಕ್ಷಣೆ ಮತ್ತು ಬೆಂಬಲ ನೀಡಿದರು. ಮರುದಿನ ಉತ್ತರ ಪ್ರದೇಶದ ಹಳ್ಳಿಗಳಲ್ಲಿ ನಡೆದ ಮಹಾ ಪಂಚಾಯತ್ ಸಭೆಗಳಲ್ಲಿ ಸಾವಿರಾರು ಜನರು ಸೇರಿದ್ದರು. ಗಾಝಿಪುರ್‌ಗೆ 10 ಸಾವಿರಕ್ಕೂ ಹೆಚ್ಚು ಜನರು ಬಂದು ಪ್ರತಿಭಟನೆ ಮತ್ತಷ್ಟು ತೀವ್ರಗೊಳ್ಳಲು ಸಾಧ್ಯವಾಯಿತು. ನಂತರ ಗಾಝಿಪುರ್ ಗಡಿ ಭಾಗಕ್ಕೆ ದೆಹಲಿಯ ಕೇಜ್ರಿವಾಲ್ ಸರ್ಕಾರ ನೀರಿನ ವ್ಯವಸ್ಥೆ ಮಾಡಿತ್ತು. ಇದನ್ನೂ ಪೊಲೀಸರು ತಡೆದಿದ್ದರು. ಬಳಿಕ ಸ್ಥಳೀಯರೇ ರೈತರ ಸಹಾಯಕ್ಕೆ ನಿಂತರು.

ಇಷ್ಟರಲ್ಲಾಗಲೇ ಕೆಲವು ಕಾರ್ಪೊರೆಟ್ ಹಿಡಿತದ ಮಾಧ್ಯಮಗಳು ಮತ್ತು ಕೇಂದ್ರ ಸರ್ಕಾರದ ಆಡಳಿತ ಪಕ್ಷದ ಐಟಿ ಸೇನೆ, ಗಡಿಗಳು ಖಾಲಿಯಾಗುತ್ತಿವೆ, ರೈತರು ತಮ್ಮ ತಮ್ಮ ಊರುಗಳಿಗೆ ತೆರಳುತಿದ್ದಾರೆ ಎಂಬ ವದಂತಿ ಹಬ್ಬಿಸಲು ಆರಂಭಿಸಿದ್ದವು. ಪರೇಡ್‌ಗಾಗಿ ಬಂದಿದ್ದ ಟ್ರ್ಯಾಕ್ಟರ್‌ಗಳು ವಾಪಸ್ ಹೋಗುತ್ತಿದದ್ದನ್ನು ರೈತರೇ ವಾಪಸ್ ಹೋಗುತ್ತಿದ್ದಾರೆ ಎಂದು ಪ್ರತಿಪಾದಿಸಲಾಯಿತು. ಪ್ರತಿಭಟನಾ ಸ್ಥಳಗಳಾದ ಸಿಂಘು, ಟಿಕ್ರಿ, ಶಹಾಜಾನ್‌ಪುರ್ ಮತ್ತು ಗಾಝಿಪುರ್ ಗಡಿಗಳಲ್ಲಿ ಇಂಟರ್‌ನೆಟ್ ವ್ಯವಸ್ಥೆಯನ್ನು ಸ್ಥಗಿತಗೊಳಿಸಲಾಗಿತ್ತು. ರೈತ ಹೋರಾಟದ ವಾಸ್ತವ ಸುದ್ದಿಗಳು ಜನರನ್ನು ತಲುಪದಿರಲು ವ್ಯವಸ್ಥೆ ಮಾಡಲಾಗಿತ್ತು. ಇದರಿಂದ ರೈತರು ಕೊಂಚಮಟ್ಟಿಗೆ ಆತಂಕಕ್ಕೆ ಒಳಗಾಗಿದ್ದರು. ಮನೆಗಳಲ್ಲಿ ಮಾಧ್ಯಮಗಳ ಸುದ್ದಿಯನ್ನು ನೋಡಿ ಕರೆ ಮಾಡುವವರ ಸಂಖ್ಯೆ ಹೆಚ್ಚಾದಂತೆ ಪ್ರತಿಭಟನಾಕಾರರಲ್ಲೂ ಬೇಸರ ಶುರುವಾಗಿತ್ತು. ಇದನ್ನು ರೈತ ಮುಖಂಡರು ಉತ್ತಮ ರೀತಿಯಲ್ಲಿ ಬಗೆಹರಿಸುವಲ್ಲಿ ಸಫಲರಾದರು.

ಸರ್ಕಾರ ಇಂಟರ್‌ನೆಟ್ ಸಂಪರ್ಕ ತೆಗೆದುಹಾಕಿದ ಮೇಲೆ ರೈತ ಮುಖಂಡರು ತಮ್ಮ ವ್ಯಾನ್‌ಗಳಲ್ಲಿ ತೆರಳಿ ಮಾಹಿತಿ ನೀಡಲು ಆರಂಭಿಸಿದರು. ಯಾವ ಯಾವ ಗಡಿಗಳಲ್ಲಿ ಏನು ನಡೆಯುತ್ತಿದೆ ಎಂಬ ಬಗ್ಗೆ ಮಾಹಿತಿ ನೀಡುತ್ತಾ, ಪ್ರತಿಭಟನೆ ಹತ್ತಿಕ್ಕಲು ಆಡಳಿತ ವ್ಯವಸ್ಥೆ ಕುತಂತ್ರ ನಡೆಸುತ್ತಿದೆ ಎಂಬುದನ್ನು ಮನವರಿಕೆ ಮಾಡಿಕೊಡುವಲ್ಲಿ ಯಶಸ್ವಿಯಾದರು.

ಈ ಬಾರಿ ಉತ್ತರಪ್ರದೇಶ ಮತ್ತು ಹರಿಯಾಣದ ರೈತರು ಪ್ರತಿಭಟನಾ ಸ್ಥಳಗಳಿಗೆ ಬರಲು ಆರಂಭಿಸಿದರು. ಟ್ರ್ಯಾಕ್ಟರ್ ಮಾರ್ಚ್ ಮುಗಿಸಿ ಮನೆಗೆ ತೆರಳಿದ್ದ ಟ್ರ್ಯಾಕ್ಟರ್‌ಗಳು ಮಾಧ್ಯಮಗಳ ಸುದ್ದಿ ನೋಡಿ ಮತ್ತೆ ಬಾರ್ಡರ್ ಕಡೆಗೆ ಮುಖ ಮಾಡಿದವು. ಸಾವಿರಾರು ಸಂಖ್ಯೆಯಲ್ಲಿ ಟ್ರ್ಯಾಕ್ಟರ್‌ಗಳು ಟಿಕ್ರಿ ಮತ್ತು ಗಾಝಿಪುರ್ ಗಡಿಗಳಿಗೆ ಬರಲಾರಂಭಿಸಿದವು. ಹರಿಯಾಣದ ಪ್ರತಿ ಮನೆಗಳಿಂದ ಒಬ್ಬರು ಪ್ರತಿಭಟನಾ ಸ್ಥಳಕ್ಕೆ ಹೋಗಲೇಬೇಕು ಎಂಬ ಜನಾದೇಶ ಜಾರಿಯಾಯಿತು. ಪಂಚಾಯತ್ ಸಭೆಗಳಿಗೆ ಸಾವಿರಾರು ಸಂಖ್ಯೆಯಲ್ಲಿ ಜನ ಸೇರಲಾರಂಭಿಸಿದರು. ರೈತ ಮುಖಂಡರು ಜನರನ್ನು ಒಂದೆಡೆ ಸೇರಿಸುವಲ್ಲಿ ಸಫಲರಾದರು.

ಪ್ರತಿಭಟನಾ ಸ್ಥಳಗಳಲ್ಲಿ ಪೊಲೀಸರು ಮತ್ತು ಸರ್ಕಾರದ ಬೆಂಬಲಿಗರು ರೈತರ ಮೇಲೆ ಹಲ್ಲೆ ನಡೆಸುತ್ತಿರುವ ವಿಚಾರ ಎಲ್ಲಾ ಗಡಿಗಳಲ್ಲಿ ತಿಳಿದ ಮೇಲೆ ಸ್ವಯಂ ರಕ್ಷಣ ಪಡೆಗಳ ಸಂಖ್ಯೆಯನ್ನು ಹೆಚ್ಚು ಮಾಡಲಾಯಿತು. ಮೂರು ಟ್ರ್ಯಾಲಿಗಳಿಗೆ ಇಬ್ಬರಂತೆ ಸ್ವಯಂಸೇವಕರನ್ನು (ವಾಲೆಂಟಿಯರ್ ಪೊಲೀಸ್) ಪಾಳಿಯಲ್ಲಿ ಕಾರ್ಯ ನಿರ್ವಹಿಸಲು ಸೂಚಿಸಲಾಯಿತು. ಇಡೀ ರಾತ್ರಿ ಜಾಗರಣೆ ಮಾಡುವ ಮೂಲಕ ಪಹರೆ ಕಾಯುವುದು ಇವರ ಕೆಲಸವಾಗಿದೆ.

ಸಿಂಘು ಗಡಿಯಲ್ಲಿರುವ ಸಂಯುಕ್ತ ಕಿಸಾನ್ ಮಜ್ದೂರ್ ಸಂಘರ್ಷ ಕಮಿಟಿಯ ಸದಸ್ಯರು ಕೆಲ ಬಿಜೆಪಿ ಬೆಂಬಲಿಗರ ಜೊತೆ ಸೇರಿ ಕೆಂಪುಕೋಟೆ ಪ್ರಕರಣ ನಡೆದು ಕಿಸಾನ್ ಆಂದೋಲನಕ್ಕೆ ಕಪ್ಪು ಚುಕ್ಕೆ ಬಂತು ಎಂದು ಹಲವು ರೈತರು ಆರೋಪಿಸಿದ್ದಾರೆ. ಇದರಿಂದ ಸಂಯುಕ್ತ ಕಿಸಾನ್ ಮೋರ್ಚಾದ ಸದಸ್ಯರು ಮತ್ತು ಸಂಯುಕ್ತ ಕಿಸಾನ್ ಮಜ್ದೂರ್ ಸಂಘರ್ಷ ಕಮಿಟಿಯ ಸದಸ್ಯರ ನಡುವೆ ಹಲವು ಚಿಕ್ಕ-ಪುಟ್ಟ ಜಟಾಪಟಿ ನಡೆಯಿತು. ಇದನ್ನೂ ಸರ್ಕಾರ ತನ್ನ ಲಾಭಕ್ಕೆ ಬಳಕೆ ಮಾಡಿಕೊಳ್ಳಲು ಮುಂದಾಯಿತು. ಆಡಳಿತ ಪಕ್ಷ ತನ್ನ ಬೆಂಬಲಿಗರನ್ನು ಸ್ಥಳೀಯರು ಎಂದು ಬಿಂಬಿಸಿ ಕಲ್ಲು ತೂರಾಟ ನಡೆಸಿತು. ಇದೇ ನೆಪದಲ್ಲಿ ಬ್ಯಾರಿಕೇಡ್‌ಗಳ, ಪೊಲೀಸರ ಸಂಖ್ಯೆ ಹೆಚ್ಚಿಸಿತು. ಜೊತೆಗೆ ಪ್ರತಿಭಟನಾ ಸ್ಥಳಗಳಿಂದ ದೆಹಲಿಯನ್ನು ಸಂಪರ್ಕಿಸುತ್ತಿದ್ದ ರಸ್ತೆಗಳು, ಪ್ರತಿಭಟನಾ ಸ್ಥಳಗಳಿಗೆ ಬೆಂಬಲಿಗರು ಹೋಗಲು ಇದ್ದ ದಾರಿಗಳನ್ನು ಬಂದ್ ಮಾಡಲಾಗಿದೆ.

ಬಾರ್ಡರ್‌ಗಳಿಗೆ ಭೇಟಿ ನೀಡಿ ಸುದ್ದಿ ಮಾಡುತ್ತಿದ್ದ ಪರ್ತಕತ್ರರನ್ನು ಬೆದರಿಸುವುದು ಮತ್ತು ಬಂಧಿಸುವುದನ್ನ ಪೊಲೀಸರು ಆರಂಭಿಸಿದ್ದರು. ಕಾರವಾನ್ ಪತ್ರಿಕೆಗೆ ಬರೆಯುವ ಸ್ವತಂತ್ರ ಪತ್ರಕರ್ತ ಮಂದೀಪ್ ಪುನಿಯಾ ಸೇರಿದಂತೆ ಮೂವರು ಪತ್ರಕರ್ತರನ್ನು ಬಂಧಿಸಲಾಗಿತ್ತು. ನಂತರ ಇಬ್ಬರನ್ನು ಬಿಡುಗಡೆ ಮಾಡಲಾಯಿತು. ಆದರೆ ಮಂದೀಪ್ ಪುನಿಯಾಗೆ ನಾಲ್ಕು ದಿನಗಳ (ಫೆಬ್ರವರಿ 2) ಬಳಿಕ ದೆಹಲಿ ಹೈಕೋರ್ಟ್ ಜಾಮೀನು ನೀಡಿದೆ. ಇವರ ಮೇಲೆ ಪೊಲೀಸರೊಂದಿಗೆ ಕೆಟ್ಟದಾಗಿ ವರ್ತಿಸಿದ ಆರೋಪ ಹೊರಿಸಲಾಗಿತ್ತು.

ಕೆಂಪುಕೋಟೆ ಪ್ರಕರಣವನ್ನು ತನಿಖೆ ಮಾಡುತ್ತಿರುವ ಪೊಲೀಸ್ ಇಲಾಖೆ ಗೊತ್ತು ಗುರಿ ಇಲ್ಲದೆ ರೈತರನ್ನು ಬಂಧಿಸಿದೆ. ಈವರೆಗೆ ಸುಮಾರು ಎರಡು ಸಾವಿರ ರೈತರ ಮೇಲೆ ಎಫ್‌ಐಆರ್ ದಾಖಲಿಸಿದೆ. ಪ್ರತಿಭಟನಾ ಸ್ಥಳಗಳಿಂದ ಮುನ್ನೂರಕ್ಕೂ ಹೆಚ್ಚು ಮಂದಿ ರೈತರು ಕಾಣೆಯಾಗಿದ್ದಾರೆ. ಪ್ರಕರಣದಲ್ಲಿ ಯಾರನ್ನು ಬಂಧಿಸಲಾಗಿದೆ ಎಂಬ ಮಾಹಿತಿಯನ್ನು ಪೊಲೀಸರು ನೀಡುತ್ತಿಲ್ಲ. ಇನ್ನು ಟ್ರ್ಯಾಕ್ಟರ್ ಪರೇಡ್‌ನಲ್ಲಿ ಭಾಗವಹಿಸದೇ ಇರುವವರನ್ನು ಕೂಡ ಈ ಪ್ರಕರಣದಲ್ಲಿ ಬಂಧಿಸಲಾಗಿದೆ. ಬುರಾಡಿ ಮೈದಾನದಿಂದ ಸಿಂಘು ಗಡಿ ಕಡೆಗೆ ತೆರಳುತ್ತಿದ್ದ 20ಕ್ಕೂ ಹೆಚ್ಚು ಮಂದಿ ಕಾಣೆಯಾಗಿದ್ದಾರೆ. ಮೊಗ್ಗಾ ಜಿಲ್ಲೆಯಿಂದ 19 ಮಂದಿ ಕಾಣೆಯಾಗಿದ್ದಾರೆ. ಒಟ್ಟಾರೆ ಪಂಜಾಬ್ ಟ್ರಿಬ್ಯೂನಲ್ ವರದಿ ಮಾಡಿದಂತೆ ನೂರು ಜನ ಲೆಕ್ಕಕ್ಕೆ ಸಿಗುತ್ತಾರೆ. ಕಾಣೆಯಾಗಿರುವ ಇತರರ ಬಗ್ಗೆ ಮಾಹಿತಿ ಪಡೆಯುವ ಉದ್ದೇಶದಿಂದ ಸಂಯುಕ್ತ ಕಿಸಾನ್ ಏಕ್ತಾ ಮೋರ್ಚಾ ಎಲ್ಲ ಊರುಗಳಲ್ಲಿ ಮತ್ತು ಪ್ರತಿಭಟನಾ ಸ್ಥಳಗಳಲ್ಲಿ ಯಾರು ಕಾಣೆಯಾಗಿದ್ದಾರೆ ಮಾಹಿತಿ ನೀಡಿ ಎಂದು ಪ್ರಕಟಣೆ ಹೊರಡಿಸಿ ಮಾಹಿತಿ ಸಂಗ್ರಹಿಸುತ್ತಿದೆ. ಪ್ರತಿಭಟನಾ ಸ್ಥಳದಲ್ಲಿ ಆರಂಭವಾಗಿರುವ ಟ್ರಾಲಿ ಟೈಮ್ಸ್ ಪತ್ರಿಕೆ ಕೂಡ ಕಾಣೆಯಾದವರ ಬಗ್ಗೆ ಮಾಹಿತಿ ಕೆದಕುತ್ತಿದ್ದು, ತಿಳಿದವರ ವಿವರವನ್ನು ಪ್ರಕಟಿಸುತ್ತಿದೆ.

ಗಡಿಗಳಲ್ಲಿ ರೈತ ಪ್ರತಿಭಟನೆಗೆ ಬೆಂಬಲಿಸಲು ತೆರಳುವವರಿಗೆ ಸಾಧ್ಯವಾಗದಂತೆ ಗೋಡೆಗಳನ್ನು ನಿರ್ಮಿಸಲಾಗುತ್ತಿದೆ. ಬ್ಯಾರಿಕೇಡ್‌ಗಳನ್ನು ಹೆಚ್ಚು ಮಾಡಲಾಗಿದೆ. ಸ್ಥಳೀಯರಿಗೂ ಓಡಾಡಲು ಅವಕಾಶ ನೀಡುತ್ತಿಲ್ಲ. ಸಿಂಘು ಬಾರ್ಡರ್‌ನಲ್ಲಿ ಇರುವ ಸಂಯುಕ್ತ ಕಿಸಾನ್ ಮೋರ್ಚಾ ಮತ್ತು ಸಂಯುಕ್ತ ಕಿಸಾನ್ ಮಜ್ದೂರ್ ಸಂಘರ್ಷ ಕಮಿಟಿಯ ವೇದಿಕೆಗಳ ನಡುವೆಯೇ ಬ್ಯಾರಿಕೇಡ್‌ಗಳನ್ನು ಹಾಕಲಾಗಿದ್ದು ಓಡಾಟವನ್ನು ನಿರ್ಬಂಧಿಸಲಾಗಿದೆ. ಈಗ ಅಲ್ಲಿಯೇ ಕಾಂಕ್ರಿಟ್ ಗೋಡೆಯನ್ನು ಕಟ್ಟಲಾಗುತ್ತಿದೆ. ದೆಹಲಿ ಕಡೆ ಇರುವ ಕಿಸಾನ್ ಮಜ್ದೂರ್ ಸಂಘರ್ಷ ಕಮಿಟಿಯ ಜನರ ಲಂಗರ್‌ಗಳು ಹರಿಯಾಣ ಭಾಗದಲ್ಲಿರುವ ಸಂಯುಕ್ತ ಕಿಸಾನ್ ಮೋರ್ಚಾ ವೇದಿಕೆಯ ಕಡೆ ಇದ್ದು ಪ್ರತಿಭಟನಾಕಾರರು ಊಟ ಉಪಚಾರಗಳಿಗೆ ಸುಮಾರು 2 ಕಿಲೋಮೀಟರ್ ಓಡಬೇಕಾಗಿದೆ. ಸಿಂಘು ಗಡಿ ಭಾಗದಲ್ಲಿರುವ ಸ್ಥಳೀಯರು ಕೂಡ ಐದಾರು ಕಿಲೋಮೀಟರ್ ನಡೆದರೆ ಮಾತ್ರ ಅವರಿಗೆ ತಮ್ಮ ಕೆಲಸದ ಸ್ಥಳಗಳಿಗೆ ಸೇರಲು ಸಾಧ್ಯವಾಗುತ್ತದೆ. ಇದರ ಜೊತೆಗೆ ನಡೆದುಕೊಂಡು ಹೋಗಲು ಇದ್ದ ಮಾರ್ಗಗಳಲ್ಲೂ ಪೊಲೀಸರು ಗುಂಡಿಗಳನ್ನು ತೋಡಿ ಸಂಚಾರಕ್ಕೆ ಅಡಚಣೆ ಮಾಡಿದ್ದಾರೆ. ಈ ಮೂಲಕ ಸ್ಥಳೀಯರಲ್ಲಿ ಪ್ರತಿಭಟನಾಕಾರರ ಮೇಲೆ ಆಕ್ರೋಶ ಮೂಡಿಸುವ ಉಪಾಯ ಸರ್ಕಾರದ್ದು ಎಂದು ರೈತರು ಆರೋಪಿಸುತ್ತಾರೆ.

ಗಾಝಿಪುರ್ ಗಡಿಯಲ್ಲಿ ರೈತರ ಟ್ರ್ಯಾಕ್ಟರ್‌ಗಳು ಮತ್ತು ಟ್ರ್ಯಾಲಿಗಳು ಒಳ ಬರದಂತೆ ತಡೆಯಲು ರಸ್ತೆಯಲ್ಲಿ ಕಬ್ಬಿಣದ ಕಂಬಿಗಳನ್ನು ನೆಡಲಾಗಿದೆ.

ಇತ್ತ ಟಿಕ್ರಿ ಗಡಿ ಭಾಗದಲ್ಲಿ ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಾಗುತ್ತಿದ್ದು ಇದನ್ನು ತಡೆಯಲು ಹೆದ್ದಾರಿಯಲ್ಲಿಯೇ ಕಂಟೈನರ್‌ಗಳ ಪಕ್ಕ ದೊಡ್ಡ ದೊಡ್ಡ ಗುಂಡಿಗಳನ್ನು ತೆಗೆಯಲಾಗುತ್ತಿದೆ. ರೈತರು ತಮ್ಮ ಟ್ರ್ಯಾಕ್ಟರ್‌ಗಳಿಂದ ಈ ಗುಂಡಿಗಳನ್ನು ಮುಚ್ಚಿಹಾಕುವ ಪ್ರಯತ್ನ ನಡೆಸುತ್ತಿದ್ದಾರೆ. ಆಡಳಿತ ವ್ಯವಸ್ಥೆಯ ಈ ಕುತಂತ್ರಗಳು ನಮ್ಮ ಮುಂದೆ ನಡೆಯುವುದಿಲ್ಲ ಎಂಬ ವಿಶ್ವಾಸದಲ್ಲಿದ್ದಾರೆ ರೈತರು.

ಶಾಂತಿಯುತವಾಗಿ ಕಳೆದ 70 ದಿನಗಳಿಂದ ನಡೆಯುತ್ತಿರುವ ರೈತ ಹೋರಾಟವನ್ನು ಅಶಾಂತಿಗೊಳಿಸಲು ಸರ್ಕಾರದ ಆಡಳಿತ ಪಕ್ಷ ಮತ್ತದರೆ ಬೆಂಬಲಿಗರು ಪ್ರಯತ್ನಿಸುತ್ತಿದ್ದಾರೆ. ಆದರೆ ಅವರ ಪ್ರಯತ್ನಗಳು ನಮ್ಮ ಹೋರಾಟವನ್ನು ಮತ್ತಷ್ಟು ಬಲಪಡಿಸುತ್ತಿದೆ ಎನ್ನುತ್ತಾರೆ ರೈತರು. ಇಷ್ಟು ದಿನ ಕರಾಳ ಕಾನೂನುಗಳನ್ನು ರದ್ದು ಮಾಡಿಸಲು ನಡೆಯುತ್ತಿದ್ದ ಹೋರಾಟ ಈಗ ಸಾವು ಮತ್ತು ಬದುಕಿನ ಹೋರಾಟವಾಗಿಯೂ ಬದಲಾಗಿದೆ. ನಮ್ಮ ಹೋರಾಟಕ್ಕೆ ಮತ್ತಷ್ಟು ಬಲ ತುಂಬುತ್ತಿರುವ ಸರ್ಕಾರಕ್ಕೆ ಧನ್ಯವಾದಗಳು, ನಾವು ಇಲ್ಲಿಂದ ಕದಲುವ ಮಾತು ಇಲ್ಲ. ಸಮಸ್ಯೆಗಳು ಎಷ್ಟೇ ಬರಲಿ ಎದುರಿಸುತ್ತೇವೆ ಎನ್ನುತ್ತಾರೆ ಪ್ರತಿಭಟನಾನಿರತ ರೈತರು.

ಕಳೆದೆರಡು ತಿಂಗಳು ಇದ್ದ ಬೆಂಬಲಕ್ಕೂ ಈಗಿನ ಬೆಂಬಲಕ್ಕೂ ವ್ಯತ್ಯಾಸ ಹೆಚ್ಚು ಗೋಚರಿಸುತ್ತಿದೆ. ಜನ ಮತ್ತಷ್ಟು ತಂಡ ತಂಡವಾಗಿ ಗಡಿಗಳಿಗೆ ಬರುತ್ತಿದ್ದಾರೆ. ರಾಕೇಶ್ ಟಿಕಾಯತ್ ಭಾಷಣದ ಬಳಿಕ ಉತ್ತರ ಪ್ರದೇಶ ಮತ್ತು ಹರಿಯಾಣದ ರೈತರು ಸಾವಿರಾರು ಸಂಖ್ಯೆಯಲ್ಲಿ ಟಿಕ್ರಿ ಮತ್ತು ಗಾಝಿಪುರ್ ಗಡಿಗಲ್ಲಿ ಜಮಾಯಿಸಿದ್ದಾರೆ. ಪಂಜಾಬ್‌ನಲ್ಲಿ ಕಳೆದ ಸೆಪ್ಟಂಬರ್‌ನಲ್ಲಿ ಆರಂಭವಾದ ಈ ಹೋರಾಟ ದೆಹಲಿಯಲ್ಲಿ ಮತ್ತಷ್ಟು ತಿಂಗಳುಗಳು ನಡೆಯುವ ಮುನ್ಸೂಚನೆ ನೀಡಿದೆ. ರೈತರು ತಿಂಗಳುಗಳಲ್ಲ ವರ್ಷವಾದರೂ ಸರಿ ನಾವು ಇಲ್ಲಿಂದ ಕದಲುವುದಿಲ್ಲ. ಇದು ನಮ್ಮ ಅನ್ನದ ಪ್ರಶ್ನೆ. ಮೂರು ಕೃಷಿ ಕಾಯ್ದೆಗಳು ರದ್ದಾಗಿ, ನಮ್ಮ ಹಕ್ಕು ಸಿಗುವವರೆಗೆ ನಮ್ಮ ಹೋರಾಟ ಮುಂದುವರೆಯಲಿದೆ ಎನ್ನುತ್ತಾರೆ.


ಇದನ್ನೂ ಓದಿ: ರೈತರಿಗೆ ಬೆಂಬಲ: ಹರಿಯಾಣದ ಪ್ರತಿ ಹಳ್ಳಿಗೂ ಹರಡಿದ ಮಹಾಪಂಚಾಯತ್ – ಗ್ರೌಂಡ್ ರಿಪೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...