Homeಚಳವಳಿ’ಇಸ್ಲಾಮಿಸ್ಟ್‌‌ಗಳ ಕೈವಶವಾದ ರೈತ ಹೋರಾಟ’: ಸುಳ್ಳುಸುದ್ದಿ ಹರಡುತ್ತಿರುವ ಬಲಪಂಥೀಯರು

’ಇಸ್ಲಾಮಿಸ್ಟ್‌‌ಗಳ ಕೈವಶವಾದ ರೈತ ಹೋರಾಟ’: ಸುಳ್ಳುಸುದ್ದಿ ಹರಡುತ್ತಿರುವ ಬಲಪಂಥೀಯರು

- Advertisement -
- Advertisement -

ರೈತ ಹೋರಾಟಹೋರಾಟಕ್ಕೂ ’ಮುಸ್ಲಿಂ ಆಂಗಲ್’ ನೀಡುವ ವಿಫಲ ಯತ್ನ ಮಾಡುತ್ತಿದ್ದಾರೆ.

ಪ್ರತಿಭಟನೆಗೆ ಬೆಂಬಲ ನೀಡಲು ಬಂದವರ ಫೋಟೊ ಹಾಕಿ, ’ಪಂಜಾಬಿ ಮಹಿಳೆಯರು ಅದ್ಯಾವಾಗ ಬುರ್ಕಾ ಹಾಕಲು ಆರಂಭಿಸಿದರು?’ ಎಂದೆಲ್ಲ ಟ್ವೀಟ್ ಮಾಡಲಾಗಿದೆ. ’ಟಿಂಕು’ ಎಂಬುವವರು ಟ್ವೀಟ್ ಮಾಡಿ, ಬುರ್ಕಾ ಧರಿಸಿದ ಮಹಿಳೆಯರನ್ನು ಉದ್ದೇಶಿಸಿ, ’ನೋಡಿ ತಮ್ಮ ದಾಖಲೆ ತೋರಿಸಲು ಒಲ್ಲದ ಜನ ಇವರು’ ಎಂದಿದ್ದಾರೆ.(ಇದರ ಆರ್ಕೈವ್ ಇಲ್ಲಿ ಕ್ಲಿಕ್ ಮಾಡಿ)

ಇದನ್ನೂ ಓದಿ: ಗಂಗೂಲಿಯ ಹೃದಯಾಘಾತಕ್ಕೆ ಮರುಗುವ ಮೋದಿಗೆ 60 ಹುತಾತ್ಮ ರೈತರು ಕಾಣುತ್ತಿಲ್ಲ: ಯೋಗೇಂದ್ರ ಯಾದವ್ ಕಿಡಿ

ಇಂಡಿಯಾ ವೈರಲ್’ ಎಂಬ ವೆಬ್‌ಸೈಟಿನಲ್ಲಿ ಈ ಕುರಿತೇ ಒಂದು ಬರಹ ಪ್ರಕಟಿಸಲಾಗಿದ್ದು, ರೈತ ಪ್ರತಿಭಟನೆ ’ಇಸ್ಲಾಮಿಸ್ಟ್‌ಗಳ’ ತೆಕ್ಕೆಗೆ ಹೋಯ್ತು ಎಂದು ಸುಳ್ಳು ಆರೋಪವನ್ನು ಮಾಡಲಾಗಿದೆ. ಬುರ್ಕಾ ಹಾಕಿದವರು ನಿಜವಾಗಿಯೂ ಮಹಿಳೆಯರೇ ಎಂದು ಪ್ರಶ್ನಿಸಿರುವ ಈ ಬರಹದಲ್ಲಿ, ಇಡೀ ಹೋರಾಟವನ್ನು ಅವಹೇಳನ ಮಾಡುವ ದುರುದ್ದೇಶವೇ ತುಂಬಿದೆ.

ಫ್ಯಾಕ್ಟ್‌ಚೆಕ್

ಚಿತ್ರದ ಮೂಲ ಪತ್ತೆ ಮಾಡಿದಾಗ, ಜನವರಿ 14 ರಂದು ’ಇಂಡಿಯಾ ಮುಸ್ಲಿಮ್ಸ್’ ಎನ್ನುವ ಫೇಸ್‌ಬುಕ್ ಪೋಸ್ಟ್‌ನಲ್ಲಿ ಇದು ಪ್ರಕಟವಾಗಿದ್ದು, ಟಿಕ್ರಿ ಗಡಿಯ ಪ್ರತಿಭಟನೆಯಲ್ಲಿ ಮುಸ್ಲಿಮರು ಭಾಗಿ ಎಂದು ಬರೆಯಲಾಗಿದೆ.

ಇದನ್ನೂ ಓದಿ: 2024 ರವರೆಗೂ ಪ್ರತಿಭಟನೆ ಮುಂದುವರಿಸಲು ಸಿದ್ಧರಿದ್ದೇವೆ: ರೈತ ನಾಯಕ ರಾಕೇಶ್ ಟಿಕಾಯತ್

ಭಾರತೀಯ ಕಿಸಾನ್ ಯುನಿಯನ್ (ಬಿಕೆಯು) ಫೇಸ್‌ಬುಕ್ ಪೇಜ್‌ನಲ್ಲೂ ಈ ವಿಷಯ ಪ್ರಸ್ತಾಪ ಮಾಡಲಾಗಿದ್ದು, ಪಂಜಾಬಿನ ಮಲೇರ್‌ಕೊಲ್ಟಾ ಪ್ರದೇಶದ ಮುಸ್ಲಿಂ ಮಹಿಳೆಯರು ಟಿಕ್ರಿ ಗಡಿಯಲ್ಲಿ ರೈತ ಪ್ರತಿಭಟನೆಗೆ ಬೆಂಬಲ ಸೂಚಿಸಿ ಭಾಗಿಯಾಗಿದ್ದರು’ ಎಂದು ತಿಳಿಸಿದೆ. ಅವತ್ತು ಸಭೆಯಲ್ಲೇ ಮುಸ್ಲಿಮರು ರೈತರಿಗಾಗಿ ಪ್ರಾರ್ಥನೆ ಮಾಡಿದರು ಮತ್ತು ಮಾತನಾಡಿದರು ಎಂದು ಬಿಕೆಯು ತಿಳಿಸಿದೆ.

ಜನವರಿ 13 ರ ಟೈಮ್ಸ್ ಆಫ್ ಇಂಡಿಯಾ, ಡಾ. ನಾಸೀರ್ ಅಖ್ತರ್ ಎನ್ನುವವರ ಹೇಳಿಕೆಯನ್ನು ಉಲ್ಲೇಖಿಸಿದ್ದು, ಅಖ್ತರ್ ನೇತೃತ್ವದಲ್ಲಿ ಮಲೇರ್‌ಕೊಲ್ಟಾದ 30 ಮುಸ್ಲಿಂ ಮಹಿಳೆಯರು ರೈತ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು ಎಂದು ವರದಿ ಮಾಡಿದೆ.

ಡಾ. ಅಖ್ತರ್ ಸಿಂಘು ಗಡಿಯಲ್ಲಿ ಒಂದು ಉಚಿತ ಊಟದ ಮನೆ (ಲಂಗರ್) ನಡೆಸುತ್ತಿದ್ದಾರೆ. ಅಖ್ತರ್ ಮತ್ತು ಅವರ ಸಹೋದ್ಯೋಗಿಗಳು ರೈತರಿಗಾಗಿ ನೂರಾರು ವಾಟರ್‌ಪ್ರೂಫ್ ಟೆಂಟುಗಳನ್ನು ನಿರ್ಮಿಸಿದ್ದಾರೆ, ನೂರಕ್ಕೂ ಹೆಚ್ಚು ಹಾಸಿಗೆಗಳ ವ್ಯವಸ್ಥೆ ಮಾಡಿದ್ದಾರೆ.

ಇದನ್ನೂ ಓದಿ: ‘ರೈತ ಮಹಿಳಾ ದಿನ’: ಕೇಂದ್ರಕ್ಕೆ ಬಿಸಿಮುಟ್ಟಿಸಲು ರೈತ ಪುತ್ರಿಯರು ಸಜ್ಜು

ಶಹೀದ್ ತಾಂತ್ರೆ, ಸಾಹಿಲ್ ಎನ್ನುವವರು ಕೂಡ ಈ ಫೋಟೊ, ವಿಡಿಯೋ ಬಳಸಿ ಸಂದೇಶ ಹಾಕಿದ್ದು, ಇದು ಹಿಂದೂ-ಮುಸ್ಲಿಂ-ಸಿಖ್ಖರ ಏಕತೆ ಎಂದು ಬರೆದಿದ್ದಾರೆ.

ಒಟ್ಟಿನಲ್ಲಿ, ಟಿಕ್ರಿ ಗಡಿಯಲ್ಲಿ ಮುಸ್ಲಿಂ ಮಹಿಳೆಯರು ಪ್ರತಿಭಟನೆಯನ್ನು ಬೆಂಬಲಿಸಿ ಭಾಗವಹಿಸಿದ್ದು ಸತ್ಯ. ಆದರೆ ಈ ಫೋಟೊ ಬಳಸಿ ಇಲ್ಲಸಲ್ಲದ ಸುಳ್ಳು ಮಾಹಿತಿ ಹರಡುವ ಯತ್ನ ಮಾಡಲಾಗಿದೆ. ಮೊದಲಿಂದಲೂ ಪ್ರತಿಭಟನೆಯನ್ನು ಮುಸ್ಲಿಮರು ಹೈಜಾಕ್ ಮಾಡಿದ್ದಾರೆ ಎನ್ನುವ ಇತರ ಹಲವು ಸಂದೇಶಗಳು ಆಗಾಗ ಕಂಡುಬಂದಿವೆ.

ಇದನ್ನೂ ಓದಿ: ಕೃಷಿ ನೀತಿ ವಿರೋಧಿ ಹೋರಾಟ: ಪೆರು ದೇಶದ ರೈತರ ಹೋರಾಟಕ್ಕೆ ಜಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...