Homeಕರ್ನಾಟಕಪ್ರಾಣ ಒತ್ತೆಯಿಟ್ಟು ರೈತರು ಭೂಮಿ ಉಳಿಸಬೇಕು - ರೈತ ಮುಖಂಡ ಡಿ.ಎಚ್‌. ಪೂಜಾರ್

ಪ್ರಾಣ ಒತ್ತೆಯಿಟ್ಟು ರೈತರು ಭೂಮಿ ಉಳಿಸಬೇಕು – ರೈತ ಮುಖಂಡ ಡಿ.ಎಚ್‌. ಪೂಜಾರ್

- Advertisement -
- Advertisement -

ಪ್ರಭುತ್ವವನ್ನು ಈಗ ಕಾರ್ಪೊರೇಟ್ ಕಂಪೆನಿಗಳು ಎಂದು ಕರೆಯಬಹುದಾಗಿದ್ದು, ಯಾಕೆಂದರೆ ಅದು ಈಗ ಕಾರ್ಪೋರೇಟ್ ಕಂಪೆನಿಗಳ ಕಪಿ ಮುಷ್ಟಿಯಲ್ಲಿ ಇದೆ. ಈ ಕಾರ್ಪೊರೇಟ್ ಕಂಪೆನಿಗಳು 35% ಇರುವ ಕೈಗಾರಿಕೆ ಮತ್ತು ಸೇವಾ ವಲಯದಲ್ಲಿ ಏಕಸ್ವಾಮ್ಯ ಗಳಿಸಿದ್ದು, ಉಳಿದ 65% ಇರುವ ಕೃಷಿ ವಲಯದಲ್ಲಿ ಇರುವ 65% ಜನರನ್ನು ಹಿಡಿತಕ್ಕೆ ತೆಗೆದುಕೊಳ್ಳುವ ಹುನ್ನಾರ ನಡೆಸುತ್ತಿದೆ ಎಂದು ಕರ್ನಾಟಕ ರೈತ ಸಂಘದ ರಾಜ್ಯಾಧ್ಯಕ್ಷ ಡಿಎಚ್ ಪೂಜಾರ್ ಹೇಳಿದರು. ಪ್ರಾಣ ಒತ್ತೆಯಿಟ್ಟು ರೈತರು

ಬೆಂಗಳೂರಿನ ಗಾಂಧಿ ಭವನದಲ್ಲಿ ‘ಸಂಯುಕ್ತ ಹೋರಾಟ-ಕರ್ನಾಟಕ’ ಆಯೋಜಿಸಿರುವ ಎರಡು ದಿನಗಳ ‘ಜನ ಚಳವಳಿಗಳ ಬಜೆಟ್ ಅಧಿವೇಶನ’ದಲ್ಲಿ ಮಾತನಾಡುತ್ತಿದ್ದರು. ಭೂಮಿ ಪ್ರಶ್ನೆ ಮತ್ತು ಬಜೆಟ್‌ನ ಧೋರಣೆಗಳು ಎಂಬ ವಿಚಾರದಲ್ಲಿ ಹೋರಾಟಗಾರರಾದ ಸಿರಿಮನೆ ನಾಗರಾಜ್ ಮತ್ತು ರೈತ ಮುಖಂಡ ಯು ಬಸವರಾಜ್ ಅವರು ಮಂಡಿಸಿದ ವಿಚಾರಗಳಿಗೆ ಪ್ರತಿಕ್ರಿಯಿಸಿದ ಅವರು ರೈತ ಸಂಘಟನೆಗಳು ರಾಜ್ಯದ ಅರ್ಧ ಶಕ್ತಿಯಾಗಿದ್ದು, ಇವರಿಗೆ ದಲಿತ ಸಂಘಟನೆಗಳು ಬೆಂಬಲ ನೀಡಬೇಕು ಎಂದು ಹೇಳಿದರು. ಪ್ರಾಣ ಒತ್ತೆಯಿಟ್ಟು ರೈತರು

“ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು, ಭೂಮಿಯನ್ನು ಮುಂದಿನ ಪೀಳಿಗೆಗಾಗಿ ಉಳಿಯಬೇಕು ಎಂದು ಹೇಳುತ್ತಾರೆ. ಇದರ ಅರ್ಥ ಯಾವುದೇ ಕಾರಣಕ್ಕೂ ಭೂಮಿಯ ಪಟ್ಟಾ ಕೊಡೊಲ್ಲ ಎಂದಾಗಿದೆ. ಅಂದರೆ ಇವೆಲ್ಲವನ್ನೂ ಕಾರ್ಪೊರೇಟ್‌ಗೆ ಬಿಟ್ಟು ಕೊಡುತ್ತೇವೆ ಎಂದು ಅರ್ಥ. ಹಾಗಾಗಿ ರೈತರು ತಮ್ಮ ಭೂಮಿಯನ್ನು ಪ್ರಾಣ ಒತ್ತೆಯಿಟ್ಟು ಉಳಿಸಬೇಕಾಗಿ. ಸರ್ಕಾರಿ ಅಧಿಕಾರಿಗಳು ಕಾರ್ಪೊರೇಟ್ ಪರವಾಗಿ ಇರಬೇಕಾದ ಅನಿವಾರ್ಯತೆ ಇದೆ ಎಂದು ಹೇಳಿದರು.

ಮೋದಿ ಚೊಂಬು ಕೊಟ್ಟರೆ, ಸಿದ್ದರಾಮಯ್ಯ ಚಿಪ್ಪು ಕೊಟ್ಟರು: ಎಂ. ಪುಟ್ಟಮಾದು

ಜನ ಚಳವಳಿ ಅಧಿವೇಶನದಲ್ಲಿ ಮಾತನಾಡಿದ ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ರಾಜ್ಯಾಧ್ಯಕ್ಷ ಎಂ. ಪುಟ್ಟಮಾದು ಅವರು, “ಬಜೆಟ್ ಪೂರ್ವ ಸಭೆಯಲ್ಲಿ ನಾವು ನಮ್ಮ ಬೇಡಿಕೆ ಸರ್ಕಾರದ ಮುಂದಿಟ್ಟಿದ್ದೆವು. ನಮ್ಮ ಬೇಡಿಕೆ ಸರ್ಕಾರ ಈಡೇರಿಸುತ್ತದೆ ಎಂದು ಭಾವಿಸಿದ್ದೆವು. ಸರ್ಕಾರ ಕೂಡಾ ಅದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿತ್ತು. ಆದರೆ ಈ ಗ ನೋಡಿದರೆ, ಮೋದಿಯವರು ನಮಗೆ ಚೊಂಬು ಕೊಟ್ಟಿದ್ದಾರೆ ಎಂದು ಸಿದ್ದರಾಮಯ್ಯ ಅವರು ಹೇಳುತ್ತಾರೆ, ಆದರೆ ಸಿದ್ದರಾಮಯ್ಯಾ ಅವರು ನಮಗೆ ಚಿಪ್ಪು ಕೊಟ್ಟರು” ಎಂದು ಹೇಳಿದರು.

ಮುಂದಿನ ಮೂರು ವರ್ಷಗಳ ನಂತರ ನಾವು ಮುಂದಿನ ಜನ ಚಳವಳಿ ಬಜೆಟ್ ಅಧಿವೇಶನವನ್ನು ವಿಧಾನಸೌಧದಲ್ಲೆ ಮಾಡಬೇಕು. ಅಂತಹ ಹೋರಾಟವನ್ನು ರೂಪಿಸಬೇಕಿದೆ. ನಾಲ್ಕಿ ಲಕ್ಷ ಕೋಟಿಯಲ್ಲಿ ರೈತರಿಗೆ 7ಸಾವಿರ ಕೊಟ್ಟಿದೆ. ಆದರೆ ಉಳಿದ ಕೋಟಿಗಳು ಎಲ್ಲಿ ಹೋದವು ಎಂದು ಅವರು ಪ್ರಶ್ನಿಸಿದರು.

16 ಲಕ್ಷ ಕುಟುಂಬಗಳಿಗೆ ನಿವೇಶನ ಇಲ್ಲ ಎಂದು ಹೇಳುತ್ತಿದ್ದಾರೆ. ಈ ಹಿಂದಿನಿಂದಲೂ ನಾವು ಇದನ್ನು ಕೇಳುತ್ತಲೆ ಬಂದಿದ್ದೇವೆ. ಈ ಬಗ್ಗೆ ಸಿದ್ದರಾಮಯ್ಯ ಅವರು ಪ್ರತಿಕ್ರಿಯಿಸಿ ನಿವೇಶನ ಕೊಡುತ್ತೇವೆ ಎಂದು ಹೇಳಿದ್ದರು. ಆದರೆ ಈಗ ನಿವೇಶನ ಕೊಡದೆ ಕಾರ್ಪೊರೇಟ್‌ಗೆ ನಿವೇಶನ ಕೊಟ್ಟು ಅವರು ಮನೆ ನಿರ್ಮಿಸುತ್ತಾರೆ ಎಂದು ಹೇಳುತ್ತಿದ್ದಾರೆ ಎಂದು ಅವರು ಹೇಳಿದರು.

ಇಡೀ ರಾಜ್ಯದಲ್ಲಿ ಇರುವ ಒಂದುವರೆ ಕೋಟಿ ಹೆಕ್ಟೇರ್ ಭೂಮಿಯಲ್ಲಿ ನಾವು ಕೇಳುತ್ತಿರುವುದು ಕೇವಲ 60 ಸಾವಿರ ಹೆಕ್ಟೇರ್‌ ಭೂಮಿ. ಸಿದ್ದರಾಮಯ್ಯ ಅವರು ಮಂಡಿಸಿರುವ ಬಜೆಟ್ ”ಬಿಎಂಜಿಆರ್‌” ಬಜೆಟ್ ಆಗಿದೆ. ಅಂದರೆ ಬೆಂಗಳೂರು, ಮೈಸೂರು, ಗುಲ್ಬರ್ಗ ಮತ್ತು ರಾಮನಗರಕ್ಕೆ ಸೀಮಿತವಾದ ಬಜೆಟ್, ಇದು ರಾಜ್ಯದ ಬಜೆಟ್ ಅಲ್ಲ ಎಂದು ಅವರು ಹೇಳಿದರು.

14 ಲಕ್ಷ ಹೆಕ್ಟೇರ್ ಭೂಮಿ ಗೋಮಾಳ ಇದೆ ಎಂದು ಹೇಳುತ್ತಿದ್ದಾರೆ. ಆದರೆ ಈ ಭೂಮಿ ಎಲ್ಲಿ ಹೋಯಿತು. ಕೇರಳದಲ್ಲಿ ಮನೆ ಕಟ್ಟಲು 7 ಲಕ್ಷ ಕೊಡುತ್ತಿದೆ. ರಾಜ್ಯದಲ್ಲಿ ನೀಡುತ್ತಿರುವುದು 1.5 ಲಕ್ಷ. ನಾವು ಕನಿಷ್ಠ 5 ಲಕ್ಷವಾದರೂ ಕೊಡಿ ಎಂದು ಕೇಳುತ್ತಿದ್ದೇವೆ. ರಾಜ್ಯ ಸರ್ಕಾರ ಅದನ್ನೂ ಕೊಡುತ್ತಿಲ್ಲ. ಈ ಬಗ್ಗೆ ಬಜೆಟ್ ಅಧಿವೇಶನದಲ್ಲಿ ಚರ್ಚೆ ಮಾಡಬೇಕಿದ್ದ ಆಡಳಿತ ಮತ್ತು ವಿಪಕ್ಷಗಳು, ಅದನ್ನೂ ಮಾಡುತ್ತಿಲ್ಲ ಎಂದು ಅವರು ಹೇಳಿದರು.

ಹೋರಾಟಗಾರ ಅಲ್ಲಮಪ್ರಭು ಬೆಟ್ಟದೂರು ಮಾತನಾಡಿ, ಸರ್ಕಾರಗಳಲ್ಲಿ ಜಡತ್ವ ಇದೆ. ಕೇಂದ್ರದ ಬಜೆಟ್ ಅಂತೂ ರೈತ, ಮಹಿಳೆ, ಕೂಲಿಕಾರರಿಗೆ ದುಡಿಯುವ ವರ್ಗದ ಪರವಾಗಿಲ್ಲ. ಅದು ಎಂದಿದ್ದರೂ ಕಾರ್ಪೊರೇಟ್ ವರ್ಗಗಳ ಪರವಿದೆ. ಅವರ ನಿಲುವು ಎಂದಿದ್ದರೂ ಜನ ವಿರೋಧಿಯಾಗಿವೆ. ಉತ್ತರ ಭಾರತಕ್ಕೆ ಹೋಲಿಸಿದರೆ ದಕ್ಷಿಣ ಭಾತರದ ರಾಜ್ಯಗಳು ಅಭಿವೃದ್ಧಿ ಹೊಂದಿ ತೆರಿಗೆ ಕಟ್ಟುತ್ತಿದೆ. ಆದರೆ ಕೇಂದ್ರ ಸರ್ಕಾರ ನಮ್ಮ ತೆರಿಗೆಯ ಹಣ ನೀಡುತ್ತಿಲ್ಲ ಎಂದು ಹೇಳಿದರು.

ನಾವು ಹೋರಾಟದ ರಂಗದಲ್ಲಿ ಇದ್ದೇವೆ. ಹೋರಾಟಗಾರರು ಹೋರಾಟ ಮಾಡುತ್ತಲೆ ಇರುತ್ತಾರೆ. ಆಳುವವರು ಆಳುತ್ತಲೆ ಇರುತ್ತಾರೆ. ಇದು ಬದಲಾಗಬೇಕಿದೆ. ರೈತ ಸಂಘಗಳೂ, ಕಮ್ಯುನಿಸ್ಟ್ ಸಂಘಟನೆಗಳು, ದಲಿತ ಸಂಘಟನೆಗಳು ಒಗ್ಗಟ್ಟಾಗಿ ಹೋರಾಟ ಮಾಡಬೇಕಿದೆ. ಕೂದಲು ಸೀಲುವುದನ್ನು ಬಿಟ್ಟು ನಾವು ಒಗ್ಗಟ್ಟಾಗಿ ಕೆಲಸ ಮಾಡಬೇಕಿದೆ. ಬಿಜೆಪಿ ಸರ್ಕಾರ ತಂದಂತಹ ಜನವಿರೋಧಿ ಕಾನೂನುಗಳನ್ನು ವಾಪಾಸು ತೆಗೆದುಕೊಳ್ಳಬೇಕು. ಆದರೆ ಕರ್ನಾಟಕ ಸರ್ಕಾರ ವಾಪಾಸು ತೆಗೆದುಕೊಳ್ಳುತ್ತಿಲ್ಲ. ಸರ್ಕಾರವನ್ನು ಭೇಟಿಯಾಗುವ ನಿಯೋಗಗಳು ಮೊದಲು ಇದನ್ನು ಪ್ರಸ್ತಾಪಿಸಬೇಕು ಎಂದು ಹೇಳಿದರು.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಮತಾಂಧತೆಯ ಪರಿಭಾಷೆಯಲ್ಲಿ ಬಜೆಟ್ ವಿಶ್ಲೇಷಣೆ ನಡೆಸುತ್ತಿರುವುದು ದುರಂತ: ಟಿ.ಆರ್.ಚಂದ್ರಶೇಖರ್

ಮತಾಂಧತೆಯ ಪರಿಭಾಷೆಯಲ್ಲಿ ಬಜೆಟ್ ವಿಶ್ಲೇಷಣೆ ನಡೆಸುತ್ತಿರುವುದು ದುರಂತ: ಟಿ.ಆರ್.ಚಂದ್ರಶೇಖರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಖ್ಯಾತ ಪತ್ರಕರ್ತ ಪಿ. ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

ಕನ್ನಡ ಪತ್ರಿಕೋದ್ಯಮದ ಧ್ರುವತಾರೆ, ದಿವಂಗತ ಪಿ. ಲಂಕೇಶ್ ಅವರ ಧರ್ಮಪತ್ನಿ ಹಾಗೂ ದಿವಂಗತ ಪತ್ರಕರ್ತೆ ಗೌರಿ ಲಂಕೇಶ್ ಅವರ ತಾಯಿಯಾದ ಇಂದಿರಾ ಲಂಕೇಶ್ (84) ಅವರು ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ...

ಬಾಗಲಕೋಟೆಯ ವಿವಿಧ ಪ್ರದೇಶಗಳಲ್ಲಿ ಎಸ್‌ಐಆರ್‌ ವಿರುದ್ಧ ಜನಜಾಗೃತಿ ಜಾಥಾ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬಾಗಲಕೋಟೆ ನಗರದ ವಿವಿಧ ಭಾಗಗಳಲ್ಲಿ ಭಾನುವಾರ (ಜೂ.14) ಜಾಗೃತಿ ಜಾಥಾ ನಡೆಯಿತು. ನವನಗರದ ವಿದ್ಯಾಗಿರಿ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜು ಸರ್ಕಲ್‌ನಿಂದ ಪ್ರಾರಂಭವಾದ ಜಾಥಾ...

SIR ವಿರೋಧಿ ಜನಜಾಗೃತಿ ಜಾಥಾ: ಕಾಫಿ ನಾಡು ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ

ಚಿಕ್ಕಮಗಳೂರು: ರಾಜ್ಯಾದ್ಯಂತ ಐದು ವಿಭಾಗಗಳಲ್ಲಿ ಸಂಚರಿಸುತ್ತಿರುವ 'SIR ವಿರೋಧಿ ಜನಜಾಗೃತಿ ಜಾಥಾ'ದ 3ನೇ ಮಾರ್ಗದ ತಂಡಕ್ಕೆ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಭಾನುವಾರ ಬೆಳಗ್ಗೆ ಜಿಲ್ಲೆಯ ಕೊಪ್ಪ ತಾಲ್ಲೂಕಿಗೆ ಆಗಮಿಸಿದ ಜಾಥಾ...

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...