Homeಚಳವಳಿದಕ್ಷಿಣ ಭಾರತದ ರಾಜ್ಯಗಳಲ್ಲಿ ರೈತರ ಟ್ರಾಕ್ಟರ್‌ ಪರೇಡ್‌; ಸಂಯುಕ್ತ ಕಿಸಾನ್‌ ಮೋರ್ಚಾದಿಂದ ಅಭಿನಂದನೆ

ದಕ್ಷಿಣ ಭಾರತದ ರಾಜ್ಯಗಳಲ್ಲಿ ರೈತರ ಟ್ರಾಕ್ಟರ್‌ ಪರೇಡ್‌; ಸಂಯುಕ್ತ ಕಿಸಾನ್‌ ಮೋರ್ಚಾದಿಂದ ಅಭಿನಂದನೆ

- Advertisement -
- Advertisement -

ಗಣರಾಜ್ಯೋತ್ಸದ ದಿನ ದೆಹಲಿಯಲ್ಲಿ ಟ್ರಾಕ್ಟರ್ ಪರೇಡ್‌ ನಡೆಸುತ್ತಿರುವಾಗಲೇ ದೇಶದ ವಿವಿಧ ರಾಜ್ಯಗಳಲ್ಲಿ ಗಣತಂತ್ರ ಪರೇಡ್, ಟ್ರಾಕ್ಟರ್ ಪರೇಡ್‌ ಹೆಸರಿನಲ್ಲಿ ರೈತರ ಬೃಹತ್‌ ರ್‍ಯಾಲಿಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ದಕ್ಷಿಣ ಭಾರತದ ರಾಜ್ಯಗಳಲ್ಲಿ ಸಂಘಟಿಸಲಾಗುತ್ತಿರುವ ಈ ಹೋರಾಟಕ್ಕೆ ಸಂಯುಕ್ತ ಕಿಸಾನ್‌ ಮೋರ್ಚಾ ಅಭಿನಂದಿಸಿದೆ.

ಸೋಮವಾರ ದಕ್ಷಿಣ ಭಾರತದ ರೈತ ಹೋರಾಟಗಾರರನ್ನು ಉದ್ದೇಶಿಸಿ ಸಂಯುಕ್ತ ಕಿಸಾನ್‌ ಮೋರ್ಚಾ ವಿಡಿಯೋ ಸಂದೇಶವನ್ನು ಕಳಿಸಿದ್ದು, “ನಾಳೆ ನಾವು ದೆಹಲಿಯಲ್ಲಿ ರೈತ-ಟ್ರಾಕ್ಟರ್‌ ಪರೇಡ್‌ ಹಮ್ಮಿಕೊಳ್ಳುತ್ತಿದ್ದೇವೆ. ಕಳೆದ ಎರಡು ತಿಂಗಳುಗಳಿಂದ, ಕೃಷಿ ಕಾಯ್ದೆಗಳ ಹಿಂಪಡೆಯುವಂತೆ ಆಗ್ರಹಿಸಿ ದೆಹಲಿಯ ಸುತ್ತಲೂ ಆರು ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದೇವೆ. ಲಕ್ಷಾಂತರ ಜನರು ದೆಹಲಿಯನ್ನು ತಲುಪಿದ್ದಾರೆ. ಒಂದೂವರೆ ಲಕ್ಷ ಟ್ರಾಕ್ಟರ್‌ಗಳು ದೆಹಲಿ ತಲುಪಿವೆ. ಇನ್ನೂ ಬರಲಿವೆ” ಎಂದು ಅವರು ಹೇಳಿದರು.

ಇದನ್ನೂ ಓದಿ: ಗಡಿಯಲ್ಲಿ ಮೃತಪಟ್ಟರೆ ದೇಶಪ್ರೇಮಿ, ಹಕ್ಕುಗಳನ್ನು ಕೇಳಿದರೆ ಖಾಲಿಸ್ಥಾನಿ!

“ದಕ್ಷಿಣ ರಾಜ್ಯಗಳಾದ, ಕರ್ನಾಟಕ, ತಮಿಳುನಾಡು, ಮಹಾರಾಷ್ಟ್ರದಲ್ಲೂ ನಮ್ಮೊಂದಿಗೆ ಜೊತೆಯಾಗಿದ್ದಾರೆ. ವಿವಿಧ ರೀತಿಯಲ್ಲಿ ಪ್ರತಿಭಟನೆ ಮಾಡುತ್ತಾ ಬೆಂಬಲಿಸುತ್ತಿದ್ದಾರೆ. ರೈತ ಮಹಿಳೆಯರ ದಿನ, ಸುಭಾಷ್‌ಚಂದ್ರಬೋಸ್‌ ಜನ್ಮದಿನ, ಈಗ ಗಣರಾಜ್ಯೋತ್ಸವದಂದು ಪ್ರತಿಭಟನೆ ನಡೆಸುತ್ತಿದ್ದೇವೆ. ಮುಂಬೈ, ಹೈದರಾಬಾದ್‌ ಸೇರಿದಂತೆ ಹಲವೆಡೆ ಯಶಸ್ವಿಯಾಗಿ ಹೋರಾಟ ನಡೆಯುತ್ತಿವೆ. ಎಲ್ಲೆಡೆಯಿಂದ ಒಗ್ಗಟ್ಟು ವ್ಯಕ್ತವಾಗುತ್ತಿದ್ದೆ. ಇದಕ್ಕೆ ನಾವು ಕೃತಜ್ಞರಾಗಿದ್ದೇವೆ” ಎಂದು ಸಂಯುಕ್ತ ಕಿಸಾನ್‌ ಮೋರ್ಚಾ ನಾಯಕ ದರ್ಶನ್‌ ಪಾಲ್‌ ವಿಡಿಯೋ ಸಂದೇಶದಲ್ಲಿ ತಿಳಿಸಿದ್ದಾರೆ.

“ಉತ್ತರ ಭಾರತದಲ್ಲಿ ಅತಿ ಉತ್ಸಾಹದಲ್ಲಿ ಹೋರಾಟದಲ್ಲಿ ಪಾಲ್ಗೊಳ್ಳುತ್ತಿದ್ದು, ದಕ್ಷಿಣ ಭಾರತದಲ್ಲೂ ಹೋರಾಟ ಸಂಘಟಿತವಾಗಿದೆ. ಇದು ನಮ್ಮದಷ್ಟೇ ಅಲ್ಲ, ನಿಮ್ಮ ಹೋರಾಟ ಕೂಡ. ಕೃಷಿ ಕಾಯ್ದೆಗಳ ಹಿಂಪಡೆಯುವವರೆಗೆ ಹೋರಾಟ ನಡೆಸೋಣ” ಎಂದು ಕರೆಕೊಟ್ಟರು.

ಇದನ್ನೂ ಓದಿ: ಮಹಾರಾಷ್ಟ್ರದ 21 ಜಿಲ್ಲೆಯಿಂದ ಮುಂಬೈಗೆ ಭೋರ್ಗರೆದ ರೈತರ ದಂಡು

ಈ ವರದಿ ‘ಮಾಸ್ ಮೀಡಿಯಾ ಫೌಂಡೇಷನ್’ ನಿಯೋಜಿಸಿರುವ ವಿಶೇಷ ದೆಹಲಿ ತಂಡದಿಂದ ಪಡೆದ ಮಾಹಿತಿ ಆಧರಿಸಿ, ಸಿದ್ಧಪಡಿಸಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...