Homeಮುಖಪುಟಇಂದು ಮತ್ತೆ ರೈತರಿಂದ ದೆಹಲಿಗೆ ಪ್ರತಿಭಟನಾ ಮೆರವಣಿಗೆ

ಇಂದು ಮತ್ತೆ ರೈತರಿಂದ ದೆಹಲಿಗೆ ಪ್ರತಿಭಟನಾ ಮೆರವಣಿಗೆ

- Advertisement -
- Advertisement -

ಚಂಡಿಗಡ: ಪಂಜಾಬ್ ಮತ್ತು ಹರಿಯಾಣದಿಂದ ರೈತರ ಗುಂಪುವೊಂದು ಇಂದು (ಭಾನುವಾರ) ದೆಹಲಿಯತ್ತ ಮೆರವಣಿಗೆ ನಡೆಸಲಿದೆ. ಕೇಂದ್ರ ಸರ್ಕಾರವು ಶುಕ್ರವಾರದಂದು ನಡೆಸಿದ ನಮ್ಮ ಪ್ರತಿಭಟನೆಗೆ ಸರಿಯಾಗಿ ಪ್ರತಿಕ್ರಿಯೆ ನೀಡಿಲ್ಲ ಮತ್ತು ನಮ್ಮ ಜೊತೆ ಮಾತುಕತೆ ನಡೆಸಿಲ್ಲವೆಂದು ರೈತ ನಾಯಕರು ಆರೋಪಿಸಿದ್ದಾರೆ.

ದೆಹಲಿ ತಲುಪಲು ರೈತ ಹೋರಾಟಗಾರರು ಹೊಸ ಪ್ರಯತ್ನದ ನಿರೀಕ್ಷೆಯಲ್ಲಿರುವುದರಿಂದ ಪಂಜಾಬ್-ಹರಿಯಾಣ ಗಡಿಯಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ. ರೈತ ಹೋರಾಟಗಾರರನ್ನು ತಡೆಯಲು ಮುಂಗಡವಾಗಿ ಬ್ಯಾರಿಕೇಡ್‌ಗಳನ್ನು ಸ್ಥಾಪಿಸಲಾಗಿದೆ.

ಇಂದು ನಡೆಯುವ ಹೊಸತನದ ರೈತ ಪ್ರತಿಭಟನಾ ಮೆರವಣಿಗೆಯು ಶುಕ್ರವಾರದ ರೀತಿಯಲ್ಲಿಯೇ ಇರಲಿದೆ. ಶುಕ್ರವಾರದಂದು ರೈತರು ರಾಷ್ಟ್ರ ರಾಜಧಾನಿಯತ್ತ ಸಾಗಲು ಪ್ರಯತ್ನಿಸಿದರು. ಆದರೆ ಭದ್ರತಾ ಸಿಬ್ಬಂದಿ ಗಡಿಯಲ್ಲಿ ಅಶ್ರುವಾಯು ಶೆಲ್ ಗಳನ್ನು ಹಾರಿಸಿದಾಗ ಹಲವಾರು ಪ್ರತಿಭಟನಾಕಾರರು ಗಾಯಗೊಂಡಿದ್ದರು.

ಕನಿಷ್ಠ ಬೆಂಬಲ ಬೆಲೆಗೆ (ಎಂಎಸ್‌ಪಿ) ಕಾನೂನು ಖಾತರಿ ಸೇರಿದಂತೆ ತಮ್ಮ ವಿವಿಧ ಬೇಡಿಕೆಗಳಿಗೆ ಸಂಬಂಧಿಸಿದಂತೆ ಕೇಂದ್ರ ಸರಕಾರವು ನಮ್ಮ ಜೊತೆ ಮಾತುಕತೆಗೆ ಬಂದಿಲ್ಲ. 101 ರೈತರ ಗುಂಪು ಇಂದು (ಡಿ.8) ದೆಹಲಿಗೆ ತಮ್ಮ ಪಾದಯಾತ್ರೆಯನ್ನು ಪುನರಾರಂಭಿಸಲಿದೆ ಎಂದು ರೈತ ಮುಖಂಡ ಸರ್ವಾನ್ ಸಿಂಗ್ ಪಂಧೇರ್ ಹೇಳಿದ್ದಾರೆ

ರೈತರು ಮತ್ತು ಕಾರ್ಮಿಕರೊಂದಿಗೆ ಮಾತುಕತೆಯಾಡಬಾರದೆಂದು ಕೇಂದ್ರವು ತೀರ್ಮಾನಿಸಿದಂತೆ ಕಾಣುತ್ತದೆ. ಅವರು ನಮ್ಮನ್ನು ತಡೆಯಲು ಬಲಪ್ರಯೋಗ ಮಾಡುತ್ತಿದ್ದಾರೆ. ಶುಕ್ರವಾರದಂತೆ ನಾವು ಶಾಂತಿಯುತವಾಗಿ ಮತ್ತು ಶಿಸ್ತಿನಿಂದ ದೆಹಲಿಗೆ ಹೋಗುತ್ತೇವೆ. ನರೇಂದ್ರ ಮೋದಿ ಸರ್ಕಾರವು ಮಾತುಕತೆಯಾಡುವ ಮನಸ್ಥಿತಿಯಲ್ಲಿಲ್ಲ. ಮಧ್ಯಾಹ್ನ 12 ಗಂಟೆ ಸುಮಾರಿಗೆ 101 ರೈತರ ನಿಯೋಗವನ್ನು ಪ್ರತಿಭಟನಾ ಮೆರವಣಿಗೆಯೊಂದಿಗೆ ದೆಹಲಿಗೆ ಕಳುಹಿಸಲು ನಾವು ನಿರ್ಧರಿಸಿದ್ದೇವೆ ಎಂದು ಪಾಂಡರ್ ಹೇಳಿದರು.

ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು ಸಂಸತ್ತಿನ ದಿಕ್ಕು ತಪ್ಪಿಸುತ್ತಿದ್ದಾರೆ ಎಂದು ಅವರು ಆರೋಪಿಸಿದರು.

ಕೃಷಿ ಸಚಿವರು ಸಂಸತ್ತಿನ ದಿಕ್ಕು ತಪ್ಪಿಸುತ್ತಿದ್ದಾರೆ. ನಾವು ಎಂಎಸ್‌ಪಿ ಮೇಲೆ ಕಾನೂನು ಮೂಲಕ ಭರವಸೆ ನೀಡಬೇಕೆಂದು ಒತ್ತಾಯಿಸುತ್ತಿದ್ದೇವೆ. ಆದರೆ ಸಚಿವರು ಮೌನವಾಗಿದ್ದಾರೆ ಎಂದು ಪಂಧೇರ್ ಹೇಳಿದರು.

ಪಂಜಾಬ್‌ಗೆ ಬಿಜೆಪಿ ನಾಯಕರ ಪ್ರವೇಶವನ್ನು ರೈತರಾದ ನಾವು ವಿರೋಧಿಸುತ್ತೇವೆ ಎಂದು ಇದೇ ಸಮಯದಲ್ಲಿ ಪಂಧೇರ್ ಘೋಷಿಸಿದರು.

ಕಿಸಾನ್ ಮಜ್ದೂರ್ ಮೋರ್ಚಾ ಮತ್ತು ಸಂಯುಕ್ತ ಕಿಸಾನ್ ಮೋರ್ಚಾ (ರಾಜಕೀಯೇತರ) ದಿಂದ ನಡೆಸುತ್ತಿರುವ ಈ ಪ್ರತಿಭಟನೆಯು ಈಗ 300 ನೇ ದಿನಕ್ಕೆ ಕಾಲಿಟ್ಟಿದೆ. ಆದರೆ ಕೇಂದ್ರ ಸರ್ಕಾರ ಇನ್ನೂ ಹಠಮಾರಿ ಧೋರಣೆಯಲ್ಲಿಯೇ ಇದೆ. ಪಂಜಾಬ್‌ಗೆ ಬಿಜೆಪಿ ನಾಯಕರ ಪ್ರವೇಶವನ್ನು ಪ್ರತಿಭಟಿಸುವ ಮತ್ತೊಂದು ದೊಡ್ಡ ಘೋಷಣೆ ಮಾಡಿದ್ದೇವೆ. ಇಂದು ಹರಿಯಾಣ ಮುಖ್ಯಮಂತ್ರಿ ನಯಾಬ್ ಸಿಂಗ್ ಸೈನಿ ಮತ್ತು ಕೇಂದ್ರ ಸಚಿವ ನಿತಿನ್ ಗಡ್ಕರಿಯವರು ಪಂಜಾಬಿನ ಅಮೃತಸರಕ್ಕೆ ಹೋಗುತ್ತಿದ್ದಾರೆ ಎಂದು ನಾವು ಕೇಳಿದ್ದೇವೆ. ಆದರೆ ಇದು ಇನ್ನೂ ಖಚಿತವಾಗಿಲ್ಲ. ಇವರು  ರಾಜ್ಯಕ್ಕೆ ಪ್ರವೇಶಿಸುವುದನ್ನು ಪ್ರತಿಭಟಿಸುವಂತೆ ನಾವು ಪಂಜಾಬ್‌ನ ರೈತರಿಗೆ ಕರೆ ನೀಡುತ್ತೇವೆ ಎಂದು ಅವರು ಹೇಳಿದರು.

ಹರಿಯಾಣ ಭದ್ರತಾ ಸಿಬ್ಬಂದಿಯಿಂದ ಶುಕ್ರವಾರದಂದು ಬಹುಪದರದ ಬ್ಯಾರಿಕೇಡ್‌ ನಿರ್ಮಿಸಿ ನಮ್ಮ ಜಾಥಾವನ್ನು ನಿಲ್ಲಿಸಲಾಯಿತು. ನಿಷೇಧಾಜ್ಞೆಗಳ ಹೊರತಾಗಿಯೂ, ರೈತರು ಬ್ಯಾರಿಕೇಡ್ ಗಳನ್ನು ಭೇದಿಸಲು ಪ್ರಯತ್ನಿಸಿದರು. ಆದರೆ ಭದ್ರತಾ ಪಡೆಗಳು ಅಶ್ರುವಾಯು ಶೆಲ್‌ಗಳನ್ನು ಸಿಡಿಸಿದ್ದರಿಂದ ಪ್ರತಿರೋಧವನ್ನು ಎದುರಿಸಬೇಕಾಯಿತು.  ಪಂಜಾಬ್‌ನ ಶಂಭುವಿನ ನಮ್ಮ ಪ್ರತಿಭಟನಾ ಸ್ಥಳಕ್ಕೆ ಮರಳುವಂತೆ ಅವರು ಒತ್ತಾಯಿಸಿದರು.

ರೈತರು ಈ ಹಿಂದೆ ಫೆಬ್ರವರಿ 13 ಮತ್ತು ಫೆಬ್ರವರಿ 21 ರಂದು ದೆಹಲಿ ಕಡೆಗೆ ಮೆರವಣಿಗೆ ನಡೆಸಲು ಪ್ರಯತ್ನಿಸಿದ್ದರು.  ಆದರೆ ಆಗ ಗಡಿ ಕೇಂದ್ರಗಳಲ್ಲಿ ಭದ್ರತಾ ಪಡೆಗಳು ತಡೆದಿದ್ದರು.

ಎಂಎಸ್‌ಪಿ ಜೊತೆಗೆ, ರೈತರು ಕೃಷಿ ಸಾಲ ಮನ್ನಾ, ರೈತರು ಮತ್ತು ಕೃಷಿ ಕಾರ್ಮಿಕರಿಗೆ ಪಿಂಚಣಿ, ವಿದ್ಯುತ್ ದರ ಏರಿಕೆಯನ್ನು ಸ್ಥಗಿತಗೊಳಿಸುವುದು, ರೈತರ ಮೇಲಿನ ಪೊಲೀಸ್ ಪ್ರಕರಣಗಳನ್ನು ಹಿಂಪಡೆಯುವುದು ಮತ್ತು 2021ರ ಲಖಿಂಪುರ ಖೇರಿ ಹಿಂಸಾಚಾರದ ಸಂತ್ರಸ್ತರಿಗೆ ನ್ಯಾಯಕ್ಕಾಗಿ ರೈತರು ಒತ್ತಾಯಿಸುತ್ತಿದ್ದಾರೆ ಮತ್ತು 2020-21ರ ಪ್ರತಿಭಟನೆಯಲ್ಲಿ  ಸುಮಾರು 600ಕ್ಕೂ ಹೆಚ್ಚು ಮೃತಪಟ್ಟ ರೈತರ ಕುಟುಂಬಗಳಿಗೆ ಪರಿಹಾರ ನೀಡುವುದು ರೈತ ಹೋರಾಟಗಾರರ ಬೇಡಿಕೆಗಳಲ್ಲಿ ಸೇರಿವೆ.

ಇದನ್ನೂ ಓದಿ…ಬಾಂಗ್ಲಾದೇಶದ ದಲಿತರ ಬಗ್ಗೆ ಮೌನವಾಗಿರುವ ಕಾಂಗ್ರೆಸ್, ಸಂಭಾಲ್ ಮೂಲಕ ಮುಸ್ಲಿಮರನ್ನು ಓಲೈಸುತ್ತಿದೆ: ಮಾಯಾವತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...