Homeಚಳವಳಿ’ಇಸ್ಲಾಮಿಸ್ಟ್‌‌ಗಳ ಕೈವಶವಾದ ರೈತ ಹೋರಾಟ’: ಸುಳ್ಳುಸುದ್ದಿ ಹರಡುತ್ತಿರುವ ಬಲಪಂಥೀಯರು

’ಇಸ್ಲಾಮಿಸ್ಟ್‌‌ಗಳ ಕೈವಶವಾದ ರೈತ ಹೋರಾಟ’: ಸುಳ್ಳುಸುದ್ದಿ ಹರಡುತ್ತಿರುವ ಬಲಪಂಥೀಯರು

- Advertisement -
- Advertisement -

ರೈತ ಹೋರಾಟಹೋರಾಟಕ್ಕೂ ’ಮುಸ್ಲಿಂ ಆಂಗಲ್’ ನೀಡುವ ವಿಫಲ ಯತ್ನ ಮಾಡುತ್ತಿದ್ದಾರೆ.

ಪ್ರತಿಭಟನೆಗೆ ಬೆಂಬಲ ನೀಡಲು ಬಂದವರ ಫೋಟೊ ಹಾಕಿ, ’ಪಂಜಾಬಿ ಮಹಿಳೆಯರು ಅದ್ಯಾವಾಗ ಬುರ್ಕಾ ಹಾಕಲು ಆರಂಭಿಸಿದರು?’ ಎಂದೆಲ್ಲ ಟ್ವೀಟ್ ಮಾಡಲಾಗಿದೆ. ’ಟಿಂಕು’ ಎಂಬುವವರು ಟ್ವೀಟ್ ಮಾಡಿ, ಬುರ್ಕಾ ಧರಿಸಿದ ಮಹಿಳೆಯರನ್ನು ಉದ್ದೇಶಿಸಿ, ’ನೋಡಿ ತಮ್ಮ ದಾಖಲೆ ತೋರಿಸಲು ಒಲ್ಲದ ಜನ ಇವರು’ ಎಂದಿದ್ದಾರೆ.(ಇದರ ಆರ್ಕೈವ್ ಇಲ್ಲಿ ಕ್ಲಿಕ್ ಮಾಡಿ)

ಇದನ್ನೂ ಓದಿ: ಗಂಗೂಲಿಯ ಹೃದಯಾಘಾತಕ್ಕೆ ಮರುಗುವ ಮೋದಿಗೆ 60 ಹುತಾತ್ಮ ರೈತರು ಕಾಣುತ್ತಿಲ್ಲ: ಯೋಗೇಂದ್ರ ಯಾದವ್ ಕಿಡಿ

ಇಂಡಿಯಾ ವೈರಲ್’ ಎಂಬ ವೆಬ್‌ಸೈಟಿನಲ್ಲಿ ಈ ಕುರಿತೇ ಒಂದು ಬರಹ ಪ್ರಕಟಿಸಲಾಗಿದ್ದು, ರೈತ ಪ್ರತಿಭಟನೆ ’ಇಸ್ಲಾಮಿಸ್ಟ್‌ಗಳ’ ತೆಕ್ಕೆಗೆ ಹೋಯ್ತು ಎಂದು ಸುಳ್ಳು ಆರೋಪವನ್ನು ಮಾಡಲಾಗಿದೆ. ಬುರ್ಕಾ ಹಾಕಿದವರು ನಿಜವಾಗಿಯೂ ಮಹಿಳೆಯರೇ ಎಂದು ಪ್ರಶ್ನಿಸಿರುವ ಈ ಬರಹದಲ್ಲಿ, ಇಡೀ ಹೋರಾಟವನ್ನು ಅವಹೇಳನ ಮಾಡುವ ದುರುದ್ದೇಶವೇ ತುಂಬಿದೆ.

ಫ್ಯಾಕ್ಟ್‌ಚೆಕ್

ಚಿತ್ರದ ಮೂಲ ಪತ್ತೆ ಮಾಡಿದಾಗ, ಜನವರಿ 14 ರಂದು ’ಇಂಡಿಯಾ ಮುಸ್ಲಿಮ್ಸ್’ ಎನ್ನುವ ಫೇಸ್‌ಬುಕ್ ಪೋಸ್ಟ್‌ನಲ್ಲಿ ಇದು ಪ್ರಕಟವಾಗಿದ್ದು, ಟಿಕ್ರಿ ಗಡಿಯ ಪ್ರತಿಭಟನೆಯಲ್ಲಿ ಮುಸ್ಲಿಮರು ಭಾಗಿ ಎಂದು ಬರೆಯಲಾಗಿದೆ.

ಇದನ್ನೂ ಓದಿ: 2024 ರವರೆಗೂ ಪ್ರತಿಭಟನೆ ಮುಂದುವರಿಸಲು ಸಿದ್ಧರಿದ್ದೇವೆ: ರೈತ ನಾಯಕ ರಾಕೇಶ್ ಟಿಕಾಯತ್

ಭಾರತೀಯ ಕಿಸಾನ್ ಯುನಿಯನ್ (ಬಿಕೆಯು) ಫೇಸ್‌ಬುಕ್ ಪೇಜ್‌ನಲ್ಲೂ ಈ ವಿಷಯ ಪ್ರಸ್ತಾಪ ಮಾಡಲಾಗಿದ್ದು, ಪಂಜಾಬಿನ ಮಲೇರ್‌ಕೊಲ್ಟಾ ಪ್ರದೇಶದ ಮುಸ್ಲಿಂ ಮಹಿಳೆಯರು ಟಿಕ್ರಿ ಗಡಿಯಲ್ಲಿ ರೈತ ಪ್ರತಿಭಟನೆಗೆ ಬೆಂಬಲ ಸೂಚಿಸಿ ಭಾಗಿಯಾಗಿದ್ದರು’ ಎಂದು ತಿಳಿಸಿದೆ. ಅವತ್ತು ಸಭೆಯಲ್ಲೇ ಮುಸ್ಲಿಮರು ರೈತರಿಗಾಗಿ ಪ್ರಾರ್ಥನೆ ಮಾಡಿದರು ಮತ್ತು ಮಾತನಾಡಿದರು ಎಂದು ಬಿಕೆಯು ತಿಳಿಸಿದೆ.

ಜನವರಿ 13 ರ ಟೈಮ್ಸ್ ಆಫ್ ಇಂಡಿಯಾ, ಡಾ. ನಾಸೀರ್ ಅಖ್ತರ್ ಎನ್ನುವವರ ಹೇಳಿಕೆಯನ್ನು ಉಲ್ಲೇಖಿಸಿದ್ದು, ಅಖ್ತರ್ ನೇತೃತ್ವದಲ್ಲಿ ಮಲೇರ್‌ಕೊಲ್ಟಾದ 30 ಮುಸ್ಲಿಂ ಮಹಿಳೆಯರು ರೈತ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು ಎಂದು ವರದಿ ಮಾಡಿದೆ.

ಡಾ. ಅಖ್ತರ್ ಸಿಂಘು ಗಡಿಯಲ್ಲಿ ಒಂದು ಉಚಿತ ಊಟದ ಮನೆ (ಲಂಗರ್) ನಡೆಸುತ್ತಿದ್ದಾರೆ. ಅಖ್ತರ್ ಮತ್ತು ಅವರ ಸಹೋದ್ಯೋಗಿಗಳು ರೈತರಿಗಾಗಿ ನೂರಾರು ವಾಟರ್‌ಪ್ರೂಫ್ ಟೆಂಟುಗಳನ್ನು ನಿರ್ಮಿಸಿದ್ದಾರೆ, ನೂರಕ್ಕೂ ಹೆಚ್ಚು ಹಾಸಿಗೆಗಳ ವ್ಯವಸ್ಥೆ ಮಾಡಿದ್ದಾರೆ.

ಇದನ್ನೂ ಓದಿ: ‘ರೈತ ಮಹಿಳಾ ದಿನ’: ಕೇಂದ್ರಕ್ಕೆ ಬಿಸಿಮುಟ್ಟಿಸಲು ರೈತ ಪುತ್ರಿಯರು ಸಜ್ಜು

ಶಹೀದ್ ತಾಂತ್ರೆ, ಸಾಹಿಲ್ ಎನ್ನುವವರು ಕೂಡ ಈ ಫೋಟೊ, ವಿಡಿಯೋ ಬಳಸಿ ಸಂದೇಶ ಹಾಕಿದ್ದು, ಇದು ಹಿಂದೂ-ಮುಸ್ಲಿಂ-ಸಿಖ್ಖರ ಏಕತೆ ಎಂದು ಬರೆದಿದ್ದಾರೆ.

ಒಟ್ಟಿನಲ್ಲಿ, ಟಿಕ್ರಿ ಗಡಿಯಲ್ಲಿ ಮುಸ್ಲಿಂ ಮಹಿಳೆಯರು ಪ್ರತಿಭಟನೆಯನ್ನು ಬೆಂಬಲಿಸಿ ಭಾಗವಹಿಸಿದ್ದು ಸತ್ಯ. ಆದರೆ ಈ ಫೋಟೊ ಬಳಸಿ ಇಲ್ಲಸಲ್ಲದ ಸುಳ್ಳು ಮಾಹಿತಿ ಹರಡುವ ಯತ್ನ ಮಾಡಲಾಗಿದೆ. ಮೊದಲಿಂದಲೂ ಪ್ರತಿಭಟನೆಯನ್ನು ಮುಸ್ಲಿಮರು ಹೈಜಾಕ್ ಮಾಡಿದ್ದಾರೆ ಎನ್ನುವ ಇತರ ಹಲವು ಸಂದೇಶಗಳು ಆಗಾಗ ಕಂಡುಬಂದಿವೆ.

ಇದನ್ನೂ ಓದಿ: ಕೃಷಿ ನೀತಿ ವಿರೋಧಿ ಹೋರಾಟ: ಪೆರು ದೇಶದ ರೈತರ ಹೋರಾಟಕ್ಕೆ ಜಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....