Homeಮುಖಪುಟಕೇಂದ್ರದ 'ಕೃಷಿ ಮಾರುಕಟ್ಟೆ ನೀತಿ' ತಿರಸ್ಕರಿಸಿದ ರೈತ ಸಂಘಗಳು : ದೇಶದಾದ್ಯಂತ ಬೃಹತ್ ಹೋರಾಟಕ್ಕೆ ನಿರ್ಧಾರ

ಕೇಂದ್ರದ ‘ಕೃಷಿ ಮಾರುಕಟ್ಟೆ ನೀತಿ’ ತಿರಸ್ಕರಿಸಿದ ರೈತ ಸಂಘಗಳು : ದೇಶದಾದ್ಯಂತ ಬೃಹತ್ ಹೋರಾಟಕ್ಕೆ ನಿರ್ಧಾರ

ಹೊಸ ಮಾರುಕಟ್ಟೆ ನೀತಿ ಹಿಂಪಡೆದ ಕೃಷಿ ಕಾನೂನಿನ ಮರುಹುಟ್ಟು ಎಂದ ಎಸ್‌ಕೆಎಂ

- Advertisement -
- Advertisement -

ಕೇಂದ್ರ ಕೃಷಿ ಸಚಿವಾಲಯದ ‘ರಾಷ್ಟ್ರೀಯ ಕೃಷಿ ಮಾರುಕಟ್ಟೆ ನೀತಿ’ (NPFAM) ಕರಡನ್ನು ರೈತ ಸಂಘಟನೆಗಳು ತಿರಸ್ಕರಿಸಿದ್ದು, ಇದರ ವಿರುದ್ದ ದೇಶದ ಎಲ್ಲಾ ರಾಜ್ಯಗಳಲ್ಲಿ ಮಹಾ ಪಂಚಾಯತ್‌, ಬೃಹತ್ ಪ್ರತಿಭಟನಾ ಸಭೆಗಳನ್ನು ನಡೆಸಲು ನಿರ್ಧರಿಸಿವೆ.

ಈ ಹಿಂದೆ ವಾಪಸ್ ಪಡೆದಿರುವ ಮೂರು ಕರಾಳ ಕೃಷಿ ಕಾನೂನುಗಳನ್ನು ಕೃಷಿ ಮಾರುಕಟ್ಟೆ ನೀತಿಯ ಹೆಸರಿನಲ್ಲಿ ಹಿಂಬಾಗಿಲ ಮೂಲಕ ಜಾರಿಗೆ ತರಲು ಕೇಂದ್ರ ಸರ್ಕಾರ ಮುಂದಾಗಿದೆ ಎಂದು ರೈತ ಸಂಘಟನೆಗಳು ಆರೋಪಿಸಿವೆ.

ಹೊಸ ನೀತಿಯ ವಿರುದ್ದ ಹೋರಾಟ ನಡೆಸುತ್ತಿರುವ ರೈತರನ್ನು ಬೆಂಬಲಿಸುವಂತೆ ಆಗ್ರಹಿಸಿ ಫೆಬ್ರವರಿ 8 ಮತ್ತು 9ರಂದು ದೇಶದಾದ್ಯಂತ ಎಲ್ಲಾ ಸಂಸದರ ನಿವಾಸ, ಕಚೇರಿಗಳ ಮುಂದೆ ಸಾಮೂಹಿಕ ಪ್ರತಿಭಟನೆ ನಡೆಸಲು ರೈತ ಸಂಘಟನೆಗಳು ತೀರ್ಮಾನಿಸಿವೆ. ಶುಕ್ರವಾರ (ಜನವರಿ 24, 2025) ನವದೆಹಲಿಯಲ್ಲಿ ನಡೆದ ಸಂಯುಕ್ತ ಕಿಸಾನ್ ಮೋರ್ಚಾದ (ಎಸ್‌ಕೆಎಂ) ಮಹಾಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

ಶುಕ್ರವಾರ (ಜ.24) ನಡೆದ ಎಸ್‌ಕೆಎಂ ಮಹಾಸಭೆ

“ಕೇಂದ್ರದ ಕೃಷಿ ಮಾರುಕಟ್ಟೆ ನೀತಿಯು ಈ ಹಿಂದೆ ಹಿಂಪಡೆಯಲಾದ ಮೂರು ಕೃಷಿ ಕಾನೂನುಗಳ ಹೊಸ ರೂಪವಾಗಿದೆ. ರಾಜ್ಯ ಸರ್ಕಾರಗಳ ಮೂಲಕ ಹಿಂಬಾಗಿಲಲ್ಲಿ ಬಲವಂತವಾಗಿ ಇದನ್ನು ಜಾರಿಗೆ ತರಲು ಕೇಂದ್ರ ಮುಂದಾಗಿದೆ. ಈ ನೀತಿಯು ರೈತ ವಿರೋಧಿ ಮತ್ತು ರಾಜ್ಯ ಸರ್ಕಾರಗಳ ವಿರೋಧಿಯಾಗಿದೆ” ಎಂದು 2020-21ರಲ್ಲಿ ಸಾಮೂಹಿಕ ರೈತ ಆಂದೋಲನದ ನೇತೃತ್ವ ವಹಿಸಿದ್ದ ಕೃಷಿ ಸಂಘಗಳ ಒಕ್ಕೂಟವಾದ ಎಸ್‌ಕೆಎಂ ಹೇಳಿದೆ.

ಮಾರ್ಚ್ 5ರಿಂದ ‘ಪ್ರತಿರೋಧ ರ್‍ಯಾಲಿ’

ಎಸ್‌ಕೆಎಂ ರಾಜ್ಯ ಸಮಿತಿಗಳ ನಾಯಕರು ಆಯಾ ರಾಜ್ಯಗಳ ಮುಖ್ಯಮಂತ್ರಿಯನ್ನು ಭೇಟಿಯಾಗಿ ಹೊಸ ಕೃಷಿ ಮಾರುಕಟ್ಟೆ ನೀತಿಯ ವಿರುದ್ದ ವಿಧಾನಸಭೆಗಳಲ್ಲಿ ನಿರ್ಣಯ ಅಂಗೀಕರಿಸುವಂತೆ ಮತ್ತು ಅದನ್ನು ವಾಪಸ್ ಹಿಂಪಡೆಯಲು ಕೇಂದ್ರವನ್ನು ಆಗ್ರಹಿಸುವಂತೆ ಮನವಿ ಮಾಡಲಿದ್ದಾರೆ. ಯಾವುದಾದರು ರಾಜ್ಯ ಸರ್ಕಾರ ರೈತರ ಮನವಿಯನ್ನು ಗಣನೆಗೆ ತೆಗೆದುಕೊಳ್ಳದಿದ್ದರೆ, ಆ ರಾಜ್ಯದ ರಾಜಧಾನಿ, ಜಿಲ್ಲಾ ಕೇಂದ್ರಗಳು ಮತ್ತು ಉಪ ಜಿಲ್ಲಾ ಕೇಂದ್ರಗಳಲ್ಲಿ ಮಾರ್ಚ್ 5ರಿಂದ ಮಹಾಪಂಚಾಯತ್, ರೈತ ಸಮಾವೇಶಗಳನ್ನು
ಆಯೋಜಿಸುವ ಮೂಲಕ ಮಹಾ ಪ್ರತಿರೋಧ ರ್‍ಯಾಲಿ ನಡೆಸಲಾಗುವುದು ಎಂದು ಎಸ್‌ಕೆಂಎಂ ಎಚ್ಚರಿಸಿದೆ.

ಶುಕ್ರವಾರ (ಜ.24) ನಡೆದ ಎಸ್‌ಕೆಎಂ ಮಹಾಸಭೆ

ಎಂಎನ್‌ಸಿಗಳಿಗೆ ಸಹಾಯ ಮಾಡುವ ಹುನ್ನಾರ

ಹೊಸ ನೀತಿಯು ಸರ್ಕಾರಿ ಬೆಂಬಲಿತ ಕೃಷಿ ಮಾರುಕಟ್ಟೆಗಳ ಮೇಲಿನ ನೇರ ದಾಳಿಯಾಗಿದೆ. ಇದು ಬಹುರಾಷ್ಟ್ರೀಯ ಕಂಪನಿಗಳಿಗೆ ಸಹಾಯ ಮಾಡುವ ಸಲುವಾಗಿ ಮಾರುಕಟ್ಟೆಗಳನ್ನು ಖಾಸಗೀಕರಣಗೊಳಿಸುವ ಗುರಿಯನ್ನು ಹೊಂದಿದೆ. ದೊಡ್ಡ ಕಂಪನಿಗಳು ಕೃಷಿ ಚಿಲ್ಲರೆ ವ್ಯಾಪಾರ ಮತ್ತು ಕೃಷಿ ಸಂಸ್ಕರಣಾ ಉದ್ಯಮವನ್ನು ನಿಯಂತ್ರಿಸಲು ಇದು ಸಹಾಯ ಮಾಡುತ್ತದೆ ಎಂದು ಎಸ್‌ಕೆಎಂ ಆರೋಪಿಸಿದೆ.

ಹೊಸ ಕೃಷಿ ಮಾರುಕಟ್ಟೆ ನೀತಿಯು ರೈತ ಉತ್ಪಾದಕ ಸಂಸ್ಥೆಗಳು (ಎಫ್‌ಪಿಒ) ಮತ್ತು ಇ-ರಾಷ್ಟ್ರೀಯ ಕೃಷಿ ಮಾರುಕಟ್ಟೆಯ ಮೂಲಕ ಸ್ಥಳೀಯ ಗ್ರಾಮೀಣ ಮಂಡಿಗಳನ್ನು ಜೋಡಿಸುತ್ತದೆ. ಎಫ್‌ಪಿಒ, ಸಹಕಾರಿ ಸಂಘಗಳು ಮತ್ತು ಸ್ವಸಹಾಯ ಗುಂಪುಗಳ ಮೂಲಕ ಒಪ್ಪಂದ ಕೃಷಿಯನ್ನು ಜಾರಿಗೊಳಿಸುತ್ತದೆ. ಆಹಾರ ಸಂಸ್ಕಾರಕ ಮೌಲ್ಯವರ್ಧಿತ ಸರಪಳಿಗಳಿಗೆ ಅಗ್ಗದ ಪೂರೈಕೆಯನ್ನು ಖಚಿತಪಡಿಸುತ್ತದೆ ಮತ್ತು ಕೃಷಿಯನ್ನು ಭವಿಷ್ಯದ ವ್ಯಾಪಾರ ಮತ್ತು ಷೇರು ಮಾರುಕಟ್ಟೆಯೊಂದಿಗೆ ಸಂಪರ್ಕಿಸುತ್ತದೆ. ಇವೆಲ್ಲವೂ ವಿಶ್ವ ವ್ಯಾಪಾರ ಸಂಸ್ಥೆ (ಡಬ್ಲ್ಯುಟಿಒ) ಮತ್ತು ವಿಶ್ವಬ್ಯಾಂಕ್ ಅನತಿಯಂತೆ ನಡೆಯುತ್ತಿವೆ ಎಂದು ಎಸ್‌ಕೆಎಂ ಹೇಳಿದೆ.

ಶುಕ್ರವಾರ (ಜ.24) ನಡೆದ ಎಸ್‌ಕೆಎಂ ಮಹಾಸಭೆ

ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಘೋಷಣೆ, ಸರ್ಕಾರಿ ಸಂಗ್ರಹಣೆ ಮತ್ತು ಸಾರ್ವಜನಿಕ ವಿತರಣಾ ವ್ಯವಸ್ಥೆಗೆ ಪೂರೈಕೆಗಾಗಿ ಆಹಾರ ಸಂಗ್ರಹಣೆ ಸೇರಿದಂತೆ ಯಾವುದೇ ವಿಚಾರಗಳು ಹೊಸ ಕೃಷಿ ಮಾರುಕಟ್ಟೆ ನೀತಿಯಲ್ಲಿ ಇಲ್ಲ. ಇದು ಬಫರ್ ಸ್ಟಾಕ್‌ಗಳನ್ನು ಮಾತ್ರ ಪೂರೈಸುತ್ತದೆ ಎಂದು ಎಸ್‌ಕೆಂ ತಿಳಿಸಿದೆ.

ರೈತ ಸಂಘಗಳ ನಾಯಕರಾದ ಹನ್ನನ್ ಮೊಲ್ಲಾ, ಜೋಗಿಂದರ್ ಸಿಂಗ್ ಉಗ್ರನ್, ರಾಕೇಶ್ ಟಿಕಾಯತ್, ರೇವುಲಾ ವೆಂಕಯ್ಯ, ಸತ್ಯವಾನ್ ಮತ್ತು ಡಾ. ಸುನಿಲಂ ಜೊತೆ 12 ರಾಜ್ಯಗಳ 73 ರೈತ ಸಂಘಟನೆಗಳ 165 ಪ್ರತಿನಿಧಿಗಳು ಎಸ್‌ಕೆಎಂನ ಸಾಮಾನ್ಯ ಸಭೆಯಲ್ಲಿ ಹಾಜರಿದ್ದರು.

ಸಭೆಯು ನಾಲ್ಕು ಕಾರ್ಮಿಕ ಸಂಹಿತೆಗಳನ್ನು ಜಾರಿಗೆ ತರುವ ಕ್ರಮವನ್ನೂ ಖಂಡಿಸಿದೆ ಮತ್ತು ಕಾರ್ಮಿಕ ಸಂಘಗಳ ಪ್ರತಿರೋಧದ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿದೆ.

ಆರ್‌ಎಸ್‌ಎಸ್‌ ಸೇರುವಂತೆ ಸರ್ಕಾರಿ ಕಾಲೇಜು ಆಡಳಿತದಿಂದ ಒತ್ತಡ : ಹೈಕೋರ್ಟ್ ಮೆಟ್ಟಿಲೇರಿದ ಉಪನ್ಯಾಸಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೈರಮುತ್ತುಗೆ ಜ್ಞಾನಪೀಠ ಪ್ರಶಸ್ತಿ : ಚಿನ್ಮಯಿ ಶ್ರೀಪಾದ, ಟಿಎಂ ಕೃಷ್ಣ ಸೇರಿ ಹಲವರಿಂದ ಟೀಕೆ

ಲಿಂಗತಾರತಮ್ಯ ಮತ್ತು ಲೈಂಗಿಕ ಕಿರುಕುಳದಂತಹ ಗಂಭೀರ ಆರೋಪಗಳನ್ನು ಎದುರಿಸುತ್ತಿರುವ ತಮಿಳು ಸಾಹಿತಿ ವೈರಮುತ್ತು ಅವರಿಗೆ 2025ನೇ ಸಾಲಿನ ಪ್ರತಿಷ್ಠಿತ ಜ್ಞಾನಪೀಠ ಪ್ರಶಸ್ತಿ ಘೋಷಿಸಿರುವುದು ವ್ಯಾಪಕ ಟೀಕೆಗೆ ಗುರಿಯಾಗಿದೆ.  ಸಾಹಿತ್ಯ ಕ್ಷೇತ್ರದಲ್ಲಿನ ಅವರ ಕೊಡುಗೆಯನ್ನು ಪರಿಗಣಿಸಿ...

ಡ್ರೋನ್ ದಾಳಿಯ ನಂತರ ದುಬೈ ವಿಮಾನ ನಿಲ್ದಾಣದ ಬಳಿ ಬೆಂಕಿ ಅವಘಡ; ವಿಮಾನ ಕಾರ್ಯಾಚರಣೆ ತಾತ್ಕಾಲಿಕವಾಗಿ ಸ್ಥಗಿತ

ದುಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಡ್ರೋನ್ ದಾಳಿಯಿಂದಾಗಿ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಆದರೆ, ದುಬೈ ಅಧಿಕಾರಿಗಳ ಪ್ರಕಾರ, ವಿಮಾನಗಳ ಹಾರಾಟವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ."ದುಬೈ ಅಂತರಾಷ್ಟ್ರೀಯ ವಿಮಾನ...

ಕಾನ್ಶಿ ರಾಮ್‌ಗೆ ಭಾರತ ರತ್ನ ನೀಡುವಂತೆ ಆಗ್ರಹಿಸಿ ಪ್ರಧಾನಿಗೆ ಪತ್ರ ಬರೆದ ರಾಹುಲ್ ಗಾಂಧಿ

ಬಹುಜನ ಸಮಾಜ ಪಕ್ಷ (ಬಿಎಸ್‌ಪಿ) ಸ್ಥಾಪಿಸಿದ ದಲಿತ ಐಕಾನ್ ಕಾನ್ಶಿ ರಾಮ್‌ ಅವರಿಗೆ ಭಾರತದ ಅತ್ಯುನ್ನತ ನಾಗರಿಕ ಗೌರವವಾದ ಭಾರತ ರತ್ನವನ್ನು ನೀಡುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾನುವಾರ ಪ್ರಧಾನಿ ನರೇಂದ್ರ...

ರಾಜ್ಯಸಭೆಯ 37 ಸ್ಥಾನಗಳಿಗೆ ಚುನಾವಣೆ; 26 ಅಭ್ಯರ್ಥಿಗಳು ಅವಿರೋಧ ಆಯ್ಕೆ

ಹತ್ತು ರಾಜ್ಯಗಳ 37 ಸ್ಥಾನಗಳನ್ನು ಒಳಗೊಂಡ ದ್ವೈವಾರ್ಷಿಕ ರಾಜ್ಯಸಭಾ ಚುನಾವಣೆಗೆ ಸೋಮವಾರ (ಮಾ.16) ಮತದಾನ ನಡೆಯುತ್ತಿದೆ. ಬಿಹಾರ, ಒಡಿಶಾ ಮತ್ತು ಹರಿಯಾಣದಲ್ಲಿ ತೀವ್ರ ಪೈಪೋಟಿ ಏರ್ಪಡುವ ಸಾಧ್ಯತೆ ಇದ್ದು, 26 ಅಭ್ಯರ್ಥಿಗಳು ಈಗಾಗಲೇ...

ಒಡಿಶಾ | ಆಸ್ಪತ್ರೆಯಲ್ಲಿ ಬೆಂಕಿ ಅವಘಡ : 10 ಮಂದಿ ಸಾವು

ಒಡಿಶಾದ ಕಟಕ್‌ನಲ್ಲಿರುವ ಎಸ್‌ಸಿಬಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಟ್ರಾಮಾ ಕೇರ್ ಐಸಿಯುನಲ್ಲಿ ಸೋಮವಾರ (ಮಾರ್ಚ್ 16) ಬೆಂಕಿ ಅವಘಡ ಸಂಭವಿಸಿದ್ದು, ಕನಿಷ್ಠ 10 ರೋಗಿಗಳು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ ಎಂದು...

ಆಸ್ಕರ್‌ 2026 : ಮೈಕೆಲ್ ಬಿ. ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ, ಒನ್ ಬ್ಯಾಟಲ್ ಆಫ್ಟರ್ ಅನದರ್‌ಗೆ ಅತ್ಯುತ್ತಮ ಚಿತ್ರ ಪ್ರಶಸ್ತಿ

ಪ್ರತಿಷ್ಠಿತ 98ನೇ ಅಕಾಡೆಮಿ ಪ್ರಶಸ್ತಿ (ಆಸ್ಕರ್ 2026) ಸಮಾರಂಭ ಲಾಸ್ ಏಂಜಲೀಸ್‌ನ ಡಾಲ್ಬಿ ಥಿಯೇಟರ್‌ನಲ್ಲಿ ಮಾರ್ಚ್ 15ರಂದು (ಭಾರತೀಯ ಕಾಲಮಾನ ಮಾರ್ಚ್ 16) ನಡೆಯಿತು. ಖ್ಯಾತ ಹಾಸ್ಯನಟ ಕೋನನ್ ಒಬ್ರೇನ್ ಅವರು ಈ ಕಾರ್ಯಕ್ರಮವನ್ನು ನಡೆಸಿಕೊಟ್ಟರು....

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ; ಬಂಗಾಳದಲ್ಲಿ ಮಾತ್ರ ಎರಡು ಹಂತದ ಮತದಾನ

ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮುಖ್ಯಸ್ಥರಾದ ಜ್ಞಾನೇಶ್ ಕುಮಾರ್ ಪ್ರಕಟಿಸಿದರು. ದೆಹಲಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ...

ಫ್ಲಿಪ್‌ಕಾರ್ಟ್‌ನಿಂದ 1 ರೂ.ಗೆ ಹಾಲು ಮಾರಾಟ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಬಮುಲ್‌ ಆಗ್ರಹ

ಫ್ಲಿಪ್‌ಕಾರ್ಟ್‌ ಸಂಸ್ಥೆಯು ಆನ್‌ಲೈನ್‌ ಮೂಲಕ 1 ರೂ.ಗೆ ಲೀಟರ್‌ ಹಾಲನ್ನು ಮಾರಾಟ ಮಾಡಿರುವುದು ಭಾರಿ ಜನಾಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ, ಬೆಂಗಳೂರು ನಗರ, ಗ್ರಾಮೀಣ ಮತ್ತು ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ...

“ಮಕ್ಕಳ ಹಂತಕನನ್ನು ಹುಡುಕಿ ಹತ್ಯೆ ಮಾಡುತ್ತೇವೆ” : ನೆತನ್ಯಾಹು ಸುರಕ್ಷಿತವಾಗಿದ್ದಾರೆ ಎಂಬ ಇಸ್ರೇಲ್ ಸ್ಪಷ್ಟನೆ ಬೆನ್ನಲ್ಲೆ ಐಆರ್‌ಜಿಸಿ ಹೇಳಿಕೆ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹುಡುಕಿ ಹತ್ಯೆ ಮಾಡುತ್ತೇವೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಹೇಳಿರುವುದಾಗಿ ವರದಿಯಾಗಿದೆ. ನೆತನ್ಯಾಹು ಅವರ ಹತ್ಯೆಯ ವದಂತಿಗಳನ್ನು ಇಸ್ರೇಲ್ ನಿರಾಕರಿಸಿದ ಬೆನ್ನಲ್ಲೇ, ಐಆರ್‌ಜಿಸಿ ಈ...

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...