Homeಮುಖಪುಟಇಂದು ಮತ್ತೆ ರೈತರಿಂದ ದೆಹಲಿಗೆ ಪ್ರತಿಭಟನಾ ಮೆರವಣಿಗೆ

ಇಂದು ಮತ್ತೆ ರೈತರಿಂದ ದೆಹಲಿಗೆ ಪ್ರತಿಭಟನಾ ಮೆರವಣಿಗೆ

- Advertisement -
- Advertisement -

ಚಂಡಿಗಡ: ಪಂಜಾಬ್ ಮತ್ತು ಹರಿಯಾಣದಿಂದ ರೈತರ ಗುಂಪುವೊಂದು ಇಂದು (ಭಾನುವಾರ) ದೆಹಲಿಯತ್ತ ಮೆರವಣಿಗೆ ನಡೆಸಲಿದೆ. ಕೇಂದ್ರ ಸರ್ಕಾರವು ಶುಕ್ರವಾರದಂದು ನಡೆಸಿದ ನಮ್ಮ ಪ್ರತಿಭಟನೆಗೆ ಸರಿಯಾಗಿ ಪ್ರತಿಕ್ರಿಯೆ ನೀಡಿಲ್ಲ ಮತ್ತು ನಮ್ಮ ಜೊತೆ ಮಾತುಕತೆ ನಡೆಸಿಲ್ಲವೆಂದು ರೈತ ನಾಯಕರು ಆರೋಪಿಸಿದ್ದಾರೆ.

ದೆಹಲಿ ತಲುಪಲು ರೈತ ಹೋರಾಟಗಾರರು ಹೊಸ ಪ್ರಯತ್ನದ ನಿರೀಕ್ಷೆಯಲ್ಲಿರುವುದರಿಂದ ಪಂಜಾಬ್-ಹರಿಯಾಣ ಗಡಿಯಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ. ರೈತ ಹೋರಾಟಗಾರರನ್ನು ತಡೆಯಲು ಮುಂಗಡವಾಗಿ ಬ್ಯಾರಿಕೇಡ್‌ಗಳನ್ನು ಸ್ಥಾಪಿಸಲಾಗಿದೆ.

ಇಂದು ನಡೆಯುವ ಹೊಸತನದ ರೈತ ಪ್ರತಿಭಟನಾ ಮೆರವಣಿಗೆಯು ಶುಕ್ರವಾರದ ರೀತಿಯಲ್ಲಿಯೇ ಇರಲಿದೆ. ಶುಕ್ರವಾರದಂದು ರೈತರು ರಾಷ್ಟ್ರ ರಾಜಧಾನಿಯತ್ತ ಸಾಗಲು ಪ್ರಯತ್ನಿಸಿದರು. ಆದರೆ ಭದ್ರತಾ ಸಿಬ್ಬಂದಿ ಗಡಿಯಲ್ಲಿ ಅಶ್ರುವಾಯು ಶೆಲ್ ಗಳನ್ನು ಹಾರಿಸಿದಾಗ ಹಲವಾರು ಪ್ರತಿಭಟನಾಕಾರರು ಗಾಯಗೊಂಡಿದ್ದರು.

ಕನಿಷ್ಠ ಬೆಂಬಲ ಬೆಲೆಗೆ (ಎಂಎಸ್‌ಪಿ) ಕಾನೂನು ಖಾತರಿ ಸೇರಿದಂತೆ ತಮ್ಮ ವಿವಿಧ ಬೇಡಿಕೆಗಳಿಗೆ ಸಂಬಂಧಿಸಿದಂತೆ ಕೇಂದ್ರ ಸರಕಾರವು ನಮ್ಮ ಜೊತೆ ಮಾತುಕತೆಗೆ ಬಂದಿಲ್ಲ. 101 ರೈತರ ಗುಂಪು ಇಂದು (ಡಿ.8) ದೆಹಲಿಗೆ ತಮ್ಮ ಪಾದಯಾತ್ರೆಯನ್ನು ಪುನರಾರಂಭಿಸಲಿದೆ ಎಂದು ರೈತ ಮುಖಂಡ ಸರ್ವಾನ್ ಸಿಂಗ್ ಪಂಧೇರ್ ಹೇಳಿದ್ದಾರೆ

ರೈತರು ಮತ್ತು ಕಾರ್ಮಿಕರೊಂದಿಗೆ ಮಾತುಕತೆಯಾಡಬಾರದೆಂದು ಕೇಂದ್ರವು ತೀರ್ಮಾನಿಸಿದಂತೆ ಕಾಣುತ್ತದೆ. ಅವರು ನಮ್ಮನ್ನು ತಡೆಯಲು ಬಲಪ್ರಯೋಗ ಮಾಡುತ್ತಿದ್ದಾರೆ. ಶುಕ್ರವಾರದಂತೆ ನಾವು ಶಾಂತಿಯುತವಾಗಿ ಮತ್ತು ಶಿಸ್ತಿನಿಂದ ದೆಹಲಿಗೆ ಹೋಗುತ್ತೇವೆ. ನರೇಂದ್ರ ಮೋದಿ ಸರ್ಕಾರವು ಮಾತುಕತೆಯಾಡುವ ಮನಸ್ಥಿತಿಯಲ್ಲಿಲ್ಲ. ಮಧ್ಯಾಹ್ನ 12 ಗಂಟೆ ಸುಮಾರಿಗೆ 101 ರೈತರ ನಿಯೋಗವನ್ನು ಪ್ರತಿಭಟನಾ ಮೆರವಣಿಗೆಯೊಂದಿಗೆ ದೆಹಲಿಗೆ ಕಳುಹಿಸಲು ನಾವು ನಿರ್ಧರಿಸಿದ್ದೇವೆ ಎಂದು ಪಾಂಡರ್ ಹೇಳಿದರು.

ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು ಸಂಸತ್ತಿನ ದಿಕ್ಕು ತಪ್ಪಿಸುತ್ತಿದ್ದಾರೆ ಎಂದು ಅವರು ಆರೋಪಿಸಿದರು.

ಕೃಷಿ ಸಚಿವರು ಸಂಸತ್ತಿನ ದಿಕ್ಕು ತಪ್ಪಿಸುತ್ತಿದ್ದಾರೆ. ನಾವು ಎಂಎಸ್‌ಪಿ ಮೇಲೆ ಕಾನೂನು ಮೂಲಕ ಭರವಸೆ ನೀಡಬೇಕೆಂದು ಒತ್ತಾಯಿಸುತ್ತಿದ್ದೇವೆ. ಆದರೆ ಸಚಿವರು ಮೌನವಾಗಿದ್ದಾರೆ ಎಂದು ಪಂಧೇರ್ ಹೇಳಿದರು.

ಪಂಜಾಬ್‌ಗೆ ಬಿಜೆಪಿ ನಾಯಕರ ಪ್ರವೇಶವನ್ನು ರೈತರಾದ ನಾವು ವಿರೋಧಿಸುತ್ತೇವೆ ಎಂದು ಇದೇ ಸಮಯದಲ್ಲಿ ಪಂಧೇರ್ ಘೋಷಿಸಿದರು.

ಕಿಸಾನ್ ಮಜ್ದೂರ್ ಮೋರ್ಚಾ ಮತ್ತು ಸಂಯುಕ್ತ ಕಿಸಾನ್ ಮೋರ್ಚಾ (ರಾಜಕೀಯೇತರ) ದಿಂದ ನಡೆಸುತ್ತಿರುವ ಈ ಪ್ರತಿಭಟನೆಯು ಈಗ 300 ನೇ ದಿನಕ್ಕೆ ಕಾಲಿಟ್ಟಿದೆ. ಆದರೆ ಕೇಂದ್ರ ಸರ್ಕಾರ ಇನ್ನೂ ಹಠಮಾರಿ ಧೋರಣೆಯಲ್ಲಿಯೇ ಇದೆ. ಪಂಜಾಬ್‌ಗೆ ಬಿಜೆಪಿ ನಾಯಕರ ಪ್ರವೇಶವನ್ನು ಪ್ರತಿಭಟಿಸುವ ಮತ್ತೊಂದು ದೊಡ್ಡ ಘೋಷಣೆ ಮಾಡಿದ್ದೇವೆ. ಇಂದು ಹರಿಯಾಣ ಮುಖ್ಯಮಂತ್ರಿ ನಯಾಬ್ ಸಿಂಗ್ ಸೈನಿ ಮತ್ತು ಕೇಂದ್ರ ಸಚಿವ ನಿತಿನ್ ಗಡ್ಕರಿಯವರು ಪಂಜಾಬಿನ ಅಮೃತಸರಕ್ಕೆ ಹೋಗುತ್ತಿದ್ದಾರೆ ಎಂದು ನಾವು ಕೇಳಿದ್ದೇವೆ. ಆದರೆ ಇದು ಇನ್ನೂ ಖಚಿತವಾಗಿಲ್ಲ. ಇವರು  ರಾಜ್ಯಕ್ಕೆ ಪ್ರವೇಶಿಸುವುದನ್ನು ಪ್ರತಿಭಟಿಸುವಂತೆ ನಾವು ಪಂಜಾಬ್‌ನ ರೈತರಿಗೆ ಕರೆ ನೀಡುತ್ತೇವೆ ಎಂದು ಅವರು ಹೇಳಿದರು.

ಹರಿಯಾಣ ಭದ್ರತಾ ಸಿಬ್ಬಂದಿಯಿಂದ ಶುಕ್ರವಾರದಂದು ಬಹುಪದರದ ಬ್ಯಾರಿಕೇಡ್‌ ನಿರ್ಮಿಸಿ ನಮ್ಮ ಜಾಥಾವನ್ನು ನಿಲ್ಲಿಸಲಾಯಿತು. ನಿಷೇಧಾಜ್ಞೆಗಳ ಹೊರತಾಗಿಯೂ, ರೈತರು ಬ್ಯಾರಿಕೇಡ್ ಗಳನ್ನು ಭೇದಿಸಲು ಪ್ರಯತ್ನಿಸಿದರು. ಆದರೆ ಭದ್ರತಾ ಪಡೆಗಳು ಅಶ್ರುವಾಯು ಶೆಲ್‌ಗಳನ್ನು ಸಿಡಿಸಿದ್ದರಿಂದ ಪ್ರತಿರೋಧವನ್ನು ಎದುರಿಸಬೇಕಾಯಿತು.  ಪಂಜಾಬ್‌ನ ಶಂಭುವಿನ ನಮ್ಮ ಪ್ರತಿಭಟನಾ ಸ್ಥಳಕ್ಕೆ ಮರಳುವಂತೆ ಅವರು ಒತ್ತಾಯಿಸಿದರು.

ರೈತರು ಈ ಹಿಂದೆ ಫೆಬ್ರವರಿ 13 ಮತ್ತು ಫೆಬ್ರವರಿ 21 ರಂದು ದೆಹಲಿ ಕಡೆಗೆ ಮೆರವಣಿಗೆ ನಡೆಸಲು ಪ್ರಯತ್ನಿಸಿದ್ದರು.  ಆದರೆ ಆಗ ಗಡಿ ಕೇಂದ್ರಗಳಲ್ಲಿ ಭದ್ರತಾ ಪಡೆಗಳು ತಡೆದಿದ್ದರು.

ಎಂಎಸ್‌ಪಿ ಜೊತೆಗೆ, ರೈತರು ಕೃಷಿ ಸಾಲ ಮನ್ನಾ, ರೈತರು ಮತ್ತು ಕೃಷಿ ಕಾರ್ಮಿಕರಿಗೆ ಪಿಂಚಣಿ, ವಿದ್ಯುತ್ ದರ ಏರಿಕೆಯನ್ನು ಸ್ಥಗಿತಗೊಳಿಸುವುದು, ರೈತರ ಮೇಲಿನ ಪೊಲೀಸ್ ಪ್ರಕರಣಗಳನ್ನು ಹಿಂಪಡೆಯುವುದು ಮತ್ತು 2021ರ ಲಖಿಂಪುರ ಖೇರಿ ಹಿಂಸಾಚಾರದ ಸಂತ್ರಸ್ತರಿಗೆ ನ್ಯಾಯಕ್ಕಾಗಿ ರೈತರು ಒತ್ತಾಯಿಸುತ್ತಿದ್ದಾರೆ ಮತ್ತು 2020-21ರ ಪ್ರತಿಭಟನೆಯಲ್ಲಿ  ಸುಮಾರು 600ಕ್ಕೂ ಹೆಚ್ಚು ಮೃತಪಟ್ಟ ರೈತರ ಕುಟುಂಬಗಳಿಗೆ ಪರಿಹಾರ ನೀಡುವುದು ರೈತ ಹೋರಾಟಗಾರರ ಬೇಡಿಕೆಗಳಲ್ಲಿ ಸೇರಿವೆ.

ಇದನ್ನೂ ಓದಿ…ಬಾಂಗ್ಲಾದೇಶದ ದಲಿತರ ಬಗ್ಗೆ ಮೌನವಾಗಿರುವ ಕಾಂಗ್ರೆಸ್, ಸಂಭಾಲ್ ಮೂಲಕ ಮುಸ್ಲಿಮರನ್ನು ಓಲೈಸುತ್ತಿದೆ: ಮಾಯಾವತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...