Homeಕರ್ನಾಟಕಪ್ರಾಣ ಒತ್ತೆಯಿಟ್ಟು ರೈತರು ಭೂಮಿ ಉಳಿಸಬೇಕು - ರೈತ ಮುಖಂಡ ಡಿ.ಎಚ್‌. ಪೂಜಾರ್

ಪ್ರಾಣ ಒತ್ತೆಯಿಟ್ಟು ರೈತರು ಭೂಮಿ ಉಳಿಸಬೇಕು – ರೈತ ಮುಖಂಡ ಡಿ.ಎಚ್‌. ಪೂಜಾರ್

- Advertisement -
- Advertisement -

ಪ್ರಭುತ್ವವನ್ನು ಈಗ ಕಾರ್ಪೊರೇಟ್ ಕಂಪೆನಿಗಳು ಎಂದು ಕರೆಯಬಹುದಾಗಿದ್ದು, ಯಾಕೆಂದರೆ ಅದು ಈಗ ಕಾರ್ಪೋರೇಟ್ ಕಂಪೆನಿಗಳ ಕಪಿ ಮುಷ್ಟಿಯಲ್ಲಿ ಇದೆ. ಈ ಕಾರ್ಪೊರೇಟ್ ಕಂಪೆನಿಗಳು 35% ಇರುವ ಕೈಗಾರಿಕೆ ಮತ್ತು ಸೇವಾ ವಲಯದಲ್ಲಿ ಏಕಸ್ವಾಮ್ಯ ಗಳಿಸಿದ್ದು, ಉಳಿದ 65% ಇರುವ ಕೃಷಿ ವಲಯದಲ್ಲಿ ಇರುವ 65% ಜನರನ್ನು ಹಿಡಿತಕ್ಕೆ ತೆಗೆದುಕೊಳ್ಳುವ ಹುನ್ನಾರ ನಡೆಸುತ್ತಿದೆ ಎಂದು ಕರ್ನಾಟಕ ರೈತ ಸಂಘದ ರಾಜ್ಯಾಧ್ಯಕ್ಷ ಡಿಎಚ್ ಪೂಜಾರ್ ಹೇಳಿದರು. ಪ್ರಾಣ ಒತ್ತೆಯಿಟ್ಟು ರೈತರು

ಬೆಂಗಳೂರಿನ ಗಾಂಧಿ ಭವನದಲ್ಲಿ ‘ಸಂಯುಕ್ತ ಹೋರಾಟ-ಕರ್ನಾಟಕ’ ಆಯೋಜಿಸಿರುವ ಎರಡು ದಿನಗಳ ‘ಜನ ಚಳವಳಿಗಳ ಬಜೆಟ್ ಅಧಿವೇಶನ’ದಲ್ಲಿ ಮಾತನಾಡುತ್ತಿದ್ದರು. ಭೂಮಿ ಪ್ರಶ್ನೆ ಮತ್ತು ಬಜೆಟ್‌ನ ಧೋರಣೆಗಳು ಎಂಬ ವಿಚಾರದಲ್ಲಿ ಹೋರಾಟಗಾರರಾದ ಸಿರಿಮನೆ ನಾಗರಾಜ್ ಮತ್ತು ರೈತ ಮುಖಂಡ ಯು ಬಸವರಾಜ್ ಅವರು ಮಂಡಿಸಿದ ವಿಚಾರಗಳಿಗೆ ಪ್ರತಿಕ್ರಿಯಿಸಿದ ಅವರು ರೈತ ಸಂಘಟನೆಗಳು ರಾಜ್ಯದ ಅರ್ಧ ಶಕ್ತಿಯಾಗಿದ್ದು, ಇವರಿಗೆ ದಲಿತ ಸಂಘಟನೆಗಳು ಬೆಂಬಲ ನೀಡಬೇಕು ಎಂದು ಹೇಳಿದರು. ಪ್ರಾಣ ಒತ್ತೆಯಿಟ್ಟು ರೈತರು

“ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು, ಭೂಮಿಯನ್ನು ಮುಂದಿನ ಪೀಳಿಗೆಗಾಗಿ ಉಳಿಯಬೇಕು ಎಂದು ಹೇಳುತ್ತಾರೆ. ಇದರ ಅರ್ಥ ಯಾವುದೇ ಕಾರಣಕ್ಕೂ ಭೂಮಿಯ ಪಟ್ಟಾ ಕೊಡೊಲ್ಲ ಎಂದಾಗಿದೆ. ಅಂದರೆ ಇವೆಲ್ಲವನ್ನೂ ಕಾರ್ಪೊರೇಟ್‌ಗೆ ಬಿಟ್ಟು ಕೊಡುತ್ತೇವೆ ಎಂದು ಅರ್ಥ. ಹಾಗಾಗಿ ರೈತರು ತಮ್ಮ ಭೂಮಿಯನ್ನು ಪ್ರಾಣ ಒತ್ತೆಯಿಟ್ಟು ಉಳಿಸಬೇಕಾಗಿ. ಸರ್ಕಾರಿ ಅಧಿಕಾರಿಗಳು ಕಾರ್ಪೊರೇಟ್ ಪರವಾಗಿ ಇರಬೇಕಾದ ಅನಿವಾರ್ಯತೆ ಇದೆ ಎಂದು ಹೇಳಿದರು.

ಮೋದಿ ಚೊಂಬು ಕೊಟ್ಟರೆ, ಸಿದ್ದರಾಮಯ್ಯ ಚಿಪ್ಪು ಕೊಟ್ಟರು: ಎಂ. ಪುಟ್ಟಮಾದು

ಜನ ಚಳವಳಿ ಅಧಿವೇಶನದಲ್ಲಿ ಮಾತನಾಡಿದ ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ರಾಜ್ಯಾಧ್ಯಕ್ಷ ಎಂ. ಪುಟ್ಟಮಾದು ಅವರು, “ಬಜೆಟ್ ಪೂರ್ವ ಸಭೆಯಲ್ಲಿ ನಾವು ನಮ್ಮ ಬೇಡಿಕೆ ಸರ್ಕಾರದ ಮುಂದಿಟ್ಟಿದ್ದೆವು. ನಮ್ಮ ಬೇಡಿಕೆ ಸರ್ಕಾರ ಈಡೇರಿಸುತ್ತದೆ ಎಂದು ಭಾವಿಸಿದ್ದೆವು. ಸರ್ಕಾರ ಕೂಡಾ ಅದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿತ್ತು. ಆದರೆ ಈ ಗ ನೋಡಿದರೆ, ಮೋದಿಯವರು ನಮಗೆ ಚೊಂಬು ಕೊಟ್ಟಿದ್ದಾರೆ ಎಂದು ಸಿದ್ದರಾಮಯ್ಯ ಅವರು ಹೇಳುತ್ತಾರೆ, ಆದರೆ ಸಿದ್ದರಾಮಯ್ಯಾ ಅವರು ನಮಗೆ ಚಿಪ್ಪು ಕೊಟ್ಟರು” ಎಂದು ಹೇಳಿದರು.

ಮುಂದಿನ ಮೂರು ವರ್ಷಗಳ ನಂತರ ನಾವು ಮುಂದಿನ ಜನ ಚಳವಳಿ ಬಜೆಟ್ ಅಧಿವೇಶನವನ್ನು ವಿಧಾನಸೌಧದಲ್ಲೆ ಮಾಡಬೇಕು. ಅಂತಹ ಹೋರಾಟವನ್ನು ರೂಪಿಸಬೇಕಿದೆ. ನಾಲ್ಕಿ ಲಕ್ಷ ಕೋಟಿಯಲ್ಲಿ ರೈತರಿಗೆ 7ಸಾವಿರ ಕೊಟ್ಟಿದೆ. ಆದರೆ ಉಳಿದ ಕೋಟಿಗಳು ಎಲ್ಲಿ ಹೋದವು ಎಂದು ಅವರು ಪ್ರಶ್ನಿಸಿದರು.

16 ಲಕ್ಷ ಕುಟುಂಬಗಳಿಗೆ ನಿವೇಶನ ಇಲ್ಲ ಎಂದು ಹೇಳುತ್ತಿದ್ದಾರೆ. ಈ ಹಿಂದಿನಿಂದಲೂ ನಾವು ಇದನ್ನು ಕೇಳುತ್ತಲೆ ಬಂದಿದ್ದೇವೆ. ಈ ಬಗ್ಗೆ ಸಿದ್ದರಾಮಯ್ಯ ಅವರು ಪ್ರತಿಕ್ರಿಯಿಸಿ ನಿವೇಶನ ಕೊಡುತ್ತೇವೆ ಎಂದು ಹೇಳಿದ್ದರು. ಆದರೆ ಈಗ ನಿವೇಶನ ಕೊಡದೆ ಕಾರ್ಪೊರೇಟ್‌ಗೆ ನಿವೇಶನ ಕೊಟ್ಟು ಅವರು ಮನೆ ನಿರ್ಮಿಸುತ್ತಾರೆ ಎಂದು ಹೇಳುತ್ತಿದ್ದಾರೆ ಎಂದು ಅವರು ಹೇಳಿದರು.

ಇಡೀ ರಾಜ್ಯದಲ್ಲಿ ಇರುವ ಒಂದುವರೆ ಕೋಟಿ ಹೆಕ್ಟೇರ್ ಭೂಮಿಯಲ್ಲಿ ನಾವು ಕೇಳುತ್ತಿರುವುದು ಕೇವಲ 60 ಸಾವಿರ ಹೆಕ್ಟೇರ್‌ ಭೂಮಿ. ಸಿದ್ದರಾಮಯ್ಯ ಅವರು ಮಂಡಿಸಿರುವ ಬಜೆಟ್ ”ಬಿಎಂಜಿಆರ್‌” ಬಜೆಟ್ ಆಗಿದೆ. ಅಂದರೆ ಬೆಂಗಳೂರು, ಮೈಸೂರು, ಗುಲ್ಬರ್ಗ ಮತ್ತು ರಾಮನಗರಕ್ಕೆ ಸೀಮಿತವಾದ ಬಜೆಟ್, ಇದು ರಾಜ್ಯದ ಬಜೆಟ್ ಅಲ್ಲ ಎಂದು ಅವರು ಹೇಳಿದರು.

14 ಲಕ್ಷ ಹೆಕ್ಟೇರ್ ಭೂಮಿ ಗೋಮಾಳ ಇದೆ ಎಂದು ಹೇಳುತ್ತಿದ್ದಾರೆ. ಆದರೆ ಈ ಭೂಮಿ ಎಲ್ಲಿ ಹೋಯಿತು. ಕೇರಳದಲ್ಲಿ ಮನೆ ಕಟ್ಟಲು 7 ಲಕ್ಷ ಕೊಡುತ್ತಿದೆ. ರಾಜ್ಯದಲ್ಲಿ ನೀಡುತ್ತಿರುವುದು 1.5 ಲಕ್ಷ. ನಾವು ಕನಿಷ್ಠ 5 ಲಕ್ಷವಾದರೂ ಕೊಡಿ ಎಂದು ಕೇಳುತ್ತಿದ್ದೇವೆ. ರಾಜ್ಯ ಸರ್ಕಾರ ಅದನ್ನೂ ಕೊಡುತ್ತಿಲ್ಲ. ಈ ಬಗ್ಗೆ ಬಜೆಟ್ ಅಧಿವೇಶನದಲ್ಲಿ ಚರ್ಚೆ ಮಾಡಬೇಕಿದ್ದ ಆಡಳಿತ ಮತ್ತು ವಿಪಕ್ಷಗಳು, ಅದನ್ನೂ ಮಾಡುತ್ತಿಲ್ಲ ಎಂದು ಅವರು ಹೇಳಿದರು.

ಹೋರಾಟಗಾರ ಅಲ್ಲಮಪ್ರಭು ಬೆಟ್ಟದೂರು ಮಾತನಾಡಿ, ಸರ್ಕಾರಗಳಲ್ಲಿ ಜಡತ್ವ ಇದೆ. ಕೇಂದ್ರದ ಬಜೆಟ್ ಅಂತೂ ರೈತ, ಮಹಿಳೆ, ಕೂಲಿಕಾರರಿಗೆ ದುಡಿಯುವ ವರ್ಗದ ಪರವಾಗಿಲ್ಲ. ಅದು ಎಂದಿದ್ದರೂ ಕಾರ್ಪೊರೇಟ್ ವರ್ಗಗಳ ಪರವಿದೆ. ಅವರ ನಿಲುವು ಎಂದಿದ್ದರೂ ಜನ ವಿರೋಧಿಯಾಗಿವೆ. ಉತ್ತರ ಭಾರತಕ್ಕೆ ಹೋಲಿಸಿದರೆ ದಕ್ಷಿಣ ಭಾತರದ ರಾಜ್ಯಗಳು ಅಭಿವೃದ್ಧಿ ಹೊಂದಿ ತೆರಿಗೆ ಕಟ್ಟುತ್ತಿದೆ. ಆದರೆ ಕೇಂದ್ರ ಸರ್ಕಾರ ನಮ್ಮ ತೆರಿಗೆಯ ಹಣ ನೀಡುತ್ತಿಲ್ಲ ಎಂದು ಹೇಳಿದರು.

ನಾವು ಹೋರಾಟದ ರಂಗದಲ್ಲಿ ಇದ್ದೇವೆ. ಹೋರಾಟಗಾರರು ಹೋರಾಟ ಮಾಡುತ್ತಲೆ ಇರುತ್ತಾರೆ. ಆಳುವವರು ಆಳುತ್ತಲೆ ಇರುತ್ತಾರೆ. ಇದು ಬದಲಾಗಬೇಕಿದೆ. ರೈತ ಸಂಘಗಳೂ, ಕಮ್ಯುನಿಸ್ಟ್ ಸಂಘಟನೆಗಳು, ದಲಿತ ಸಂಘಟನೆಗಳು ಒಗ್ಗಟ್ಟಾಗಿ ಹೋರಾಟ ಮಾಡಬೇಕಿದೆ. ಕೂದಲು ಸೀಲುವುದನ್ನು ಬಿಟ್ಟು ನಾವು ಒಗ್ಗಟ್ಟಾಗಿ ಕೆಲಸ ಮಾಡಬೇಕಿದೆ. ಬಿಜೆಪಿ ಸರ್ಕಾರ ತಂದಂತಹ ಜನವಿರೋಧಿ ಕಾನೂನುಗಳನ್ನು ವಾಪಾಸು ತೆಗೆದುಕೊಳ್ಳಬೇಕು. ಆದರೆ ಕರ್ನಾಟಕ ಸರ್ಕಾರ ವಾಪಾಸು ತೆಗೆದುಕೊಳ್ಳುತ್ತಿಲ್ಲ. ಸರ್ಕಾರವನ್ನು ಭೇಟಿಯಾಗುವ ನಿಯೋಗಗಳು ಮೊದಲು ಇದನ್ನು ಪ್ರಸ್ತಾಪಿಸಬೇಕು ಎಂದು ಹೇಳಿದರು.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಮತಾಂಧತೆಯ ಪರಿಭಾಷೆಯಲ್ಲಿ ಬಜೆಟ್ ವಿಶ್ಲೇಷಣೆ ನಡೆಸುತ್ತಿರುವುದು ದುರಂತ: ಟಿ.ಆರ್.ಚಂದ್ರಶೇಖರ್

ಮತಾಂಧತೆಯ ಪರಿಭಾಷೆಯಲ್ಲಿ ಬಜೆಟ್ ವಿಶ್ಲೇಷಣೆ ನಡೆಸುತ್ತಿರುವುದು ದುರಂತ: ಟಿ.ಆರ್.ಚಂದ್ರಶೇಖರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...