Homeಮುಖಪುಟಇಂದು ಮತ್ತೆ ರೈತರಿಂದ ದೆಹಲಿಗೆ ಪ್ರತಿಭಟನಾ ಮೆರವಣಿಗೆ

ಇಂದು ಮತ್ತೆ ರೈತರಿಂದ ದೆಹಲಿಗೆ ಪ್ರತಿಭಟನಾ ಮೆರವಣಿಗೆ

- Advertisement -
- Advertisement -

ಚಂಡಿಗಡ: ಪಂಜಾಬ್ ಮತ್ತು ಹರಿಯಾಣದಿಂದ ರೈತರ ಗುಂಪುವೊಂದು ಇಂದು (ಭಾನುವಾರ) ದೆಹಲಿಯತ್ತ ಮೆರವಣಿಗೆ ನಡೆಸಲಿದೆ. ಕೇಂದ್ರ ಸರ್ಕಾರವು ಶುಕ್ರವಾರದಂದು ನಡೆಸಿದ ನಮ್ಮ ಪ್ರತಿಭಟನೆಗೆ ಸರಿಯಾಗಿ ಪ್ರತಿಕ್ರಿಯೆ ನೀಡಿಲ್ಲ ಮತ್ತು ನಮ್ಮ ಜೊತೆ ಮಾತುಕತೆ ನಡೆಸಿಲ್ಲವೆಂದು ರೈತ ನಾಯಕರು ಆರೋಪಿಸಿದ್ದಾರೆ.

ದೆಹಲಿ ತಲುಪಲು ರೈತ ಹೋರಾಟಗಾರರು ಹೊಸ ಪ್ರಯತ್ನದ ನಿರೀಕ್ಷೆಯಲ್ಲಿರುವುದರಿಂದ ಪಂಜಾಬ್-ಹರಿಯಾಣ ಗಡಿಯಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ. ರೈತ ಹೋರಾಟಗಾರರನ್ನು ತಡೆಯಲು ಮುಂಗಡವಾಗಿ ಬ್ಯಾರಿಕೇಡ್‌ಗಳನ್ನು ಸ್ಥಾಪಿಸಲಾಗಿದೆ.

ಇಂದು ನಡೆಯುವ ಹೊಸತನದ ರೈತ ಪ್ರತಿಭಟನಾ ಮೆರವಣಿಗೆಯು ಶುಕ್ರವಾರದ ರೀತಿಯಲ್ಲಿಯೇ ಇರಲಿದೆ. ಶುಕ್ರವಾರದಂದು ರೈತರು ರಾಷ್ಟ್ರ ರಾಜಧಾನಿಯತ್ತ ಸಾಗಲು ಪ್ರಯತ್ನಿಸಿದರು. ಆದರೆ ಭದ್ರತಾ ಸಿಬ್ಬಂದಿ ಗಡಿಯಲ್ಲಿ ಅಶ್ರುವಾಯು ಶೆಲ್ ಗಳನ್ನು ಹಾರಿಸಿದಾಗ ಹಲವಾರು ಪ್ರತಿಭಟನಾಕಾರರು ಗಾಯಗೊಂಡಿದ್ದರು.

ಕನಿಷ್ಠ ಬೆಂಬಲ ಬೆಲೆಗೆ (ಎಂಎಸ್‌ಪಿ) ಕಾನೂನು ಖಾತರಿ ಸೇರಿದಂತೆ ತಮ್ಮ ವಿವಿಧ ಬೇಡಿಕೆಗಳಿಗೆ ಸಂಬಂಧಿಸಿದಂತೆ ಕೇಂದ್ರ ಸರಕಾರವು ನಮ್ಮ ಜೊತೆ ಮಾತುಕತೆಗೆ ಬಂದಿಲ್ಲ. 101 ರೈತರ ಗುಂಪು ಇಂದು (ಡಿ.8) ದೆಹಲಿಗೆ ತಮ್ಮ ಪಾದಯಾತ್ರೆಯನ್ನು ಪುನರಾರಂಭಿಸಲಿದೆ ಎಂದು ರೈತ ಮುಖಂಡ ಸರ್ವಾನ್ ಸಿಂಗ್ ಪಂಧೇರ್ ಹೇಳಿದ್ದಾರೆ

ರೈತರು ಮತ್ತು ಕಾರ್ಮಿಕರೊಂದಿಗೆ ಮಾತುಕತೆಯಾಡಬಾರದೆಂದು ಕೇಂದ್ರವು ತೀರ್ಮಾನಿಸಿದಂತೆ ಕಾಣುತ್ತದೆ. ಅವರು ನಮ್ಮನ್ನು ತಡೆಯಲು ಬಲಪ್ರಯೋಗ ಮಾಡುತ್ತಿದ್ದಾರೆ. ಶುಕ್ರವಾರದಂತೆ ನಾವು ಶಾಂತಿಯುತವಾಗಿ ಮತ್ತು ಶಿಸ್ತಿನಿಂದ ದೆಹಲಿಗೆ ಹೋಗುತ್ತೇವೆ. ನರೇಂದ್ರ ಮೋದಿ ಸರ್ಕಾರವು ಮಾತುಕತೆಯಾಡುವ ಮನಸ್ಥಿತಿಯಲ್ಲಿಲ್ಲ. ಮಧ್ಯಾಹ್ನ 12 ಗಂಟೆ ಸುಮಾರಿಗೆ 101 ರೈತರ ನಿಯೋಗವನ್ನು ಪ್ರತಿಭಟನಾ ಮೆರವಣಿಗೆಯೊಂದಿಗೆ ದೆಹಲಿಗೆ ಕಳುಹಿಸಲು ನಾವು ನಿರ್ಧರಿಸಿದ್ದೇವೆ ಎಂದು ಪಾಂಡರ್ ಹೇಳಿದರು.

ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು ಸಂಸತ್ತಿನ ದಿಕ್ಕು ತಪ್ಪಿಸುತ್ತಿದ್ದಾರೆ ಎಂದು ಅವರು ಆರೋಪಿಸಿದರು.

ಕೃಷಿ ಸಚಿವರು ಸಂಸತ್ತಿನ ದಿಕ್ಕು ತಪ್ಪಿಸುತ್ತಿದ್ದಾರೆ. ನಾವು ಎಂಎಸ್‌ಪಿ ಮೇಲೆ ಕಾನೂನು ಮೂಲಕ ಭರವಸೆ ನೀಡಬೇಕೆಂದು ಒತ್ತಾಯಿಸುತ್ತಿದ್ದೇವೆ. ಆದರೆ ಸಚಿವರು ಮೌನವಾಗಿದ್ದಾರೆ ಎಂದು ಪಂಧೇರ್ ಹೇಳಿದರು.

ಪಂಜಾಬ್‌ಗೆ ಬಿಜೆಪಿ ನಾಯಕರ ಪ್ರವೇಶವನ್ನು ರೈತರಾದ ನಾವು ವಿರೋಧಿಸುತ್ತೇವೆ ಎಂದು ಇದೇ ಸಮಯದಲ್ಲಿ ಪಂಧೇರ್ ಘೋಷಿಸಿದರು.

ಕಿಸಾನ್ ಮಜ್ದೂರ್ ಮೋರ್ಚಾ ಮತ್ತು ಸಂಯುಕ್ತ ಕಿಸಾನ್ ಮೋರ್ಚಾ (ರಾಜಕೀಯೇತರ) ದಿಂದ ನಡೆಸುತ್ತಿರುವ ಈ ಪ್ರತಿಭಟನೆಯು ಈಗ 300 ನೇ ದಿನಕ್ಕೆ ಕಾಲಿಟ್ಟಿದೆ. ಆದರೆ ಕೇಂದ್ರ ಸರ್ಕಾರ ಇನ್ನೂ ಹಠಮಾರಿ ಧೋರಣೆಯಲ್ಲಿಯೇ ಇದೆ. ಪಂಜಾಬ್‌ಗೆ ಬಿಜೆಪಿ ನಾಯಕರ ಪ್ರವೇಶವನ್ನು ಪ್ರತಿಭಟಿಸುವ ಮತ್ತೊಂದು ದೊಡ್ಡ ಘೋಷಣೆ ಮಾಡಿದ್ದೇವೆ. ಇಂದು ಹರಿಯಾಣ ಮುಖ್ಯಮಂತ್ರಿ ನಯಾಬ್ ಸಿಂಗ್ ಸೈನಿ ಮತ್ತು ಕೇಂದ್ರ ಸಚಿವ ನಿತಿನ್ ಗಡ್ಕರಿಯವರು ಪಂಜಾಬಿನ ಅಮೃತಸರಕ್ಕೆ ಹೋಗುತ್ತಿದ್ದಾರೆ ಎಂದು ನಾವು ಕೇಳಿದ್ದೇವೆ. ಆದರೆ ಇದು ಇನ್ನೂ ಖಚಿತವಾಗಿಲ್ಲ. ಇವರು  ರಾಜ್ಯಕ್ಕೆ ಪ್ರವೇಶಿಸುವುದನ್ನು ಪ್ರತಿಭಟಿಸುವಂತೆ ನಾವು ಪಂಜಾಬ್‌ನ ರೈತರಿಗೆ ಕರೆ ನೀಡುತ್ತೇವೆ ಎಂದು ಅವರು ಹೇಳಿದರು.

ಹರಿಯಾಣ ಭದ್ರತಾ ಸಿಬ್ಬಂದಿಯಿಂದ ಶುಕ್ರವಾರದಂದು ಬಹುಪದರದ ಬ್ಯಾರಿಕೇಡ್‌ ನಿರ್ಮಿಸಿ ನಮ್ಮ ಜಾಥಾವನ್ನು ನಿಲ್ಲಿಸಲಾಯಿತು. ನಿಷೇಧಾಜ್ಞೆಗಳ ಹೊರತಾಗಿಯೂ, ರೈತರು ಬ್ಯಾರಿಕೇಡ್ ಗಳನ್ನು ಭೇದಿಸಲು ಪ್ರಯತ್ನಿಸಿದರು. ಆದರೆ ಭದ್ರತಾ ಪಡೆಗಳು ಅಶ್ರುವಾಯು ಶೆಲ್‌ಗಳನ್ನು ಸಿಡಿಸಿದ್ದರಿಂದ ಪ್ರತಿರೋಧವನ್ನು ಎದುರಿಸಬೇಕಾಯಿತು.  ಪಂಜಾಬ್‌ನ ಶಂಭುವಿನ ನಮ್ಮ ಪ್ರತಿಭಟನಾ ಸ್ಥಳಕ್ಕೆ ಮರಳುವಂತೆ ಅವರು ಒತ್ತಾಯಿಸಿದರು.

ರೈತರು ಈ ಹಿಂದೆ ಫೆಬ್ರವರಿ 13 ಮತ್ತು ಫೆಬ್ರವರಿ 21 ರಂದು ದೆಹಲಿ ಕಡೆಗೆ ಮೆರವಣಿಗೆ ನಡೆಸಲು ಪ್ರಯತ್ನಿಸಿದ್ದರು.  ಆದರೆ ಆಗ ಗಡಿ ಕೇಂದ್ರಗಳಲ್ಲಿ ಭದ್ರತಾ ಪಡೆಗಳು ತಡೆದಿದ್ದರು.

ಎಂಎಸ್‌ಪಿ ಜೊತೆಗೆ, ರೈತರು ಕೃಷಿ ಸಾಲ ಮನ್ನಾ, ರೈತರು ಮತ್ತು ಕೃಷಿ ಕಾರ್ಮಿಕರಿಗೆ ಪಿಂಚಣಿ, ವಿದ್ಯುತ್ ದರ ಏರಿಕೆಯನ್ನು ಸ್ಥಗಿತಗೊಳಿಸುವುದು, ರೈತರ ಮೇಲಿನ ಪೊಲೀಸ್ ಪ್ರಕರಣಗಳನ್ನು ಹಿಂಪಡೆಯುವುದು ಮತ್ತು 2021ರ ಲಖಿಂಪುರ ಖೇರಿ ಹಿಂಸಾಚಾರದ ಸಂತ್ರಸ್ತರಿಗೆ ನ್ಯಾಯಕ್ಕಾಗಿ ರೈತರು ಒತ್ತಾಯಿಸುತ್ತಿದ್ದಾರೆ ಮತ್ತು 2020-21ರ ಪ್ರತಿಭಟನೆಯಲ್ಲಿ  ಸುಮಾರು 600ಕ್ಕೂ ಹೆಚ್ಚು ಮೃತಪಟ್ಟ ರೈತರ ಕುಟುಂಬಗಳಿಗೆ ಪರಿಹಾರ ನೀಡುವುದು ರೈತ ಹೋರಾಟಗಾರರ ಬೇಡಿಕೆಗಳಲ್ಲಿ ಸೇರಿವೆ.

ಇದನ್ನೂ ಓದಿ…ಬಾಂಗ್ಲಾದೇಶದ ದಲಿತರ ಬಗ್ಗೆ ಮೌನವಾಗಿರುವ ಕಾಂಗ್ರೆಸ್, ಸಂಭಾಲ್ ಮೂಲಕ ಮುಸ್ಲಿಮರನ್ನು ಓಲೈಸುತ್ತಿದೆ: ಮಾಯಾವತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...