Homeಮುಖಪುಟಫೆ.16ರಂದು 'ಗ್ರಾಮೀಣ ಭಾರತ ಬಂದ್‌'ಗೆ ಕರೆ ಕೊಟ್ಟ ರೈತ ಸಂಘಟನೆಗಳು

ಫೆ.16ರಂದು ‘ಗ್ರಾಮೀಣ ಭಾರತ ಬಂದ್‌’ಗೆ ಕರೆ ಕೊಟ್ಟ ರೈತ ಸಂಘಟನೆಗಳು

- Advertisement -
- Advertisement -

‘ದಿಲ್ಲಿ ಚಲೋ’ ನಡುವೆಯೇ ಸಂಯುಕ್ತ ಕಿಸಾನ್ ಮೋರ್ಚಾ (ಎಸ್‌ಕೆಎಂ), ಕೇಂದ್ರ ಕಾರ್ಮಿಕ ಸಂಘಟನೆಗಳೊಂದಿಗೆ ಫೆಬ್ರವರಿ 16ರಂದು ‘ಗ್ರಾಮೀಣ ಭಾರತ ಬಂದ್‌’ ಗೆ ಕರೆ ನೀಡಿದೆ.

ಫೆ.16ರಂದು ಬೆಳಗ್ಗೆ 6ರಿಂದ ಸಂಜೆ 4ಗಂಟೆಯವರೆಗೆ ದೇಶದ ಗ್ರಾಮೀಣ ಪ್ರದೇಶಗಳಲ್ಲಿ ಬಂದ್ ಆಚರಿಸಲು ರೈತ ಸಂಘಟನೆಗಳು ನಿರ್ಧರಿಸಿದ್ದು, ಮಧ್ಯಾಹ್ನ 12 ರಿಂದ ಸಂಜೆ 4 ಗಂಟೆಯವರೆಗೆ ದೇಶದ ಪ್ರಮುಖ ರಸ್ತೆಗಳಲ್ಲಿ ರೈತರು ವ್ಯಾಪಕ ಪ್ರತಿಭಟನೆ ನಡೆಸಲಿದ್ದಾರೆ. ಪಂಜಾಬ್‌ನಲ್ಲಿ ಪ್ರತಿಭಟನೆಯ ಸಮಯದಲ್ಲಿ ರಾಜ್ಯ ಮತ್ತು ರಾಷ್ಟ್ರೀಯ ಹೆದ್ದಾರಿಗಳ ಪ್ರಮುಖ ಭಾಗಗಳನ್ನು ನಾಲ್ಕು ಗಂಟೆಗಳ ಕಾಲ ಮುಚ್ಚಲು ನಿರ್ಧರಿಸಲಾಗಿದೆ.

ಶನಿವಾರ ಲುಧಿಯಾನದಲ್ಲಿ ಕರೆದಿದ್ದ ರೈತರ ಸಭೆಯಲ್ಲಿ, ಭಾರತೀಯ ಕಿಸಾನ್ ಯೂನಿಯನ್ (ಬಿಕೆಯು) ಲಖೋವಲ್‌ನ ಪ್ರಧಾನ ಕಾರ್ಯದರ್ಶಿ ಹರಿಂದರ್ ಸಿಂಗ್ ಲಖೋವಾಲ್ ಅವರು ಗ್ರಾಮೀಣ ಭಾರತ್ ಬಂದ್‌ಗೆ ಸಂಬಂಧಿಸಿದ ಕಾರ್ಯತಂತ್ರವನ್ನು ಅನಾವರಣಗೊಳಿಸಿದ್ದಾರೆ.

ಎಸ್‌ಕೆಎಂ ರಾಷ್ಟ್ರೀಯ ಸಮನ್ವಯ ಸಮಿತಿ (ಎನ್‌ಸಿಸಿ) ಸದಸ್ಯ ಡಾ ದರ್ಶನ್ ಪಾಲ್ ಅವರು ಇಂಡಿಯನ್ ಎಕ್ಸ್‌ಪ್ರೆಸ್‌ನೊಂದಿಗೆ ಮಾತನಾಡುತ್ತಾ, “ಡಿಸೆಂಬರ್‌ನಲ್ಲಿಯೇ ಗ್ರಾಮೀಣ ಭಾರತ್ ಬಂದ್ ಯೋಜನೆ ರೂಪಿಸಲಾಗಿತ್ತು. ಬಂದ್‌ ದಿನ ಕೃಷಿ ಚಟುವಟಿಕೆಗಳು, ನರೇಗಾ ಕೆಲಸ ಸೇರಿದಂತೆ ಗ್ರಾಮೀಣ ಭಾಗದ ಎಲ್ಲಾ ಚಟುವಟಿಕೆಗಳನ್ನು ನಿಲ್ಲಿಸಲಾಗುವುದು. ಯಾವುದೇ ರೈತರು, ಕೃಷಿ ಕಾರ್ಮಿಕರು ಅಥವಾ ಗ್ರಾಮೀಣ ಕಾರ್ಮಿಕರು ಕೆಲಸ ಮಾಡುವುದಿಲ್ಲ. ಆಂಬ್ಯುಲೆನ್ಸ್‌ಗಳು, ಮರಣ, ಮದುವೆ, ಮೆಡಿಕಲ್ ಶಾಪ್‌ಗಳು, ವಾರ್ತಾಪತ್ರಿಕೆ ಪೂರೈಕೆ, ಬೋರ್ಡ್ ಪರೀಕ್ಷೆಗೆ ಹೋಗುವ ವಿದ್ಯಾರ್ಥಿಗಳು ಮತ್ತು ವಿಮಾನ ನಿಲ್ದಾಣಕ್ಕೆ ಹೋಗುವ ಪ್ರಯಾಣಿಕರ ತುರ್ತು ಸೇವೆಗಳಿಗೆ ಯಾವುದೇ ಸಮಸ್ಯೆ ಆಗುವುದಿಲ್ಲ ಎಂದಿದ್ದಾರೆ.

ತರಕಾರಿ ಮತ್ತು ಇತರ ಬೆಳೆಗಳ ವ್ಯಾಪಾರ ಮತ್ತು ಸಂಗ್ರಹಣೆಯನ್ನು ಸ್ಥಗಿತಗೊಳಿಸಲಾಗುವುದು. ಗ್ರಾಮೀಣ ಪ್ರದೇಶದ ಅಂಗಡಿಗಳು, ಧಾನ್ಯ ಮಾರುಕಟ್ಟೆಗಳು, ತರಕಾರಿ ಮಾರುಕಟ್ಟೆಗಳು, ಸರ್ಕಾರಿ ಮತ್ತು ಸರ್ಕಾರೇತರ ಕಚೇರಿಗಳು, ಗ್ರಾಮೀಣ ಕೈಗಾರಿಕೆ ಮತ್ತು ಸೇವಾ ವಲಯದ ಸಂಸ್ಥೆಗಳು ಮತ್ತು ಖಾಸಗಿ ವಲಯದ ಉದ್ಯಮಗಳನ್ನು ಮುಚ್ಚುವಂತೆ ಒತ್ತಾಯಿಸಲಾಗಿದೆ. ಹೆಚ್ಚುವರಿಯಾಗಿ, ಮುಷ್ಕರದ ಅವಧಿಯಲ್ಲಿ ಹಳ್ಳಿಗಳ ಅಕ್ಕಪಕ್ಕದ ಪಟ್ಟಣಗಳಲ್ಲಿನ ಅಂಗಡಿಗಳು ಮತ್ತು ವ್ಯಾಪಾರಗಳು ಮುಚ್ಚಲಾಗುವುದು ಎಂದು ತಿಳಿಸಿದ್ದಾರೆ.

ರೈತರ ಬೇಡಿಕೆಗಳೇನು?

ಇಂದು (ಫೆ.13) ದಿಲ್ಲಿ ಚಲೋಗೆ ಕರೆಕೊಟ್ಟ ರೈತ ಸಂಘಗಳ ಬೇಡಿಕೆಗಳಾದ ಎಂಎಸ್‌ಪಿ ಜಾರಿ ಸೇರಿದಂತೆ ಅದೇ ರೀತಿಯ ಬೇಡಿಕೆಗಳನ್ನು ಮುಂಡಿಟ್ಟುಕೊಂಡು ಗ್ರಾಮೀಣ ಭಾರತ ಬಂದ್‌ಗೆ ಕರೆ ಕೊಡಲಾಗಿದೆ. ಇದಲ್ಲದೆ, ತಿಂಗಳಿಗೆ ₹26,000 ಕನಿಷ್ಠ ವೇತನ, ನಾಲ್ಕು ಕಾರ್ಮಿಕ ಸಂಹಿತೆಗಳ ರದ್ದತಿ, ಮೂಲಭೂತ ಹಕ್ಕಾಗಿ ಖಾತರಿಪಡಿಸಿದ ಉದ್ಯೋಗ, ಸಾರ್ವಜನಿಕ ವಲಯದ ಉದ್ಯಮಗಳ (ಪಿಎಸ್‌ಯು) ಖಾಸಗೀಕರಣಕ್ಕೆ ವಿರೋಧ ಮತ್ತು ಉದ್ಯೋಗಿಗಳ ಸಂದರ್ಭೋಚಿತಗೊಳಿಸುವಿಕೆ ಮತ್ತು ಸ್ಥಿರ-ಅವಧಿಯ ಉದ್ಯೋಗವನ್ನು ರದ್ದುಗೊಳಿಸುವುದು ಇತ್ಯಾದಿ ಬೇಡಿಕೆಗಳನ್ನು ರೈತ ಸಂಘಟನೆಗಳು ಹೊಂದಿವೆ.

ಹೆಚ್ಚುವರಿಯಾಗಿ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯನ್ನು (MGNREGS)ಬಲಪಡಿಸುವುದು, ಹಳೆಯ ಪಿಂಚಣಿ ಯೋಜನೆಯನ್ನು ಮರುಸ್ಥಾಪಿಸುವುದು, ಔಪಚಾರಿಕ ಮತ್ತು ಅನೌಪಚಾರಿಕ ವಲಯಗಳಲ್ಲಿ ಎಲ್ಲರಿಗೂ ಪಿಂಚಣಿ ಮತ್ತು ಸಾಮಾಜಿಕ ಭದ್ರತೆಯನ್ನು ನೀಡುವುದು ಇತ್ಯಾದಿ ಬೇಡಿಕೆಗಳನ್ನು ರೈತರು ಸರ್ಕಾದ ಮುಂದಿಟ್ಟಿದ್ದಾರೆ.

ಇದನ್ನೂ ಓದಿ : ದಿಲ್ಲಿ ಚಲೋ: ಶಂಭು ಗಡಿಯಲ್ಲಿ ರೈತರ ಮೇಲೆ ಪೊಲೀಸ್‌ ದೌರ್ಜನ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...