Homeಮುಖಪುಟ'ದೆಹಲಿ ಚಲೋ' 2 ದಿನಗಳವರೆಗೆ ಸ್ಥಗಿತ: ಯುವ ರೈತನ ಸಾವಿಗೆ ಪೊಲೀಸ್‌ ಫೈರಿಂಗ್ ಕಾರಣ?

‘ದೆಹಲಿ ಚಲೋ’ 2 ದಿನಗಳವರೆಗೆ ಸ್ಥಗಿತ: ಯುವ ರೈತನ ಸಾವಿಗೆ ಪೊಲೀಸ್‌ ಫೈರಿಂಗ್ ಕಾರಣ?

- Advertisement -
- Advertisement -

ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಜಾರಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರೈತರು ಹಮ್ಮಿಕೊಂಡಿದ್ದ ದೆಹಲಿ ಚಲೋವನ್ನು ಎರಡು ದಿನಗಳ ಕಾಲ ಮುಂದೂಡಲಾಗಿದೆ ಎಂದು  ರೈತ ಸಂಘಟನೆಗಳು ತಿಳಿಸಿದೆ.

ಹರ್ಯಾಣದ ಖಾನೌರಿ ಗಡಿಯಲ್ಲಿ ನಿನ್ನೆ ಪ್ರತಿಭಟನಾ ನಿರತ ರೈತರು ಮತ್ತು ಪೊಲೀಸರೊಂದಿಗೆ ಘರ್ಷಣೆಯಲ್ಲಿ ಓರ್ವ ಯುವ ರೈತ ಸಾವನ್ನಪ್ಪಿದ್ದರು. ಅಖಿಲ ಭಾರತ ಕಿಸಾನ್ ಸಭಾ, 23 ವರ್ಷದ ಶುಭಕರನ್ ಸಿಂಗ್ ಪೊಲೀಸ್‌  ಫೈರಿಂಗ್‌ನಲ್ಲಿ ಬುಲೆಟ್‌ ಗಾಯಗಳಿಂದ ಮೃತಪಟ್ಟಿದ್ದಾರೆ ಎಂದು ಆರೋಪಿಸಿದ್ದಾರೆ. ಆದರೆ ಇದನ್ನು ಹರ್ಯಾಣ ಪೊಲೀಸರು ನಿರಾಕರಿಸಿದ್ದಾರೆ. ಧರಣಿ ಸತ್ಯಾಗ್ರಹ ಮುಂದುವರಿಯಲಿದ್ದರೂ ರೈತರು ‘ದೆಹಲಿ ಚಲೋ’ ಮೆರವಣಿಗೆಯನ್ನು ಎರಡು ದಿನಗಳ ಕಾಲ ಸ್ಥಗಿತಗೊಳಿಸಿದ್ದಾರೆ.

ವೈದ್ಯರ ಹೇಳಿಕೆ:

ಶುಭ್ ಕರಣ್ ಸಿಂಗ್ ಅವರನ್ನು ಕರೆದೊಯ್ಯಲಾದ ಪಟಿಯಾಲಾ ಆಸ್ಪತ್ರೆಯ ವೈದ್ಯರು, ಅವರಿಗೆ ಬುಲೆಟ್ ಗಾಯವಾಗಿದೆ ಎಂದು ಹೇಳಿದ್ದಾರೆ. ಆದರೆ ಈ ಕುರಿತ ಮರಣೋತ್ತರ ಪರೀಕ್ಷೆ ವರದಿಗಾಗಿ ಕಾಯಲಾಗುತ್ತಿದೆ.

ಖಾನೌರಿಯಿಂದ ನಮ್ಮ ಬಳಿಗೆ ಮೂವರು ರೋಗಿಗಳು ಬಂದಿದ್ದಾರೆ. ಅವರಲ್ಲಿ ಒಬ್ಬರು ಬರುವಾಗಲೇ ಮೃತಪಟ್ಟಿದ್ದಾರೆ, ಇನ್ನಿಬ್ಬರ ಆರೋಗ್ಯ ಸ್ಥಿರವಾಗಿದೆ ಮತ್ತು ಬುಲೆಟ್‌ನಿಂದ ಗಾಯಗೊಂಡಿದ್ದಾರೆ ಎಂದು ತೋರುತ್ತದೆ. ಆದರೆ ಅದನ್ನು ಖಚಿತಪಡಿಸಲು ಈಗ ಸಾಧ್ಯವಿಲ್ಲ ಎಂದು ಪಟಿಯಾಲದ ರಾಜೇಂದ್ರ ಆಸ್ಪತ್ರೆಯ ಹಿರಿಯ ವೈದ್ಯಾಧಿಕಾರಿ ಡಾ.ರೇಖಿ ಹೇಳಿದ್ದಾರೆ.

ಮೃತ ವ್ಯಕ್ತಿಯ ತಲೆಯ ಮೇಲೆ ಬುಲೆಟ್ ಗಾಯವಾಗಿತ್ತು, ಆದರೆ ಗುಂಡಿನ ಗಾತ್ರದ ಕುರಿತು ಹೆಚ್ಚಿನ ವಿವರಗಳನ್ನು ಮರಣೋತ್ತರ ಪರೀಕ್ಷೆಯ ನಂತರವೇ ದೃಢೀಕರಿಸಬಹುದು ಎಂದು ವೈದ್ಯರು ದೃಢಪಡಿಸಿದ್ದಾರೆ.

ಎಂಎಸ್ಪಿ ಕುರಿತು ಕೇಂದ್ರದ 5 ವರ್ಷದ ಒಪ್ಪಂದವನ್ನು ರೈತರು ತಿರಸ್ಕರಿಸಿದ್ದರು. ಇದರ ಬೆನ್ನಲ್ಲೆ ದೆಹಲಿ ಚಲೋ ಪುನರಾರಂಭಿಸುವುದಾಗಿ ರೈತ ಮುಖಂಡರು ಹೇಳಿದ್ದರು. ಹರ್ಯಾಣ ಪೊಲೀಸರು ಗಡಿಯಲ್ಲಿನ ಬ್ಯಾರಿಕೇಡ್‌ಗಳನ್ನು ಭೇದಿಸುವ ರೈತರ ಪ್ರಯತ್ನವನ್ನು ವಿಫಲಗೊಳಿಸಲು ಅಶ್ರುವಾಯು ಪ್ರಯೋಗ ಮಾಡಿದ್ದಾರೆ ಎಂದು ರೈತರು ತಿಳಿಸಿದ್ದಾರೆ.

ಹರ್ಯಾಣ ಪೊಲೀಸರು ಎಕ್ಸ್‌ನಲ್ಲಿ ಪೋಸ್ಟ್ ಮಾಡಿ ಸಾವು ಸಂಭವಿಸಿಲ್ಲ ಎಂದು ಹೇಳಿದ್ದಾರೆ. ಇದುವರೆಗೆ ಬಂದಿರುವ ಮಾಹಿತಿಯ ಪ್ರಕಾರ ಇಂದು ರೈತರ ಪ್ರತಿಭಟನೆಯಲ್ಲಿ ಯಾವುದೇ ರೈತ ಸಾವನ್ನಪ್ಪಿಲ್ಲ. ಇದು ಕೇವಲ ವದಂತಿಯಾಗಿದೆ. ಖಾನೌರಿ ಗಡಿಯಲ್ಲಿ ಇಬ್ಬರು ಪೊಲೀಸರು ಮತ್ತು ಒಬ್ಬ ಪ್ರತಿಭಟನಾಕಾರ ಗಾಯಗೊಂಡಿರುವ ಬಗ್ಗೆ ಮಾಹಿತಿ ಇದೆ, ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಯುವ ರೈತನ ಸಾವನ್ನು ಖಚಿತಪಡಿಸಿದ್ದಾರೆ. ಘಟನೆಯಿಂದ ನನಗೆ ತುಂಬಾ ದುಃಖವಾಗಿದೆ ಎಂದು ಹೇಳಿದ್ದಾರೆ.

ಘಟನೆಯನ್ನು ಖಂಡಿಸಿದ ಸಂಯುಕ್ತ ಕಿಸಾನ್ ಮೋರ್ಚಾ;

ಪ್ರತಿಭಟನಾ ನಿರತ ಯುವಕರು ಮತ್ತು ರೈತರನ್ನು ದೇಶದ ಶತ್ರುಗಳಂತೆ ಪರಿಗಣಿಸುತ್ತಿರುವ ಮೋದಿ ಸರ್ಕಾರವನ್ನು ಎಐಕೆಎಂಎಸ್ ಖಂಡಿಸಿದೆ. ಅವರು ಉತ್ಪಾದಿಸುವ ಮತ್ತು ದೇಶದ ಆರ್ಥಿಕತೆಯ ತಮ್ಮ ಪಾಲನ್ನು ಮಾತ್ರ ಕೇಳುವ ಜನರ ಮೇಲೆ ಅವರು ಸಶಸ್ತ್ರ ದಾಳಿ ನಡೆಸಿದ್ದಾರೆ. ಸರ್ಕಾರ ಮತ್ತು ಅವರ ಆರ್‌ಎಸ್‌ಎಸ್, ಬಿಜೆಪಿ ಭಾರತೀಯ ರೈತರನ್ನು ಶೋಷಿಸಲು ಕಾರ್ಪೊರೇಟ್, ಎಂಎನ್‌ಸಿಗಳು ಮತ್ತು ವಿದೇಶಿ ಶಕ್ತಿಗಳ ಹಿತಾಸಕ್ತಿಗಳನ್ನು ಪೂರೈಸುತ್ತಿವೆ. ಈ ಹತ್ಯೆಯು ಮೋದಿ ಆಡಳಿತದ ಕ್ರೌರ್ಯವನ್ನು ಬಯಲು ಮಾಡುತ್ತಿದೆ, ಅದು ರೈತ ಸ್ನೇಹಿ ಎಂದು ಹೇಳಿಕೊಳ್ಳುತ್ತಿದೆ. ಮನೋಹರ್ ಲಾಲ್ ಖಟ್ಟರ್ ನೇತೃತ್ವದ ಹರಿಯಾಣದ ಬಿಜೆಪಿ ಸರ್ಕಾರ ದೆಹಲಿಯತ್ತ ಸಾಗುತ್ತಿರುವ ಪ್ರತಿಭಟನಾ ನಿರತ ರೈತರನ್ನು ಶತ್ರು ಸೈನಿಕರಂತೆ ನಡೆಸಿಕೊಳ್ಳುತ್ತಿದೆ ಮತ್ತು ಯುದ್ಧ ನಡೆಸುತ್ತಿದೆ ಎಂದು ಹೇಳಿಕೊಂಡಿದೆ.

ಡಿಸೆಂಬರ್ 9, 2021ರಂದು ಎಸ್‌ಕೆಎಂ ಜೊತೆಗಿನ ಒಪ್ಪಂದವನ್ನು ಕಾರ್ಯಗತಗೊಳಿಸಲು ವಿಫಲವಾದ ಪ್ರಧಾನ ಮಂತ್ರಿ ಮತ್ತು ಕೇಂದ್ರ ಸರಕಾರ ಪ್ರಸ್ತುತ ಬಿಕ್ಕಟ್ಟಿಗೆ ಸಂಪೂರ್ಣ ಜವಾಬ್ದಾರರು ಎಂದು ಸಂಯುಕ್ತ ಕಿಸಾನ್ ಮೋರ್ಚಾ ಹೇಳಿಕೆಯಲ್ಲಿ ತಿಳಿಸಿದೆ.

ಶುಭ್ ಕರಣ್ ಸಿಂಗ್

ಹರ್ಯಾಣದ ಖಾನೌರಿ ಗಡಿಯಲ್ಲಿ ನಿನ್ನೆ ಪ್ರತಿಭಟನಾ ನಿರತ ರೈತರು ಮತ್ತು ಪೊಲೀಸರೊಂದಿಗೆ ಘರ್ಷಣೆಯ ವೇಳೆ ಮೃತ 23 ವರ್ಷದ ಶುಭ್ ಕರಣ್ ಸಿಂಗ್ ಬಟಿಂಡಾ ನಿವಾಸಿ. ಅವರು ಬಟಿಂಡಾ ಜಿಲ್ಲೆಯ ವಾಲೋ ಗ್ರಾಮದ ನಿವಾಸಿಗಳಾದ ಚರಂಜಿತ್ ಸಿಂಗ್ ಅವರ ಪುತ್ರರಾಗಿದ್ದಾರೆ. ಅವರ ಮೃತದೇಹವನ್ನು ರಾಜೇಂದ್ರ ಆಸ್ಪತ್ರೆಯಲ್ಲಿ ಇರಿಸಲಾಗಿದೆ. ಯುವ ರೈತ 2 ಎಕರೆ ಜಮೀನಿನ ಮಾಲೀಕ. ಅವರ ತಾಯಿ ನಿಧನರಾಗಿದ್ದರು.  ಅವರಿಗೆ ಇಬ್ಬರು ಸಹೋದರಿಯರಿದ್ದಾರೆ. ಅವರು ತನ್ನ ಅಜ್ಜಿ ಜೊತೆ ವಾಸಿಸುತ್ತಿದ್ದರು ಎಂದು ತಿಳಿದು ಬಂದಿದೆ.

ಇದನ್ನು ಓದಿ: ರಾಮನಗರ: ವಕೀಲರ ಪ್ರತಿಭಟನೆ; ಐಜೂರು ಠಾಣೆ ಪಿಎಸ್‌ಐ ತನ್ವೀರ್ ಹುಸೇನ್ ಅಮಾನತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ; ಬಂಗಾಳದಲ್ಲಿ ಮಾತ್ರ ಎರಡು ಹಂತದ ಮತದಾನ

ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮುಖ್ಯಸ್ಥರಾದ ಜ್ಞಾನೇಶ್ ಕುಮಾರ್ ಪ್ರಕಟಿಸಿದರು. ದೆಹಲಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ...

ಫ್ಲಿಪ್‌ಕಾರ್ಟ್‌ನಿಂದ 1 ರೂ.ಗೆ ಹಾಲು ಮಾರಾಟ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಬಮುಲ್‌ ಆಗ್ರಹ

ಫ್ಲಿಪ್‌ಕಾರ್ಟ್‌ ಸಂಸ್ಥೆಯು ಆನ್‌ಲೈನ್‌ ಮೂಲಕ 1 ರೂ.ಗೆ ಲೀಟರ್‌ ಹಾಲನ್ನು ಮಾರಾಟ ಮಾಡಿರುವುದು ಭಾರಿ ಜನಾಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ, ಬೆಂಗಳೂರು ನಗರ, ಗ್ರಾಮೀಣ ಮತ್ತು ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ...

“ಮಕ್ಕಳ ಹಂತಕನನ್ನು ಹುಡುಕಿ ಹತ್ಯೆ ಮಾಡುತ್ತೇವೆ” : ನೆತನ್ಯಾಹು ಸುರಕ್ಷಿತವಾಗಿದ್ದಾರೆ ಎಂಬ ಇಸ್ರೇಲ್ ಸ್ಪಷ್ಟನೆ ಬೆನ್ನಲ್ಲೆ ಐಆರ್‌ಜಿಸಿ ಹೇಳಿಕೆ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹುಡುಕಿ ಹತ್ಯೆ ಮಾಡುತ್ತೇವೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಹೇಳಿರುವುದಾಗಿ ವರದಿಯಾಗಿದೆ. ನೆತನ್ಯಾಹು ಅವರ ಹತ್ಯೆಯ ವದಂತಿಗಳನ್ನು ಇಸ್ರೇಲ್ ನಿರಾಕರಿಸಿದ ಬೆನ್ನಲ್ಲೇ, ಐಆರ್‌ಜಿಸಿ ಈ...

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...