Homeಮುಖಪುಟ'ದೆಹಲಿ ಚಲೋ' 2 ದಿನಗಳವರೆಗೆ ಸ್ಥಗಿತ: ಯುವ ರೈತನ ಸಾವಿಗೆ ಪೊಲೀಸ್‌ ಫೈರಿಂಗ್ ಕಾರಣ?

‘ದೆಹಲಿ ಚಲೋ’ 2 ದಿನಗಳವರೆಗೆ ಸ್ಥಗಿತ: ಯುವ ರೈತನ ಸಾವಿಗೆ ಪೊಲೀಸ್‌ ಫೈರಿಂಗ್ ಕಾರಣ?

- Advertisement -
- Advertisement -

ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಜಾರಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರೈತರು ಹಮ್ಮಿಕೊಂಡಿದ್ದ ದೆಹಲಿ ಚಲೋವನ್ನು ಎರಡು ದಿನಗಳ ಕಾಲ ಮುಂದೂಡಲಾಗಿದೆ ಎಂದು  ರೈತ ಸಂಘಟನೆಗಳು ತಿಳಿಸಿದೆ.

ಹರ್ಯಾಣದ ಖಾನೌರಿ ಗಡಿಯಲ್ಲಿ ನಿನ್ನೆ ಪ್ರತಿಭಟನಾ ನಿರತ ರೈತರು ಮತ್ತು ಪೊಲೀಸರೊಂದಿಗೆ ಘರ್ಷಣೆಯಲ್ಲಿ ಓರ್ವ ಯುವ ರೈತ ಸಾವನ್ನಪ್ಪಿದ್ದರು. ಅಖಿಲ ಭಾರತ ಕಿಸಾನ್ ಸಭಾ, 23 ವರ್ಷದ ಶುಭಕರನ್ ಸಿಂಗ್ ಪೊಲೀಸ್‌  ಫೈರಿಂಗ್‌ನಲ್ಲಿ ಬುಲೆಟ್‌ ಗಾಯಗಳಿಂದ ಮೃತಪಟ್ಟಿದ್ದಾರೆ ಎಂದು ಆರೋಪಿಸಿದ್ದಾರೆ. ಆದರೆ ಇದನ್ನು ಹರ್ಯಾಣ ಪೊಲೀಸರು ನಿರಾಕರಿಸಿದ್ದಾರೆ. ಧರಣಿ ಸತ್ಯಾಗ್ರಹ ಮುಂದುವರಿಯಲಿದ್ದರೂ ರೈತರು ‘ದೆಹಲಿ ಚಲೋ’ ಮೆರವಣಿಗೆಯನ್ನು ಎರಡು ದಿನಗಳ ಕಾಲ ಸ್ಥಗಿತಗೊಳಿಸಿದ್ದಾರೆ.

ವೈದ್ಯರ ಹೇಳಿಕೆ:

ಶುಭ್ ಕರಣ್ ಸಿಂಗ್ ಅವರನ್ನು ಕರೆದೊಯ್ಯಲಾದ ಪಟಿಯಾಲಾ ಆಸ್ಪತ್ರೆಯ ವೈದ್ಯರು, ಅವರಿಗೆ ಬುಲೆಟ್ ಗಾಯವಾಗಿದೆ ಎಂದು ಹೇಳಿದ್ದಾರೆ. ಆದರೆ ಈ ಕುರಿತ ಮರಣೋತ್ತರ ಪರೀಕ್ಷೆ ವರದಿಗಾಗಿ ಕಾಯಲಾಗುತ್ತಿದೆ.

ಖಾನೌರಿಯಿಂದ ನಮ್ಮ ಬಳಿಗೆ ಮೂವರು ರೋಗಿಗಳು ಬಂದಿದ್ದಾರೆ. ಅವರಲ್ಲಿ ಒಬ್ಬರು ಬರುವಾಗಲೇ ಮೃತಪಟ್ಟಿದ್ದಾರೆ, ಇನ್ನಿಬ್ಬರ ಆರೋಗ್ಯ ಸ್ಥಿರವಾಗಿದೆ ಮತ್ತು ಬುಲೆಟ್‌ನಿಂದ ಗಾಯಗೊಂಡಿದ್ದಾರೆ ಎಂದು ತೋರುತ್ತದೆ. ಆದರೆ ಅದನ್ನು ಖಚಿತಪಡಿಸಲು ಈಗ ಸಾಧ್ಯವಿಲ್ಲ ಎಂದು ಪಟಿಯಾಲದ ರಾಜೇಂದ್ರ ಆಸ್ಪತ್ರೆಯ ಹಿರಿಯ ವೈದ್ಯಾಧಿಕಾರಿ ಡಾ.ರೇಖಿ ಹೇಳಿದ್ದಾರೆ.

ಮೃತ ವ್ಯಕ್ತಿಯ ತಲೆಯ ಮೇಲೆ ಬುಲೆಟ್ ಗಾಯವಾಗಿತ್ತು, ಆದರೆ ಗುಂಡಿನ ಗಾತ್ರದ ಕುರಿತು ಹೆಚ್ಚಿನ ವಿವರಗಳನ್ನು ಮರಣೋತ್ತರ ಪರೀಕ್ಷೆಯ ನಂತರವೇ ದೃಢೀಕರಿಸಬಹುದು ಎಂದು ವೈದ್ಯರು ದೃಢಪಡಿಸಿದ್ದಾರೆ.

ಎಂಎಸ್ಪಿ ಕುರಿತು ಕೇಂದ್ರದ 5 ವರ್ಷದ ಒಪ್ಪಂದವನ್ನು ರೈತರು ತಿರಸ್ಕರಿಸಿದ್ದರು. ಇದರ ಬೆನ್ನಲ್ಲೆ ದೆಹಲಿ ಚಲೋ ಪುನರಾರಂಭಿಸುವುದಾಗಿ ರೈತ ಮುಖಂಡರು ಹೇಳಿದ್ದರು. ಹರ್ಯಾಣ ಪೊಲೀಸರು ಗಡಿಯಲ್ಲಿನ ಬ್ಯಾರಿಕೇಡ್‌ಗಳನ್ನು ಭೇದಿಸುವ ರೈತರ ಪ್ರಯತ್ನವನ್ನು ವಿಫಲಗೊಳಿಸಲು ಅಶ್ರುವಾಯು ಪ್ರಯೋಗ ಮಾಡಿದ್ದಾರೆ ಎಂದು ರೈತರು ತಿಳಿಸಿದ್ದಾರೆ.

ಹರ್ಯಾಣ ಪೊಲೀಸರು ಎಕ್ಸ್‌ನಲ್ಲಿ ಪೋಸ್ಟ್ ಮಾಡಿ ಸಾವು ಸಂಭವಿಸಿಲ್ಲ ಎಂದು ಹೇಳಿದ್ದಾರೆ. ಇದುವರೆಗೆ ಬಂದಿರುವ ಮಾಹಿತಿಯ ಪ್ರಕಾರ ಇಂದು ರೈತರ ಪ್ರತಿಭಟನೆಯಲ್ಲಿ ಯಾವುದೇ ರೈತ ಸಾವನ್ನಪ್ಪಿಲ್ಲ. ಇದು ಕೇವಲ ವದಂತಿಯಾಗಿದೆ. ಖಾನೌರಿ ಗಡಿಯಲ್ಲಿ ಇಬ್ಬರು ಪೊಲೀಸರು ಮತ್ತು ಒಬ್ಬ ಪ್ರತಿಭಟನಾಕಾರ ಗಾಯಗೊಂಡಿರುವ ಬಗ್ಗೆ ಮಾಹಿತಿ ಇದೆ, ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಯುವ ರೈತನ ಸಾವನ್ನು ಖಚಿತಪಡಿಸಿದ್ದಾರೆ. ಘಟನೆಯಿಂದ ನನಗೆ ತುಂಬಾ ದುಃಖವಾಗಿದೆ ಎಂದು ಹೇಳಿದ್ದಾರೆ.

ಘಟನೆಯನ್ನು ಖಂಡಿಸಿದ ಸಂಯುಕ್ತ ಕಿಸಾನ್ ಮೋರ್ಚಾ;

ಪ್ರತಿಭಟನಾ ನಿರತ ಯುವಕರು ಮತ್ತು ರೈತರನ್ನು ದೇಶದ ಶತ್ರುಗಳಂತೆ ಪರಿಗಣಿಸುತ್ತಿರುವ ಮೋದಿ ಸರ್ಕಾರವನ್ನು ಎಐಕೆಎಂಎಸ್ ಖಂಡಿಸಿದೆ. ಅವರು ಉತ್ಪಾದಿಸುವ ಮತ್ತು ದೇಶದ ಆರ್ಥಿಕತೆಯ ತಮ್ಮ ಪಾಲನ್ನು ಮಾತ್ರ ಕೇಳುವ ಜನರ ಮೇಲೆ ಅವರು ಸಶಸ್ತ್ರ ದಾಳಿ ನಡೆಸಿದ್ದಾರೆ. ಸರ್ಕಾರ ಮತ್ತು ಅವರ ಆರ್‌ಎಸ್‌ಎಸ್, ಬಿಜೆಪಿ ಭಾರತೀಯ ರೈತರನ್ನು ಶೋಷಿಸಲು ಕಾರ್ಪೊರೇಟ್, ಎಂಎನ್‌ಸಿಗಳು ಮತ್ತು ವಿದೇಶಿ ಶಕ್ತಿಗಳ ಹಿತಾಸಕ್ತಿಗಳನ್ನು ಪೂರೈಸುತ್ತಿವೆ. ಈ ಹತ್ಯೆಯು ಮೋದಿ ಆಡಳಿತದ ಕ್ರೌರ್ಯವನ್ನು ಬಯಲು ಮಾಡುತ್ತಿದೆ, ಅದು ರೈತ ಸ್ನೇಹಿ ಎಂದು ಹೇಳಿಕೊಳ್ಳುತ್ತಿದೆ. ಮನೋಹರ್ ಲಾಲ್ ಖಟ್ಟರ್ ನೇತೃತ್ವದ ಹರಿಯಾಣದ ಬಿಜೆಪಿ ಸರ್ಕಾರ ದೆಹಲಿಯತ್ತ ಸಾಗುತ್ತಿರುವ ಪ್ರತಿಭಟನಾ ನಿರತ ರೈತರನ್ನು ಶತ್ರು ಸೈನಿಕರಂತೆ ನಡೆಸಿಕೊಳ್ಳುತ್ತಿದೆ ಮತ್ತು ಯುದ್ಧ ನಡೆಸುತ್ತಿದೆ ಎಂದು ಹೇಳಿಕೊಂಡಿದೆ.

ಡಿಸೆಂಬರ್ 9, 2021ರಂದು ಎಸ್‌ಕೆಎಂ ಜೊತೆಗಿನ ಒಪ್ಪಂದವನ್ನು ಕಾರ್ಯಗತಗೊಳಿಸಲು ವಿಫಲವಾದ ಪ್ರಧಾನ ಮಂತ್ರಿ ಮತ್ತು ಕೇಂದ್ರ ಸರಕಾರ ಪ್ರಸ್ತುತ ಬಿಕ್ಕಟ್ಟಿಗೆ ಸಂಪೂರ್ಣ ಜವಾಬ್ದಾರರು ಎಂದು ಸಂಯುಕ್ತ ಕಿಸಾನ್ ಮೋರ್ಚಾ ಹೇಳಿಕೆಯಲ್ಲಿ ತಿಳಿಸಿದೆ.

ಶುಭ್ ಕರಣ್ ಸಿಂಗ್

ಹರ್ಯಾಣದ ಖಾನೌರಿ ಗಡಿಯಲ್ಲಿ ನಿನ್ನೆ ಪ್ರತಿಭಟನಾ ನಿರತ ರೈತರು ಮತ್ತು ಪೊಲೀಸರೊಂದಿಗೆ ಘರ್ಷಣೆಯ ವೇಳೆ ಮೃತ 23 ವರ್ಷದ ಶುಭ್ ಕರಣ್ ಸಿಂಗ್ ಬಟಿಂಡಾ ನಿವಾಸಿ. ಅವರು ಬಟಿಂಡಾ ಜಿಲ್ಲೆಯ ವಾಲೋ ಗ್ರಾಮದ ನಿವಾಸಿಗಳಾದ ಚರಂಜಿತ್ ಸಿಂಗ್ ಅವರ ಪುತ್ರರಾಗಿದ್ದಾರೆ. ಅವರ ಮೃತದೇಹವನ್ನು ರಾಜೇಂದ್ರ ಆಸ್ಪತ್ರೆಯಲ್ಲಿ ಇರಿಸಲಾಗಿದೆ. ಯುವ ರೈತ 2 ಎಕರೆ ಜಮೀನಿನ ಮಾಲೀಕ. ಅವರ ತಾಯಿ ನಿಧನರಾಗಿದ್ದರು.  ಅವರಿಗೆ ಇಬ್ಬರು ಸಹೋದರಿಯರಿದ್ದಾರೆ. ಅವರು ತನ್ನ ಅಜ್ಜಿ ಜೊತೆ ವಾಸಿಸುತ್ತಿದ್ದರು ಎಂದು ತಿಳಿದು ಬಂದಿದೆ.

ಇದನ್ನು ಓದಿ: ರಾಮನಗರ: ವಕೀಲರ ಪ್ರತಿಭಟನೆ; ಐಜೂರು ಠಾಣೆ ಪಿಎಸ್‌ಐ ತನ್ವೀರ್ ಹುಸೇನ್ ಅಮಾನತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಲಯಾಳಂ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಶ್ರೀನಿವಾಸನ್ ನಿಧನ

ಮಲಯಾಳಂ ಚಿತ್ರರಂಗದ ಹಿರಿಯ ನಟ, ಚಿತ್ರಕಥೆಗಾರ, ನಿರ್ದೇಶಕ ಹಾಗೂ ನಿರ್ಮಾಪಕ ಶ್ರೀನಿವಾಸನ್ ಶನಿವಾರ (ಡಿ.20) ನಿಧನರಾದರು. ಅವರಿಗೆ 69 ವರ್ಷ ವಯಸ್ಸಾಗಿತ್ತು. ದೀರ್ಘ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀನಿವಾಸನ್ ಅವರು, ಚಿಕಿತ್ಸೆ...

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...