Homeಮುಖಪುಟನಿರುದ್ಯೋಗದ ವಿರುದ್ಧ ಬೀದಿಗಿಳಿಯುತ್ತಿರುವ ರೈತರು: ದೆಹಲಿಯೆಲ್ಲೆಡೆ ಬಿಗಿ ಬಂದೋಬಸ್ತ್

ನಿರುದ್ಯೋಗದ ವಿರುದ್ಧ ಬೀದಿಗಿಳಿಯುತ್ತಿರುವ ರೈತರು: ದೆಹಲಿಯೆಲ್ಲೆಡೆ ಬಿಗಿ ಬಂದೋಬಸ್ತ್

- Advertisement -
- Advertisement -

ಕೇಂದ್ರ ಸರ್ಕಾರ ಜಾರಿಗೊಳಿಸಿದ್ದ ಕೃಷಿ ಕಾನೂನುಗಳ ವಿರುದ್ಧ ಸತತ ಒಂದು ವರ್ಷಕ್ಕೂ ಹೆಚ್ಚು ಕಾಲ ದಿಟ್ಟ ಹೋರಾಟ ನಡೆಸಿ ಜಯ ಕಂಡಿರುವ ಸಂಯುಕ್ತ ಕಿಸಾನ್ ಮೋರ್ಚಾ ನೇತೃತ್ವದ ರೈತ ಸಂಘಟನೆಗಳು ಇಂದು ಮತ್ತೊಮ್ಮೆ ದೆಹಲಿಯಲ್ಲಿ ಬೃಹತ್ ಪ್ರತಿಭಟನೆಗೆ ಸಜ್ಜಾಗಿವೆ. ಹೆಚ್ಚುತ್ತಿರುವ ನಿರುದ್ಯೋಗದ ವಿರುದ್ಧ ದನಿಯೆತ್ತಲು ಸಜ್ಜಾಗಿರುವ ರೈತರು ದೆಹಲಿಯ ಜಂತರ್ ಮಂತರ್‌ನಲ್ಲಿ ಇಂದು ಸೇರಲಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ದೆಹಲಿ ಪೊಲೀಸರು ಬಿಗಿ ಬಂದೋಬಸ್ತ್ ಏರ್ಪಡಿಸಿದ್ದಾರೆ.

ಕಳೆದ ವರ್ಷದ ರೈತ ಹೋರಾಟದ ಕೇಂದ್ರಬಿಂದುಗಳಾಗಿದ್ದ ಸಿಂಘು, ಗಾಜಿಪುರ್ ಗಡಿಗಳಲ್ಲಿಯೂ ಪೊಲೀಸರು ರಕ್ಷಣೆ ಹೆಚ್ಚು ಮಾಡಿದ್ದಾರೆ. ಗಾಜಿಪುರ್ ಮತ್ತು ಗಾಜಿಯಾಬಾದ್ ಗಡಿ ನಡುವಿನ ಜಿಲ್ಲೆಗಳಲ್ಲಿ ರೈತರ ಮೆರವಣಿಗೆ ಹಾದು ಹೋಗಲಿದೆ ಎಂದು ಸಂಯುಕ್ತ ಕಿಸಾನ್ ಮೋರ್ಚಾ ತಿಳಿಸಿದೆ.

ಜುಲೈನಲ್ಲಿ6.8% ಇದ್ದ ನಿರುದ್ಯೋಗ ದರವು ಆಗಸ್ಟ್‌ನಲ್ಲಿ 7.7% ತಲುಪಿದೆ ಎಂದು ಸೆಂಟರ್ ಫಾರ್ ಮಾನಿಟರಿಂಗ್ ಇಂಡಿಯನ್ ಎಕಾನಮಿ(CMIE) ವರದಿ ತಿಳಿಸಿದೆ. ಆದರೆ ವಿರೋಧ ಪಕ್ಷಗಳ ಸತತ ಮನವಿಗಳ ಹೊರತಾಗಿಯೂ ಧೀರ್ಘ ಕಾಲ ನಡೆದ ಸಂಸತ್ತಿನ ಮಾನ್ಸೂನ್ ಅಧಿವೇಶನದಲ್ಲಿ ನಿರುದ್ಯೋಗದ ಕುರಿತು ಸರ್ಕಾರ ಚರ್ಚೆ ನಡೆಸಿಲ್ಲ.

ಆಗಸ್ಟ್ 18 ರಿಂದ 25ರವರೆಗೆ ಉತ್ತರ ಪ್ರದೇಶದ ಲಖಿಂಪುರ್ ಖೇರಿಯಲ್ಲಿ ರೈತರು ಸತತ 5 ದಿನಗಳ ಕಾಲ ಪ್ರತಿಭಟನೆ ನಡೆಸಿದ್ದರು. ರೈತರ ಮೇಲಿನ ಪ್ರಕರಣಗಳನ್ನು ಕೈಬಿಡಬೇಕು ಮತ್ತು 8 ಜನರ ಸಾವಿಗೆ ಕಾರಣವಾಗಿರುವ ಆಶಿಶ್ ಮಿಶ್ರಾನ ತಂದೆ ಅಜಯ್ ಮಿಶ್ರಾ ತೆನಿಯನ್ನು ಸಂಪುಟದಿಂದ ಕೈಬಿಡಬೇಕೆಂದು ಒತ್ತಾಯಿಸಲಾಗಿತ್ತು.

ರೈತರ ಧೀರ್ಘ ಹೋರಾಟದ ನಂತರ ಕಳೆದ ವರ್ಷ ನವೆಂಬರ್ 29ರಂದು ಸಂಸತ್ತಿನಲ್ಲಿ ಮೂರು ವಿವಾದಾತ್ಮಕ ಕೃಷಿ ಕಾನೂನುಗಳನ್ನು ವಾಪಸ್ ಪಡೆಯಲಾಗಿದೆ. ಆದರೆ ರೈತರ ಇತರ ಹಕ್ಕೊತ್ತಾಯಗಳಾದ ಎಂಎಸ್‌ಪಿ ಕಾನೂನು ಜಾರಿ ಸೇರಿದಂತೆ ಇತರ ಹಕ್ಕೊತ್ತಾಯಗಳ ಈಡೇರಿಕೆಗಾಗಿ ರೈತರು ಹೋರಾಟ ಮುಂದುವರೆಸುವುದಾಗಿ ತಿಳಿಸಿದ್ದಾರೆ.

ನಿನ್ನೆ ದೆಹಲಿಯಲ್ಲಿ ನಡೆದ ರೈತ ‘ಮಹಾಪಂಚಾಯತ್’ ನಲ್ಲಿ ಪಾಲ್ಗೊಳ್ಳಲು ಬಂದ ರೈತ ನಾಯಕ ರಾಕೇಶ್ ಟಿಕಾಯತ್ ಅವರನ್ನು ಗಾಜಿಪುರ ಗಡಿಯಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದರು. ಈ ಕುರಿತು ಪ್ರತಿಕ್ರಿಯಿಸಿರುವ ಅವರು “ನನ್ನ ಕೊನೆಯ ಉಸಿರು ಇರುವವರೆಗೂ ಈ ಹೋರಾಟ ಮುಂದುವರಿಯುತ್ತದೆ. ಯಾವುದೇ ಕಾರಣಕ್ಕೂ ನಿಲ್ಲುವುದಿಲ್ಲ, ದಣಿಯುವುದಿಲ್ಲ, ತಲೆಬಾಗುವುದಿಲ್ಲ” ಎಂದು ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.

ಸೆಪ್ಟಂಬರ್ 06 ರಂದು ಸಂಯುಕ್ತ ಕಿಸಾನ್ ಮೋರ್ಚಾದ ಸಭೆ ನಡೆಯಲಿದ್ದು, ಅಂದಿನ ಮುಂದಿನ ಹೋರಾಟದ ರೂಪುರೇಷೆಗಳ ಕುರಿತು ಚರ್ಚಿಸಲಾಗುವುದು ಎಂದು ರಾಕೇಶ್ ಟಿಕಾಯತ್ ತಿಳಿಸಿದ್ದಾರೆ.

ಇದನ್ನೂ ಓದಿ: ಯುಪಿ: ಮಹಿಳೆಯ ಮೇಲೆ ಹಲ್ಲೆ ಮಾಡಿದ್ದ ಬಿಜೆಪಿ ನಾಯಕನ ಪರ ಬೃಹತ್‌ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....