Homeಮುಖಪುಟರೈತ ಹೋರಾಟದ ನಡುವೆ ಎಮ್‌ಎಸ್‌ಪಿ ನೀಡುವುದಾಗಿ ಭರವಸೆ ನೀಡಿದ ಕೇಂದ್ರ ಸರ್ಕಾರ

ರೈತ ಹೋರಾಟದ ನಡುವೆ ಎಮ್‌ಎಸ್‌ಪಿ ನೀಡುವುದಾಗಿ ಭರವಸೆ ನೀಡಿದ ಕೇಂದ್ರ ಸರ್ಕಾರ

- Advertisement -
- Advertisement -

ತಮ್ಮ ಬೆಲೆಗಳಿಗೆ ಎಂಎಸ್‌ಪಿ ಖಾತರಿ ನೀಡುವ ಕಾನೂನು ರಚಿಸಬೇಕು ಎಂಬ ಬೇಡಿಕೆ ಸೇರಿದಂತೆ ಹಲವು ಬೇಡಿಕೆಗಳನ್ನು ಮುಂದಿಟ್ಟು ರೈತರು ದೆಹಲಿಗೆ ಪಾದಯಾತ್ರೆ ಆರಂಭಿಸಿರುವ ನಡುವೆ, ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು ಸರ್ಕಾರವು ಎಲ್ಲಾ ಕೃಷಿ ಉತ್ಪನ್ನಗಳನ್ನು ಕನಿಷ್ಠ ಬೆಂಬಲ ಬೆಲೆಯಲ್ಲಿ ಖರೀದಿಸಲಿದೆ ಎಂದು ಹೇಳಿದ್ದಾರೆ. ಪ್ರಶ್ನೋತ್ತರ ವೇಳೆಯಲ್ಲಿ ಮಾತನಾಡಿದ ಅವರು, ರೈತರ ಎಮ್‌ಎಸ್‌ಪಿ ಸಮಸ್ಯೆಗೆ ಪೂರಕವಾಗಿ ಉತ್ತರಿಸಿದ ಅವರು ಈ ಭರವಸೆ ನೀಡಿದ್ದಾರೆ. ರೈತ ಹೋರಾಟದ

“ರೈತರ ಎಲ್ಲಾ ಉತ್ಪನ್ನಗಳನ್ನು ಕನಿಷ್ಠ ಬೆಂಬಲ ಬೆಲೆಯಲ್ಲಿ ಖರೀದಿಸಲಾಗುವುದು ಎಂದು ನಾನು ನಿಮ್ಮ ಮೂಲಕ ಸದನಕ್ಕೆ ಭರವಸೆ ನೀಡಲು ಬಯಸುತ್ತೇನೆ. ಇದು ಮೋದಿ ಸರ್ಕಾರ ಮತ್ತು ಮೋದಿ ಅವರ ಭರವಸೆಯನ್ನು ಪೂರೈಸುವ ಭರವಸೆ” ಎಂದು ಚೌಹಾಣ್ ಹೇಳಿದ್ದಾರೆ.

ವಿಪಕ್ಷಗಳನ್ನು ಉಲ್ಲೇಖಿಸಿದ ಅವರು, ನಮ್ಮ ಮಿತ್ರರು ಅಧಿಕಾರದಲ್ಲಿದ್ದಾಗ ಎಂಎಸ್ ಸ್ವಾಮಿನಾಥನ್ ಆಯೋಗದ ಶಿಫಾರಸುಗಳನ್ನು ಒಪ್ಪಲು ಸಾಧ್ಯವಿಲ್ಲ ಎಂದು ದಾಖಲೆ ಸಮೇತ ಹೇಳಿಕೆ ನೀಡಿದ್ದರು. ಅದರಲ್ಲೂ ಉತ್ಪನ್ನದ ವೆಚ್ಚಕ್ಕಿಂತ ಶೇ.50ರಷ್ಟು ಹೆಚ್ಚು ನೀಡುವ ಕುರಿತು ನನ್ನ ಬಳಿ ದಾಖಲೆ ಇದೆ ಎಂದು ಅವರು ಹೇಳಿದ್ದಾರೆ. ಅವರು ತಮ್ಮ ಪ್ರತಿಪಾದನೆಯನ್ನು ಬೆಂಬಲಿಸಲು ಮಾಜಿ ಕೃಷಿ ಸಚಿವ ಕಾಂತಿಲಾಲ್ ಭೂರಿಯಾ, ಕೃಷಿ ಮಂತ್ರಿಗಳಾದ ಶರದ್ ಪವಾರ್ ಮತ್ತು ಕೆ.ವಿ. ಥಾಮಸ್ ಅವರನ್ನು ಉಲ್ಲೇಖಿಸಿದ್ದಾರೆ. ರೈತ ಹೋರಾಟದ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಅವರ ಈ ಹೇಳಿಕೆಗಳ ನಂತರ, ರಾಜ್ಯಸಭಾ ಸ್ಪೀಕರ್ ಜಗದೀಪ್ ಧಂಖರ್ ಅವರು, ಈ ಹೇಳಿಕೆಯ ದೃಢೀಕರಣಕ್ಕಾಗಿ ದಾಖಲೆಗಳನ್ನು ದಾಖಲಿಸುವಂತೆ ಕೇಳಿಕೊಂಡರು. ಅದನ್ನು ಸಚಿವ ಚೌಹಾಣ್ ಒಪ್ಪಿಕೊಂಡರು.

“ಅವರು ಎಂದಿಗೂ ರೈತರನ್ನು ಗೌರವಿಸಿಲ್ಲ ಮತ್ತು ಲಾಭದಾಯಕ ಬೆಲೆಗಳ ರೈತರ ಬೇಡಿಕೆಗಳನ್ನು ಎಂದಿಗೂ ಗಂಭೀರವಾಗಿ ಪರಿಗಣಿಸಿಲ್ಲ. 2019 ರಿಂದ ಪ್ರಧಾನಿ ನರೇಂದ್ರ ಮೋದಿ ಅವರು  50% ದಷ್ಟು ಲಾಭವನ್ನು ನೀಡುವ ಮೂಲಕ ರೈತರಿಗೆ ಉತ್ಪಾದನಾ ವೆಚ್ಚದ ಮೇಲೆ ಕನಿಷ್ಠ ಬೆಂಬಲ ಬೆಲೆಯನ್ನು ಲೆಕ್ಕ ಹಾಕಲು ನಿರ್ಧರಿಸಿದ್ದಾರೆ ಎಂದು ನಾನು ನಿಮ್ಮ ಮೂಲಕ ಸದನಕ್ಕೆ ಭರವಸೆ ನೀಡಲು ಬಯಸುತ್ತೇನೆ” ಎಂದು ಸಚಿವ ಚೌಹಾಣ್ ಪ್ರತಿಪಾದಿಸಿದ್ದಾರೆ.

ಮೋದಿ ಸರ್ಕಾರ ಈಗಾಗಲೇ ರೈತರಿಗೆ ಲಾಭದಾಯಕ ಬೆಲೆಗಳನ್ನು ನೀಡುತ್ತಿದೆ ಎಂದ ಅವರು, ಭತ್ತ, ಗೋಧಿ, ಜೋಳ, ಸೋಯಾಬೀನ್ ಅನ್ನು ಮೂರು ವರ್ಷಗಳ ಹಿಂದಿನ ಉತ್ಪಾದನಾ ವೆಚ್ಚದ 50%ಕ್ಕಿಂತ ಹೆಚ್ಚು ಬೆಲೆಯಲ್ಲಿ ಖರೀದಿಸಲಾಗುತ್ತಿದೆ ಎಂದು ಹೇಳಿದ್ದಾರೆ. ಸರಕುಗಳ ದರಗಳು ಕುಸಿದಾಗಲೆಲ್ಲಾ ರಫ್ತು ಸುಂಕಗಳು ಮತ್ತು ಬೆಲೆಗಳನ್ನು ಬದಲಾಯಿಸುವಲ್ಲಿ ಸರ್ಕಾರ ಹಸ್ತಕ್ಷೇಪ ನಡೆಸಿದೆ ಎಂದು ಅವರು ಉಲ್ಲೇಖಿಸಿದ್ದಾರೆ.

ಕೃಷಿ ಸಾಲ ಮನ್ನಾ ನೀತಿಯ ಚೌಕಟ್ಟನ್ನು ರಚಿಸಲು ಸರ್ಕಾರ ಪರಿಗಣಿಸುತ್ತಿದೆಯೇ ಎಂಬ ಆರ್‌ಜೆಡಿ ಸಂಸದ ಮನೋಜ್ ಕುಮಾರ್ ಝಾ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವ ಚೌಹಾಣ್, ಅದರ ಬದಲಿಗೆ ರೈತರ ಆದಾಯವನ್ನು ಹೆಚ್ಚಿಸಲು ಸರ್ಕಾರ ಕೆಲಸ ಮಾಡುತ್ತಿದೆ ಎಂದು ಹೇಳಿದ್ದಾರೆ. “ನಾವು ರೈತರ ಆದಾಯವನ್ನು ಹೆಚ್ಚಿಸಬೇಕು ಎಂದು ನಂಬುತ್ತೇವೆ. ಅದಕ್ಕಾಗಿ ಈ ಸರ್ಕಾರವು ನಿರಂತರವಾಗಿ ಕೆಲಸ ಮಾಡುತ್ತಿದೆ” ಎಂದು ಅವರು ಹೇಳಿದರು.

ಇದನ್ನೂ ಓದಿ: ಜಗನ್ ನಡೆಸಿದ್ದ ಸೋಲಾರ್ ಒಪ್ಪಂದದಲ್ಲಿ ನಾಯ್ಡು ಸರ್ಕಾರ ಅದಾನಿಯನ್ನು ರಕ್ಷಿಸುತ್ತಿದೆ – ಆಂಧ್ರ ಕಾಂಗ್ರೆಸ್ ಅಧ್ಯಕ್ಷೆ ಶರ್ಮಿಳಾ ಆರೋಪ

ಜಗನ್ ನಡೆಸಿದ್ದ ಸೋಲಾರ್ ಒಪ್ಪಂದದಲ್ಲಿ ನಾಯ್ಡು ಸರ್ಕಾರ ಅದಾನಿಯನ್ನು ರಕ್ಷಿಸುತ್ತಿದೆ – ಆಂಧ್ರ ಕಾಂಗ್ರೆಸ್ ಅಧ್ಯಕ್ಷೆ ಶರ್ಮಿಳಾ ಆರೋಪ

ಇದನ್ನೂ ಓದಿ: ಜಗನ್ ನಡೆಸಿದ್ದ ಸೋಲಾರ್ ಒಪ್ಪಂದದಲ್ಲಿ ನಾಯ್ಡು ಸರ್ಕಾರ ಅದಾನಿಯನ್ನು ರಕ್ಷಿಸುತ್ತಿದೆ – ಆಂಧ್ರ ಕಾಂಗ್ರೆಸ್ ಅಧ್ಯಕ್ಷೆ ಶರ್ಮಿಳಾ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...