Homeಮುಖಪುಟಫೆ.16ರಂದು 'ಗ್ರಾಮೀಣ ಭಾರತ ಬಂದ್‌'ಗೆ ಕರೆ ಕೊಟ್ಟ ರೈತ ಸಂಘಟನೆಗಳು

ಫೆ.16ರಂದು ‘ಗ್ರಾಮೀಣ ಭಾರತ ಬಂದ್‌’ಗೆ ಕರೆ ಕೊಟ್ಟ ರೈತ ಸಂಘಟನೆಗಳು

- Advertisement -
- Advertisement -

‘ದಿಲ್ಲಿ ಚಲೋ’ ನಡುವೆಯೇ ಸಂಯುಕ್ತ ಕಿಸಾನ್ ಮೋರ್ಚಾ (ಎಸ್‌ಕೆಎಂ), ಕೇಂದ್ರ ಕಾರ್ಮಿಕ ಸಂಘಟನೆಗಳೊಂದಿಗೆ ಫೆಬ್ರವರಿ 16ರಂದು ‘ಗ್ರಾಮೀಣ ಭಾರತ ಬಂದ್‌’ ಗೆ ಕರೆ ನೀಡಿದೆ.

ಫೆ.16ರಂದು ಬೆಳಗ್ಗೆ 6ರಿಂದ ಸಂಜೆ 4ಗಂಟೆಯವರೆಗೆ ದೇಶದ ಗ್ರಾಮೀಣ ಪ್ರದೇಶಗಳಲ್ಲಿ ಬಂದ್ ಆಚರಿಸಲು ರೈತ ಸಂಘಟನೆಗಳು ನಿರ್ಧರಿಸಿದ್ದು, ಮಧ್ಯಾಹ್ನ 12 ರಿಂದ ಸಂಜೆ 4 ಗಂಟೆಯವರೆಗೆ ದೇಶದ ಪ್ರಮುಖ ರಸ್ತೆಗಳಲ್ಲಿ ರೈತರು ವ್ಯಾಪಕ ಪ್ರತಿಭಟನೆ ನಡೆಸಲಿದ್ದಾರೆ. ಪಂಜಾಬ್‌ನಲ್ಲಿ ಪ್ರತಿಭಟನೆಯ ಸಮಯದಲ್ಲಿ ರಾಜ್ಯ ಮತ್ತು ರಾಷ್ಟ್ರೀಯ ಹೆದ್ದಾರಿಗಳ ಪ್ರಮುಖ ಭಾಗಗಳನ್ನು ನಾಲ್ಕು ಗಂಟೆಗಳ ಕಾಲ ಮುಚ್ಚಲು ನಿರ್ಧರಿಸಲಾಗಿದೆ.

ಶನಿವಾರ ಲುಧಿಯಾನದಲ್ಲಿ ಕರೆದಿದ್ದ ರೈತರ ಸಭೆಯಲ್ಲಿ, ಭಾರತೀಯ ಕಿಸಾನ್ ಯೂನಿಯನ್ (ಬಿಕೆಯು) ಲಖೋವಲ್‌ನ ಪ್ರಧಾನ ಕಾರ್ಯದರ್ಶಿ ಹರಿಂದರ್ ಸಿಂಗ್ ಲಖೋವಾಲ್ ಅವರು ಗ್ರಾಮೀಣ ಭಾರತ್ ಬಂದ್‌ಗೆ ಸಂಬಂಧಿಸಿದ ಕಾರ್ಯತಂತ್ರವನ್ನು ಅನಾವರಣಗೊಳಿಸಿದ್ದಾರೆ.

ಎಸ್‌ಕೆಎಂ ರಾಷ್ಟ್ರೀಯ ಸಮನ್ವಯ ಸಮಿತಿ (ಎನ್‌ಸಿಸಿ) ಸದಸ್ಯ ಡಾ ದರ್ಶನ್ ಪಾಲ್ ಅವರು ಇಂಡಿಯನ್ ಎಕ್ಸ್‌ಪ್ರೆಸ್‌ನೊಂದಿಗೆ ಮಾತನಾಡುತ್ತಾ, “ಡಿಸೆಂಬರ್‌ನಲ್ಲಿಯೇ ಗ್ರಾಮೀಣ ಭಾರತ್ ಬಂದ್ ಯೋಜನೆ ರೂಪಿಸಲಾಗಿತ್ತು. ಬಂದ್‌ ದಿನ ಕೃಷಿ ಚಟುವಟಿಕೆಗಳು, ನರೇಗಾ ಕೆಲಸ ಸೇರಿದಂತೆ ಗ್ರಾಮೀಣ ಭಾಗದ ಎಲ್ಲಾ ಚಟುವಟಿಕೆಗಳನ್ನು ನಿಲ್ಲಿಸಲಾಗುವುದು. ಯಾವುದೇ ರೈತರು, ಕೃಷಿ ಕಾರ್ಮಿಕರು ಅಥವಾ ಗ್ರಾಮೀಣ ಕಾರ್ಮಿಕರು ಕೆಲಸ ಮಾಡುವುದಿಲ್ಲ. ಆಂಬ್ಯುಲೆನ್ಸ್‌ಗಳು, ಮರಣ, ಮದುವೆ, ಮೆಡಿಕಲ್ ಶಾಪ್‌ಗಳು, ವಾರ್ತಾಪತ್ರಿಕೆ ಪೂರೈಕೆ, ಬೋರ್ಡ್ ಪರೀಕ್ಷೆಗೆ ಹೋಗುವ ವಿದ್ಯಾರ್ಥಿಗಳು ಮತ್ತು ವಿಮಾನ ನಿಲ್ದಾಣಕ್ಕೆ ಹೋಗುವ ಪ್ರಯಾಣಿಕರ ತುರ್ತು ಸೇವೆಗಳಿಗೆ ಯಾವುದೇ ಸಮಸ್ಯೆ ಆಗುವುದಿಲ್ಲ ಎಂದಿದ್ದಾರೆ.

ತರಕಾರಿ ಮತ್ತು ಇತರ ಬೆಳೆಗಳ ವ್ಯಾಪಾರ ಮತ್ತು ಸಂಗ್ರಹಣೆಯನ್ನು ಸ್ಥಗಿತಗೊಳಿಸಲಾಗುವುದು. ಗ್ರಾಮೀಣ ಪ್ರದೇಶದ ಅಂಗಡಿಗಳು, ಧಾನ್ಯ ಮಾರುಕಟ್ಟೆಗಳು, ತರಕಾರಿ ಮಾರುಕಟ್ಟೆಗಳು, ಸರ್ಕಾರಿ ಮತ್ತು ಸರ್ಕಾರೇತರ ಕಚೇರಿಗಳು, ಗ್ರಾಮೀಣ ಕೈಗಾರಿಕೆ ಮತ್ತು ಸೇವಾ ವಲಯದ ಸಂಸ್ಥೆಗಳು ಮತ್ತು ಖಾಸಗಿ ವಲಯದ ಉದ್ಯಮಗಳನ್ನು ಮುಚ್ಚುವಂತೆ ಒತ್ತಾಯಿಸಲಾಗಿದೆ. ಹೆಚ್ಚುವರಿಯಾಗಿ, ಮುಷ್ಕರದ ಅವಧಿಯಲ್ಲಿ ಹಳ್ಳಿಗಳ ಅಕ್ಕಪಕ್ಕದ ಪಟ್ಟಣಗಳಲ್ಲಿನ ಅಂಗಡಿಗಳು ಮತ್ತು ವ್ಯಾಪಾರಗಳು ಮುಚ್ಚಲಾಗುವುದು ಎಂದು ತಿಳಿಸಿದ್ದಾರೆ.

ರೈತರ ಬೇಡಿಕೆಗಳೇನು?

ಇಂದು (ಫೆ.13) ದಿಲ್ಲಿ ಚಲೋಗೆ ಕರೆಕೊಟ್ಟ ರೈತ ಸಂಘಗಳ ಬೇಡಿಕೆಗಳಾದ ಎಂಎಸ್‌ಪಿ ಜಾರಿ ಸೇರಿದಂತೆ ಅದೇ ರೀತಿಯ ಬೇಡಿಕೆಗಳನ್ನು ಮುಂಡಿಟ್ಟುಕೊಂಡು ಗ್ರಾಮೀಣ ಭಾರತ ಬಂದ್‌ಗೆ ಕರೆ ಕೊಡಲಾಗಿದೆ. ಇದಲ್ಲದೆ, ತಿಂಗಳಿಗೆ ₹26,000 ಕನಿಷ್ಠ ವೇತನ, ನಾಲ್ಕು ಕಾರ್ಮಿಕ ಸಂಹಿತೆಗಳ ರದ್ದತಿ, ಮೂಲಭೂತ ಹಕ್ಕಾಗಿ ಖಾತರಿಪಡಿಸಿದ ಉದ್ಯೋಗ, ಸಾರ್ವಜನಿಕ ವಲಯದ ಉದ್ಯಮಗಳ (ಪಿಎಸ್‌ಯು) ಖಾಸಗೀಕರಣಕ್ಕೆ ವಿರೋಧ ಮತ್ತು ಉದ್ಯೋಗಿಗಳ ಸಂದರ್ಭೋಚಿತಗೊಳಿಸುವಿಕೆ ಮತ್ತು ಸ್ಥಿರ-ಅವಧಿಯ ಉದ್ಯೋಗವನ್ನು ರದ್ದುಗೊಳಿಸುವುದು ಇತ್ಯಾದಿ ಬೇಡಿಕೆಗಳನ್ನು ರೈತ ಸಂಘಟನೆಗಳು ಹೊಂದಿವೆ.

ಹೆಚ್ಚುವರಿಯಾಗಿ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯನ್ನು (MGNREGS)ಬಲಪಡಿಸುವುದು, ಹಳೆಯ ಪಿಂಚಣಿ ಯೋಜನೆಯನ್ನು ಮರುಸ್ಥಾಪಿಸುವುದು, ಔಪಚಾರಿಕ ಮತ್ತು ಅನೌಪಚಾರಿಕ ವಲಯಗಳಲ್ಲಿ ಎಲ್ಲರಿಗೂ ಪಿಂಚಣಿ ಮತ್ತು ಸಾಮಾಜಿಕ ಭದ್ರತೆಯನ್ನು ನೀಡುವುದು ಇತ್ಯಾದಿ ಬೇಡಿಕೆಗಳನ್ನು ರೈತರು ಸರ್ಕಾದ ಮುಂದಿಟ್ಟಿದ್ದಾರೆ.

ಇದನ್ನೂ ಓದಿ : ದಿಲ್ಲಿ ಚಲೋ: ಶಂಭು ಗಡಿಯಲ್ಲಿ ರೈತರ ಮೇಲೆ ಪೊಲೀಸ್‌ ದೌರ್ಜನ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...