Homeಮುಖಪುಟಫೆ.16ರಂದು 'ಗ್ರಾಮೀಣ ಭಾರತ ಬಂದ್‌'ಗೆ ಕರೆ ಕೊಟ್ಟ ರೈತ ಸಂಘಟನೆಗಳು

ಫೆ.16ರಂದು ‘ಗ್ರಾಮೀಣ ಭಾರತ ಬಂದ್‌’ಗೆ ಕರೆ ಕೊಟ್ಟ ರೈತ ಸಂಘಟನೆಗಳು

- Advertisement -
- Advertisement -

‘ದಿಲ್ಲಿ ಚಲೋ’ ನಡುವೆಯೇ ಸಂಯುಕ್ತ ಕಿಸಾನ್ ಮೋರ್ಚಾ (ಎಸ್‌ಕೆಎಂ), ಕೇಂದ್ರ ಕಾರ್ಮಿಕ ಸಂಘಟನೆಗಳೊಂದಿಗೆ ಫೆಬ್ರವರಿ 16ರಂದು ‘ಗ್ರಾಮೀಣ ಭಾರತ ಬಂದ್‌’ ಗೆ ಕರೆ ನೀಡಿದೆ.

ಫೆ.16ರಂದು ಬೆಳಗ್ಗೆ 6ರಿಂದ ಸಂಜೆ 4ಗಂಟೆಯವರೆಗೆ ದೇಶದ ಗ್ರಾಮೀಣ ಪ್ರದೇಶಗಳಲ್ಲಿ ಬಂದ್ ಆಚರಿಸಲು ರೈತ ಸಂಘಟನೆಗಳು ನಿರ್ಧರಿಸಿದ್ದು, ಮಧ್ಯಾಹ್ನ 12 ರಿಂದ ಸಂಜೆ 4 ಗಂಟೆಯವರೆಗೆ ದೇಶದ ಪ್ರಮುಖ ರಸ್ತೆಗಳಲ್ಲಿ ರೈತರು ವ್ಯಾಪಕ ಪ್ರತಿಭಟನೆ ನಡೆಸಲಿದ್ದಾರೆ. ಪಂಜಾಬ್‌ನಲ್ಲಿ ಪ್ರತಿಭಟನೆಯ ಸಮಯದಲ್ಲಿ ರಾಜ್ಯ ಮತ್ತು ರಾಷ್ಟ್ರೀಯ ಹೆದ್ದಾರಿಗಳ ಪ್ರಮುಖ ಭಾಗಗಳನ್ನು ನಾಲ್ಕು ಗಂಟೆಗಳ ಕಾಲ ಮುಚ್ಚಲು ನಿರ್ಧರಿಸಲಾಗಿದೆ.

ಶನಿವಾರ ಲುಧಿಯಾನದಲ್ಲಿ ಕರೆದಿದ್ದ ರೈತರ ಸಭೆಯಲ್ಲಿ, ಭಾರತೀಯ ಕಿಸಾನ್ ಯೂನಿಯನ್ (ಬಿಕೆಯು) ಲಖೋವಲ್‌ನ ಪ್ರಧಾನ ಕಾರ್ಯದರ್ಶಿ ಹರಿಂದರ್ ಸಿಂಗ್ ಲಖೋವಾಲ್ ಅವರು ಗ್ರಾಮೀಣ ಭಾರತ್ ಬಂದ್‌ಗೆ ಸಂಬಂಧಿಸಿದ ಕಾರ್ಯತಂತ್ರವನ್ನು ಅನಾವರಣಗೊಳಿಸಿದ್ದಾರೆ.

ಎಸ್‌ಕೆಎಂ ರಾಷ್ಟ್ರೀಯ ಸಮನ್ವಯ ಸಮಿತಿ (ಎನ್‌ಸಿಸಿ) ಸದಸ್ಯ ಡಾ ದರ್ಶನ್ ಪಾಲ್ ಅವರು ಇಂಡಿಯನ್ ಎಕ್ಸ್‌ಪ್ರೆಸ್‌ನೊಂದಿಗೆ ಮಾತನಾಡುತ್ತಾ, “ಡಿಸೆಂಬರ್‌ನಲ್ಲಿಯೇ ಗ್ರಾಮೀಣ ಭಾರತ್ ಬಂದ್ ಯೋಜನೆ ರೂಪಿಸಲಾಗಿತ್ತು. ಬಂದ್‌ ದಿನ ಕೃಷಿ ಚಟುವಟಿಕೆಗಳು, ನರೇಗಾ ಕೆಲಸ ಸೇರಿದಂತೆ ಗ್ರಾಮೀಣ ಭಾಗದ ಎಲ್ಲಾ ಚಟುವಟಿಕೆಗಳನ್ನು ನಿಲ್ಲಿಸಲಾಗುವುದು. ಯಾವುದೇ ರೈತರು, ಕೃಷಿ ಕಾರ್ಮಿಕರು ಅಥವಾ ಗ್ರಾಮೀಣ ಕಾರ್ಮಿಕರು ಕೆಲಸ ಮಾಡುವುದಿಲ್ಲ. ಆಂಬ್ಯುಲೆನ್ಸ್‌ಗಳು, ಮರಣ, ಮದುವೆ, ಮೆಡಿಕಲ್ ಶಾಪ್‌ಗಳು, ವಾರ್ತಾಪತ್ರಿಕೆ ಪೂರೈಕೆ, ಬೋರ್ಡ್ ಪರೀಕ್ಷೆಗೆ ಹೋಗುವ ವಿದ್ಯಾರ್ಥಿಗಳು ಮತ್ತು ವಿಮಾನ ನಿಲ್ದಾಣಕ್ಕೆ ಹೋಗುವ ಪ್ರಯಾಣಿಕರ ತುರ್ತು ಸೇವೆಗಳಿಗೆ ಯಾವುದೇ ಸಮಸ್ಯೆ ಆಗುವುದಿಲ್ಲ ಎಂದಿದ್ದಾರೆ.

ತರಕಾರಿ ಮತ್ತು ಇತರ ಬೆಳೆಗಳ ವ್ಯಾಪಾರ ಮತ್ತು ಸಂಗ್ರಹಣೆಯನ್ನು ಸ್ಥಗಿತಗೊಳಿಸಲಾಗುವುದು. ಗ್ರಾಮೀಣ ಪ್ರದೇಶದ ಅಂಗಡಿಗಳು, ಧಾನ್ಯ ಮಾರುಕಟ್ಟೆಗಳು, ತರಕಾರಿ ಮಾರುಕಟ್ಟೆಗಳು, ಸರ್ಕಾರಿ ಮತ್ತು ಸರ್ಕಾರೇತರ ಕಚೇರಿಗಳು, ಗ್ರಾಮೀಣ ಕೈಗಾರಿಕೆ ಮತ್ತು ಸೇವಾ ವಲಯದ ಸಂಸ್ಥೆಗಳು ಮತ್ತು ಖಾಸಗಿ ವಲಯದ ಉದ್ಯಮಗಳನ್ನು ಮುಚ್ಚುವಂತೆ ಒತ್ತಾಯಿಸಲಾಗಿದೆ. ಹೆಚ್ಚುವರಿಯಾಗಿ, ಮುಷ್ಕರದ ಅವಧಿಯಲ್ಲಿ ಹಳ್ಳಿಗಳ ಅಕ್ಕಪಕ್ಕದ ಪಟ್ಟಣಗಳಲ್ಲಿನ ಅಂಗಡಿಗಳು ಮತ್ತು ವ್ಯಾಪಾರಗಳು ಮುಚ್ಚಲಾಗುವುದು ಎಂದು ತಿಳಿಸಿದ್ದಾರೆ.

ರೈತರ ಬೇಡಿಕೆಗಳೇನು?

ಇಂದು (ಫೆ.13) ದಿಲ್ಲಿ ಚಲೋಗೆ ಕರೆಕೊಟ್ಟ ರೈತ ಸಂಘಗಳ ಬೇಡಿಕೆಗಳಾದ ಎಂಎಸ್‌ಪಿ ಜಾರಿ ಸೇರಿದಂತೆ ಅದೇ ರೀತಿಯ ಬೇಡಿಕೆಗಳನ್ನು ಮುಂಡಿಟ್ಟುಕೊಂಡು ಗ್ರಾಮೀಣ ಭಾರತ ಬಂದ್‌ಗೆ ಕರೆ ಕೊಡಲಾಗಿದೆ. ಇದಲ್ಲದೆ, ತಿಂಗಳಿಗೆ ₹26,000 ಕನಿಷ್ಠ ವೇತನ, ನಾಲ್ಕು ಕಾರ್ಮಿಕ ಸಂಹಿತೆಗಳ ರದ್ದತಿ, ಮೂಲಭೂತ ಹಕ್ಕಾಗಿ ಖಾತರಿಪಡಿಸಿದ ಉದ್ಯೋಗ, ಸಾರ್ವಜನಿಕ ವಲಯದ ಉದ್ಯಮಗಳ (ಪಿಎಸ್‌ಯು) ಖಾಸಗೀಕರಣಕ್ಕೆ ವಿರೋಧ ಮತ್ತು ಉದ್ಯೋಗಿಗಳ ಸಂದರ್ಭೋಚಿತಗೊಳಿಸುವಿಕೆ ಮತ್ತು ಸ್ಥಿರ-ಅವಧಿಯ ಉದ್ಯೋಗವನ್ನು ರದ್ದುಗೊಳಿಸುವುದು ಇತ್ಯಾದಿ ಬೇಡಿಕೆಗಳನ್ನು ರೈತ ಸಂಘಟನೆಗಳು ಹೊಂದಿವೆ.

ಹೆಚ್ಚುವರಿಯಾಗಿ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯನ್ನು (MGNREGS)ಬಲಪಡಿಸುವುದು, ಹಳೆಯ ಪಿಂಚಣಿ ಯೋಜನೆಯನ್ನು ಮರುಸ್ಥಾಪಿಸುವುದು, ಔಪಚಾರಿಕ ಮತ್ತು ಅನೌಪಚಾರಿಕ ವಲಯಗಳಲ್ಲಿ ಎಲ್ಲರಿಗೂ ಪಿಂಚಣಿ ಮತ್ತು ಸಾಮಾಜಿಕ ಭದ್ರತೆಯನ್ನು ನೀಡುವುದು ಇತ್ಯಾದಿ ಬೇಡಿಕೆಗಳನ್ನು ರೈತರು ಸರ್ಕಾದ ಮುಂದಿಟ್ಟಿದ್ದಾರೆ.

ಇದನ್ನೂ ಓದಿ : ದಿಲ್ಲಿ ಚಲೋ: ಶಂಭು ಗಡಿಯಲ್ಲಿ ರೈತರ ಮೇಲೆ ಪೊಲೀಸ್‌ ದೌರ್ಜನ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...

ಪೋಕ್ಸೋ ಕೇಸ್ : ವಚನಾನಂದ ಸ್ವಾಮಿಯ ನಿರೀಕ್ಷಣಾ ಜಾಮೀನು ರದ್ದು

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಸ್ವಾಮಿಗೆ ಸೆಷನ್ಸ್ ಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ಗುರುವಾರ (ಜೂನ್ 25) ರದ್ದುಗೊಳಿಸಿದೆ. ಅಲ್ಲದೆ, ಸೆಷನ್ಸ್ ಕೋರ್ಟ್ ಜಾಮೀನು ನೀಡಿದ ರೀತಿಯ ಬಗ್ಗೆ ತೀವ್ರ ಕಳವಳ ಮತ್ತು...

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...