Homeಮುಖಪುಟರೈತ ಹೋರಾಟದ ನಡುವೆ ಎಮ್‌ಎಸ್‌ಪಿ ನೀಡುವುದಾಗಿ ಭರವಸೆ ನೀಡಿದ ಕೇಂದ್ರ ಸರ್ಕಾರ

ರೈತ ಹೋರಾಟದ ನಡುವೆ ಎಮ್‌ಎಸ್‌ಪಿ ನೀಡುವುದಾಗಿ ಭರವಸೆ ನೀಡಿದ ಕೇಂದ್ರ ಸರ್ಕಾರ

- Advertisement -
- Advertisement -

ತಮ್ಮ ಬೆಲೆಗಳಿಗೆ ಎಂಎಸ್‌ಪಿ ಖಾತರಿ ನೀಡುವ ಕಾನೂನು ರಚಿಸಬೇಕು ಎಂಬ ಬೇಡಿಕೆ ಸೇರಿದಂತೆ ಹಲವು ಬೇಡಿಕೆಗಳನ್ನು ಮುಂದಿಟ್ಟು ರೈತರು ದೆಹಲಿಗೆ ಪಾದಯಾತ್ರೆ ಆರಂಭಿಸಿರುವ ನಡುವೆ, ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು ಸರ್ಕಾರವು ಎಲ್ಲಾ ಕೃಷಿ ಉತ್ಪನ್ನಗಳನ್ನು ಕನಿಷ್ಠ ಬೆಂಬಲ ಬೆಲೆಯಲ್ಲಿ ಖರೀದಿಸಲಿದೆ ಎಂದು ಹೇಳಿದ್ದಾರೆ. ಪ್ರಶ್ನೋತ್ತರ ವೇಳೆಯಲ್ಲಿ ಮಾತನಾಡಿದ ಅವರು, ರೈತರ ಎಮ್‌ಎಸ್‌ಪಿ ಸಮಸ್ಯೆಗೆ ಪೂರಕವಾಗಿ ಉತ್ತರಿಸಿದ ಅವರು ಈ ಭರವಸೆ ನೀಡಿದ್ದಾರೆ. ರೈತ ಹೋರಾಟದ

“ರೈತರ ಎಲ್ಲಾ ಉತ್ಪನ್ನಗಳನ್ನು ಕನಿಷ್ಠ ಬೆಂಬಲ ಬೆಲೆಯಲ್ಲಿ ಖರೀದಿಸಲಾಗುವುದು ಎಂದು ನಾನು ನಿಮ್ಮ ಮೂಲಕ ಸದನಕ್ಕೆ ಭರವಸೆ ನೀಡಲು ಬಯಸುತ್ತೇನೆ. ಇದು ಮೋದಿ ಸರ್ಕಾರ ಮತ್ತು ಮೋದಿ ಅವರ ಭರವಸೆಯನ್ನು ಪೂರೈಸುವ ಭರವಸೆ” ಎಂದು ಚೌಹಾಣ್ ಹೇಳಿದ್ದಾರೆ.

ವಿಪಕ್ಷಗಳನ್ನು ಉಲ್ಲೇಖಿಸಿದ ಅವರು, ನಮ್ಮ ಮಿತ್ರರು ಅಧಿಕಾರದಲ್ಲಿದ್ದಾಗ ಎಂಎಸ್ ಸ್ವಾಮಿನಾಥನ್ ಆಯೋಗದ ಶಿಫಾರಸುಗಳನ್ನು ಒಪ್ಪಲು ಸಾಧ್ಯವಿಲ್ಲ ಎಂದು ದಾಖಲೆ ಸಮೇತ ಹೇಳಿಕೆ ನೀಡಿದ್ದರು. ಅದರಲ್ಲೂ ಉತ್ಪನ್ನದ ವೆಚ್ಚಕ್ಕಿಂತ ಶೇ.50ರಷ್ಟು ಹೆಚ್ಚು ನೀಡುವ ಕುರಿತು ನನ್ನ ಬಳಿ ದಾಖಲೆ ಇದೆ ಎಂದು ಅವರು ಹೇಳಿದ್ದಾರೆ. ಅವರು ತಮ್ಮ ಪ್ರತಿಪಾದನೆಯನ್ನು ಬೆಂಬಲಿಸಲು ಮಾಜಿ ಕೃಷಿ ಸಚಿವ ಕಾಂತಿಲಾಲ್ ಭೂರಿಯಾ, ಕೃಷಿ ಮಂತ್ರಿಗಳಾದ ಶರದ್ ಪವಾರ್ ಮತ್ತು ಕೆ.ವಿ. ಥಾಮಸ್ ಅವರನ್ನು ಉಲ್ಲೇಖಿಸಿದ್ದಾರೆ. ರೈತ ಹೋರಾಟದ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಅವರ ಈ ಹೇಳಿಕೆಗಳ ನಂತರ, ರಾಜ್ಯಸಭಾ ಸ್ಪೀಕರ್ ಜಗದೀಪ್ ಧಂಖರ್ ಅವರು, ಈ ಹೇಳಿಕೆಯ ದೃಢೀಕರಣಕ್ಕಾಗಿ ದಾಖಲೆಗಳನ್ನು ದಾಖಲಿಸುವಂತೆ ಕೇಳಿಕೊಂಡರು. ಅದನ್ನು ಸಚಿವ ಚೌಹಾಣ್ ಒಪ್ಪಿಕೊಂಡರು.

“ಅವರು ಎಂದಿಗೂ ರೈತರನ್ನು ಗೌರವಿಸಿಲ್ಲ ಮತ್ತು ಲಾಭದಾಯಕ ಬೆಲೆಗಳ ರೈತರ ಬೇಡಿಕೆಗಳನ್ನು ಎಂದಿಗೂ ಗಂಭೀರವಾಗಿ ಪರಿಗಣಿಸಿಲ್ಲ. 2019 ರಿಂದ ಪ್ರಧಾನಿ ನರೇಂದ್ರ ಮೋದಿ ಅವರು  50% ದಷ್ಟು ಲಾಭವನ್ನು ನೀಡುವ ಮೂಲಕ ರೈತರಿಗೆ ಉತ್ಪಾದನಾ ವೆಚ್ಚದ ಮೇಲೆ ಕನಿಷ್ಠ ಬೆಂಬಲ ಬೆಲೆಯನ್ನು ಲೆಕ್ಕ ಹಾಕಲು ನಿರ್ಧರಿಸಿದ್ದಾರೆ ಎಂದು ನಾನು ನಿಮ್ಮ ಮೂಲಕ ಸದನಕ್ಕೆ ಭರವಸೆ ನೀಡಲು ಬಯಸುತ್ತೇನೆ” ಎಂದು ಸಚಿವ ಚೌಹಾಣ್ ಪ್ರತಿಪಾದಿಸಿದ್ದಾರೆ.

ಮೋದಿ ಸರ್ಕಾರ ಈಗಾಗಲೇ ರೈತರಿಗೆ ಲಾಭದಾಯಕ ಬೆಲೆಗಳನ್ನು ನೀಡುತ್ತಿದೆ ಎಂದ ಅವರು, ಭತ್ತ, ಗೋಧಿ, ಜೋಳ, ಸೋಯಾಬೀನ್ ಅನ್ನು ಮೂರು ವರ್ಷಗಳ ಹಿಂದಿನ ಉತ್ಪಾದನಾ ವೆಚ್ಚದ 50%ಕ್ಕಿಂತ ಹೆಚ್ಚು ಬೆಲೆಯಲ್ಲಿ ಖರೀದಿಸಲಾಗುತ್ತಿದೆ ಎಂದು ಹೇಳಿದ್ದಾರೆ. ಸರಕುಗಳ ದರಗಳು ಕುಸಿದಾಗಲೆಲ್ಲಾ ರಫ್ತು ಸುಂಕಗಳು ಮತ್ತು ಬೆಲೆಗಳನ್ನು ಬದಲಾಯಿಸುವಲ್ಲಿ ಸರ್ಕಾರ ಹಸ್ತಕ್ಷೇಪ ನಡೆಸಿದೆ ಎಂದು ಅವರು ಉಲ್ಲೇಖಿಸಿದ್ದಾರೆ.

ಕೃಷಿ ಸಾಲ ಮನ್ನಾ ನೀತಿಯ ಚೌಕಟ್ಟನ್ನು ರಚಿಸಲು ಸರ್ಕಾರ ಪರಿಗಣಿಸುತ್ತಿದೆಯೇ ಎಂಬ ಆರ್‌ಜೆಡಿ ಸಂಸದ ಮನೋಜ್ ಕುಮಾರ್ ಝಾ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವ ಚೌಹಾಣ್, ಅದರ ಬದಲಿಗೆ ರೈತರ ಆದಾಯವನ್ನು ಹೆಚ್ಚಿಸಲು ಸರ್ಕಾರ ಕೆಲಸ ಮಾಡುತ್ತಿದೆ ಎಂದು ಹೇಳಿದ್ದಾರೆ. “ನಾವು ರೈತರ ಆದಾಯವನ್ನು ಹೆಚ್ಚಿಸಬೇಕು ಎಂದು ನಂಬುತ್ತೇವೆ. ಅದಕ್ಕಾಗಿ ಈ ಸರ್ಕಾರವು ನಿರಂತರವಾಗಿ ಕೆಲಸ ಮಾಡುತ್ತಿದೆ” ಎಂದು ಅವರು ಹೇಳಿದರು.

ಇದನ್ನೂ ಓದಿ: ಜಗನ್ ನಡೆಸಿದ್ದ ಸೋಲಾರ್ ಒಪ್ಪಂದದಲ್ಲಿ ನಾಯ್ಡು ಸರ್ಕಾರ ಅದಾನಿಯನ್ನು ರಕ್ಷಿಸುತ್ತಿದೆ – ಆಂಧ್ರ ಕಾಂಗ್ರೆಸ್ ಅಧ್ಯಕ್ಷೆ ಶರ್ಮಿಳಾ ಆರೋಪ

ಜಗನ್ ನಡೆಸಿದ್ದ ಸೋಲಾರ್ ಒಪ್ಪಂದದಲ್ಲಿ ನಾಯ್ಡು ಸರ್ಕಾರ ಅದಾನಿಯನ್ನು ರಕ್ಷಿಸುತ್ತಿದೆ – ಆಂಧ್ರ ಕಾಂಗ್ರೆಸ್ ಅಧ್ಯಕ್ಷೆ ಶರ್ಮಿಳಾ ಆರೋಪ

ಇದನ್ನೂ ಓದಿ: ಜಗನ್ ನಡೆಸಿದ್ದ ಸೋಲಾರ್ ಒಪ್ಪಂದದಲ್ಲಿ ನಾಯ್ಡು ಸರ್ಕಾರ ಅದಾನಿಯನ್ನು ರಕ್ಷಿಸುತ್ತಿದೆ – ಆಂಧ್ರ ಕಾಂಗ್ರೆಸ್ ಅಧ್ಯಕ್ಷೆ ಶರ್ಮಿಳಾ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನ ಮನೆ ಮೇಲೆ ದಾಳಿ ಮಾಡಿ… ಹೇಗೆ ಎದುರಿಸಬೇಕೆಂದು ಗೊತ್ತಿದೆ..’; ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

"ತಮ್ಮ ನಿವಾಸ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕರ ನಿವಾಸವನ್ನು ಗುರಿಯಾಗಿಸಿಕೊಳ್ಳುವಂತೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿಗೆ ಸವಾಲು ಹಾಕಿದರು. ರಾಜ್ಯದಲ್ಲಿ, ಟಿಎಂಸಿ ನಾಯಕರ ಮೇಲಿನ ದಾಳಿಗೆ...

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ; ಪ್ರತಿಪಕ್ಷ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದ ಸರ್ಕಾರ !

ನವದೆಹಲಿ: ರಾಜ್ಯಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್‌ಪಿಜಿ ಕೊರತೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಅಡುಗೆ ಅನಿಲದ ಬಿಕ್ಕಟ್ಟು ಮತ್ತು ಕಾಳಸಂತೆಕೋರತನವನ್ನು ತಡೆಯಲು ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು...

ಬೆಂಗಳೂರು| ಹಣ ನೀಡಲು ನಿರಾಕರಿಸಿದ ವ್ಯಕ್ತಿಯನ್ನು ಮಕ್ಕಳ ಮುಂದೆಯೇ ಥಳಿಸಿ ಕೊಂದ ಗುಂಪು

ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಗುಂಪೊಂದು ಥಳಿಸಿ ಕೊಂದಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. ವಿಲ್ಸನ್ ಗಾರ್ಡನ್‌ನ ಬಡಾ ಮಕನ್ ರಸ್ತೆ ಬಳಿ ರಶೀದ್ ಪಾಷಾ ಎಂದು...

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...

ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ, ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದ ಚು. ಆಯೋಗ

ನಿರೀಕ್ಷೆಯಂತೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ಆಯೋಗ ಪಶ್ಚಿಮ ಬಂಗಾಳದಲ್ಲಿ ತನ್ನ ಆಟ ಶುರು ಮಾಡಿದೆ. ರಾಜ್ಯದ ಸರ್ಕಾದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ ಮತ್ತು ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದೆ. ಪಶ್ಚಿಮ ಬಂಗಾಳ...