Homeಮುಖಪುಟಆಘಾತಕಾರಿ ಸುದ್ದಿ: ಕೆಂಪುಕೋಟೆಯ ಮುತ್ತಿಗೆ, ಸಿಖ್ ಧ್ವಜಾರೋಹಣಕ್ಕೆ ಕಾರಣ ಬಿಜೆಪಿ ಕಾರ್ಯಕರ್ತ ದೀಪ್ ಸಿಧು

ಆಘಾತಕಾರಿ ಸುದ್ದಿ: ಕೆಂಪುಕೋಟೆಯ ಮುತ್ತಿಗೆ, ಸಿಖ್ ಧ್ವಜಾರೋಹಣಕ್ಕೆ ಕಾರಣ ಬಿಜೆಪಿ ಕಾರ್ಯಕರ್ತ ದೀಪ್ ಸಿಧು

- Advertisement -
- Advertisement -

ಬಹಳ ಆಶ್ಚರ್ಯಕಾರಿ ಮತ್ತು ಆಘಾತಕಾರಿ ಸುದ್ದಿಯೊಂದು ಹೊರಬಂದಿದೆ. ದೆಹಲಿಯ ಕೆಂಪುಕೋಟೆಯ ಮೇಲೆ ಧ್ವಜ ಹಾರಿಸಿದ ಗುಂಪಿನ ಪ್ರಮುಖ ವ್ಯಕ್ತಿಗಳಲ್ಲೊಬ್ಬ ಪಂಜಾಬ್ ಚಿತ್ರ ನಟ ದೀಪ್ ಸಿಧು ಎಂದು ಗುರುತಿಸಲಾಗಿದ್ದು, ಬಿಜೆಪಿಯೊಂದಿಗಿನ ಈತನ ಸಂಬಂಧದ ಕುರಿತು ಒಂದಾದ ಮೇಲೆ ಒಂದು ಪುರಾವೆಗಳು ಹೊರಬರುತ್ತಿದೆ.

ಇಂದಿನ ಗಣರಾಜ್ಯೋತ್ಸವದ ಭಾಗವಾಗಿ ಹೋರಾಟ ನಿರತ ರೈತರು ದೆಹಲಿಯಲ್ಲಿ ಟ್ರ್ಯಾಕ್ಟರ್ ಪರೇಡ್ ನಡೆಸಿದ್ದಾರೆ. ಈ ವೇಳೆ, ಕೆಂಪುಕೋಟೆಗೆ ಧಾವಿಸಿದ ರೈತರ ಗುಂಪಿನಲ್ಲಿದ್ದ ಕೆಲವರು ನಿಶಾನ್ ಸಾಹಿಬ್ (ಸಿಖ್ ಧರ್ಮದ ಬಾವುಟ)ವನ್ನೂ ಮತ್ತು ರೈತ ಧ್ವಜವನ್ನು ಹಾರಿಸಿದ್ದಾರೆ. ಇದೂ ದೇಶಾದ್ಯಂತ ಚರ್ಚೆಯಾಗುತ್ತಿದ್ದು, ಇದೀಗ ಹೊರಬಂದಿರುವ ವಿಚಾರವೆಂದರೆ, ಆ ಗುಂಪಿನ ಪ್ರಮುಖ ವ್ಯಕ್ತಿ ದೀಪ್ ಸಿಧು ಆಗಿದ್ದಾನೆ. ಕೆಂಪುಕೋಟೆಯ ಮೇಲೆ ಧ್ವಜ ಹಾರಿಸುವಾಗಲೇ ಆತ ಅಲ್ಲಿದ್ದುದರ ವಿಡಿಯೋ ಈಗ ಬಹಿರಂಗವಾಗಿದೆ.

ಈ ಕುರಿತು ಈಗಾಗಲೇ ಚಂಢೀಗಡದ ಪ್ರಮುಖ ಪತ್ರಿಕೆ ದಿ ಟ್ರಿಬ್ಯೂನ್ ಹಾಗೂ ಪಂಜಾಬ್ ನ್ಯೂಸ್ ಎಕ್ಸ್‍ಪ್ರೆಸ್‍ಗಳ ಜಾಲತಾಣಗಳು ಸುದ್ದಿ ಪ್ರಕಟಿಸಿವೆ. ಜೊತೆಗೆ ಈ ಬಗ್ಗೆ ಟ್ವೀಟ್ ಮಾಡಿರುವ ವಕೀಲ, ಸಾಮಾಜಿಕ ಚಿಂತಕ ಪ್ರಶಾಂತ್ ಭೂಷಣ್ ಅವರು, ಮೋದಿ ಮತ್ತು ಅಮಿತ್‍ಶಾ ಅವರೊಂದಿಗೆ ದೀಪು ಸಿಧು ಇರುವ ಫೋಟೋವನ್ನು ಹಂಚಿಕೊಂಡಿದ್ದಾರೆ. ಮೋದಿ-ಶಾ ಜೊತೆಗೆ ಇರುವ ದೀಪು ಸಿಧು ಇಂದು ಕೆಂಪು ಕೋಟೆಗೆ ರೈತರ ಗುಂಪನ್ನು ಕರೆದೊಯ್ದರು ಮತ್ತು ಅಲ್ಲಿ ಸಿಖ್ ಧಾರ್ಮಿಕ ಧ್ವಜವನ್ನು ಹಾರಿಸಿದ್ದಾರೆ ಎಂದು ಪೋಟೋ ಮಾಡಿದ್ದಾರೆ.

ಇದಕ್ಕೂ ಮುನ್ನವೇ, ಪಂಜಾಬ್‍ನ ಶಂಭು ಗಡಿಯಲ್ಲಿ ನಡೆಯುತ್ತಿದ್ದ ಪ್ರತಿಭಟನೆಯಲ್ಲಿಯೇ ದೀಪ್ ಸಿಧು ಅವರ ನಡವಳಿಕೆಯನ್ನು ಗಮನಿಸಿದ್ದ ಸಂಯುಕ್ತ ಕಿಸಾನ್ ಮೋರ್ಚಾ ಸಂಘಟನೆಯು ಆತನನ್ನು ಪ್ರತಿಭಟನೆಯಿಂದ ಹೊರಗಿಟ್ಟಿತ್ತು. ಒಬ್ಬ ರೈತ ನಾಯಕರು ಈತನನ್ನು ‘ಈತ ರೈತ ಹೋರಾಟದ ಶತ್ರು’ ಎಂದೂ ಕರೆದಿದ್ದರು.

ಈತ ಕಳೆದ ಲೋಕಸಭಾ ಚುನಾವಣೆಯಲ್ಲಿ ಪಂಜಾಬ್‍ನ ಗುರುದಾಸ್‍ಪುರದ ಬಿಜೆಪಿ ಸಂಸದ ಸನ್ನಿ ಡಿಯೋಲ್ ಅವರ ಪರವಾರಿ ಚುನಾವಣಾ ಪ್ರಚಾರ ನಡೆಸಿದ್ದರು. ಪ್ರಚಾರದ ಉಸ್ತುವಾರಿಯನ್ನೂ ವಹಿಸಿದ್ದರು ಎಂದು ವರದಿಯಾಗಿದೆ. ಅಂದರೆ 2019ರ ಚುನಾವಣೆಯಲ್ಲಿ ಬಿಜೆಪಿ ಪರವಾಗಿ ಕೆಲಸ ಮಾಡಿದ್ದಲ್ಲದೇ ಮೋದಿ ಮತ್ತು ಅಮಿತ್‍ಶಾರ ಜೊತೆಗೆ ಫೋಟೋ ತೆಗೆಸಿಕೊಳ್ಳುವಷ್ಟು ಹತ್ತಿರದಲ್ಲಿದ್ದ ಎಂಬುದು ಆಘಾತಕಾರಿಯಾಗಿದೆ.

ಮೂರು ಕೃಷಿ ನೀತಿಗಳ ವಿರುದ್ಧ ಹೋರಾಟ ನಡೆಸುತ್ತಿರುವ ರೈತರ ಪ್ರತಿಭಟನೆಯನ್ನು ದಿಕ್ಕುತಪ್ಪಿಸುವ ಮತ್ತು ಹಿಂಸಾಚಾರವನ್ನು ಬಿತ್ತುವ ಉದ್ದೇಶದಿಂದ ಈ ರೀತಿಯ ಘಟನೆಯನ್ನು ಉದ್ದೇಶಪೂರ್ವಕವಾಗಿ ನಡೆಸಲಾಗಿದೆಯೆಂದು ಹಲವರು ಆರೋಪಿಸಿದ್ದಾರೆ.

ಇದನ್ನೂ ಓದಿ: ದೆಹಲಿಯಲ್ಲಿ ಪರಸ್ಪರ ಗುಲಾಬಿ ವಿನಿಮಯ, ಒಟ್ಟಿಗೆ ಊಟ ಮಾಡಿದ ರೈತರು ಮತ್ತು ಪೊಲೀಸರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...