Homeಚಳವಳಿ’ಇಸ್ಲಾಮಿಸ್ಟ್‌‌ಗಳ ಕೈವಶವಾದ ರೈತ ಹೋರಾಟ’: ಸುಳ್ಳುಸುದ್ದಿ ಹರಡುತ್ತಿರುವ ಬಲಪಂಥೀಯರು

’ಇಸ್ಲಾಮಿಸ್ಟ್‌‌ಗಳ ಕೈವಶವಾದ ರೈತ ಹೋರಾಟ’: ಸುಳ್ಳುಸುದ್ದಿ ಹರಡುತ್ತಿರುವ ಬಲಪಂಥೀಯರು

- Advertisement -
- Advertisement -

ರೈತ ಹೋರಾಟಹೋರಾಟಕ್ಕೂ ’ಮುಸ್ಲಿಂ ಆಂಗಲ್’ ನೀಡುವ ವಿಫಲ ಯತ್ನ ಮಾಡುತ್ತಿದ್ದಾರೆ.

ಪ್ರತಿಭಟನೆಗೆ ಬೆಂಬಲ ನೀಡಲು ಬಂದವರ ಫೋಟೊ ಹಾಕಿ, ’ಪಂಜಾಬಿ ಮಹಿಳೆಯರು ಅದ್ಯಾವಾಗ ಬುರ್ಕಾ ಹಾಕಲು ಆರಂಭಿಸಿದರು?’ ಎಂದೆಲ್ಲ ಟ್ವೀಟ್ ಮಾಡಲಾಗಿದೆ. ’ಟಿಂಕು’ ಎಂಬುವವರು ಟ್ವೀಟ್ ಮಾಡಿ, ಬುರ್ಕಾ ಧರಿಸಿದ ಮಹಿಳೆಯರನ್ನು ಉದ್ದೇಶಿಸಿ, ’ನೋಡಿ ತಮ್ಮ ದಾಖಲೆ ತೋರಿಸಲು ಒಲ್ಲದ ಜನ ಇವರು’ ಎಂದಿದ್ದಾರೆ.(ಇದರ ಆರ್ಕೈವ್ ಇಲ್ಲಿ ಕ್ಲಿಕ್ ಮಾಡಿ)

ಇದನ್ನೂ ಓದಿ: ಗಂಗೂಲಿಯ ಹೃದಯಾಘಾತಕ್ಕೆ ಮರುಗುವ ಮೋದಿಗೆ 60 ಹುತಾತ್ಮ ರೈತರು ಕಾಣುತ್ತಿಲ್ಲ: ಯೋಗೇಂದ್ರ ಯಾದವ್ ಕಿಡಿ

ಇಂಡಿಯಾ ವೈರಲ್’ ಎಂಬ ವೆಬ್‌ಸೈಟಿನಲ್ಲಿ ಈ ಕುರಿತೇ ಒಂದು ಬರಹ ಪ್ರಕಟಿಸಲಾಗಿದ್ದು, ರೈತ ಪ್ರತಿಭಟನೆ ’ಇಸ್ಲಾಮಿಸ್ಟ್‌ಗಳ’ ತೆಕ್ಕೆಗೆ ಹೋಯ್ತು ಎಂದು ಸುಳ್ಳು ಆರೋಪವನ್ನು ಮಾಡಲಾಗಿದೆ. ಬುರ್ಕಾ ಹಾಕಿದವರು ನಿಜವಾಗಿಯೂ ಮಹಿಳೆಯರೇ ಎಂದು ಪ್ರಶ್ನಿಸಿರುವ ಈ ಬರಹದಲ್ಲಿ, ಇಡೀ ಹೋರಾಟವನ್ನು ಅವಹೇಳನ ಮಾಡುವ ದುರುದ್ದೇಶವೇ ತುಂಬಿದೆ.

ಫ್ಯಾಕ್ಟ್‌ಚೆಕ್

ಚಿತ್ರದ ಮೂಲ ಪತ್ತೆ ಮಾಡಿದಾಗ, ಜನವರಿ 14 ರಂದು ’ಇಂಡಿಯಾ ಮುಸ್ಲಿಮ್ಸ್’ ಎನ್ನುವ ಫೇಸ್‌ಬುಕ್ ಪೋಸ್ಟ್‌ನಲ್ಲಿ ಇದು ಪ್ರಕಟವಾಗಿದ್ದು, ಟಿಕ್ರಿ ಗಡಿಯ ಪ್ರತಿಭಟನೆಯಲ್ಲಿ ಮುಸ್ಲಿಮರು ಭಾಗಿ ಎಂದು ಬರೆಯಲಾಗಿದೆ.

ಇದನ್ನೂ ಓದಿ: 2024 ರವರೆಗೂ ಪ್ರತಿಭಟನೆ ಮುಂದುವರಿಸಲು ಸಿದ್ಧರಿದ್ದೇವೆ: ರೈತ ನಾಯಕ ರಾಕೇಶ್ ಟಿಕಾಯತ್

ಭಾರತೀಯ ಕಿಸಾನ್ ಯುನಿಯನ್ (ಬಿಕೆಯು) ಫೇಸ್‌ಬುಕ್ ಪೇಜ್‌ನಲ್ಲೂ ಈ ವಿಷಯ ಪ್ರಸ್ತಾಪ ಮಾಡಲಾಗಿದ್ದು, ಪಂಜಾಬಿನ ಮಲೇರ್‌ಕೊಲ್ಟಾ ಪ್ರದೇಶದ ಮುಸ್ಲಿಂ ಮಹಿಳೆಯರು ಟಿಕ್ರಿ ಗಡಿಯಲ್ಲಿ ರೈತ ಪ್ರತಿಭಟನೆಗೆ ಬೆಂಬಲ ಸೂಚಿಸಿ ಭಾಗಿಯಾಗಿದ್ದರು’ ಎಂದು ತಿಳಿಸಿದೆ. ಅವತ್ತು ಸಭೆಯಲ್ಲೇ ಮುಸ್ಲಿಮರು ರೈತರಿಗಾಗಿ ಪ್ರಾರ್ಥನೆ ಮಾಡಿದರು ಮತ್ತು ಮಾತನಾಡಿದರು ಎಂದು ಬಿಕೆಯು ತಿಳಿಸಿದೆ.

ಜನವರಿ 13 ರ ಟೈಮ್ಸ್ ಆಫ್ ಇಂಡಿಯಾ, ಡಾ. ನಾಸೀರ್ ಅಖ್ತರ್ ಎನ್ನುವವರ ಹೇಳಿಕೆಯನ್ನು ಉಲ್ಲೇಖಿಸಿದ್ದು, ಅಖ್ತರ್ ನೇತೃತ್ವದಲ್ಲಿ ಮಲೇರ್‌ಕೊಲ್ಟಾದ 30 ಮುಸ್ಲಿಂ ಮಹಿಳೆಯರು ರೈತ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು ಎಂದು ವರದಿ ಮಾಡಿದೆ.

ಡಾ. ಅಖ್ತರ್ ಸಿಂಘು ಗಡಿಯಲ್ಲಿ ಒಂದು ಉಚಿತ ಊಟದ ಮನೆ (ಲಂಗರ್) ನಡೆಸುತ್ತಿದ್ದಾರೆ. ಅಖ್ತರ್ ಮತ್ತು ಅವರ ಸಹೋದ್ಯೋಗಿಗಳು ರೈತರಿಗಾಗಿ ನೂರಾರು ವಾಟರ್‌ಪ್ರೂಫ್ ಟೆಂಟುಗಳನ್ನು ನಿರ್ಮಿಸಿದ್ದಾರೆ, ನೂರಕ್ಕೂ ಹೆಚ್ಚು ಹಾಸಿಗೆಗಳ ವ್ಯವಸ್ಥೆ ಮಾಡಿದ್ದಾರೆ.

ಇದನ್ನೂ ಓದಿ: ‘ರೈತ ಮಹಿಳಾ ದಿನ’: ಕೇಂದ್ರಕ್ಕೆ ಬಿಸಿಮುಟ್ಟಿಸಲು ರೈತ ಪುತ್ರಿಯರು ಸಜ್ಜು

ಶಹೀದ್ ತಾಂತ್ರೆ, ಸಾಹಿಲ್ ಎನ್ನುವವರು ಕೂಡ ಈ ಫೋಟೊ, ವಿಡಿಯೋ ಬಳಸಿ ಸಂದೇಶ ಹಾಕಿದ್ದು, ಇದು ಹಿಂದೂ-ಮುಸ್ಲಿಂ-ಸಿಖ್ಖರ ಏಕತೆ ಎಂದು ಬರೆದಿದ್ದಾರೆ.

ಒಟ್ಟಿನಲ್ಲಿ, ಟಿಕ್ರಿ ಗಡಿಯಲ್ಲಿ ಮುಸ್ಲಿಂ ಮಹಿಳೆಯರು ಪ್ರತಿಭಟನೆಯನ್ನು ಬೆಂಬಲಿಸಿ ಭಾಗವಹಿಸಿದ್ದು ಸತ್ಯ. ಆದರೆ ಈ ಫೋಟೊ ಬಳಸಿ ಇಲ್ಲಸಲ್ಲದ ಸುಳ್ಳು ಮಾಹಿತಿ ಹರಡುವ ಯತ್ನ ಮಾಡಲಾಗಿದೆ. ಮೊದಲಿಂದಲೂ ಪ್ರತಿಭಟನೆಯನ್ನು ಮುಸ್ಲಿಮರು ಹೈಜಾಕ್ ಮಾಡಿದ್ದಾರೆ ಎನ್ನುವ ಇತರ ಹಲವು ಸಂದೇಶಗಳು ಆಗಾಗ ಕಂಡುಬಂದಿವೆ.

ಇದನ್ನೂ ಓದಿ: ಕೃಷಿ ನೀತಿ ವಿರೋಧಿ ಹೋರಾಟ: ಪೆರು ದೇಶದ ರೈತರ ಹೋರಾಟಕ್ಕೆ ಜಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...