Homeಚಳವಳಿ’ಇಸ್ಲಾಮಿಸ್ಟ್‌‌ಗಳ ಕೈವಶವಾದ ರೈತ ಹೋರಾಟ’: ಸುಳ್ಳುಸುದ್ದಿ ಹರಡುತ್ತಿರುವ ಬಲಪಂಥೀಯರು

’ಇಸ್ಲಾಮಿಸ್ಟ್‌‌ಗಳ ಕೈವಶವಾದ ರೈತ ಹೋರಾಟ’: ಸುಳ್ಳುಸುದ್ದಿ ಹರಡುತ್ತಿರುವ ಬಲಪಂಥೀಯರು

- Advertisement -
- Advertisement -

ರೈತ ಹೋರಾಟಹೋರಾಟಕ್ಕೂ ’ಮುಸ್ಲಿಂ ಆಂಗಲ್’ ನೀಡುವ ವಿಫಲ ಯತ್ನ ಮಾಡುತ್ತಿದ್ದಾರೆ.

ಪ್ರತಿಭಟನೆಗೆ ಬೆಂಬಲ ನೀಡಲು ಬಂದವರ ಫೋಟೊ ಹಾಕಿ, ’ಪಂಜಾಬಿ ಮಹಿಳೆಯರು ಅದ್ಯಾವಾಗ ಬುರ್ಕಾ ಹಾಕಲು ಆರಂಭಿಸಿದರು?’ ಎಂದೆಲ್ಲ ಟ್ವೀಟ್ ಮಾಡಲಾಗಿದೆ. ’ಟಿಂಕು’ ಎಂಬುವವರು ಟ್ವೀಟ್ ಮಾಡಿ, ಬುರ್ಕಾ ಧರಿಸಿದ ಮಹಿಳೆಯರನ್ನು ಉದ್ದೇಶಿಸಿ, ’ನೋಡಿ ತಮ್ಮ ದಾಖಲೆ ತೋರಿಸಲು ಒಲ್ಲದ ಜನ ಇವರು’ ಎಂದಿದ್ದಾರೆ.(ಇದರ ಆರ್ಕೈವ್ ಇಲ್ಲಿ ಕ್ಲಿಕ್ ಮಾಡಿ)

ಇದನ್ನೂ ಓದಿ: ಗಂಗೂಲಿಯ ಹೃದಯಾಘಾತಕ್ಕೆ ಮರುಗುವ ಮೋದಿಗೆ 60 ಹುತಾತ್ಮ ರೈತರು ಕಾಣುತ್ತಿಲ್ಲ: ಯೋಗೇಂದ್ರ ಯಾದವ್ ಕಿಡಿ

ಇಂಡಿಯಾ ವೈರಲ್’ ಎಂಬ ವೆಬ್‌ಸೈಟಿನಲ್ಲಿ ಈ ಕುರಿತೇ ಒಂದು ಬರಹ ಪ್ರಕಟಿಸಲಾಗಿದ್ದು, ರೈತ ಪ್ರತಿಭಟನೆ ’ಇಸ್ಲಾಮಿಸ್ಟ್‌ಗಳ’ ತೆಕ್ಕೆಗೆ ಹೋಯ್ತು ಎಂದು ಸುಳ್ಳು ಆರೋಪವನ್ನು ಮಾಡಲಾಗಿದೆ. ಬುರ್ಕಾ ಹಾಕಿದವರು ನಿಜವಾಗಿಯೂ ಮಹಿಳೆಯರೇ ಎಂದು ಪ್ರಶ್ನಿಸಿರುವ ಈ ಬರಹದಲ್ಲಿ, ಇಡೀ ಹೋರಾಟವನ್ನು ಅವಹೇಳನ ಮಾಡುವ ದುರುದ್ದೇಶವೇ ತುಂಬಿದೆ.

ಫ್ಯಾಕ್ಟ್‌ಚೆಕ್

ಚಿತ್ರದ ಮೂಲ ಪತ್ತೆ ಮಾಡಿದಾಗ, ಜನವರಿ 14 ರಂದು ’ಇಂಡಿಯಾ ಮುಸ್ಲಿಮ್ಸ್’ ಎನ್ನುವ ಫೇಸ್‌ಬುಕ್ ಪೋಸ್ಟ್‌ನಲ್ಲಿ ಇದು ಪ್ರಕಟವಾಗಿದ್ದು, ಟಿಕ್ರಿ ಗಡಿಯ ಪ್ರತಿಭಟನೆಯಲ್ಲಿ ಮುಸ್ಲಿಮರು ಭಾಗಿ ಎಂದು ಬರೆಯಲಾಗಿದೆ.

ಇದನ್ನೂ ಓದಿ: 2024 ರವರೆಗೂ ಪ್ರತಿಭಟನೆ ಮುಂದುವರಿಸಲು ಸಿದ್ಧರಿದ್ದೇವೆ: ರೈತ ನಾಯಕ ರಾಕೇಶ್ ಟಿಕಾಯತ್

ಭಾರತೀಯ ಕಿಸಾನ್ ಯುನಿಯನ್ (ಬಿಕೆಯು) ಫೇಸ್‌ಬುಕ್ ಪೇಜ್‌ನಲ್ಲೂ ಈ ವಿಷಯ ಪ್ರಸ್ತಾಪ ಮಾಡಲಾಗಿದ್ದು, ಪಂಜಾಬಿನ ಮಲೇರ್‌ಕೊಲ್ಟಾ ಪ್ರದೇಶದ ಮುಸ್ಲಿಂ ಮಹಿಳೆಯರು ಟಿಕ್ರಿ ಗಡಿಯಲ್ಲಿ ರೈತ ಪ್ರತಿಭಟನೆಗೆ ಬೆಂಬಲ ಸೂಚಿಸಿ ಭಾಗಿಯಾಗಿದ್ದರು’ ಎಂದು ತಿಳಿಸಿದೆ. ಅವತ್ತು ಸಭೆಯಲ್ಲೇ ಮುಸ್ಲಿಮರು ರೈತರಿಗಾಗಿ ಪ್ರಾರ್ಥನೆ ಮಾಡಿದರು ಮತ್ತು ಮಾತನಾಡಿದರು ಎಂದು ಬಿಕೆಯು ತಿಳಿಸಿದೆ.

ಜನವರಿ 13 ರ ಟೈಮ್ಸ್ ಆಫ್ ಇಂಡಿಯಾ, ಡಾ. ನಾಸೀರ್ ಅಖ್ತರ್ ಎನ್ನುವವರ ಹೇಳಿಕೆಯನ್ನು ಉಲ್ಲೇಖಿಸಿದ್ದು, ಅಖ್ತರ್ ನೇತೃತ್ವದಲ್ಲಿ ಮಲೇರ್‌ಕೊಲ್ಟಾದ 30 ಮುಸ್ಲಿಂ ಮಹಿಳೆಯರು ರೈತ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು ಎಂದು ವರದಿ ಮಾಡಿದೆ.

ಡಾ. ಅಖ್ತರ್ ಸಿಂಘು ಗಡಿಯಲ್ಲಿ ಒಂದು ಉಚಿತ ಊಟದ ಮನೆ (ಲಂಗರ್) ನಡೆಸುತ್ತಿದ್ದಾರೆ. ಅಖ್ತರ್ ಮತ್ತು ಅವರ ಸಹೋದ್ಯೋಗಿಗಳು ರೈತರಿಗಾಗಿ ನೂರಾರು ವಾಟರ್‌ಪ್ರೂಫ್ ಟೆಂಟುಗಳನ್ನು ನಿರ್ಮಿಸಿದ್ದಾರೆ, ನೂರಕ್ಕೂ ಹೆಚ್ಚು ಹಾಸಿಗೆಗಳ ವ್ಯವಸ್ಥೆ ಮಾಡಿದ್ದಾರೆ.

ಇದನ್ನೂ ಓದಿ: ‘ರೈತ ಮಹಿಳಾ ದಿನ’: ಕೇಂದ್ರಕ್ಕೆ ಬಿಸಿಮುಟ್ಟಿಸಲು ರೈತ ಪುತ್ರಿಯರು ಸಜ್ಜು

ಶಹೀದ್ ತಾಂತ್ರೆ, ಸಾಹಿಲ್ ಎನ್ನುವವರು ಕೂಡ ಈ ಫೋಟೊ, ವಿಡಿಯೋ ಬಳಸಿ ಸಂದೇಶ ಹಾಕಿದ್ದು, ಇದು ಹಿಂದೂ-ಮುಸ್ಲಿಂ-ಸಿಖ್ಖರ ಏಕತೆ ಎಂದು ಬರೆದಿದ್ದಾರೆ.

ಒಟ್ಟಿನಲ್ಲಿ, ಟಿಕ್ರಿ ಗಡಿಯಲ್ಲಿ ಮುಸ್ಲಿಂ ಮಹಿಳೆಯರು ಪ್ರತಿಭಟನೆಯನ್ನು ಬೆಂಬಲಿಸಿ ಭಾಗವಹಿಸಿದ್ದು ಸತ್ಯ. ಆದರೆ ಈ ಫೋಟೊ ಬಳಸಿ ಇಲ್ಲಸಲ್ಲದ ಸುಳ್ಳು ಮಾಹಿತಿ ಹರಡುವ ಯತ್ನ ಮಾಡಲಾಗಿದೆ. ಮೊದಲಿಂದಲೂ ಪ್ರತಿಭಟನೆಯನ್ನು ಮುಸ್ಲಿಮರು ಹೈಜಾಕ್ ಮಾಡಿದ್ದಾರೆ ಎನ್ನುವ ಇತರ ಹಲವು ಸಂದೇಶಗಳು ಆಗಾಗ ಕಂಡುಬಂದಿವೆ.

ಇದನ್ನೂ ಓದಿ: ಕೃಷಿ ನೀತಿ ವಿರೋಧಿ ಹೋರಾಟ: ಪೆರು ದೇಶದ ರೈತರ ಹೋರಾಟಕ್ಕೆ ಜಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...

ಕೊಲ್ಕತ್ತಾದ 26 ಲಕ್ಷ ಮತದಾರರ ಹೆಸರು 2002 ರ ಪಟ್ಟಿಗೆ ಹೊಂದಿಕೆಯಾಗುತ್ತಿಲ್ಲ: ಮುಖ್ಯ ಚುನಾವಣಾ ಅಧಿಕಾರಿ

ಕೋಲ್ಕತ್ತಾ ಮತ್ತು ಸುತ್ತಮುತ್ತಲಿನ ಹಲವಾರು ವಿಧಾನಸಭಾ ಕ್ಷೇತ್ರಗಳ ಮತದಾರರ ಹೆಸರುಗಳು 2002 ರ ಮತದಾರರ ಪಟ್ಟಿಯಲ್ಲಿರುವ ನಮೂದುಗಳಿಗೆ ಹೊಂದಿಕೆಯಾಗುತ್ತಿಲ್ಲ ಎಂದು ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಅಗರ್ವಾಲ್ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ...