Homeಚಳವಳಿ’ಇಸ್ಲಾಮಿಸ್ಟ್‌‌ಗಳ ಕೈವಶವಾದ ರೈತ ಹೋರಾಟ’: ಸುಳ್ಳುಸುದ್ದಿ ಹರಡುತ್ತಿರುವ ಬಲಪಂಥೀಯರು

’ಇಸ್ಲಾಮಿಸ್ಟ್‌‌ಗಳ ಕೈವಶವಾದ ರೈತ ಹೋರಾಟ’: ಸುಳ್ಳುಸುದ್ದಿ ಹರಡುತ್ತಿರುವ ಬಲಪಂಥೀಯರು

- Advertisement -
- Advertisement -

ರೈತ ಹೋರಾಟಹೋರಾಟಕ್ಕೂ ’ಮುಸ್ಲಿಂ ಆಂಗಲ್’ ನೀಡುವ ವಿಫಲ ಯತ್ನ ಮಾಡುತ್ತಿದ್ದಾರೆ.

ಪ್ರತಿಭಟನೆಗೆ ಬೆಂಬಲ ನೀಡಲು ಬಂದವರ ಫೋಟೊ ಹಾಕಿ, ’ಪಂಜಾಬಿ ಮಹಿಳೆಯರು ಅದ್ಯಾವಾಗ ಬುರ್ಕಾ ಹಾಕಲು ಆರಂಭಿಸಿದರು?’ ಎಂದೆಲ್ಲ ಟ್ವೀಟ್ ಮಾಡಲಾಗಿದೆ. ’ಟಿಂಕು’ ಎಂಬುವವರು ಟ್ವೀಟ್ ಮಾಡಿ, ಬುರ್ಕಾ ಧರಿಸಿದ ಮಹಿಳೆಯರನ್ನು ಉದ್ದೇಶಿಸಿ, ’ನೋಡಿ ತಮ್ಮ ದಾಖಲೆ ತೋರಿಸಲು ಒಲ್ಲದ ಜನ ಇವರು’ ಎಂದಿದ್ದಾರೆ.(ಇದರ ಆರ್ಕೈವ್ ಇಲ್ಲಿ ಕ್ಲಿಕ್ ಮಾಡಿ)

ಇದನ್ನೂ ಓದಿ: ಗಂಗೂಲಿಯ ಹೃದಯಾಘಾತಕ್ಕೆ ಮರುಗುವ ಮೋದಿಗೆ 60 ಹುತಾತ್ಮ ರೈತರು ಕಾಣುತ್ತಿಲ್ಲ: ಯೋಗೇಂದ್ರ ಯಾದವ್ ಕಿಡಿ

ಇಂಡಿಯಾ ವೈರಲ್’ ಎಂಬ ವೆಬ್‌ಸೈಟಿನಲ್ಲಿ ಈ ಕುರಿತೇ ಒಂದು ಬರಹ ಪ್ರಕಟಿಸಲಾಗಿದ್ದು, ರೈತ ಪ್ರತಿಭಟನೆ ’ಇಸ್ಲಾಮಿಸ್ಟ್‌ಗಳ’ ತೆಕ್ಕೆಗೆ ಹೋಯ್ತು ಎಂದು ಸುಳ್ಳು ಆರೋಪವನ್ನು ಮಾಡಲಾಗಿದೆ. ಬುರ್ಕಾ ಹಾಕಿದವರು ನಿಜವಾಗಿಯೂ ಮಹಿಳೆಯರೇ ಎಂದು ಪ್ರಶ್ನಿಸಿರುವ ಈ ಬರಹದಲ್ಲಿ, ಇಡೀ ಹೋರಾಟವನ್ನು ಅವಹೇಳನ ಮಾಡುವ ದುರುದ್ದೇಶವೇ ತುಂಬಿದೆ.

ಫ್ಯಾಕ್ಟ್‌ಚೆಕ್

ಚಿತ್ರದ ಮೂಲ ಪತ್ತೆ ಮಾಡಿದಾಗ, ಜನವರಿ 14 ರಂದು ’ಇಂಡಿಯಾ ಮುಸ್ಲಿಮ್ಸ್’ ಎನ್ನುವ ಫೇಸ್‌ಬುಕ್ ಪೋಸ್ಟ್‌ನಲ್ಲಿ ಇದು ಪ್ರಕಟವಾಗಿದ್ದು, ಟಿಕ್ರಿ ಗಡಿಯ ಪ್ರತಿಭಟನೆಯಲ್ಲಿ ಮುಸ್ಲಿಮರು ಭಾಗಿ ಎಂದು ಬರೆಯಲಾಗಿದೆ.

ಇದನ್ನೂ ಓದಿ: 2024 ರವರೆಗೂ ಪ್ರತಿಭಟನೆ ಮುಂದುವರಿಸಲು ಸಿದ್ಧರಿದ್ದೇವೆ: ರೈತ ನಾಯಕ ರಾಕೇಶ್ ಟಿಕಾಯತ್

ಭಾರತೀಯ ಕಿಸಾನ್ ಯುನಿಯನ್ (ಬಿಕೆಯು) ಫೇಸ್‌ಬುಕ್ ಪೇಜ್‌ನಲ್ಲೂ ಈ ವಿಷಯ ಪ್ರಸ್ತಾಪ ಮಾಡಲಾಗಿದ್ದು, ಪಂಜಾಬಿನ ಮಲೇರ್‌ಕೊಲ್ಟಾ ಪ್ರದೇಶದ ಮುಸ್ಲಿಂ ಮಹಿಳೆಯರು ಟಿಕ್ರಿ ಗಡಿಯಲ್ಲಿ ರೈತ ಪ್ರತಿಭಟನೆಗೆ ಬೆಂಬಲ ಸೂಚಿಸಿ ಭಾಗಿಯಾಗಿದ್ದರು’ ಎಂದು ತಿಳಿಸಿದೆ. ಅವತ್ತು ಸಭೆಯಲ್ಲೇ ಮುಸ್ಲಿಮರು ರೈತರಿಗಾಗಿ ಪ್ರಾರ್ಥನೆ ಮಾಡಿದರು ಮತ್ತು ಮಾತನಾಡಿದರು ಎಂದು ಬಿಕೆಯು ತಿಳಿಸಿದೆ.

ಜನವರಿ 13 ರ ಟೈಮ್ಸ್ ಆಫ್ ಇಂಡಿಯಾ, ಡಾ. ನಾಸೀರ್ ಅಖ್ತರ್ ಎನ್ನುವವರ ಹೇಳಿಕೆಯನ್ನು ಉಲ್ಲೇಖಿಸಿದ್ದು, ಅಖ್ತರ್ ನೇತೃತ್ವದಲ್ಲಿ ಮಲೇರ್‌ಕೊಲ್ಟಾದ 30 ಮುಸ್ಲಿಂ ಮಹಿಳೆಯರು ರೈತ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು ಎಂದು ವರದಿ ಮಾಡಿದೆ.

ಡಾ. ಅಖ್ತರ್ ಸಿಂಘು ಗಡಿಯಲ್ಲಿ ಒಂದು ಉಚಿತ ಊಟದ ಮನೆ (ಲಂಗರ್) ನಡೆಸುತ್ತಿದ್ದಾರೆ. ಅಖ್ತರ್ ಮತ್ತು ಅವರ ಸಹೋದ್ಯೋಗಿಗಳು ರೈತರಿಗಾಗಿ ನೂರಾರು ವಾಟರ್‌ಪ್ರೂಫ್ ಟೆಂಟುಗಳನ್ನು ನಿರ್ಮಿಸಿದ್ದಾರೆ, ನೂರಕ್ಕೂ ಹೆಚ್ಚು ಹಾಸಿಗೆಗಳ ವ್ಯವಸ್ಥೆ ಮಾಡಿದ್ದಾರೆ.

ಇದನ್ನೂ ಓದಿ: ‘ರೈತ ಮಹಿಳಾ ದಿನ’: ಕೇಂದ್ರಕ್ಕೆ ಬಿಸಿಮುಟ್ಟಿಸಲು ರೈತ ಪುತ್ರಿಯರು ಸಜ್ಜು

ಶಹೀದ್ ತಾಂತ್ರೆ, ಸಾಹಿಲ್ ಎನ್ನುವವರು ಕೂಡ ಈ ಫೋಟೊ, ವಿಡಿಯೋ ಬಳಸಿ ಸಂದೇಶ ಹಾಕಿದ್ದು, ಇದು ಹಿಂದೂ-ಮುಸ್ಲಿಂ-ಸಿಖ್ಖರ ಏಕತೆ ಎಂದು ಬರೆದಿದ್ದಾರೆ.

ಒಟ್ಟಿನಲ್ಲಿ, ಟಿಕ್ರಿ ಗಡಿಯಲ್ಲಿ ಮುಸ್ಲಿಂ ಮಹಿಳೆಯರು ಪ್ರತಿಭಟನೆಯನ್ನು ಬೆಂಬಲಿಸಿ ಭಾಗವಹಿಸಿದ್ದು ಸತ್ಯ. ಆದರೆ ಈ ಫೋಟೊ ಬಳಸಿ ಇಲ್ಲಸಲ್ಲದ ಸುಳ್ಳು ಮಾಹಿತಿ ಹರಡುವ ಯತ್ನ ಮಾಡಲಾಗಿದೆ. ಮೊದಲಿಂದಲೂ ಪ್ರತಿಭಟನೆಯನ್ನು ಮುಸ್ಲಿಮರು ಹೈಜಾಕ್ ಮಾಡಿದ್ದಾರೆ ಎನ್ನುವ ಇತರ ಹಲವು ಸಂದೇಶಗಳು ಆಗಾಗ ಕಂಡುಬಂದಿವೆ.

ಇದನ್ನೂ ಓದಿ: ಕೃಷಿ ನೀತಿ ವಿರೋಧಿ ಹೋರಾಟ: ಪೆರು ದೇಶದ ರೈತರ ಹೋರಾಟಕ್ಕೆ ಜಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...