Homeಮುಖಪುಟ'ದೆಹಲಿ ಚಲೋ' 2 ದಿನಗಳವರೆಗೆ ಸ್ಥಗಿತ: ಯುವ ರೈತನ ಸಾವಿಗೆ ಪೊಲೀಸ್‌ ಫೈರಿಂಗ್ ಕಾರಣ?

‘ದೆಹಲಿ ಚಲೋ’ 2 ದಿನಗಳವರೆಗೆ ಸ್ಥಗಿತ: ಯುವ ರೈತನ ಸಾವಿಗೆ ಪೊಲೀಸ್‌ ಫೈರಿಂಗ್ ಕಾರಣ?

- Advertisement -
- Advertisement -

ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಜಾರಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರೈತರು ಹಮ್ಮಿಕೊಂಡಿದ್ದ ದೆಹಲಿ ಚಲೋವನ್ನು ಎರಡು ದಿನಗಳ ಕಾಲ ಮುಂದೂಡಲಾಗಿದೆ ಎಂದು  ರೈತ ಸಂಘಟನೆಗಳು ತಿಳಿಸಿದೆ.

ಹರ್ಯಾಣದ ಖಾನೌರಿ ಗಡಿಯಲ್ಲಿ ನಿನ್ನೆ ಪ್ರತಿಭಟನಾ ನಿರತ ರೈತರು ಮತ್ತು ಪೊಲೀಸರೊಂದಿಗೆ ಘರ್ಷಣೆಯಲ್ಲಿ ಓರ್ವ ಯುವ ರೈತ ಸಾವನ್ನಪ್ಪಿದ್ದರು. ಅಖಿಲ ಭಾರತ ಕಿಸಾನ್ ಸಭಾ, 23 ವರ್ಷದ ಶುಭಕರನ್ ಸಿಂಗ್ ಪೊಲೀಸ್‌  ಫೈರಿಂಗ್‌ನಲ್ಲಿ ಬುಲೆಟ್‌ ಗಾಯಗಳಿಂದ ಮೃತಪಟ್ಟಿದ್ದಾರೆ ಎಂದು ಆರೋಪಿಸಿದ್ದಾರೆ. ಆದರೆ ಇದನ್ನು ಹರ್ಯಾಣ ಪೊಲೀಸರು ನಿರಾಕರಿಸಿದ್ದಾರೆ. ಧರಣಿ ಸತ್ಯಾಗ್ರಹ ಮುಂದುವರಿಯಲಿದ್ದರೂ ರೈತರು ‘ದೆಹಲಿ ಚಲೋ’ ಮೆರವಣಿಗೆಯನ್ನು ಎರಡು ದಿನಗಳ ಕಾಲ ಸ್ಥಗಿತಗೊಳಿಸಿದ್ದಾರೆ.

ವೈದ್ಯರ ಹೇಳಿಕೆ:

ಶುಭ್ ಕರಣ್ ಸಿಂಗ್ ಅವರನ್ನು ಕರೆದೊಯ್ಯಲಾದ ಪಟಿಯಾಲಾ ಆಸ್ಪತ್ರೆಯ ವೈದ್ಯರು, ಅವರಿಗೆ ಬುಲೆಟ್ ಗಾಯವಾಗಿದೆ ಎಂದು ಹೇಳಿದ್ದಾರೆ. ಆದರೆ ಈ ಕುರಿತ ಮರಣೋತ್ತರ ಪರೀಕ್ಷೆ ವರದಿಗಾಗಿ ಕಾಯಲಾಗುತ್ತಿದೆ.

ಖಾನೌರಿಯಿಂದ ನಮ್ಮ ಬಳಿಗೆ ಮೂವರು ರೋಗಿಗಳು ಬಂದಿದ್ದಾರೆ. ಅವರಲ್ಲಿ ಒಬ್ಬರು ಬರುವಾಗಲೇ ಮೃತಪಟ್ಟಿದ್ದಾರೆ, ಇನ್ನಿಬ್ಬರ ಆರೋಗ್ಯ ಸ್ಥಿರವಾಗಿದೆ ಮತ್ತು ಬುಲೆಟ್‌ನಿಂದ ಗಾಯಗೊಂಡಿದ್ದಾರೆ ಎಂದು ತೋರುತ್ತದೆ. ಆದರೆ ಅದನ್ನು ಖಚಿತಪಡಿಸಲು ಈಗ ಸಾಧ್ಯವಿಲ್ಲ ಎಂದು ಪಟಿಯಾಲದ ರಾಜೇಂದ್ರ ಆಸ್ಪತ್ರೆಯ ಹಿರಿಯ ವೈದ್ಯಾಧಿಕಾರಿ ಡಾ.ರೇಖಿ ಹೇಳಿದ್ದಾರೆ.

ಮೃತ ವ್ಯಕ್ತಿಯ ತಲೆಯ ಮೇಲೆ ಬುಲೆಟ್ ಗಾಯವಾಗಿತ್ತು, ಆದರೆ ಗುಂಡಿನ ಗಾತ್ರದ ಕುರಿತು ಹೆಚ್ಚಿನ ವಿವರಗಳನ್ನು ಮರಣೋತ್ತರ ಪರೀಕ್ಷೆಯ ನಂತರವೇ ದೃಢೀಕರಿಸಬಹುದು ಎಂದು ವೈದ್ಯರು ದೃಢಪಡಿಸಿದ್ದಾರೆ.

ಎಂಎಸ್ಪಿ ಕುರಿತು ಕೇಂದ್ರದ 5 ವರ್ಷದ ಒಪ್ಪಂದವನ್ನು ರೈತರು ತಿರಸ್ಕರಿಸಿದ್ದರು. ಇದರ ಬೆನ್ನಲ್ಲೆ ದೆಹಲಿ ಚಲೋ ಪುನರಾರಂಭಿಸುವುದಾಗಿ ರೈತ ಮುಖಂಡರು ಹೇಳಿದ್ದರು. ಹರ್ಯಾಣ ಪೊಲೀಸರು ಗಡಿಯಲ್ಲಿನ ಬ್ಯಾರಿಕೇಡ್‌ಗಳನ್ನು ಭೇದಿಸುವ ರೈತರ ಪ್ರಯತ್ನವನ್ನು ವಿಫಲಗೊಳಿಸಲು ಅಶ್ರುವಾಯು ಪ್ರಯೋಗ ಮಾಡಿದ್ದಾರೆ ಎಂದು ರೈತರು ತಿಳಿಸಿದ್ದಾರೆ.

ಹರ್ಯಾಣ ಪೊಲೀಸರು ಎಕ್ಸ್‌ನಲ್ಲಿ ಪೋಸ್ಟ್ ಮಾಡಿ ಸಾವು ಸಂಭವಿಸಿಲ್ಲ ಎಂದು ಹೇಳಿದ್ದಾರೆ. ಇದುವರೆಗೆ ಬಂದಿರುವ ಮಾಹಿತಿಯ ಪ್ರಕಾರ ಇಂದು ರೈತರ ಪ್ರತಿಭಟನೆಯಲ್ಲಿ ಯಾವುದೇ ರೈತ ಸಾವನ್ನಪ್ಪಿಲ್ಲ. ಇದು ಕೇವಲ ವದಂತಿಯಾಗಿದೆ. ಖಾನೌರಿ ಗಡಿಯಲ್ಲಿ ಇಬ್ಬರು ಪೊಲೀಸರು ಮತ್ತು ಒಬ್ಬ ಪ್ರತಿಭಟನಾಕಾರ ಗಾಯಗೊಂಡಿರುವ ಬಗ್ಗೆ ಮಾಹಿತಿ ಇದೆ, ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಯುವ ರೈತನ ಸಾವನ್ನು ಖಚಿತಪಡಿಸಿದ್ದಾರೆ. ಘಟನೆಯಿಂದ ನನಗೆ ತುಂಬಾ ದುಃಖವಾಗಿದೆ ಎಂದು ಹೇಳಿದ್ದಾರೆ.

ಘಟನೆಯನ್ನು ಖಂಡಿಸಿದ ಸಂಯುಕ್ತ ಕಿಸಾನ್ ಮೋರ್ಚಾ;

ಪ್ರತಿಭಟನಾ ನಿರತ ಯುವಕರು ಮತ್ತು ರೈತರನ್ನು ದೇಶದ ಶತ್ರುಗಳಂತೆ ಪರಿಗಣಿಸುತ್ತಿರುವ ಮೋದಿ ಸರ್ಕಾರವನ್ನು ಎಐಕೆಎಂಎಸ್ ಖಂಡಿಸಿದೆ. ಅವರು ಉತ್ಪಾದಿಸುವ ಮತ್ತು ದೇಶದ ಆರ್ಥಿಕತೆಯ ತಮ್ಮ ಪಾಲನ್ನು ಮಾತ್ರ ಕೇಳುವ ಜನರ ಮೇಲೆ ಅವರು ಸಶಸ್ತ್ರ ದಾಳಿ ನಡೆಸಿದ್ದಾರೆ. ಸರ್ಕಾರ ಮತ್ತು ಅವರ ಆರ್‌ಎಸ್‌ಎಸ್, ಬಿಜೆಪಿ ಭಾರತೀಯ ರೈತರನ್ನು ಶೋಷಿಸಲು ಕಾರ್ಪೊರೇಟ್, ಎಂಎನ್‌ಸಿಗಳು ಮತ್ತು ವಿದೇಶಿ ಶಕ್ತಿಗಳ ಹಿತಾಸಕ್ತಿಗಳನ್ನು ಪೂರೈಸುತ್ತಿವೆ. ಈ ಹತ್ಯೆಯು ಮೋದಿ ಆಡಳಿತದ ಕ್ರೌರ್ಯವನ್ನು ಬಯಲು ಮಾಡುತ್ತಿದೆ, ಅದು ರೈತ ಸ್ನೇಹಿ ಎಂದು ಹೇಳಿಕೊಳ್ಳುತ್ತಿದೆ. ಮನೋಹರ್ ಲಾಲ್ ಖಟ್ಟರ್ ನೇತೃತ್ವದ ಹರಿಯಾಣದ ಬಿಜೆಪಿ ಸರ್ಕಾರ ದೆಹಲಿಯತ್ತ ಸಾಗುತ್ತಿರುವ ಪ್ರತಿಭಟನಾ ನಿರತ ರೈತರನ್ನು ಶತ್ರು ಸೈನಿಕರಂತೆ ನಡೆಸಿಕೊಳ್ಳುತ್ತಿದೆ ಮತ್ತು ಯುದ್ಧ ನಡೆಸುತ್ತಿದೆ ಎಂದು ಹೇಳಿಕೊಂಡಿದೆ.

ಡಿಸೆಂಬರ್ 9, 2021ರಂದು ಎಸ್‌ಕೆಎಂ ಜೊತೆಗಿನ ಒಪ್ಪಂದವನ್ನು ಕಾರ್ಯಗತಗೊಳಿಸಲು ವಿಫಲವಾದ ಪ್ರಧಾನ ಮಂತ್ರಿ ಮತ್ತು ಕೇಂದ್ರ ಸರಕಾರ ಪ್ರಸ್ತುತ ಬಿಕ್ಕಟ್ಟಿಗೆ ಸಂಪೂರ್ಣ ಜವಾಬ್ದಾರರು ಎಂದು ಸಂಯುಕ್ತ ಕಿಸಾನ್ ಮೋರ್ಚಾ ಹೇಳಿಕೆಯಲ್ಲಿ ತಿಳಿಸಿದೆ.

ಶುಭ್ ಕರಣ್ ಸಿಂಗ್

ಹರ್ಯಾಣದ ಖಾನೌರಿ ಗಡಿಯಲ್ಲಿ ನಿನ್ನೆ ಪ್ರತಿಭಟನಾ ನಿರತ ರೈತರು ಮತ್ತು ಪೊಲೀಸರೊಂದಿಗೆ ಘರ್ಷಣೆಯ ವೇಳೆ ಮೃತ 23 ವರ್ಷದ ಶುಭ್ ಕರಣ್ ಸಿಂಗ್ ಬಟಿಂಡಾ ನಿವಾಸಿ. ಅವರು ಬಟಿಂಡಾ ಜಿಲ್ಲೆಯ ವಾಲೋ ಗ್ರಾಮದ ನಿವಾಸಿಗಳಾದ ಚರಂಜಿತ್ ಸಿಂಗ್ ಅವರ ಪುತ್ರರಾಗಿದ್ದಾರೆ. ಅವರ ಮೃತದೇಹವನ್ನು ರಾಜೇಂದ್ರ ಆಸ್ಪತ್ರೆಯಲ್ಲಿ ಇರಿಸಲಾಗಿದೆ. ಯುವ ರೈತ 2 ಎಕರೆ ಜಮೀನಿನ ಮಾಲೀಕ. ಅವರ ತಾಯಿ ನಿಧನರಾಗಿದ್ದರು.  ಅವರಿಗೆ ಇಬ್ಬರು ಸಹೋದರಿಯರಿದ್ದಾರೆ. ಅವರು ತನ್ನ ಅಜ್ಜಿ ಜೊತೆ ವಾಸಿಸುತ್ತಿದ್ದರು ಎಂದು ತಿಳಿದು ಬಂದಿದೆ.

ಇದನ್ನು ಓದಿ: ರಾಮನಗರ: ವಕೀಲರ ಪ್ರತಿಭಟನೆ; ಐಜೂರು ಠಾಣೆ ಪಿಎಸ್‌ಐ ತನ್ವೀರ್ ಹುಸೇನ್ ಅಮಾನತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...