Homeಮುಖಪುಟ'ದೆಹಲಿ ಚಲೋ' 2 ದಿನಗಳವರೆಗೆ ಸ್ಥಗಿತ: ಯುವ ರೈತನ ಸಾವಿಗೆ ಪೊಲೀಸ್‌ ಫೈರಿಂಗ್ ಕಾರಣ?

‘ದೆಹಲಿ ಚಲೋ’ 2 ದಿನಗಳವರೆಗೆ ಸ್ಥಗಿತ: ಯುವ ರೈತನ ಸಾವಿಗೆ ಪೊಲೀಸ್‌ ಫೈರಿಂಗ್ ಕಾರಣ?

- Advertisement -
- Advertisement -

ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಜಾರಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರೈತರು ಹಮ್ಮಿಕೊಂಡಿದ್ದ ದೆಹಲಿ ಚಲೋವನ್ನು ಎರಡು ದಿನಗಳ ಕಾಲ ಮುಂದೂಡಲಾಗಿದೆ ಎಂದು  ರೈತ ಸಂಘಟನೆಗಳು ತಿಳಿಸಿದೆ.

ಹರ್ಯಾಣದ ಖಾನೌರಿ ಗಡಿಯಲ್ಲಿ ನಿನ್ನೆ ಪ್ರತಿಭಟನಾ ನಿರತ ರೈತರು ಮತ್ತು ಪೊಲೀಸರೊಂದಿಗೆ ಘರ್ಷಣೆಯಲ್ಲಿ ಓರ್ವ ಯುವ ರೈತ ಸಾವನ್ನಪ್ಪಿದ್ದರು. ಅಖಿಲ ಭಾರತ ಕಿಸಾನ್ ಸಭಾ, 23 ವರ್ಷದ ಶುಭಕರನ್ ಸಿಂಗ್ ಪೊಲೀಸ್‌  ಫೈರಿಂಗ್‌ನಲ್ಲಿ ಬುಲೆಟ್‌ ಗಾಯಗಳಿಂದ ಮೃತಪಟ್ಟಿದ್ದಾರೆ ಎಂದು ಆರೋಪಿಸಿದ್ದಾರೆ. ಆದರೆ ಇದನ್ನು ಹರ್ಯಾಣ ಪೊಲೀಸರು ನಿರಾಕರಿಸಿದ್ದಾರೆ. ಧರಣಿ ಸತ್ಯಾಗ್ರಹ ಮುಂದುವರಿಯಲಿದ್ದರೂ ರೈತರು ‘ದೆಹಲಿ ಚಲೋ’ ಮೆರವಣಿಗೆಯನ್ನು ಎರಡು ದಿನಗಳ ಕಾಲ ಸ್ಥಗಿತಗೊಳಿಸಿದ್ದಾರೆ.

ವೈದ್ಯರ ಹೇಳಿಕೆ:

ಶುಭ್ ಕರಣ್ ಸಿಂಗ್ ಅವರನ್ನು ಕರೆದೊಯ್ಯಲಾದ ಪಟಿಯಾಲಾ ಆಸ್ಪತ್ರೆಯ ವೈದ್ಯರು, ಅವರಿಗೆ ಬುಲೆಟ್ ಗಾಯವಾಗಿದೆ ಎಂದು ಹೇಳಿದ್ದಾರೆ. ಆದರೆ ಈ ಕುರಿತ ಮರಣೋತ್ತರ ಪರೀಕ್ಷೆ ವರದಿಗಾಗಿ ಕಾಯಲಾಗುತ್ತಿದೆ.

ಖಾನೌರಿಯಿಂದ ನಮ್ಮ ಬಳಿಗೆ ಮೂವರು ರೋಗಿಗಳು ಬಂದಿದ್ದಾರೆ. ಅವರಲ್ಲಿ ಒಬ್ಬರು ಬರುವಾಗಲೇ ಮೃತಪಟ್ಟಿದ್ದಾರೆ, ಇನ್ನಿಬ್ಬರ ಆರೋಗ್ಯ ಸ್ಥಿರವಾಗಿದೆ ಮತ್ತು ಬುಲೆಟ್‌ನಿಂದ ಗಾಯಗೊಂಡಿದ್ದಾರೆ ಎಂದು ತೋರುತ್ತದೆ. ಆದರೆ ಅದನ್ನು ಖಚಿತಪಡಿಸಲು ಈಗ ಸಾಧ್ಯವಿಲ್ಲ ಎಂದು ಪಟಿಯಾಲದ ರಾಜೇಂದ್ರ ಆಸ್ಪತ್ರೆಯ ಹಿರಿಯ ವೈದ್ಯಾಧಿಕಾರಿ ಡಾ.ರೇಖಿ ಹೇಳಿದ್ದಾರೆ.

ಮೃತ ವ್ಯಕ್ತಿಯ ತಲೆಯ ಮೇಲೆ ಬುಲೆಟ್ ಗಾಯವಾಗಿತ್ತು, ಆದರೆ ಗುಂಡಿನ ಗಾತ್ರದ ಕುರಿತು ಹೆಚ್ಚಿನ ವಿವರಗಳನ್ನು ಮರಣೋತ್ತರ ಪರೀಕ್ಷೆಯ ನಂತರವೇ ದೃಢೀಕರಿಸಬಹುದು ಎಂದು ವೈದ್ಯರು ದೃಢಪಡಿಸಿದ್ದಾರೆ.

ಎಂಎಸ್ಪಿ ಕುರಿತು ಕೇಂದ್ರದ 5 ವರ್ಷದ ಒಪ್ಪಂದವನ್ನು ರೈತರು ತಿರಸ್ಕರಿಸಿದ್ದರು. ಇದರ ಬೆನ್ನಲ್ಲೆ ದೆಹಲಿ ಚಲೋ ಪುನರಾರಂಭಿಸುವುದಾಗಿ ರೈತ ಮುಖಂಡರು ಹೇಳಿದ್ದರು. ಹರ್ಯಾಣ ಪೊಲೀಸರು ಗಡಿಯಲ್ಲಿನ ಬ್ಯಾರಿಕೇಡ್‌ಗಳನ್ನು ಭೇದಿಸುವ ರೈತರ ಪ್ರಯತ್ನವನ್ನು ವಿಫಲಗೊಳಿಸಲು ಅಶ್ರುವಾಯು ಪ್ರಯೋಗ ಮಾಡಿದ್ದಾರೆ ಎಂದು ರೈತರು ತಿಳಿಸಿದ್ದಾರೆ.

ಹರ್ಯಾಣ ಪೊಲೀಸರು ಎಕ್ಸ್‌ನಲ್ಲಿ ಪೋಸ್ಟ್ ಮಾಡಿ ಸಾವು ಸಂಭವಿಸಿಲ್ಲ ಎಂದು ಹೇಳಿದ್ದಾರೆ. ಇದುವರೆಗೆ ಬಂದಿರುವ ಮಾಹಿತಿಯ ಪ್ರಕಾರ ಇಂದು ರೈತರ ಪ್ರತಿಭಟನೆಯಲ್ಲಿ ಯಾವುದೇ ರೈತ ಸಾವನ್ನಪ್ಪಿಲ್ಲ. ಇದು ಕೇವಲ ವದಂತಿಯಾಗಿದೆ. ಖಾನೌರಿ ಗಡಿಯಲ್ಲಿ ಇಬ್ಬರು ಪೊಲೀಸರು ಮತ್ತು ಒಬ್ಬ ಪ್ರತಿಭಟನಾಕಾರ ಗಾಯಗೊಂಡಿರುವ ಬಗ್ಗೆ ಮಾಹಿತಿ ಇದೆ, ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಯುವ ರೈತನ ಸಾವನ್ನು ಖಚಿತಪಡಿಸಿದ್ದಾರೆ. ಘಟನೆಯಿಂದ ನನಗೆ ತುಂಬಾ ದುಃಖವಾಗಿದೆ ಎಂದು ಹೇಳಿದ್ದಾರೆ.

ಘಟನೆಯನ್ನು ಖಂಡಿಸಿದ ಸಂಯುಕ್ತ ಕಿಸಾನ್ ಮೋರ್ಚಾ;

ಪ್ರತಿಭಟನಾ ನಿರತ ಯುವಕರು ಮತ್ತು ರೈತರನ್ನು ದೇಶದ ಶತ್ರುಗಳಂತೆ ಪರಿಗಣಿಸುತ್ತಿರುವ ಮೋದಿ ಸರ್ಕಾರವನ್ನು ಎಐಕೆಎಂಎಸ್ ಖಂಡಿಸಿದೆ. ಅವರು ಉತ್ಪಾದಿಸುವ ಮತ್ತು ದೇಶದ ಆರ್ಥಿಕತೆಯ ತಮ್ಮ ಪಾಲನ್ನು ಮಾತ್ರ ಕೇಳುವ ಜನರ ಮೇಲೆ ಅವರು ಸಶಸ್ತ್ರ ದಾಳಿ ನಡೆಸಿದ್ದಾರೆ. ಸರ್ಕಾರ ಮತ್ತು ಅವರ ಆರ್‌ಎಸ್‌ಎಸ್, ಬಿಜೆಪಿ ಭಾರತೀಯ ರೈತರನ್ನು ಶೋಷಿಸಲು ಕಾರ್ಪೊರೇಟ್, ಎಂಎನ್‌ಸಿಗಳು ಮತ್ತು ವಿದೇಶಿ ಶಕ್ತಿಗಳ ಹಿತಾಸಕ್ತಿಗಳನ್ನು ಪೂರೈಸುತ್ತಿವೆ. ಈ ಹತ್ಯೆಯು ಮೋದಿ ಆಡಳಿತದ ಕ್ರೌರ್ಯವನ್ನು ಬಯಲು ಮಾಡುತ್ತಿದೆ, ಅದು ರೈತ ಸ್ನೇಹಿ ಎಂದು ಹೇಳಿಕೊಳ್ಳುತ್ತಿದೆ. ಮನೋಹರ್ ಲಾಲ್ ಖಟ್ಟರ್ ನೇತೃತ್ವದ ಹರಿಯಾಣದ ಬಿಜೆಪಿ ಸರ್ಕಾರ ದೆಹಲಿಯತ್ತ ಸಾಗುತ್ತಿರುವ ಪ್ರತಿಭಟನಾ ನಿರತ ರೈತರನ್ನು ಶತ್ರು ಸೈನಿಕರಂತೆ ನಡೆಸಿಕೊಳ್ಳುತ್ತಿದೆ ಮತ್ತು ಯುದ್ಧ ನಡೆಸುತ್ತಿದೆ ಎಂದು ಹೇಳಿಕೊಂಡಿದೆ.

ಡಿಸೆಂಬರ್ 9, 2021ರಂದು ಎಸ್‌ಕೆಎಂ ಜೊತೆಗಿನ ಒಪ್ಪಂದವನ್ನು ಕಾರ್ಯಗತಗೊಳಿಸಲು ವಿಫಲವಾದ ಪ್ರಧಾನ ಮಂತ್ರಿ ಮತ್ತು ಕೇಂದ್ರ ಸರಕಾರ ಪ್ರಸ್ತುತ ಬಿಕ್ಕಟ್ಟಿಗೆ ಸಂಪೂರ್ಣ ಜವಾಬ್ದಾರರು ಎಂದು ಸಂಯುಕ್ತ ಕಿಸಾನ್ ಮೋರ್ಚಾ ಹೇಳಿಕೆಯಲ್ಲಿ ತಿಳಿಸಿದೆ.

ಶುಭ್ ಕರಣ್ ಸಿಂಗ್

ಹರ್ಯಾಣದ ಖಾನೌರಿ ಗಡಿಯಲ್ಲಿ ನಿನ್ನೆ ಪ್ರತಿಭಟನಾ ನಿರತ ರೈತರು ಮತ್ತು ಪೊಲೀಸರೊಂದಿಗೆ ಘರ್ಷಣೆಯ ವೇಳೆ ಮೃತ 23 ವರ್ಷದ ಶುಭ್ ಕರಣ್ ಸಿಂಗ್ ಬಟಿಂಡಾ ನಿವಾಸಿ. ಅವರು ಬಟಿಂಡಾ ಜಿಲ್ಲೆಯ ವಾಲೋ ಗ್ರಾಮದ ನಿವಾಸಿಗಳಾದ ಚರಂಜಿತ್ ಸಿಂಗ್ ಅವರ ಪುತ್ರರಾಗಿದ್ದಾರೆ. ಅವರ ಮೃತದೇಹವನ್ನು ರಾಜೇಂದ್ರ ಆಸ್ಪತ್ರೆಯಲ್ಲಿ ಇರಿಸಲಾಗಿದೆ. ಯುವ ರೈತ 2 ಎಕರೆ ಜಮೀನಿನ ಮಾಲೀಕ. ಅವರ ತಾಯಿ ನಿಧನರಾಗಿದ್ದರು.  ಅವರಿಗೆ ಇಬ್ಬರು ಸಹೋದರಿಯರಿದ್ದಾರೆ. ಅವರು ತನ್ನ ಅಜ್ಜಿ ಜೊತೆ ವಾಸಿಸುತ್ತಿದ್ದರು ಎಂದು ತಿಳಿದು ಬಂದಿದೆ.

ಇದನ್ನು ಓದಿ: ರಾಮನಗರ: ವಕೀಲರ ಪ್ರತಿಭಟನೆ; ಐಜೂರು ಠಾಣೆ ಪಿಎಸ್‌ಐ ತನ್ವೀರ್ ಹುಸೇನ್ ಅಮಾನತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...

ನೇತ್ರಾವತಿ ತೀರದಲ್ಲಿ ‘ಅಂತರಗಂಗೆ’ಯಂತೆ ಹರಿಯುತ್ತಿರುವ ಪ್ರತಿರೋಧ: ವೇದವಲ್ಲಿಯಿಂದ ಸೌಜನ್ಯಳವರೆಗೆ ಪ್ರತಿಧ್ವನಿಸುತ್ತಿರುವ ಪ್ರಶ್ನೆ-‘ಕೊಂದವರು ಯಾರು?’

ಪ್ರಪಂಚದಾದ್ಯಂತ ಪಿತೃಪ್ರಧಾನ ವ್ಯವಸ್ಥೆ ಮತ್ತು ಪ್ರಭುತ್ವಗಳು ಹಲವು ರೀತಿಗಳಲ್ಲಿ ಮಹಿಳೆಯರನ್ನು ದಮನಿಸುವ ವಿಧಾನಗಳನ್ನು ಕಂಡುಕೊಂಡು ಕರಗತ ಮಾಡಿಕೊಂಡಿವೆ. ಅದರಲ್ಲಿ ಅತ್ಯಂತ ಪರಿಣಾಮಕಾರಿಯಾದುದು, ದೇವರು, ಭಕ್ತಿ ಮತ್ತು ಧರ್ಮದ ಹೆಸರಿನಲ್ಲಿ ಮಹಿಳೆಯರನ್ನು ದಮನಕ್ಕೊಳಪಡಿಸುವ ತಂತ್ರ....

ರೂ. 170 ಕೋಟಿ ದಂಡ ಪಾವತಿಸಲು ಮುಂದಾದ ಅದಾನಿ : ಏನಿದು ಪ್ರಕರಣ?

ಅಮೆರಿಕದ ನ್ಯಾಯಾಲಯದಲ್ಲಿ ದಾಖಲಾಗಿದ್ದ ವಂಚನೆ ಮತ್ತು ಲಂಚದ ಪ್ರಕರಣಕ್ಕೆ ಸಂಬಂಧಿಸಿದಂತೆ, ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಟ್ಟು 18 ಮಿಲಿಯನ್ ಡಾಲರ್ (ಸುಮಾರು 170 ಕೋಟಿ ರೂಪಾಯಿ) ದಂಡ ಪಾವತಿಸಲು ಒಪ್ಪಿಕೊಳ್ಳುವ ಮೂಲಕ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣದಲ್ಲಿ ಹಿಂದೂಗಳ ಪರ ತೀರ್ಪು…ಮಸೀದಿಯಲ್ಲ ದೇವಸ್ಥಾನವೆಂದ ಕೋರ್ಟ್ : ಏನಿದು ವಿವಾದ?

ಸುಮಾರು 100 ವರ್ಷಗಳ ಹಳೆಯ ವಿವಾದವಾದ ಭೋಜಶಾಲಾ-ಕಮಲ್ ಮೌಲಾ ಮಸೀದಿ ಪ್ರಕರಣದಲ್ಲಿ ಶುಕ್ರವಾರ (ಮೇ 15) ಮಧ್ಯಪ್ರದೇಶ ಹೈಕೋರ್ಟ್ ತೀರ್ಪು ನೀಡಿದ್ದು, ಭೋಜಶಾಲಾದಲ್ಲಿರುವ ಐತಿಹಾಸಿಕ ಸ್ಥಳವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು...

“ಮಹಿಳಾ ಮೀಸಲಾತಿ ಮುಖವಾಡದಲ್ಲಿ ಡಿಲಿಮಿಟೇಷನ್ ಕುತಂತ್ರ ವಿಫಲ” ಬಿಜೆಪಿಗೆ ದಕ್ಷಿಣ ಭಾರತದ ಎಚ್ಚರಿಕೆ

ಮೋದಿ ನೇತೃತ್ವದ ಕೇಂದ್ರ ಸರ್ಕಾರವು 2026ರ ಏಪ್ರಿಲ್ 16ರಂದು ಸಂಸತ್ತಿನ ವಿಶೇಷ ಅಧಿವೇಶನ ಕರೆದು, ಮಹಿಳಾ ಮೀಸಲಾತಿ ಅನುಷ್ಠಾನವನ್ನು ತ್ವರಿತಗೊಳಿಸುವ ನೆಪವನ್ನು ಮುಂದುಮಾಡಿ ಮೂರು ಮಸೂದೆಗಳನ್ನು ಮಂಡಿಸಿತು. ಇವುಗಳಲ್ಲಿ ಪ್ರಮುಖವಾದ ಸಂವಿಧಾನ (131ನೇ...

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...