Homeಮುಖಪುಟಇಂದು ಮತ್ತೆ ರೈತರಿಂದ ದೆಹಲಿಗೆ ಪ್ರತಿಭಟನಾ ಮೆರವಣಿಗೆ

ಇಂದು ಮತ್ತೆ ರೈತರಿಂದ ದೆಹಲಿಗೆ ಪ್ರತಿಭಟನಾ ಮೆರವಣಿಗೆ

- Advertisement -
- Advertisement -

ಚಂಡಿಗಡ: ಪಂಜಾಬ್ ಮತ್ತು ಹರಿಯಾಣದಿಂದ ರೈತರ ಗುಂಪುವೊಂದು ಇಂದು (ಭಾನುವಾರ) ದೆಹಲಿಯತ್ತ ಮೆರವಣಿಗೆ ನಡೆಸಲಿದೆ. ಕೇಂದ್ರ ಸರ್ಕಾರವು ಶುಕ್ರವಾರದಂದು ನಡೆಸಿದ ನಮ್ಮ ಪ್ರತಿಭಟನೆಗೆ ಸರಿಯಾಗಿ ಪ್ರತಿಕ್ರಿಯೆ ನೀಡಿಲ್ಲ ಮತ್ತು ನಮ್ಮ ಜೊತೆ ಮಾತುಕತೆ ನಡೆಸಿಲ್ಲವೆಂದು ರೈತ ನಾಯಕರು ಆರೋಪಿಸಿದ್ದಾರೆ.

ದೆಹಲಿ ತಲುಪಲು ರೈತ ಹೋರಾಟಗಾರರು ಹೊಸ ಪ್ರಯತ್ನದ ನಿರೀಕ್ಷೆಯಲ್ಲಿರುವುದರಿಂದ ಪಂಜಾಬ್-ಹರಿಯಾಣ ಗಡಿಯಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ. ರೈತ ಹೋರಾಟಗಾರರನ್ನು ತಡೆಯಲು ಮುಂಗಡವಾಗಿ ಬ್ಯಾರಿಕೇಡ್‌ಗಳನ್ನು ಸ್ಥಾಪಿಸಲಾಗಿದೆ.

ಇಂದು ನಡೆಯುವ ಹೊಸತನದ ರೈತ ಪ್ರತಿಭಟನಾ ಮೆರವಣಿಗೆಯು ಶುಕ್ರವಾರದ ರೀತಿಯಲ್ಲಿಯೇ ಇರಲಿದೆ. ಶುಕ್ರವಾರದಂದು ರೈತರು ರಾಷ್ಟ್ರ ರಾಜಧಾನಿಯತ್ತ ಸಾಗಲು ಪ್ರಯತ್ನಿಸಿದರು. ಆದರೆ ಭದ್ರತಾ ಸಿಬ್ಬಂದಿ ಗಡಿಯಲ್ಲಿ ಅಶ್ರುವಾಯು ಶೆಲ್ ಗಳನ್ನು ಹಾರಿಸಿದಾಗ ಹಲವಾರು ಪ್ರತಿಭಟನಾಕಾರರು ಗಾಯಗೊಂಡಿದ್ದರು.

ಕನಿಷ್ಠ ಬೆಂಬಲ ಬೆಲೆಗೆ (ಎಂಎಸ್‌ಪಿ) ಕಾನೂನು ಖಾತರಿ ಸೇರಿದಂತೆ ತಮ್ಮ ವಿವಿಧ ಬೇಡಿಕೆಗಳಿಗೆ ಸಂಬಂಧಿಸಿದಂತೆ ಕೇಂದ್ರ ಸರಕಾರವು ನಮ್ಮ ಜೊತೆ ಮಾತುಕತೆಗೆ ಬಂದಿಲ್ಲ. 101 ರೈತರ ಗುಂಪು ಇಂದು (ಡಿ.8) ದೆಹಲಿಗೆ ತಮ್ಮ ಪಾದಯಾತ್ರೆಯನ್ನು ಪುನರಾರಂಭಿಸಲಿದೆ ಎಂದು ರೈತ ಮುಖಂಡ ಸರ್ವಾನ್ ಸಿಂಗ್ ಪಂಧೇರ್ ಹೇಳಿದ್ದಾರೆ

ರೈತರು ಮತ್ತು ಕಾರ್ಮಿಕರೊಂದಿಗೆ ಮಾತುಕತೆಯಾಡಬಾರದೆಂದು ಕೇಂದ್ರವು ತೀರ್ಮಾನಿಸಿದಂತೆ ಕಾಣುತ್ತದೆ. ಅವರು ನಮ್ಮನ್ನು ತಡೆಯಲು ಬಲಪ್ರಯೋಗ ಮಾಡುತ್ತಿದ್ದಾರೆ. ಶುಕ್ರವಾರದಂತೆ ನಾವು ಶಾಂತಿಯುತವಾಗಿ ಮತ್ತು ಶಿಸ್ತಿನಿಂದ ದೆಹಲಿಗೆ ಹೋಗುತ್ತೇವೆ. ನರೇಂದ್ರ ಮೋದಿ ಸರ್ಕಾರವು ಮಾತುಕತೆಯಾಡುವ ಮನಸ್ಥಿತಿಯಲ್ಲಿಲ್ಲ. ಮಧ್ಯಾಹ್ನ 12 ಗಂಟೆ ಸುಮಾರಿಗೆ 101 ರೈತರ ನಿಯೋಗವನ್ನು ಪ್ರತಿಭಟನಾ ಮೆರವಣಿಗೆಯೊಂದಿಗೆ ದೆಹಲಿಗೆ ಕಳುಹಿಸಲು ನಾವು ನಿರ್ಧರಿಸಿದ್ದೇವೆ ಎಂದು ಪಾಂಡರ್ ಹೇಳಿದರು.

ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು ಸಂಸತ್ತಿನ ದಿಕ್ಕು ತಪ್ಪಿಸುತ್ತಿದ್ದಾರೆ ಎಂದು ಅವರು ಆರೋಪಿಸಿದರು.

ಕೃಷಿ ಸಚಿವರು ಸಂಸತ್ತಿನ ದಿಕ್ಕು ತಪ್ಪಿಸುತ್ತಿದ್ದಾರೆ. ನಾವು ಎಂಎಸ್‌ಪಿ ಮೇಲೆ ಕಾನೂನು ಮೂಲಕ ಭರವಸೆ ನೀಡಬೇಕೆಂದು ಒತ್ತಾಯಿಸುತ್ತಿದ್ದೇವೆ. ಆದರೆ ಸಚಿವರು ಮೌನವಾಗಿದ್ದಾರೆ ಎಂದು ಪಂಧೇರ್ ಹೇಳಿದರು.

ಪಂಜಾಬ್‌ಗೆ ಬಿಜೆಪಿ ನಾಯಕರ ಪ್ರವೇಶವನ್ನು ರೈತರಾದ ನಾವು ವಿರೋಧಿಸುತ್ತೇವೆ ಎಂದು ಇದೇ ಸಮಯದಲ್ಲಿ ಪಂಧೇರ್ ಘೋಷಿಸಿದರು.

ಕಿಸಾನ್ ಮಜ್ದೂರ್ ಮೋರ್ಚಾ ಮತ್ತು ಸಂಯುಕ್ತ ಕಿಸಾನ್ ಮೋರ್ಚಾ (ರಾಜಕೀಯೇತರ) ದಿಂದ ನಡೆಸುತ್ತಿರುವ ಈ ಪ್ರತಿಭಟನೆಯು ಈಗ 300 ನೇ ದಿನಕ್ಕೆ ಕಾಲಿಟ್ಟಿದೆ. ಆದರೆ ಕೇಂದ್ರ ಸರ್ಕಾರ ಇನ್ನೂ ಹಠಮಾರಿ ಧೋರಣೆಯಲ್ಲಿಯೇ ಇದೆ. ಪಂಜಾಬ್‌ಗೆ ಬಿಜೆಪಿ ನಾಯಕರ ಪ್ರವೇಶವನ್ನು ಪ್ರತಿಭಟಿಸುವ ಮತ್ತೊಂದು ದೊಡ್ಡ ಘೋಷಣೆ ಮಾಡಿದ್ದೇವೆ. ಇಂದು ಹರಿಯಾಣ ಮುಖ್ಯಮಂತ್ರಿ ನಯಾಬ್ ಸಿಂಗ್ ಸೈನಿ ಮತ್ತು ಕೇಂದ್ರ ಸಚಿವ ನಿತಿನ್ ಗಡ್ಕರಿಯವರು ಪಂಜಾಬಿನ ಅಮೃತಸರಕ್ಕೆ ಹೋಗುತ್ತಿದ್ದಾರೆ ಎಂದು ನಾವು ಕೇಳಿದ್ದೇವೆ. ಆದರೆ ಇದು ಇನ್ನೂ ಖಚಿತವಾಗಿಲ್ಲ. ಇವರು  ರಾಜ್ಯಕ್ಕೆ ಪ್ರವೇಶಿಸುವುದನ್ನು ಪ್ರತಿಭಟಿಸುವಂತೆ ನಾವು ಪಂಜಾಬ್‌ನ ರೈತರಿಗೆ ಕರೆ ನೀಡುತ್ತೇವೆ ಎಂದು ಅವರು ಹೇಳಿದರು.

ಹರಿಯಾಣ ಭದ್ರತಾ ಸಿಬ್ಬಂದಿಯಿಂದ ಶುಕ್ರವಾರದಂದು ಬಹುಪದರದ ಬ್ಯಾರಿಕೇಡ್‌ ನಿರ್ಮಿಸಿ ನಮ್ಮ ಜಾಥಾವನ್ನು ನಿಲ್ಲಿಸಲಾಯಿತು. ನಿಷೇಧಾಜ್ಞೆಗಳ ಹೊರತಾಗಿಯೂ, ರೈತರು ಬ್ಯಾರಿಕೇಡ್ ಗಳನ್ನು ಭೇದಿಸಲು ಪ್ರಯತ್ನಿಸಿದರು. ಆದರೆ ಭದ್ರತಾ ಪಡೆಗಳು ಅಶ್ರುವಾಯು ಶೆಲ್‌ಗಳನ್ನು ಸಿಡಿಸಿದ್ದರಿಂದ ಪ್ರತಿರೋಧವನ್ನು ಎದುರಿಸಬೇಕಾಯಿತು.  ಪಂಜಾಬ್‌ನ ಶಂಭುವಿನ ನಮ್ಮ ಪ್ರತಿಭಟನಾ ಸ್ಥಳಕ್ಕೆ ಮರಳುವಂತೆ ಅವರು ಒತ್ತಾಯಿಸಿದರು.

ರೈತರು ಈ ಹಿಂದೆ ಫೆಬ್ರವರಿ 13 ಮತ್ತು ಫೆಬ್ರವರಿ 21 ರಂದು ದೆಹಲಿ ಕಡೆಗೆ ಮೆರವಣಿಗೆ ನಡೆಸಲು ಪ್ರಯತ್ನಿಸಿದ್ದರು.  ಆದರೆ ಆಗ ಗಡಿ ಕೇಂದ್ರಗಳಲ್ಲಿ ಭದ್ರತಾ ಪಡೆಗಳು ತಡೆದಿದ್ದರು.

ಎಂಎಸ್‌ಪಿ ಜೊತೆಗೆ, ರೈತರು ಕೃಷಿ ಸಾಲ ಮನ್ನಾ, ರೈತರು ಮತ್ತು ಕೃಷಿ ಕಾರ್ಮಿಕರಿಗೆ ಪಿಂಚಣಿ, ವಿದ್ಯುತ್ ದರ ಏರಿಕೆಯನ್ನು ಸ್ಥಗಿತಗೊಳಿಸುವುದು, ರೈತರ ಮೇಲಿನ ಪೊಲೀಸ್ ಪ್ರಕರಣಗಳನ್ನು ಹಿಂಪಡೆಯುವುದು ಮತ್ತು 2021ರ ಲಖಿಂಪುರ ಖೇರಿ ಹಿಂಸಾಚಾರದ ಸಂತ್ರಸ್ತರಿಗೆ ನ್ಯಾಯಕ್ಕಾಗಿ ರೈತರು ಒತ್ತಾಯಿಸುತ್ತಿದ್ದಾರೆ ಮತ್ತು 2020-21ರ ಪ್ರತಿಭಟನೆಯಲ್ಲಿ  ಸುಮಾರು 600ಕ್ಕೂ ಹೆಚ್ಚು ಮೃತಪಟ್ಟ ರೈತರ ಕುಟುಂಬಗಳಿಗೆ ಪರಿಹಾರ ನೀಡುವುದು ರೈತ ಹೋರಾಟಗಾರರ ಬೇಡಿಕೆಗಳಲ್ಲಿ ಸೇರಿವೆ.

ಇದನ್ನೂ ಓದಿ…ಬಾಂಗ್ಲಾದೇಶದ ದಲಿತರ ಬಗ್ಗೆ ಮೌನವಾಗಿರುವ ಕಾಂಗ್ರೆಸ್, ಸಂಭಾಲ್ ಮೂಲಕ ಮುಸ್ಲಿಮರನ್ನು ಓಲೈಸುತ್ತಿದೆ: ಮಾಯಾವತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...