Homeಚಳವಳಿ’ಇಸ್ಲಾಮಿಸ್ಟ್‌‌ಗಳ ಕೈವಶವಾದ ರೈತ ಹೋರಾಟ’: ಸುಳ್ಳುಸುದ್ದಿ ಹರಡುತ್ತಿರುವ ಬಲಪಂಥೀಯರು

’ಇಸ್ಲಾಮಿಸ್ಟ್‌‌ಗಳ ಕೈವಶವಾದ ರೈತ ಹೋರಾಟ’: ಸುಳ್ಳುಸುದ್ದಿ ಹರಡುತ್ತಿರುವ ಬಲಪಂಥೀಯರು

- Advertisement -
- Advertisement -

ರೈತ ಹೋರಾಟಹೋರಾಟಕ್ಕೂ ’ಮುಸ್ಲಿಂ ಆಂಗಲ್’ ನೀಡುವ ವಿಫಲ ಯತ್ನ ಮಾಡುತ್ತಿದ್ದಾರೆ.

ಪ್ರತಿಭಟನೆಗೆ ಬೆಂಬಲ ನೀಡಲು ಬಂದವರ ಫೋಟೊ ಹಾಕಿ, ’ಪಂಜಾಬಿ ಮಹಿಳೆಯರು ಅದ್ಯಾವಾಗ ಬುರ್ಕಾ ಹಾಕಲು ಆರಂಭಿಸಿದರು?’ ಎಂದೆಲ್ಲ ಟ್ವೀಟ್ ಮಾಡಲಾಗಿದೆ. ’ಟಿಂಕು’ ಎಂಬುವವರು ಟ್ವೀಟ್ ಮಾಡಿ, ಬುರ್ಕಾ ಧರಿಸಿದ ಮಹಿಳೆಯರನ್ನು ಉದ್ದೇಶಿಸಿ, ’ನೋಡಿ ತಮ್ಮ ದಾಖಲೆ ತೋರಿಸಲು ಒಲ್ಲದ ಜನ ಇವರು’ ಎಂದಿದ್ದಾರೆ.(ಇದರ ಆರ್ಕೈವ್ ಇಲ್ಲಿ ಕ್ಲಿಕ್ ಮಾಡಿ)

ಇದನ್ನೂ ಓದಿ: ಗಂಗೂಲಿಯ ಹೃದಯಾಘಾತಕ್ಕೆ ಮರುಗುವ ಮೋದಿಗೆ 60 ಹುತಾತ್ಮ ರೈತರು ಕಾಣುತ್ತಿಲ್ಲ: ಯೋಗೇಂದ್ರ ಯಾದವ್ ಕಿಡಿ

ಇಂಡಿಯಾ ವೈರಲ್’ ಎಂಬ ವೆಬ್‌ಸೈಟಿನಲ್ಲಿ ಈ ಕುರಿತೇ ಒಂದು ಬರಹ ಪ್ರಕಟಿಸಲಾಗಿದ್ದು, ರೈತ ಪ್ರತಿಭಟನೆ ’ಇಸ್ಲಾಮಿಸ್ಟ್‌ಗಳ’ ತೆಕ್ಕೆಗೆ ಹೋಯ್ತು ಎಂದು ಸುಳ್ಳು ಆರೋಪವನ್ನು ಮಾಡಲಾಗಿದೆ. ಬುರ್ಕಾ ಹಾಕಿದವರು ನಿಜವಾಗಿಯೂ ಮಹಿಳೆಯರೇ ಎಂದು ಪ್ರಶ್ನಿಸಿರುವ ಈ ಬರಹದಲ್ಲಿ, ಇಡೀ ಹೋರಾಟವನ್ನು ಅವಹೇಳನ ಮಾಡುವ ದುರುದ್ದೇಶವೇ ತುಂಬಿದೆ.

ಫ್ಯಾಕ್ಟ್‌ಚೆಕ್

ಚಿತ್ರದ ಮೂಲ ಪತ್ತೆ ಮಾಡಿದಾಗ, ಜನವರಿ 14 ರಂದು ’ಇಂಡಿಯಾ ಮುಸ್ಲಿಮ್ಸ್’ ಎನ್ನುವ ಫೇಸ್‌ಬುಕ್ ಪೋಸ್ಟ್‌ನಲ್ಲಿ ಇದು ಪ್ರಕಟವಾಗಿದ್ದು, ಟಿಕ್ರಿ ಗಡಿಯ ಪ್ರತಿಭಟನೆಯಲ್ಲಿ ಮುಸ್ಲಿಮರು ಭಾಗಿ ಎಂದು ಬರೆಯಲಾಗಿದೆ.

ಇದನ್ನೂ ಓದಿ: 2024 ರವರೆಗೂ ಪ್ರತಿಭಟನೆ ಮುಂದುವರಿಸಲು ಸಿದ್ಧರಿದ್ದೇವೆ: ರೈತ ನಾಯಕ ರಾಕೇಶ್ ಟಿಕಾಯತ್

ಭಾರತೀಯ ಕಿಸಾನ್ ಯುನಿಯನ್ (ಬಿಕೆಯು) ಫೇಸ್‌ಬುಕ್ ಪೇಜ್‌ನಲ್ಲೂ ಈ ವಿಷಯ ಪ್ರಸ್ತಾಪ ಮಾಡಲಾಗಿದ್ದು, ಪಂಜಾಬಿನ ಮಲೇರ್‌ಕೊಲ್ಟಾ ಪ್ರದೇಶದ ಮುಸ್ಲಿಂ ಮಹಿಳೆಯರು ಟಿಕ್ರಿ ಗಡಿಯಲ್ಲಿ ರೈತ ಪ್ರತಿಭಟನೆಗೆ ಬೆಂಬಲ ಸೂಚಿಸಿ ಭಾಗಿಯಾಗಿದ್ದರು’ ಎಂದು ತಿಳಿಸಿದೆ. ಅವತ್ತು ಸಭೆಯಲ್ಲೇ ಮುಸ್ಲಿಮರು ರೈತರಿಗಾಗಿ ಪ್ರಾರ್ಥನೆ ಮಾಡಿದರು ಮತ್ತು ಮಾತನಾಡಿದರು ಎಂದು ಬಿಕೆಯು ತಿಳಿಸಿದೆ.

ಜನವರಿ 13 ರ ಟೈಮ್ಸ್ ಆಫ್ ಇಂಡಿಯಾ, ಡಾ. ನಾಸೀರ್ ಅಖ್ತರ್ ಎನ್ನುವವರ ಹೇಳಿಕೆಯನ್ನು ಉಲ್ಲೇಖಿಸಿದ್ದು, ಅಖ್ತರ್ ನೇತೃತ್ವದಲ್ಲಿ ಮಲೇರ್‌ಕೊಲ್ಟಾದ 30 ಮುಸ್ಲಿಂ ಮಹಿಳೆಯರು ರೈತ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು ಎಂದು ವರದಿ ಮಾಡಿದೆ.

ಡಾ. ಅಖ್ತರ್ ಸಿಂಘು ಗಡಿಯಲ್ಲಿ ಒಂದು ಉಚಿತ ಊಟದ ಮನೆ (ಲಂಗರ್) ನಡೆಸುತ್ತಿದ್ದಾರೆ. ಅಖ್ತರ್ ಮತ್ತು ಅವರ ಸಹೋದ್ಯೋಗಿಗಳು ರೈತರಿಗಾಗಿ ನೂರಾರು ವಾಟರ್‌ಪ್ರೂಫ್ ಟೆಂಟುಗಳನ್ನು ನಿರ್ಮಿಸಿದ್ದಾರೆ, ನೂರಕ್ಕೂ ಹೆಚ್ಚು ಹಾಸಿಗೆಗಳ ವ್ಯವಸ್ಥೆ ಮಾಡಿದ್ದಾರೆ.

ಇದನ್ನೂ ಓದಿ: ‘ರೈತ ಮಹಿಳಾ ದಿನ’: ಕೇಂದ್ರಕ್ಕೆ ಬಿಸಿಮುಟ್ಟಿಸಲು ರೈತ ಪುತ್ರಿಯರು ಸಜ್ಜು

ಶಹೀದ್ ತಾಂತ್ರೆ, ಸಾಹಿಲ್ ಎನ್ನುವವರು ಕೂಡ ಈ ಫೋಟೊ, ವಿಡಿಯೋ ಬಳಸಿ ಸಂದೇಶ ಹಾಕಿದ್ದು, ಇದು ಹಿಂದೂ-ಮುಸ್ಲಿಂ-ಸಿಖ್ಖರ ಏಕತೆ ಎಂದು ಬರೆದಿದ್ದಾರೆ.

ಒಟ್ಟಿನಲ್ಲಿ, ಟಿಕ್ರಿ ಗಡಿಯಲ್ಲಿ ಮುಸ್ಲಿಂ ಮಹಿಳೆಯರು ಪ್ರತಿಭಟನೆಯನ್ನು ಬೆಂಬಲಿಸಿ ಭಾಗವಹಿಸಿದ್ದು ಸತ್ಯ. ಆದರೆ ಈ ಫೋಟೊ ಬಳಸಿ ಇಲ್ಲಸಲ್ಲದ ಸುಳ್ಳು ಮಾಹಿತಿ ಹರಡುವ ಯತ್ನ ಮಾಡಲಾಗಿದೆ. ಮೊದಲಿಂದಲೂ ಪ್ರತಿಭಟನೆಯನ್ನು ಮುಸ್ಲಿಮರು ಹೈಜಾಕ್ ಮಾಡಿದ್ದಾರೆ ಎನ್ನುವ ಇತರ ಹಲವು ಸಂದೇಶಗಳು ಆಗಾಗ ಕಂಡುಬಂದಿವೆ.

ಇದನ್ನೂ ಓದಿ: ಕೃಷಿ ನೀತಿ ವಿರೋಧಿ ಹೋರಾಟ: ಪೆರು ದೇಶದ ರೈತರ ಹೋರಾಟಕ್ಕೆ ಜಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಬಿಹಾರ: ಬಹುಜನ ಸಮುದಾಯಗಳಲ್ಲಿ ಉನ್ನತ ಶಿಕ್ಷಣವನ್ನು ಉತ್ತೇಜಿಸುವ ನಿಟ್ಟಿನಲ್ಲಿ ಬೋಧ್ ಗಯಾದಲ್ಲಿ ಬಹುಜನ ವಿದ್ವಾಂಸರ ಸಮ್ಮೇಳನ

ಭಾರತದ ಪ್ರಮುಖ ವಿಶ್ವವಿದ್ಯಾಲಯಗಳ ವಿದ್ವಾಂಸರು, ಶಿಕ್ಷಣ ತಜ್ಞರು ಮತ್ತು ಸಾಮಾಜಿಕ ಕಾರ್ಯಕರ್ತರು ಬೋಧ್ ಗಯಾದಲ್ಲಿ ಒಟ್ಟುಗೂಡಿ ಬಹುಜನ ಸಮುದಾಯಕ್ಕೆ ಸಮಾನತೆ ಮತ್ತು ಸಾಮಾಜಿಕ ಪರಿವರ್ತನೆಯನ್ನು ಮುನ್ನಡೆಸುವಲ್ಲಿ ಉನ್ನತ ಶಿಕ್ಷಣದ ಪಾತ್ರದ ಕುರಿತು ಚರ್ಚಿಸಿದರು. ಫೆಬ್ರವರಿ...

ಭಾರತೀಯ ಬಿಷಪ್‌ಗಳ ಸಂಸ್ಥೆಯ ಮುಖ್ಯಸ್ಥರಾಗಿ ದಲಿತ ಕಾರ್ಡಿನಲ್ ಪೂಲಾ ಆಯ್ಕೆ

ಭಾರತೀಯ ಬಿಷಪ್‌ಗಳ ಸಂಸ್ಥೆಯ ಮುಖ್ಯಸ್ಥರಾಗಿ ದಲಿತ ಕಾರ್ಡಿನಲ್ ಪೂಲಾ ಅವರು ಆಯ್ಕೆಯಾಗಿದ್ದಾರೆ. ಭಾರತದ ಕ್ಯಾಥೋಲಿಕ್‌ಗಳಲ್ಲಿ ಸುಮಾರು ಮೂರನೇ ಎರಡರಷ್ಟು ಜನಸಂಖ್ಯೆ ದಲಿತರೇ ಇದ್ದಾರೆ ಎಂದು ನಂಬಲಾಗಿದ್ದರೂ, ಅವರು ಧಾರ್ಮಿಕ ಆಚರಣೆ ಮತ್ತು ಬಿಷಪ್‌...

ಪಶ್ಚಿಮ ಬಂಗಾಳ ಎಸ್‌ಐಆರ್ ಗಡುವು ವಿಸ್ತರಿಸಲು ಸುಪ್ರೀಂ ಕೋರ್ಟ್ ನಿರ್ದೇಶನ

ಪಶ್ಚಿಮ ಬಂಗಾಳದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.9) ಹಲವಾರು ನಿರ್ದೇಶನಗಳನ್ನು ನೀಡಿದೆ. ಚುನಾವಣಾ ಆಯೋಗವು ನಿಯೋಜಿಸಿರುವ ಮೈಕ್ರೋ-ಅಬ್ಸರ್ವರ್‌ಗಳ (ಸೂಕ್ಷ್ಮ ವೀಕ್ಷಕರು) ಬದಲಿಗೆ ಗ್ರೂಪ್...

ಮುಸ್ಲಿಮರಿಗೆ ಗುಂಡಿಕ್ಕುವಂತೆ ವಿಡಿಯೋ ಹಂಚಿಕೆ: ಅಸ್ಸಾಂ ಸಿಎಂ ವಿರುದ್ಧ ಓವೈಸಿ ದೂರು: ದ್ವೇಷ ಭಾಷಣ ಆದೇಶ ಉಲ್ಲೇಖ 

ಅಸ್ಸಾಂ ಬಿಜೆಪಿ ಘಟಕದ ಅಧಿಕೃತ 'ಎಕ್ಸ್' ಹ್ಯಾಂಡಲ್‌ನಲ್ಲಿ ಪೋಸ್ಟ್ ಮಾಡಲಾದ ಮತ್ತು ಈಗ ಅಳಿಸಲಾದ ವೀಡಿಯೊದಲ್ಲಿ, ಮುಸ್ಲಿಮರ ಮೇಲೆ ಸಾಂಕೇತಿಕವಾಗಿ ಗುಂಡು ಹಾರಿಸುತ್ತಿರುವುದನ್ನು ತೋರಿಸಲಾಗಿದೆ ಎಂದು ಆರೋಪಿಸಿ ಹಿಮಂತ ಬಿಸ್ವಾ ಶರ್ಮಾ ವಿರುದ್ಧ...

ನರವಾಣೆ ಪುಸ್ತಕಕ್ಕೆ ಹೆದರಿ ಪ್ರಧಾನಿ ಲೋಕಸಭೆಗೆ ಬರುತ್ತಿಲ್ಲ : ರಾಹುಲ್ ಗಾಂಧಿ

ಪ್ರತಿಪಕ್ಷಗಳು ಎತ್ತಿರುವ ವಿಷಯಗಳಿಂದ, ವಿಶೇಷವಾಗಿ ಮಾಜಿ ಸೇನಾ ಮುಖ್ಯಸ್ಥ ಎಂ.ಎಂ ನರವಾಣೆ ಅವರ ಪುಸ್ತಕದ ವಿಚಾರಕ್ಕೆ ಪ್ರಧಾನಿ ನರೇಂದ್ರ ಮೋದಿ ಭಯಗೊಂಡಿದ್ದಾರೆ. ಹಾಗಾಗಿ, ಅವರು ರಾಷ್ಟ್ರಪತಿಯ ಭಾಷಣದ ವಂದನಾ ನಿರ್ಣಯದ ಮೇಲಿನ ಚರ್ಚೆಗೆ...

ಡಿಜಿಟಲ್ ‘ಡಕಾಯಿತಿ’: 54,000 ಕೋಟಿಗೂ ಹೆಚ್ಚಿನ ಹಣ ವಂಚನೆ: ಎಸ್‌ಒಪಿ ರಚಿಸಲು ಕೇಂದ್ರಕ್ಕೆ ಸೂಚನೆ ನೀಡಿದ ಸುಪ್ರೀಂ

ನವದೆಹಲಿ: ಡಿಜಿಟಲ್ ವಂಚನೆಯಿಂದ 54,000 ಕೋಟಿ ರೂ.ಗಳಿಗೂ ಹೆಚ್ಚು ಹಣವನ್ನು ವಂಚಿಸುವುದು ಸಂಪೂರ್ಣ "ದರೋಡೆ ಅಥವಾ ಡಕಾಯಿತಿ" ಎಂದು ಸುಪ್ರೀಂ ಕೋರ್ಟ್ ಸೋಮವಾರ ಬಣ್ಣಿಸಿದೆ ಮತ್ತು ಅಂತಹ ಪ್ರಕರಣಗಳನ್ನು ನಿಭಾಯಿಸಲು ಆರ್‌ಬಿಐ, ಬ್ಯಾಂಕುಗಳು...

ಪಾಕಿಸ್ತಾನ ನಂಟು : ಸಿಎಂ ಶರ್ಮಾ ಆರೋಪ ನಿರಾಧಾರ, ಸಿ-ಗ್ರೇಡ್ ಸಿನಿಮಾ ಎಂದ ಗೌರವ್ ಗೊಗೊಯ್

ತಮಗೂ ಪಾಕಿಸ್ತಾನಕ್ಕೂ ಸಂಬಂಧವಿದೆ ಎಂಬ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಅವರ ಆರೋಪಗಳನ್ನು ಅಸ್ಸಾಂ ಕಾಂಗ್ರೆಸ್ ಅಧ್ಯಕ್ಷ ಗೌರವ್ ಗೊಗೊಯ್ ತಳ್ಳಿಹಾಕಿದ್ದು, ಎಸ್‌ಐಟಿ ವರದಿಯು ಕಳೆದ ಆರು ತಿಂಗಳಿನಿಂದ ಮುಖ್ಯಮಂತ್ರಿ ಬಳಿಯೇ ಇದೆ....

ಪಂಜಾಬ್: ತರಗತಿಯೊಳಗೆ ವಿದ್ಯಾರ್ಥಿನಿಯನ್ನು ಕೊಂದು, ತಾನು ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ಕಾನೂನು ವಿದ್ಯಾರ್ಥಿ

ಚಂಡೀಗಢ: ಪಂಜಾಬ್‌ನ ತರ್ನ್ ತರಣ್ ಜಿಲ್ಲೆಯಲ್ಲಿ ಕಾನೂನು ವಿದ್ಯಾರ್ಥಿಯೊಬ್ಬ ಶಾಲಾ ಕೋಣೆಯೊಳಗೆ ವಿದ್ಯಾರ್ಥಿನಿಯ ತಲೆಗೆ ಗುಂಡು ಹಾರಿಸಿ ಕೊಂದ ಘಟನೆ ಸೋಮವಾರ ನಡೆದಿದೆ. ಸಹಪಾಠಿಗಳು ಭಯಭೀತರಾಗಿ ನೋಡುತ್ತಿದ್ದ ವೇಳೆ ಈ ಘಟನೆ ನಡೆದಿದೆ. ವಿದ್ಯಾರ್ಥಿನಿಯನ್ನು...

ಅಸ್ಸಾಂ ಸಿಎಂ ಮುಸ್ಲಿಮರ ವಿರುದ್ಧ ನರಮೇಧವನ್ನು ಪ್ರಚೋದಿಸುತ್ತಿದ್ದಾರೆ : ಗೌರವ್ ಗೊಗೊಯ್

ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಅವರು ಮುಸ್ಲಿಮರ ವಿರುದ್ದ ದ್ವೇಷ ಹರಡುತ್ತಿದ್ದಾರೆ, ಅವರ ಜನಾಂಗೀಯ ಹತ್ಯೆಗೆ ಪ್ರಚೋದಿಸುತ್ತಿದ್ದಾರೆ ಎಂದು ಅಸ್ಸಾಂ ರಾಜ್ಯ ಕಾಂಗ್ರೆಸ್‌ ಘಟಕದ ಅಧ್ಯಕ್ಷ ಹಾಗೂ ಸಂಸದ ಗೌರವ್ ಗೊಗೊಯ್ ಹೇಳಿದ್ದಾರೆ. ಅಸ್ಸಾಂ...

‘ಎಂಡಿಎಂಎ ಡ್ರಗ್ಸ್ ಕೇಂದ್ರವಾಗಿ ಮಾರ್ಪಟ್ಟ ಮಧ್ಯಪ್ರದೇಶ-ರಾಜಸ್ಥಾನ ಗಡಿ’: 13ಕೋಟಿ ಮೌಲ್ಯದ ಡ್ರಗ್ಸ್ ವಶಕ್ಕೆ ಪಡೆದ ಪೊಲೀಸರು. 

ಭೋಪಾಲ್: ದೇಶದ ಅಫೀಮು ಕೃಷಿ ಮತ್ತು ಕಳ್ಳಸಾಗಣೆ ಮಾರ್ಗವಾಗಿ ದೀರ್ಘಕಾಲದಿಂದ ಕುಖ್ಯಾತಿ ಗಳಿಸಿರುವ ಪಶ್ಚಿಮ ಮಧ್ಯಪ್ರದೇಶ ಮತ್ತು ಪಕ್ಕದ ಆಗ್ನೇಯ ರಾಜಸ್ಥಾನದ ಜಿಲ್ಲೆಗಳು ಈಗ MDMA ಸಂಶ್ಲೇಷಿತ ಡ್ರಗ್ಸ್ ಅಕ್ರಮ ಉತ್ಪಾದನೆ ಮತ್ತು...