Homeಕರ್ನಾಟಕಪ್ರಾಣ ಒತ್ತೆಯಿಟ್ಟು ರೈತರು ಭೂಮಿ ಉಳಿಸಬೇಕು - ರೈತ ಮುಖಂಡ ಡಿ.ಎಚ್‌. ಪೂಜಾರ್

ಪ್ರಾಣ ಒತ್ತೆಯಿಟ್ಟು ರೈತರು ಭೂಮಿ ಉಳಿಸಬೇಕು – ರೈತ ಮುಖಂಡ ಡಿ.ಎಚ್‌. ಪೂಜಾರ್

- Advertisement -
- Advertisement -

ಪ್ರಭುತ್ವವನ್ನು ಈಗ ಕಾರ್ಪೊರೇಟ್ ಕಂಪೆನಿಗಳು ಎಂದು ಕರೆಯಬಹುದಾಗಿದ್ದು, ಯಾಕೆಂದರೆ ಅದು ಈಗ ಕಾರ್ಪೋರೇಟ್ ಕಂಪೆನಿಗಳ ಕಪಿ ಮುಷ್ಟಿಯಲ್ಲಿ ಇದೆ. ಈ ಕಾರ್ಪೊರೇಟ್ ಕಂಪೆನಿಗಳು 35% ಇರುವ ಕೈಗಾರಿಕೆ ಮತ್ತು ಸೇವಾ ವಲಯದಲ್ಲಿ ಏಕಸ್ವಾಮ್ಯ ಗಳಿಸಿದ್ದು, ಉಳಿದ 65% ಇರುವ ಕೃಷಿ ವಲಯದಲ್ಲಿ ಇರುವ 65% ಜನರನ್ನು ಹಿಡಿತಕ್ಕೆ ತೆಗೆದುಕೊಳ್ಳುವ ಹುನ್ನಾರ ನಡೆಸುತ್ತಿದೆ ಎಂದು ಕರ್ನಾಟಕ ರೈತ ಸಂಘದ ರಾಜ್ಯಾಧ್ಯಕ್ಷ ಡಿಎಚ್ ಪೂಜಾರ್ ಹೇಳಿದರು. ಪ್ರಾಣ ಒತ್ತೆಯಿಟ್ಟು ರೈತರು

ಬೆಂಗಳೂರಿನ ಗಾಂಧಿ ಭವನದಲ್ಲಿ ‘ಸಂಯುಕ್ತ ಹೋರಾಟ-ಕರ್ನಾಟಕ’ ಆಯೋಜಿಸಿರುವ ಎರಡು ದಿನಗಳ ‘ಜನ ಚಳವಳಿಗಳ ಬಜೆಟ್ ಅಧಿವೇಶನ’ದಲ್ಲಿ ಮಾತನಾಡುತ್ತಿದ್ದರು. ಭೂಮಿ ಪ್ರಶ್ನೆ ಮತ್ತು ಬಜೆಟ್‌ನ ಧೋರಣೆಗಳು ಎಂಬ ವಿಚಾರದಲ್ಲಿ ಹೋರಾಟಗಾರರಾದ ಸಿರಿಮನೆ ನಾಗರಾಜ್ ಮತ್ತು ರೈತ ಮುಖಂಡ ಯು ಬಸವರಾಜ್ ಅವರು ಮಂಡಿಸಿದ ವಿಚಾರಗಳಿಗೆ ಪ್ರತಿಕ್ರಿಯಿಸಿದ ಅವರು ರೈತ ಸಂಘಟನೆಗಳು ರಾಜ್ಯದ ಅರ್ಧ ಶಕ್ತಿಯಾಗಿದ್ದು, ಇವರಿಗೆ ದಲಿತ ಸಂಘಟನೆಗಳು ಬೆಂಬಲ ನೀಡಬೇಕು ಎಂದು ಹೇಳಿದರು. ಪ್ರಾಣ ಒತ್ತೆಯಿಟ್ಟು ರೈತರು

“ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು, ಭೂಮಿಯನ್ನು ಮುಂದಿನ ಪೀಳಿಗೆಗಾಗಿ ಉಳಿಯಬೇಕು ಎಂದು ಹೇಳುತ್ತಾರೆ. ಇದರ ಅರ್ಥ ಯಾವುದೇ ಕಾರಣಕ್ಕೂ ಭೂಮಿಯ ಪಟ್ಟಾ ಕೊಡೊಲ್ಲ ಎಂದಾಗಿದೆ. ಅಂದರೆ ಇವೆಲ್ಲವನ್ನೂ ಕಾರ್ಪೊರೇಟ್‌ಗೆ ಬಿಟ್ಟು ಕೊಡುತ್ತೇವೆ ಎಂದು ಅರ್ಥ. ಹಾಗಾಗಿ ರೈತರು ತಮ್ಮ ಭೂಮಿಯನ್ನು ಪ್ರಾಣ ಒತ್ತೆಯಿಟ್ಟು ಉಳಿಸಬೇಕಾಗಿ. ಸರ್ಕಾರಿ ಅಧಿಕಾರಿಗಳು ಕಾರ್ಪೊರೇಟ್ ಪರವಾಗಿ ಇರಬೇಕಾದ ಅನಿವಾರ್ಯತೆ ಇದೆ ಎಂದು ಹೇಳಿದರು.

ಮೋದಿ ಚೊಂಬು ಕೊಟ್ಟರೆ, ಸಿದ್ದರಾಮಯ್ಯ ಚಿಪ್ಪು ಕೊಟ್ಟರು: ಎಂ. ಪುಟ್ಟಮಾದು

ಜನ ಚಳವಳಿ ಅಧಿವೇಶನದಲ್ಲಿ ಮಾತನಾಡಿದ ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ರಾಜ್ಯಾಧ್ಯಕ್ಷ ಎಂ. ಪುಟ್ಟಮಾದು ಅವರು, “ಬಜೆಟ್ ಪೂರ್ವ ಸಭೆಯಲ್ಲಿ ನಾವು ನಮ್ಮ ಬೇಡಿಕೆ ಸರ್ಕಾರದ ಮುಂದಿಟ್ಟಿದ್ದೆವು. ನಮ್ಮ ಬೇಡಿಕೆ ಸರ್ಕಾರ ಈಡೇರಿಸುತ್ತದೆ ಎಂದು ಭಾವಿಸಿದ್ದೆವು. ಸರ್ಕಾರ ಕೂಡಾ ಅದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿತ್ತು. ಆದರೆ ಈ ಗ ನೋಡಿದರೆ, ಮೋದಿಯವರು ನಮಗೆ ಚೊಂಬು ಕೊಟ್ಟಿದ್ದಾರೆ ಎಂದು ಸಿದ್ದರಾಮಯ್ಯ ಅವರು ಹೇಳುತ್ತಾರೆ, ಆದರೆ ಸಿದ್ದರಾಮಯ್ಯಾ ಅವರು ನಮಗೆ ಚಿಪ್ಪು ಕೊಟ್ಟರು” ಎಂದು ಹೇಳಿದರು.

ಮುಂದಿನ ಮೂರು ವರ್ಷಗಳ ನಂತರ ನಾವು ಮುಂದಿನ ಜನ ಚಳವಳಿ ಬಜೆಟ್ ಅಧಿವೇಶನವನ್ನು ವಿಧಾನಸೌಧದಲ್ಲೆ ಮಾಡಬೇಕು. ಅಂತಹ ಹೋರಾಟವನ್ನು ರೂಪಿಸಬೇಕಿದೆ. ನಾಲ್ಕಿ ಲಕ್ಷ ಕೋಟಿಯಲ್ಲಿ ರೈತರಿಗೆ 7ಸಾವಿರ ಕೊಟ್ಟಿದೆ. ಆದರೆ ಉಳಿದ ಕೋಟಿಗಳು ಎಲ್ಲಿ ಹೋದವು ಎಂದು ಅವರು ಪ್ರಶ್ನಿಸಿದರು.

16 ಲಕ್ಷ ಕುಟುಂಬಗಳಿಗೆ ನಿವೇಶನ ಇಲ್ಲ ಎಂದು ಹೇಳುತ್ತಿದ್ದಾರೆ. ಈ ಹಿಂದಿನಿಂದಲೂ ನಾವು ಇದನ್ನು ಕೇಳುತ್ತಲೆ ಬಂದಿದ್ದೇವೆ. ಈ ಬಗ್ಗೆ ಸಿದ್ದರಾಮಯ್ಯ ಅವರು ಪ್ರತಿಕ್ರಿಯಿಸಿ ನಿವೇಶನ ಕೊಡುತ್ತೇವೆ ಎಂದು ಹೇಳಿದ್ದರು. ಆದರೆ ಈಗ ನಿವೇಶನ ಕೊಡದೆ ಕಾರ್ಪೊರೇಟ್‌ಗೆ ನಿವೇಶನ ಕೊಟ್ಟು ಅವರು ಮನೆ ನಿರ್ಮಿಸುತ್ತಾರೆ ಎಂದು ಹೇಳುತ್ತಿದ್ದಾರೆ ಎಂದು ಅವರು ಹೇಳಿದರು.

ಇಡೀ ರಾಜ್ಯದಲ್ಲಿ ಇರುವ ಒಂದುವರೆ ಕೋಟಿ ಹೆಕ್ಟೇರ್ ಭೂಮಿಯಲ್ಲಿ ನಾವು ಕೇಳುತ್ತಿರುವುದು ಕೇವಲ 60 ಸಾವಿರ ಹೆಕ್ಟೇರ್‌ ಭೂಮಿ. ಸಿದ್ದರಾಮಯ್ಯ ಅವರು ಮಂಡಿಸಿರುವ ಬಜೆಟ್ ”ಬಿಎಂಜಿಆರ್‌” ಬಜೆಟ್ ಆಗಿದೆ. ಅಂದರೆ ಬೆಂಗಳೂರು, ಮೈಸೂರು, ಗುಲ್ಬರ್ಗ ಮತ್ತು ರಾಮನಗರಕ್ಕೆ ಸೀಮಿತವಾದ ಬಜೆಟ್, ಇದು ರಾಜ್ಯದ ಬಜೆಟ್ ಅಲ್ಲ ಎಂದು ಅವರು ಹೇಳಿದರು.

14 ಲಕ್ಷ ಹೆಕ್ಟೇರ್ ಭೂಮಿ ಗೋಮಾಳ ಇದೆ ಎಂದು ಹೇಳುತ್ತಿದ್ದಾರೆ. ಆದರೆ ಈ ಭೂಮಿ ಎಲ್ಲಿ ಹೋಯಿತು. ಕೇರಳದಲ್ಲಿ ಮನೆ ಕಟ್ಟಲು 7 ಲಕ್ಷ ಕೊಡುತ್ತಿದೆ. ರಾಜ್ಯದಲ್ಲಿ ನೀಡುತ್ತಿರುವುದು 1.5 ಲಕ್ಷ. ನಾವು ಕನಿಷ್ಠ 5 ಲಕ್ಷವಾದರೂ ಕೊಡಿ ಎಂದು ಕೇಳುತ್ತಿದ್ದೇವೆ. ರಾಜ್ಯ ಸರ್ಕಾರ ಅದನ್ನೂ ಕೊಡುತ್ತಿಲ್ಲ. ಈ ಬಗ್ಗೆ ಬಜೆಟ್ ಅಧಿವೇಶನದಲ್ಲಿ ಚರ್ಚೆ ಮಾಡಬೇಕಿದ್ದ ಆಡಳಿತ ಮತ್ತು ವಿಪಕ್ಷಗಳು, ಅದನ್ನೂ ಮಾಡುತ್ತಿಲ್ಲ ಎಂದು ಅವರು ಹೇಳಿದರು.

ಹೋರಾಟಗಾರ ಅಲ್ಲಮಪ್ರಭು ಬೆಟ್ಟದೂರು ಮಾತನಾಡಿ, ಸರ್ಕಾರಗಳಲ್ಲಿ ಜಡತ್ವ ಇದೆ. ಕೇಂದ್ರದ ಬಜೆಟ್ ಅಂತೂ ರೈತ, ಮಹಿಳೆ, ಕೂಲಿಕಾರರಿಗೆ ದುಡಿಯುವ ವರ್ಗದ ಪರವಾಗಿಲ್ಲ. ಅದು ಎಂದಿದ್ದರೂ ಕಾರ್ಪೊರೇಟ್ ವರ್ಗಗಳ ಪರವಿದೆ. ಅವರ ನಿಲುವು ಎಂದಿದ್ದರೂ ಜನ ವಿರೋಧಿಯಾಗಿವೆ. ಉತ್ತರ ಭಾರತಕ್ಕೆ ಹೋಲಿಸಿದರೆ ದಕ್ಷಿಣ ಭಾತರದ ರಾಜ್ಯಗಳು ಅಭಿವೃದ್ಧಿ ಹೊಂದಿ ತೆರಿಗೆ ಕಟ್ಟುತ್ತಿದೆ. ಆದರೆ ಕೇಂದ್ರ ಸರ್ಕಾರ ನಮ್ಮ ತೆರಿಗೆಯ ಹಣ ನೀಡುತ್ತಿಲ್ಲ ಎಂದು ಹೇಳಿದರು.

ನಾವು ಹೋರಾಟದ ರಂಗದಲ್ಲಿ ಇದ್ದೇವೆ. ಹೋರಾಟಗಾರರು ಹೋರಾಟ ಮಾಡುತ್ತಲೆ ಇರುತ್ತಾರೆ. ಆಳುವವರು ಆಳುತ್ತಲೆ ಇರುತ್ತಾರೆ. ಇದು ಬದಲಾಗಬೇಕಿದೆ. ರೈತ ಸಂಘಗಳೂ, ಕಮ್ಯುನಿಸ್ಟ್ ಸಂಘಟನೆಗಳು, ದಲಿತ ಸಂಘಟನೆಗಳು ಒಗ್ಗಟ್ಟಾಗಿ ಹೋರಾಟ ಮಾಡಬೇಕಿದೆ. ಕೂದಲು ಸೀಲುವುದನ್ನು ಬಿಟ್ಟು ನಾವು ಒಗ್ಗಟ್ಟಾಗಿ ಕೆಲಸ ಮಾಡಬೇಕಿದೆ. ಬಿಜೆಪಿ ಸರ್ಕಾರ ತಂದಂತಹ ಜನವಿರೋಧಿ ಕಾನೂನುಗಳನ್ನು ವಾಪಾಸು ತೆಗೆದುಕೊಳ್ಳಬೇಕು. ಆದರೆ ಕರ್ನಾಟಕ ಸರ್ಕಾರ ವಾಪಾಸು ತೆಗೆದುಕೊಳ್ಳುತ್ತಿಲ್ಲ. ಸರ್ಕಾರವನ್ನು ಭೇಟಿಯಾಗುವ ನಿಯೋಗಗಳು ಮೊದಲು ಇದನ್ನು ಪ್ರಸ್ತಾಪಿಸಬೇಕು ಎಂದು ಹೇಳಿದರು.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಮತಾಂಧತೆಯ ಪರಿಭಾಷೆಯಲ್ಲಿ ಬಜೆಟ್ ವಿಶ್ಲೇಷಣೆ ನಡೆಸುತ್ತಿರುವುದು ದುರಂತ: ಟಿ.ಆರ್.ಚಂದ್ರಶೇಖರ್

ಮತಾಂಧತೆಯ ಪರಿಭಾಷೆಯಲ್ಲಿ ಬಜೆಟ್ ವಿಶ್ಲೇಷಣೆ ನಡೆಸುತ್ತಿರುವುದು ದುರಂತ: ಟಿ.ಆರ್.ಚಂದ್ರಶೇಖರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...

ಒಳಮೀಸಲಾತಿ ನಾಡು ಕಂಡ ಸುದೀರ್ಘ ಹೋರಾಟದ ಕಥೆ

ಇದು ಬೆವರು ನಿಟ್ಟುಸಿರುಗಳ ಚಳವಳಿ. ತಮ್ಮ ಅನ್ನದ ಬಟ್ಟಲಿಗಾಗಿ ದಶಕಗಳ ಕಾಲ ಹಸಿವು, ಬಾಯಾರಿಕೆ, ನಿದ್ರೆ ಎಲ್ಲವನ್ನೂ ಬಿಟ್ಟು ನಡೆಸಿದ ಅಭೂತಪೂರ್ವ ಚಳವಳಿ. ರಾಜಕೀಯ ಚಕ್ರವ್ಯೂಹಗಳನ್ನು ಬೇಧಿಸಿ, ಸಾಂವಿಧಾನಿಕ ಹಕ್ಕನ್ನು ತಮ್ಮದಾಗಿಸಿಕೊಂಡ ಚಳವಳಿ....

‘ಗೋಮಾಂಸ’ ತಂದ ನೆಪ: ಅಸ್ಸಾಂನಲ್ಲಿ ಐವರು ಮುಸ್ಲಿಂ ವಿದ್ಯಾರ್ಥಿಗಳ ವಿರುದ್ಧ ಕ್ರಮ; ಸುಳ್ಳು ಪ್ರಕರಣದಡಿ ಒಂಟಿ ತಾಯಿ ಮತ್ತು ಅಪ್ರಾಪ್ತ ಮಗನ ಬಂಧನ

ಧಾರ್ಮಿಕ ಭಾವನೆಗೆ ಧಕ್ಕೆ ಎಂಬ ಹೆಸರಿನಲ್ಲಿ ಶಾಲಾ ಆವರಣಗಳೂ ಸಹ ಕೋಮು ರಾಜಕಾರಣದ ಪ್ರಯೋಗಶಾಲೆಗಳಾಗುತ್ತಿರುವುದಕ್ಕೆ ಅಸ್ಸಾಂನಿಂದ ಮತ್ತೊಂದು ಆಘಾತಕಾರಿ ಘಟನೆ ವರದಿಯಾಗಿದೆ. ಅಸ್ಸಾಂನ ಗೋಲ್‌ಪಾರ ಜಿಲ್ಲೆಯ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯೊಂದರಲ್ಲಿ ಮುಸ್ಲಿಂ...

ಪ್ರಧಾನಿ ನರೇಂದ್ರ ಮೋದಿಯ 12 ವರ್ಷದ ಸಾಧನೆ ಏನು? ಅವರು ಮುರಿದ ದಾಖಲೆಯಾದರೂ ಯಾವುದು?

ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು 2014ರಿಂದ ಸತತ 12ವರ್ಷಗಳು (4,399 ದಿನಗಳು) ಪ್ರಧಾನಿ ಹುದ್ದೆ ಅಲಂಕರಿಸುವ ಮೂಲಕ ದಾಖಲೆ ನಿರ್ಮಿಸಿದ್ದಾರೆ. ಮೋದಿ ನೇತೃತ್ವದ ಸರ್ಕಾರಕ್ಕೆ 12 ವರ್ಷ ತುಂಬಿದ ಹಿನ್ನೆಲೆ ಬಿಜೆಪಿ...

ಉತ್ತರಾಖಂಡ: ಮೇಲ್ಜಾತಿ ಯುವತಿ ಜೊತೆ ಸ್ನೇಹ ಬೆಳೆಸಿದ 18 ವರ್ಷದ ದಲಿತ ಯುವಕನ ಹತ್ಯೆ, ಸ್ನೇಹಿತನ ಮೇಲೂ ಮಾರಣಾಂತಿಕ ಹಲ್ಲೆ 

ದೇಶದಲ್ಲಿ ಜಾತಿ ವ್ಯವಸ್ಥೆಯ ಕರಾಳ ಮುಖ ಮತ್ತೊಮ್ಮೆ ಅನಾವರಣಗೊಂಡಿದೆ. ಉತ್ತರಾಖಂಡದ ನ್ಯೂ ತೆಹ್ರಿ ಜಿಲ್ಲೆಯ ಪ್ರತಾಪ್ ನಗರ ಬ್ಲಾಕ್ ವ್ಯಾಪ್ತಿಯಲ್ಲಿ ಮೇಲ್ಜಾತಿಯ ಅಪ್ರಾಪ್ತ ಯುವತಿಯೊಂದಿಗೆ ಸ್ನೇಹ ಬೆಳೆಸಿದ್ದಕ್ಕಾಗಿ 18 ವರ್ಷದ ದಲಿತ ಹದಿಹರೆಯದ...

ಟಿಎಂಸಿ ಬಂಡಾಯ : 20 ಸಂಸದರು ಪಕ್ಷ ತೊರೆದರೂ ಅನರ್ಹತೆ ತಪ್ಪಿದ್ದಲ್ಲ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಸುಮಾರು 20 ಲೋಕಸಭಾ ಸಂಸದರು ಪಕ್ಷದಿಂದ ಬೇರ್ಪಟ್ಟು ಪ್ರತ್ಯೇಕ ಗುಂಪು ರಚಿಸಲು ಸಜ್ಜಾಗಿದ್ದಾರೆ ಎಂಬ ವರದಿಗಳ ನಡುವೆ, ಕೇವಲ ಮೂರನೇ ಎರಡರಷ್ಟು ಸಂಸದರ ಬೆಂಬಲ ಹೊಂದಿರುವುದರಿಂದ ಮಾತ್ರ...

ಕಚ್ಚಿದ ಸೇಬನ್ನು ಅಭಿಮಾನಿಗಳತ್ತ ಎಸೆದ ಸಿಎಂ ಡಿ.ಕೆ. ಶಿವಕುಮಾರ್: ವಿಡಿಯೋ ವೈರಲ್

ರಾಜಕೀಯ ನಾಯಕರು ತಮಗೆ ಸಿಕ್ಕ ಹಾರ, ತುರಾಯಿ ಅಥವಾ ಹಣ್ಣುಗಳನ್ನು ಅಭಿಮಾನಿಗಳಿಗೆ ಹಂಚುವುದು ಹೊಸದೇನಲ್ಲ. ಆದರೆ, ತಾನು ಕಚ್ಚಿದ ಹಣ್ಣನ್ನು ಸಾರ್ವಜನಿಕವಾಗಿ ಜನರತ್ತ ಎಸೆಯುವುದು ಯಾವ ರೀತಿಯ ಸಂಸ್ಕೃತಿ ಎಂಬ ಪ್ರಶ್ನೆ ಮೂಡುತ್ತದೆ....