Homeಮುಖಪುಟ'ದೆಹಲಿ ಚಲೋ' 2 ದಿನಗಳವರೆಗೆ ಸ್ಥಗಿತ: ಯುವ ರೈತನ ಸಾವಿಗೆ ಪೊಲೀಸ್‌ ಫೈರಿಂಗ್ ಕಾರಣ?

‘ದೆಹಲಿ ಚಲೋ’ 2 ದಿನಗಳವರೆಗೆ ಸ್ಥಗಿತ: ಯುವ ರೈತನ ಸಾವಿಗೆ ಪೊಲೀಸ್‌ ಫೈರಿಂಗ್ ಕಾರಣ?

- Advertisement -
- Advertisement -

ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಜಾರಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರೈತರು ಹಮ್ಮಿಕೊಂಡಿದ್ದ ದೆಹಲಿ ಚಲೋವನ್ನು ಎರಡು ದಿನಗಳ ಕಾಲ ಮುಂದೂಡಲಾಗಿದೆ ಎಂದು  ರೈತ ಸಂಘಟನೆಗಳು ತಿಳಿಸಿದೆ.

ಹರ್ಯಾಣದ ಖಾನೌರಿ ಗಡಿಯಲ್ಲಿ ನಿನ್ನೆ ಪ್ರತಿಭಟನಾ ನಿರತ ರೈತರು ಮತ್ತು ಪೊಲೀಸರೊಂದಿಗೆ ಘರ್ಷಣೆಯಲ್ಲಿ ಓರ್ವ ಯುವ ರೈತ ಸಾವನ್ನಪ್ಪಿದ್ದರು. ಅಖಿಲ ಭಾರತ ಕಿಸಾನ್ ಸಭಾ, 23 ವರ್ಷದ ಶುಭಕರನ್ ಸಿಂಗ್ ಪೊಲೀಸ್‌  ಫೈರಿಂಗ್‌ನಲ್ಲಿ ಬುಲೆಟ್‌ ಗಾಯಗಳಿಂದ ಮೃತಪಟ್ಟಿದ್ದಾರೆ ಎಂದು ಆರೋಪಿಸಿದ್ದಾರೆ. ಆದರೆ ಇದನ್ನು ಹರ್ಯಾಣ ಪೊಲೀಸರು ನಿರಾಕರಿಸಿದ್ದಾರೆ. ಧರಣಿ ಸತ್ಯಾಗ್ರಹ ಮುಂದುವರಿಯಲಿದ್ದರೂ ರೈತರು ‘ದೆಹಲಿ ಚಲೋ’ ಮೆರವಣಿಗೆಯನ್ನು ಎರಡು ದಿನಗಳ ಕಾಲ ಸ್ಥಗಿತಗೊಳಿಸಿದ್ದಾರೆ.

ವೈದ್ಯರ ಹೇಳಿಕೆ:

ಶುಭ್ ಕರಣ್ ಸಿಂಗ್ ಅವರನ್ನು ಕರೆದೊಯ್ಯಲಾದ ಪಟಿಯಾಲಾ ಆಸ್ಪತ್ರೆಯ ವೈದ್ಯರು, ಅವರಿಗೆ ಬುಲೆಟ್ ಗಾಯವಾಗಿದೆ ಎಂದು ಹೇಳಿದ್ದಾರೆ. ಆದರೆ ಈ ಕುರಿತ ಮರಣೋತ್ತರ ಪರೀಕ್ಷೆ ವರದಿಗಾಗಿ ಕಾಯಲಾಗುತ್ತಿದೆ.

ಖಾನೌರಿಯಿಂದ ನಮ್ಮ ಬಳಿಗೆ ಮೂವರು ರೋಗಿಗಳು ಬಂದಿದ್ದಾರೆ. ಅವರಲ್ಲಿ ಒಬ್ಬರು ಬರುವಾಗಲೇ ಮೃತಪಟ್ಟಿದ್ದಾರೆ, ಇನ್ನಿಬ್ಬರ ಆರೋಗ್ಯ ಸ್ಥಿರವಾಗಿದೆ ಮತ್ತು ಬುಲೆಟ್‌ನಿಂದ ಗಾಯಗೊಂಡಿದ್ದಾರೆ ಎಂದು ತೋರುತ್ತದೆ. ಆದರೆ ಅದನ್ನು ಖಚಿತಪಡಿಸಲು ಈಗ ಸಾಧ್ಯವಿಲ್ಲ ಎಂದು ಪಟಿಯಾಲದ ರಾಜೇಂದ್ರ ಆಸ್ಪತ್ರೆಯ ಹಿರಿಯ ವೈದ್ಯಾಧಿಕಾರಿ ಡಾ.ರೇಖಿ ಹೇಳಿದ್ದಾರೆ.

ಮೃತ ವ್ಯಕ್ತಿಯ ತಲೆಯ ಮೇಲೆ ಬುಲೆಟ್ ಗಾಯವಾಗಿತ್ತು, ಆದರೆ ಗುಂಡಿನ ಗಾತ್ರದ ಕುರಿತು ಹೆಚ್ಚಿನ ವಿವರಗಳನ್ನು ಮರಣೋತ್ತರ ಪರೀಕ್ಷೆಯ ನಂತರವೇ ದೃಢೀಕರಿಸಬಹುದು ಎಂದು ವೈದ್ಯರು ದೃಢಪಡಿಸಿದ್ದಾರೆ.

ಎಂಎಸ್ಪಿ ಕುರಿತು ಕೇಂದ್ರದ 5 ವರ್ಷದ ಒಪ್ಪಂದವನ್ನು ರೈತರು ತಿರಸ್ಕರಿಸಿದ್ದರು. ಇದರ ಬೆನ್ನಲ್ಲೆ ದೆಹಲಿ ಚಲೋ ಪುನರಾರಂಭಿಸುವುದಾಗಿ ರೈತ ಮುಖಂಡರು ಹೇಳಿದ್ದರು. ಹರ್ಯಾಣ ಪೊಲೀಸರು ಗಡಿಯಲ್ಲಿನ ಬ್ಯಾರಿಕೇಡ್‌ಗಳನ್ನು ಭೇದಿಸುವ ರೈತರ ಪ್ರಯತ್ನವನ್ನು ವಿಫಲಗೊಳಿಸಲು ಅಶ್ರುವಾಯು ಪ್ರಯೋಗ ಮಾಡಿದ್ದಾರೆ ಎಂದು ರೈತರು ತಿಳಿಸಿದ್ದಾರೆ.

ಹರ್ಯಾಣ ಪೊಲೀಸರು ಎಕ್ಸ್‌ನಲ್ಲಿ ಪೋಸ್ಟ್ ಮಾಡಿ ಸಾವು ಸಂಭವಿಸಿಲ್ಲ ಎಂದು ಹೇಳಿದ್ದಾರೆ. ಇದುವರೆಗೆ ಬಂದಿರುವ ಮಾಹಿತಿಯ ಪ್ರಕಾರ ಇಂದು ರೈತರ ಪ್ರತಿಭಟನೆಯಲ್ಲಿ ಯಾವುದೇ ರೈತ ಸಾವನ್ನಪ್ಪಿಲ್ಲ. ಇದು ಕೇವಲ ವದಂತಿಯಾಗಿದೆ. ಖಾನೌರಿ ಗಡಿಯಲ್ಲಿ ಇಬ್ಬರು ಪೊಲೀಸರು ಮತ್ತು ಒಬ್ಬ ಪ್ರತಿಭಟನಾಕಾರ ಗಾಯಗೊಂಡಿರುವ ಬಗ್ಗೆ ಮಾಹಿತಿ ಇದೆ, ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಯುವ ರೈತನ ಸಾವನ್ನು ಖಚಿತಪಡಿಸಿದ್ದಾರೆ. ಘಟನೆಯಿಂದ ನನಗೆ ತುಂಬಾ ದುಃಖವಾಗಿದೆ ಎಂದು ಹೇಳಿದ್ದಾರೆ.

ಘಟನೆಯನ್ನು ಖಂಡಿಸಿದ ಸಂಯುಕ್ತ ಕಿಸಾನ್ ಮೋರ್ಚಾ;

ಪ್ರತಿಭಟನಾ ನಿರತ ಯುವಕರು ಮತ್ತು ರೈತರನ್ನು ದೇಶದ ಶತ್ರುಗಳಂತೆ ಪರಿಗಣಿಸುತ್ತಿರುವ ಮೋದಿ ಸರ್ಕಾರವನ್ನು ಎಐಕೆಎಂಎಸ್ ಖಂಡಿಸಿದೆ. ಅವರು ಉತ್ಪಾದಿಸುವ ಮತ್ತು ದೇಶದ ಆರ್ಥಿಕತೆಯ ತಮ್ಮ ಪಾಲನ್ನು ಮಾತ್ರ ಕೇಳುವ ಜನರ ಮೇಲೆ ಅವರು ಸಶಸ್ತ್ರ ದಾಳಿ ನಡೆಸಿದ್ದಾರೆ. ಸರ್ಕಾರ ಮತ್ತು ಅವರ ಆರ್‌ಎಸ್‌ಎಸ್, ಬಿಜೆಪಿ ಭಾರತೀಯ ರೈತರನ್ನು ಶೋಷಿಸಲು ಕಾರ್ಪೊರೇಟ್, ಎಂಎನ್‌ಸಿಗಳು ಮತ್ತು ವಿದೇಶಿ ಶಕ್ತಿಗಳ ಹಿತಾಸಕ್ತಿಗಳನ್ನು ಪೂರೈಸುತ್ತಿವೆ. ಈ ಹತ್ಯೆಯು ಮೋದಿ ಆಡಳಿತದ ಕ್ರೌರ್ಯವನ್ನು ಬಯಲು ಮಾಡುತ್ತಿದೆ, ಅದು ರೈತ ಸ್ನೇಹಿ ಎಂದು ಹೇಳಿಕೊಳ್ಳುತ್ತಿದೆ. ಮನೋಹರ್ ಲಾಲ್ ಖಟ್ಟರ್ ನೇತೃತ್ವದ ಹರಿಯಾಣದ ಬಿಜೆಪಿ ಸರ್ಕಾರ ದೆಹಲಿಯತ್ತ ಸಾಗುತ್ತಿರುವ ಪ್ರತಿಭಟನಾ ನಿರತ ರೈತರನ್ನು ಶತ್ರು ಸೈನಿಕರಂತೆ ನಡೆಸಿಕೊಳ್ಳುತ್ತಿದೆ ಮತ್ತು ಯುದ್ಧ ನಡೆಸುತ್ತಿದೆ ಎಂದು ಹೇಳಿಕೊಂಡಿದೆ.

ಡಿಸೆಂಬರ್ 9, 2021ರಂದು ಎಸ್‌ಕೆಎಂ ಜೊತೆಗಿನ ಒಪ್ಪಂದವನ್ನು ಕಾರ್ಯಗತಗೊಳಿಸಲು ವಿಫಲವಾದ ಪ್ರಧಾನ ಮಂತ್ರಿ ಮತ್ತು ಕೇಂದ್ರ ಸರಕಾರ ಪ್ರಸ್ತುತ ಬಿಕ್ಕಟ್ಟಿಗೆ ಸಂಪೂರ್ಣ ಜವಾಬ್ದಾರರು ಎಂದು ಸಂಯುಕ್ತ ಕಿಸಾನ್ ಮೋರ್ಚಾ ಹೇಳಿಕೆಯಲ್ಲಿ ತಿಳಿಸಿದೆ.

ಶುಭ್ ಕರಣ್ ಸಿಂಗ್

ಹರ್ಯಾಣದ ಖಾನೌರಿ ಗಡಿಯಲ್ಲಿ ನಿನ್ನೆ ಪ್ರತಿಭಟನಾ ನಿರತ ರೈತರು ಮತ್ತು ಪೊಲೀಸರೊಂದಿಗೆ ಘರ್ಷಣೆಯ ವೇಳೆ ಮೃತ 23 ವರ್ಷದ ಶುಭ್ ಕರಣ್ ಸಿಂಗ್ ಬಟಿಂಡಾ ನಿವಾಸಿ. ಅವರು ಬಟಿಂಡಾ ಜಿಲ್ಲೆಯ ವಾಲೋ ಗ್ರಾಮದ ನಿವಾಸಿಗಳಾದ ಚರಂಜಿತ್ ಸಿಂಗ್ ಅವರ ಪುತ್ರರಾಗಿದ್ದಾರೆ. ಅವರ ಮೃತದೇಹವನ್ನು ರಾಜೇಂದ್ರ ಆಸ್ಪತ್ರೆಯಲ್ಲಿ ಇರಿಸಲಾಗಿದೆ. ಯುವ ರೈತ 2 ಎಕರೆ ಜಮೀನಿನ ಮಾಲೀಕ. ಅವರ ತಾಯಿ ನಿಧನರಾಗಿದ್ದರು.  ಅವರಿಗೆ ಇಬ್ಬರು ಸಹೋದರಿಯರಿದ್ದಾರೆ. ಅವರು ತನ್ನ ಅಜ್ಜಿ ಜೊತೆ ವಾಸಿಸುತ್ತಿದ್ದರು ಎಂದು ತಿಳಿದು ಬಂದಿದೆ.

ಇದನ್ನು ಓದಿ: ರಾಮನಗರ: ವಕೀಲರ ಪ್ರತಿಭಟನೆ; ಐಜೂರು ಠಾಣೆ ಪಿಎಸ್‌ಐ ತನ್ವೀರ್ ಹುಸೇನ್ ಅಮಾನತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ಯಾಲೆಸ್ತೀನ್ ಜನರೊಂದಿಗೆ ಒಗ್ಗಟ್ಟು ಪ್ರದರ್ಶನ: ದೆಹಲಿಯ ಮೆಕ್‌ಡೊನಾಲ್ಡ್ಸ್ ಹೊರಗೆ ಪ್ರತಿಭಟನೆ

ಪ್ಯಾಲೆಸ್ಟೈನ್ ಜೊತೆ ಒಗ್ಗಟ್ಟಿನ ಭಾರತೀಯ ಜನರು (ಐಪಿಎಸ್‌ಪಿ) ಗುಂಪಿನ ಸದಸ್ಯರು (ಏ.3) ಜನಪಥ್ ಪ್ರದೇಶದ ಮೆಕ್‌ಡೊನಾಲ್ಡ್ಸ್ ಔಟ್‌ಲೆಟ್‌ನ ಹೊರಗೆ ದಿಢೀರ್ ಪ್ರತಿಭಟನೆಯನ್ನು ಆಯೋಜಿಸಿದ್ದರು. ಪ್ಯಾಲೆಸ್ತೀನಿಯನ್ನರನ್ನು ಒಳಗೊಂಡ ನಡೆಯುತ್ತಿರುವ ಸಂಘರ್ಷದಲ್ಲಿ ಮೆಕ್‌ಡೊನಾಲ್ಡ್ಸ್ ಮತ್ತು ಕೋಕಾ-ಕೋಲಾದಂತಹ ಬಹುರಾಷ್ಟ್ರೀಯ...

‘ಇರಾನಿಯನ್ನರು ಸ್ಮಾರ್ಟ್ ಚೆಸ್ ಆಡುತ್ತಿದ್ದು, ಟ್ರಂಪ್ ಭ್ರಮಾಲೋಕದಲ್ಲಿದ್ದಾರೆ..’; ಮಾಜಿ ರಾಜತಾಂತ್ರಿಕ ಅಧಿಕಾರಿ ಕೆ.ಪಿ. ಫ್ಯಾಬಿಯನ್

ಪ್ರಸ್ತುತ ನಡೆಯುತ್ತಿರುವ ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಮಾತನಾಡಿದ ಭಾರತದ ಮಾಜಿ ರಾಯಭಾರಿ ಕೆ.ಪಿ. ಫ್ಯಾಬಿಯನ್, "ಇರಾನಿಯನ್ನರು ಸ್ಮಾರ್ಟ್ ಚೆಸ್ ಆಟವನ್ನು ಆಡುತ್ತಿದ್ದಾರೆ. ಆದರೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳು...

‘ನಾನು ಸಂಸತ್ತಿಗೆ ಹೋಗುವುದು ಗದ್ದಲ ಸೃಷ್ಟಿಸಲು ಅಲ್ಲ’ : ಎಎಪಿ ಆರೋಪಗಳನ್ನು ತಳ್ಳಿ ಹಾಕಿದ ರಾಘವ್ ಚಡ್ಡಾ

ತನ್ನ ವಿರುದ್ದ ಆಮ್‌ ಆದ್ಮಿ ಪಕ್ಷ (ಎಎಪಿ) ಮಾಡಿರುವ ಎಲ್ಲಾ ಆರೋಪಗಳನ್ನು ರಾಘವ್ ಚಡ್ಡಾ ಶನಿವಾರ (ಏ.4) ಅಲ್ಲಗಳೆದಿದ್ದು, "ಅವೆಲ್ಲವೂ ಸುಳ್ಳು ಮತ್ತು ಸಂಘಟಿತ ಅಭಿಯಾನದ ಭಾಗ" ಎಂದಿದ್ದಾರೆ. "ಸಂಸತ್ತಿನಲ್ಲಿ ನನ್ನ ಉದ್ದೇಶ...

ಎಡರಂಗದಲ್ಲಿ ಎಡಪಂಥೀಯರೇ ಇಲ್ಲ; ದ್ವೇಷ ಹರಡುವ ಜನರೊಂದಿಗೆ ಪಿಣರಾಯಿ ಪಾಲುದಾರಿಕೆ ಹೊಂದಿದ್ದಾರೆ: ರಾಹುಲ್ ಗಾಂಧಿ

ಕೇರಳ ವಿಧಾನಸಭಾ ಚುನಾವಣೆ ಪ್ರಚಾರವು ಅಂತಿಮ ಹಂತಕ್ಕೆ ತಲುಪುತ್ತಿದ್ದಂತೆ ತೀಕ್ಷ್ಣವಾದ ರಾಜಕೀಯ ದಾಳಿಯನ್ನು ಆರಂಭಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, "ಸಿಪಿಐ-ಎಂ ನೇತೃತ್ವದ ಎಡಪಕ್ಷವು ತನ್ನ ಸೈದ್ಧಾಂತಿಕ ತಿರುಳನ್ನು ಕಳೆದುಕೊಳ್ಳುತ್ತಿದೆ" ಎಂದು ಆರೋಪಿಸಿದ್ದಾರೆ. "ಎಲ್‌ಡಿಎಫ್...

ಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

"ವಿಧಾನಸಭಾ ಚುನಾವಣೆಗೆ ಬಿಜೆಪಿ ನನಗೆ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಎಂದು ಮುಂಚಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೆ" ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಶನಿವಾರ...

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿವೆ ಭಾರತದ 17 ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...