Homeಮುಖಪುಟಮೆರವಣಿಗೆ ಆರಂಭಿಸಿದ ರೈತರು; ದೆಹಲಿ-ಹರಿಯಾಣ ಗಡಿಯಲ್ಲಿ ಕಂದಕ, ಮುಳ್ಳಿನ ಬೇಲಿ

ಮೆರವಣಿಗೆ ಆರಂಭಿಸಿದ ರೈತರು; ದೆಹಲಿ-ಹರಿಯಾಣ ಗಡಿಯಲ್ಲಿ ಕಂದಕ, ಮುಳ್ಳಿನ ಬೇಲಿ

- Advertisement -
- Advertisement -

ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಸೇರಿದಂತೆ ವಿವಿಧ ಬೇಡಿಕೆಗಳನ್ನಿಟ್ಟುಕೊಂಡು ಇಂದು ಹಲವು ರಾಜ್ಯಗಳ ರೈತರು ‘ದೆಹಲಿ ಚಲೋ’ ಹಮ್ಮಿಕೊಂಡಿದ್ದು, ‘ಸಂಯುಕ್ತ ಕಿಸಾನ್ ಮೋರ್ಚಾ ಮತ್ತು ಕಿಸಾನ್ ಮಜ್ದೂರ್ ಮೋರ್ಚಾ’ ಸೇರಿದಂತೆ ಹಲವು ಸಂಘಟನೆಗಳು ಹರಿಯಾಣ, ಪಂಜಾಬ್ ಮತ್ತು ಉತ್ತರ ಪ್ರದೇಶ ಗಡಿಗಳಿಂದ ಮೆರವಣಿಗೆ ಆರಂಭಿಸಿದ್ದಾರೆ. ಇದೇ ಸಂಘಟನೆಗಳ ನೇತೃತ್ವದಲ್ಲಿ 2020-21 ರಲ್ಲಿ ವರ್ಷವಿಡೀ ನಡೆದ ಆಂದೋಲನದ ನಂತರ ಕೇಂದ್ರ ಸರ್ಕಾರ ಮೂರು ಕೃಷಿ ಕಾನೂಗಳನ್ನು ಹಿಂದೆಗೆದುಕೊಂಡು, ಎಂಎಸ್‌ಪಿಯನ್ನು ಕಾನೂನುಬದ್ಧಗೊಳಿಸುವುದಾಗಿ ಭರವಸೆ ನೀಡಿತ್ತು.

250ಕ್ಕೂ ಹೆಚ್ಚು ರೈತ ಸಂಘಗಳ ಬೆಂಬಲ ಹೊಂದಿರುವ ಕಿಸಾನ್ ಮಜ್ದೂರ್ ಮೋರ್ಚಾ ಮತ್ತು 150 ರೈತ ಒಕ್ಕೂಟಗಳ ವೇದಿಕೆಯಾದ ಸಂಯುಕ್ತ ಕಿಸಾನ್ ಮೋರ್ಚಾ ಡಿಸೆಂಬರ್‌ನಲ್ಲಿ ಪ್ರತಿಭಟನೆಗೆ ಕರೆ ನೀಡಿವೆ. ಪಂಜಾಬ್‌ನಿಂದ ಪ್ರಾರಂಭಗೊಂಡ ಸಂಘಟಿತವಾದ ಪ್ರತಿಭಟನೆಯು ಸರ್ಕಾರ ಎರಡು ವರ್ಷಗಳ ಹಿಂದೆ ನೀಡಿದ್ದ ಭರವಸೆಗಳನ್ನು ನೆನಪಿಸುವ ಉದ್ದೇಶ ಹೊಂದಿದೆ.

ಮುಖ್ಯವಾಗಿ ಪಂಜಾಬ್‌ನ ರೈತರು, ಹರಿಯಾಣ ಮತ್ತು ಉತ್ತರ ಪ್ರದೇಶ ಸಹ ಸಂಘಟನೆಗಳು ತಮ್ಮ ‘ಚಲೋ ದೆಹಲಿ’ ಮೆರವಣಿಗೆಯನ್ನು ಪ್ರಾರಂಭಿಸಿವೆ. ಕೇಂದ್ರ ಸರ್ಕಾರದೊಂದಿಗಿನ ಅವರ ಸಭೆಯು ಅನಿರ್ದಿಷ್ಟವಾಗಿ ಉಳಿದಿದೆ. ಮೆರವಣಿಗೆಯ ಮುನ್ನಾದಿನದಂದು, ಪಂಜಾಬ್, ಹರಿಯಾಣ ಮತ್ತು ಉತ್ತರ ಪ್ರದೇಶದ ರೈತ ಮುಖಂಡರು ಎರಡನೇ ಸುತ್ತಿನ ಮಾತುಕತೆಗಾಗಿ ಕೇಂದ್ರ ಸಚಿವರಾದ ಪಿಯೂಷ್ ಗೋಯಲ್ ಮತ್ತು ಅರ್ಜುನ್ ಮುಂಡಾ ಅವರನ್ನು ಭೇಟಿ ಮಾಡಿದರು. ಸಭೆಯು ಐದು ಗಂಟೆಗಳ ಕಾಲ ನಡೆಯಿತು, ಕೇಂದ್ರದ ಕೊನೆಯ ಪ್ರಯತ್ನವೂ ವಿಫಲವಾಗಿದ್ದು, ರಾಷ್ಟ್ರ ರಾಜಧಾಣಿಗೆ ಅನ್ನದಾತರು ಬರದಂತೆ ದೆಹಲಿ ಗಡಿಯಲ್ಲಿ ಕಂದಕ ತೋಡಲಾಗಿದೆ. ಸಿಮೆಂಡ್ ಬ್ಲಾಕ್‌ಗಳಿಂದ ರಸ್ತೆಗಳನ್ನು ಬಂದ್ ಮಾಡಲಾಗಿದೆ.

ರೈತರಿಗೆ ಸಂಬಂಧಿಸಿದ ಬಹುತೇಕ ವಿಷಯಗಳ ಬಗ್ಗೆ ಒಮ್ಮತಕ್ಕೆ ಬರಲಾಗಿದೆ ಎಂದು ಸಭೆಯ ನಂತರ ಕೇಂದ್ರ ಕೃಷಿ ಸಚಿವ ಮುಂಡಾ ತಿಳಿಸಿದರು. ಆದಾಗ್ಯೂ, ಮಂಗಳವಾರದಂದು ಮೆರವಣಿಗೆ ನಡೆಸುವುದಾಗಿ ರೈತರು ಪ್ರತಿಪಾದಿಸಿದರು. ಇದರಿಂದಾಗಿ ದೆಹಲಿಯಾದ್ಯಂತ ಅನೇಕ ರಾಜ್ಯಗಳ ಗಡಿಗಳನ್ನು ಮುಚ್ಚಲಾಗಿದೆ.

ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನು (ಎಂಎಸ್‌ಪಿ) ಖಾತರಿಪಡಿಸುವ ಕಾನೂನು ಜಾರಿಗೊಳಿಸುವುದು ಸೇರಿದಂತೆ ತಮ್ಮ ಬೇಡಿಕೆಗಳನ್ನು ಅಂಗೀಕರಿಸುವಂತೆ ಕೇಂದ್ರವನ್ನು ಒತ್ತಾಯಿಸಲು ಸಂಯುಕ್ತ ಕಿಸಾನ್ ಮೋರ್ಚಾ (ರಾಜಕೀಯೇತರ) ಮತ್ತು ಕಿಸಾನ್ ಮಜ್ದೂರ್ ಮೋರ್ಚಾ ಮಂಗಳವಾರದ ಮೆರವಣಿಗೆಯನ್ನು ನಡೆಸಲಿದೆ.

ಎಂಎಸ್‌ಪಿಯ ಕಾನೂನು ಖಾತರಿ ರೈತರ ಪ್ರತಿಭಟನೆಗೆ ಪ್ರಮುಖ ಕಾರಣವಾಗಿದೆ. ಇದಲ್ಲದೇ, ಸ್ವಾಮಿನಾಥನ್ ಆಯೋಗದ ಶಿಫಾರಸುಗಳನ್ನು ಜಾರಿಗೆ ತರಲು ಹಾಗೂ ಕೃಷಿ ಸಾಲ ಮನ್ನಾಕ್ಕೆ ರೈತರು ಒತ್ತಾಯಿಸಿದ್ದಾರೆ.

ಹರ್ಯಾಣ, ಪಂಜಾಬ್ ಮತ್ತು ಉತ್ತರ ಪ್ರದೇಶದ ರೈತರು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಎಂಎಸ್‌ಪಿ ಕಾನೂನು ಖಾತರಿ ಘೋಷಣೆಗಾಗಿ ಬೃಹತ್ ಪ್ರತಿಭಟನೆಯನ್ನು ಪ್ರಾರಂಭಿಸುತ್ತಿದ್ದಾರೆ. ತಮ್ಮ ಬೇಡಿಕೆಗಳನ್ನು ಅಂಗೀಕರಿಸುವಂತೆ ಕೇಂದ್ರವನ್ನು ಒತ್ತಾಯಿಸಲು ಕಳೆದ ವಾರ ‘ದೆಹಲಿ ಚಲೋ’ ಮೆರವಣಿಗೆಯನ್ನು ಘೋಷಿಸಲಾಗಿತ್ತು.

ರೈತರು ಕಾನೂನುಬದ್ಧ ಎಂಎಸ್‌ಪಿ ಗ್ಯಾರಂಟಿ, ರೈತರು ಮತ್ತು ಕೃಷಿ ಕಾರ್ಮಿಕರಿಗೆ ಪಿಂಚಣಿ, ಕೃಷಿ ಸಾಲ ಮನ್ನಾ ಮತ್ತು ಲಖಿಂಪುರ ಖೇರಿ ಹಿಂಸಾಚಾರದ ಸಂತ್ರಸ್ತರಿಗೆ “ನ್ಯಾಯ” ಮುಂತಾದ ಅನೇಕ ಷರತ್ತುಗಳನ್ನು ಮುಂದಿಟ್ಟಿದ್ದಾರೆ.

ದೆಹಲಿಯ ಸಿಂಗ್, ಟಿಕ್ರಿ ಮತ್ತು ಗಾಜಿಪುರ ಗಡಿಯಲ್ಲಿ ಭದ್ರತೆಯನ್ನು ತೀವ್ರಗೊಳಿಸಲಾಗಿದ್ದು, ವಾಹನಗಳ ಸಂಚಾರವನ್ನು ನಿರ್ಬಂಧಿಸಲು ಮತ್ತು ರಾಷ್ಟ್ರ ರಾಜಧಾನಿಯಲ್ಲಿ ಅಡಚಣೆಗಳನ್ನು ತಡೆಗಟ್ಟಲು ಸಿಮೆಂಟ್ ಬ್ಯಾರಿಕೇಡಿಂಗ್, ಲೋಹದ ಮೊಳೆಗಳು ಮತ್ತು ತಡೆಗೋಡೆಗಳನ್ನು ಸ್ಥಾಪಿಸಲಾಗಿದೆ.

ಮಂಗಳವಾರ ರೈತರ ಪ್ರತಿಭಟನೆಗೆ ಮುನ್ನ ಅನಾಹುತಗಳನ್ನು ತಡೆಯಲು ದೆಹಲಿ ಪೊಲೀಸರು ಭಾನುವಾರ ಉತ್ತರ ಪ್ರದೇಶ ಮತ್ತು ಹರ್ಯಾಣ ಗಡಿಗಳಲ್ಲಿ ಕ್ರಿಮಿನಲ್ ಪ್ರೊಸೀಜರ್ ಕೋಡ್‌ನ ಸೆಕ್ಷನ್ 144 ಅನ್ನು ವಿಧಿಸಿದ್ದಾರೆ. ದೆಹಲಿಯ ಗಡಿಯಲ್ಲಿ 50,000 ಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಫೆಬ್ರವರಿ 13 ಕ್ಕೆ ಅಂಬಾಲಾ, ಕುರುಕ್ಷೇತ್ರ, ಕೈತಾಲ್, ಜಿಂದ್, ಹಿಸಾರ್, ಫತೇಹಾಬಾದ್ ಮತ್ತು ಸಿರ್ಸಾ – ಏಳು ಜಿಲ್ಲೆಗಳಲ್ಲಿ ಇಂಟರ್ನೆಟ್ ಮತ್ತು ಬಲ್ಕ್‌ ಎಸ್‌ಎಂಎಸ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ.

ಇದನ್ನೂ ಓದಿ; ರೈತರಿಂದ ಇಂದು ‘ದಿಲ್ಲಿ ಚಲೋ’: ಕೇಂದ್ರದ ಮನವೊಲಿಸುವ ತಂತ್ರ ವಿಫಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...