Homeಮುಖಪುಟಕೇಂದ್ರದ 'ಕೃಷಿ ಮಾರುಕಟ್ಟೆ ನೀತಿ' ತಿರಸ್ಕರಿಸಿದ ರೈತ ಸಂಘಗಳು : ದೇಶದಾದ್ಯಂತ ಬೃಹತ್ ಹೋರಾಟಕ್ಕೆ ನಿರ್ಧಾರ

ಕೇಂದ್ರದ ‘ಕೃಷಿ ಮಾರುಕಟ್ಟೆ ನೀತಿ’ ತಿರಸ್ಕರಿಸಿದ ರೈತ ಸಂಘಗಳು : ದೇಶದಾದ್ಯಂತ ಬೃಹತ್ ಹೋರಾಟಕ್ಕೆ ನಿರ್ಧಾರ

ಹೊಸ ಮಾರುಕಟ್ಟೆ ನೀತಿ ಹಿಂಪಡೆದ ಕೃಷಿ ಕಾನೂನಿನ ಮರುಹುಟ್ಟು ಎಂದ ಎಸ್‌ಕೆಎಂ

- Advertisement -
- Advertisement -

ಕೇಂದ್ರ ಕೃಷಿ ಸಚಿವಾಲಯದ ‘ರಾಷ್ಟ್ರೀಯ ಕೃಷಿ ಮಾರುಕಟ್ಟೆ ನೀತಿ’ (NPFAM) ಕರಡನ್ನು ರೈತ ಸಂಘಟನೆಗಳು ತಿರಸ್ಕರಿಸಿದ್ದು, ಇದರ ವಿರುದ್ದ ದೇಶದ ಎಲ್ಲಾ ರಾಜ್ಯಗಳಲ್ಲಿ ಮಹಾ ಪಂಚಾಯತ್‌, ಬೃಹತ್ ಪ್ರತಿಭಟನಾ ಸಭೆಗಳನ್ನು ನಡೆಸಲು ನಿರ್ಧರಿಸಿವೆ.

ಈ ಹಿಂದೆ ವಾಪಸ್ ಪಡೆದಿರುವ ಮೂರು ಕರಾಳ ಕೃಷಿ ಕಾನೂನುಗಳನ್ನು ಕೃಷಿ ಮಾರುಕಟ್ಟೆ ನೀತಿಯ ಹೆಸರಿನಲ್ಲಿ ಹಿಂಬಾಗಿಲ ಮೂಲಕ ಜಾರಿಗೆ ತರಲು ಕೇಂದ್ರ ಸರ್ಕಾರ ಮುಂದಾಗಿದೆ ಎಂದು ರೈತ ಸಂಘಟನೆಗಳು ಆರೋಪಿಸಿವೆ.

ಹೊಸ ನೀತಿಯ ವಿರುದ್ದ ಹೋರಾಟ ನಡೆಸುತ್ತಿರುವ ರೈತರನ್ನು ಬೆಂಬಲಿಸುವಂತೆ ಆಗ್ರಹಿಸಿ ಫೆಬ್ರವರಿ 8 ಮತ್ತು 9ರಂದು ದೇಶದಾದ್ಯಂತ ಎಲ್ಲಾ ಸಂಸದರ ನಿವಾಸ, ಕಚೇರಿಗಳ ಮುಂದೆ ಸಾಮೂಹಿಕ ಪ್ರತಿಭಟನೆ ನಡೆಸಲು ರೈತ ಸಂಘಟನೆಗಳು ತೀರ್ಮಾನಿಸಿವೆ. ಶುಕ್ರವಾರ (ಜನವರಿ 24, 2025) ನವದೆಹಲಿಯಲ್ಲಿ ನಡೆದ ಸಂಯುಕ್ತ ಕಿಸಾನ್ ಮೋರ್ಚಾದ (ಎಸ್‌ಕೆಎಂ) ಮಹಾಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

ಶುಕ್ರವಾರ (ಜ.24) ನಡೆದ ಎಸ್‌ಕೆಎಂ ಮಹಾಸಭೆ

“ಕೇಂದ್ರದ ಕೃಷಿ ಮಾರುಕಟ್ಟೆ ನೀತಿಯು ಈ ಹಿಂದೆ ಹಿಂಪಡೆಯಲಾದ ಮೂರು ಕೃಷಿ ಕಾನೂನುಗಳ ಹೊಸ ರೂಪವಾಗಿದೆ. ರಾಜ್ಯ ಸರ್ಕಾರಗಳ ಮೂಲಕ ಹಿಂಬಾಗಿಲಲ್ಲಿ ಬಲವಂತವಾಗಿ ಇದನ್ನು ಜಾರಿಗೆ ತರಲು ಕೇಂದ್ರ ಮುಂದಾಗಿದೆ. ಈ ನೀತಿಯು ರೈತ ವಿರೋಧಿ ಮತ್ತು ರಾಜ್ಯ ಸರ್ಕಾರಗಳ ವಿರೋಧಿಯಾಗಿದೆ” ಎಂದು 2020-21ರಲ್ಲಿ ಸಾಮೂಹಿಕ ರೈತ ಆಂದೋಲನದ ನೇತೃತ್ವ ವಹಿಸಿದ್ದ ಕೃಷಿ ಸಂಘಗಳ ಒಕ್ಕೂಟವಾದ ಎಸ್‌ಕೆಎಂ ಹೇಳಿದೆ.

ಮಾರ್ಚ್ 5ರಿಂದ ‘ಪ್ರತಿರೋಧ ರ್‍ಯಾಲಿ’

ಎಸ್‌ಕೆಎಂ ರಾಜ್ಯ ಸಮಿತಿಗಳ ನಾಯಕರು ಆಯಾ ರಾಜ್ಯಗಳ ಮುಖ್ಯಮಂತ್ರಿಯನ್ನು ಭೇಟಿಯಾಗಿ ಹೊಸ ಕೃಷಿ ಮಾರುಕಟ್ಟೆ ನೀತಿಯ ವಿರುದ್ದ ವಿಧಾನಸಭೆಗಳಲ್ಲಿ ನಿರ್ಣಯ ಅಂಗೀಕರಿಸುವಂತೆ ಮತ್ತು ಅದನ್ನು ವಾಪಸ್ ಹಿಂಪಡೆಯಲು ಕೇಂದ್ರವನ್ನು ಆಗ್ರಹಿಸುವಂತೆ ಮನವಿ ಮಾಡಲಿದ್ದಾರೆ. ಯಾವುದಾದರು ರಾಜ್ಯ ಸರ್ಕಾರ ರೈತರ ಮನವಿಯನ್ನು ಗಣನೆಗೆ ತೆಗೆದುಕೊಳ್ಳದಿದ್ದರೆ, ಆ ರಾಜ್ಯದ ರಾಜಧಾನಿ, ಜಿಲ್ಲಾ ಕೇಂದ್ರಗಳು ಮತ್ತು ಉಪ ಜಿಲ್ಲಾ ಕೇಂದ್ರಗಳಲ್ಲಿ ಮಾರ್ಚ್ 5ರಿಂದ ಮಹಾಪಂಚಾಯತ್, ರೈತ ಸಮಾವೇಶಗಳನ್ನು
ಆಯೋಜಿಸುವ ಮೂಲಕ ಮಹಾ ಪ್ರತಿರೋಧ ರ್‍ಯಾಲಿ ನಡೆಸಲಾಗುವುದು ಎಂದು ಎಸ್‌ಕೆಂಎಂ ಎಚ್ಚರಿಸಿದೆ.

ಶುಕ್ರವಾರ (ಜ.24) ನಡೆದ ಎಸ್‌ಕೆಎಂ ಮಹಾಸಭೆ

ಎಂಎನ್‌ಸಿಗಳಿಗೆ ಸಹಾಯ ಮಾಡುವ ಹುನ್ನಾರ

ಹೊಸ ನೀತಿಯು ಸರ್ಕಾರಿ ಬೆಂಬಲಿತ ಕೃಷಿ ಮಾರುಕಟ್ಟೆಗಳ ಮೇಲಿನ ನೇರ ದಾಳಿಯಾಗಿದೆ. ಇದು ಬಹುರಾಷ್ಟ್ರೀಯ ಕಂಪನಿಗಳಿಗೆ ಸಹಾಯ ಮಾಡುವ ಸಲುವಾಗಿ ಮಾರುಕಟ್ಟೆಗಳನ್ನು ಖಾಸಗೀಕರಣಗೊಳಿಸುವ ಗುರಿಯನ್ನು ಹೊಂದಿದೆ. ದೊಡ್ಡ ಕಂಪನಿಗಳು ಕೃಷಿ ಚಿಲ್ಲರೆ ವ್ಯಾಪಾರ ಮತ್ತು ಕೃಷಿ ಸಂಸ್ಕರಣಾ ಉದ್ಯಮವನ್ನು ನಿಯಂತ್ರಿಸಲು ಇದು ಸಹಾಯ ಮಾಡುತ್ತದೆ ಎಂದು ಎಸ್‌ಕೆಎಂ ಆರೋಪಿಸಿದೆ.

ಹೊಸ ಕೃಷಿ ಮಾರುಕಟ್ಟೆ ನೀತಿಯು ರೈತ ಉತ್ಪಾದಕ ಸಂಸ್ಥೆಗಳು (ಎಫ್‌ಪಿಒ) ಮತ್ತು ಇ-ರಾಷ್ಟ್ರೀಯ ಕೃಷಿ ಮಾರುಕಟ್ಟೆಯ ಮೂಲಕ ಸ್ಥಳೀಯ ಗ್ರಾಮೀಣ ಮಂಡಿಗಳನ್ನು ಜೋಡಿಸುತ್ತದೆ. ಎಫ್‌ಪಿಒ, ಸಹಕಾರಿ ಸಂಘಗಳು ಮತ್ತು ಸ್ವಸಹಾಯ ಗುಂಪುಗಳ ಮೂಲಕ ಒಪ್ಪಂದ ಕೃಷಿಯನ್ನು ಜಾರಿಗೊಳಿಸುತ್ತದೆ. ಆಹಾರ ಸಂಸ್ಕಾರಕ ಮೌಲ್ಯವರ್ಧಿತ ಸರಪಳಿಗಳಿಗೆ ಅಗ್ಗದ ಪೂರೈಕೆಯನ್ನು ಖಚಿತಪಡಿಸುತ್ತದೆ ಮತ್ತು ಕೃಷಿಯನ್ನು ಭವಿಷ್ಯದ ವ್ಯಾಪಾರ ಮತ್ತು ಷೇರು ಮಾರುಕಟ್ಟೆಯೊಂದಿಗೆ ಸಂಪರ್ಕಿಸುತ್ತದೆ. ಇವೆಲ್ಲವೂ ವಿಶ್ವ ವ್ಯಾಪಾರ ಸಂಸ್ಥೆ (ಡಬ್ಲ್ಯುಟಿಒ) ಮತ್ತು ವಿಶ್ವಬ್ಯಾಂಕ್ ಅನತಿಯಂತೆ ನಡೆಯುತ್ತಿವೆ ಎಂದು ಎಸ್‌ಕೆಎಂ ಹೇಳಿದೆ.

ಶುಕ್ರವಾರ (ಜ.24) ನಡೆದ ಎಸ್‌ಕೆಎಂ ಮಹಾಸಭೆ

ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಘೋಷಣೆ, ಸರ್ಕಾರಿ ಸಂಗ್ರಹಣೆ ಮತ್ತು ಸಾರ್ವಜನಿಕ ವಿತರಣಾ ವ್ಯವಸ್ಥೆಗೆ ಪೂರೈಕೆಗಾಗಿ ಆಹಾರ ಸಂಗ್ರಹಣೆ ಸೇರಿದಂತೆ ಯಾವುದೇ ವಿಚಾರಗಳು ಹೊಸ ಕೃಷಿ ಮಾರುಕಟ್ಟೆ ನೀತಿಯಲ್ಲಿ ಇಲ್ಲ. ಇದು ಬಫರ್ ಸ್ಟಾಕ್‌ಗಳನ್ನು ಮಾತ್ರ ಪೂರೈಸುತ್ತದೆ ಎಂದು ಎಸ್‌ಕೆಂ ತಿಳಿಸಿದೆ.

ರೈತ ಸಂಘಗಳ ನಾಯಕರಾದ ಹನ್ನನ್ ಮೊಲ್ಲಾ, ಜೋಗಿಂದರ್ ಸಿಂಗ್ ಉಗ್ರನ್, ರಾಕೇಶ್ ಟಿಕಾಯತ್, ರೇವುಲಾ ವೆಂಕಯ್ಯ, ಸತ್ಯವಾನ್ ಮತ್ತು ಡಾ. ಸುನಿಲಂ ಜೊತೆ 12 ರಾಜ್ಯಗಳ 73 ರೈತ ಸಂಘಟನೆಗಳ 165 ಪ್ರತಿನಿಧಿಗಳು ಎಸ್‌ಕೆಎಂನ ಸಾಮಾನ್ಯ ಸಭೆಯಲ್ಲಿ ಹಾಜರಿದ್ದರು.

ಸಭೆಯು ನಾಲ್ಕು ಕಾರ್ಮಿಕ ಸಂಹಿತೆಗಳನ್ನು ಜಾರಿಗೆ ತರುವ ಕ್ರಮವನ್ನೂ ಖಂಡಿಸಿದೆ ಮತ್ತು ಕಾರ್ಮಿಕ ಸಂಘಗಳ ಪ್ರತಿರೋಧದ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿದೆ.

ಆರ್‌ಎಸ್‌ಎಸ್‌ ಸೇರುವಂತೆ ಸರ್ಕಾರಿ ಕಾಲೇಜು ಆಡಳಿತದಿಂದ ಒತ್ತಡ : ಹೈಕೋರ್ಟ್ ಮೆಟ್ಟಿಲೇರಿದ ಉಪನ್ಯಾಸಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್ | ಏರ್ ಆಂಬ್ಯುಲೆನ್ಸ್ ಪತನ : ರೋಗಿ, ವೈದ್ಯ ಸೇರಿ 7 ಮಂದಿ ಸಾವು

ರಾಂಚಿಯಿಂದ ದೆಹಲಿಗೆ ತೆರಳುತ್ತಿದ್ದ ಏರ್ ಆಂಬ್ಯುಲೆನ್ಸ್ ಜಾರ್ಖಂಡ್‌ನ ಛಾತ್ರಾ ಜಿಲ್ಲೆಯಲ್ಲಿ ಸೋಮವಾರ (ಫೆ.24) ಪತನಗೊಂಡಿದ್ದು, ಅದರಲ್ಲಿದ್ದ ಎಲ್ಲಾ ಏಳು ಜನರು ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ರೆಡ್‌ಬರ್ಡ್‌ ಏರ್ವೇಸ್ ಪ್ರೈವೆಟ್ ಲಿಮಿಟೆಡ್ ಎಂಬ ಸಂಸ್ಥೆ ನಿರ್ವಹಣೆ...

ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ

ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಬಹುಕಾಲದ ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪರಿಶಿಷ್ಟ ಜಾತಿ (ಎಸ್‌ಸಿ) ಎಡಗೈ ಸಂಬಂಧಿತ ಜಾತಿ ಮುಖಂಡರು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳು ಮತ್ತು...

“ಇಲ್ಲಿ 60 ವರ್ಷ ವಾಸಿಸಿದ್ದೆವು, ಒಂದೇ ದಿನದಲ್ಲಿ ನಿರಾಶ್ರಿತರಾದೆವು”: ಅಜಿ ನದಿ ದಡದ ಅಕ್ರಮ ಅತಿಕ್ರಮಣ ತೆರವಿನಲ್ಲಿ ಮನೆ ಕಳೆದುಕೊಂಡವರ ಮಾತು

ಗುಜರಾತ್‌ನ ರಾಜ್‌ಕೋಟ್ ಮುನ್ಸಿಪಲ್ ಕಾರ್ಪೊರೇಷನ್ (ಆರ್‌ಎಂಸಿ) ಜಂಗಲೇಶ್ವರದಲ್ಲಿ ನೂರಾರು ವಸತಿ ರಚನೆಗಳನ್ನು ನೆಲಸಮಗೊಳಿಸಿ ಹಲವಾರು ಕುಟುಂಬಗಳನ್ನು ನಿರಾಶ್ರಿತರನ್ನಾಗಿ ಮಾಡಿರುವ ಅಜಿ ನದಿಯ ದಡದಲ್ಲಿ ಅಕ್ರಮ ಅತಿಕ್ರಮಣಗಳನ್ನು ತೆಗೆದುಹಾಕಲು ದೊಡ್ಡ ಪ್ರಮಾಣದ ನೆಲಸಮ ಕಾರ್ಯಾಚರಣೆಯ...

ಇಂಡಿಯಾ ಬಣದ ಸಂಚಾಲಕರಾಗಲು ಸ್ಟಾಲಿನ್ ಸೂಕ್ತ: ಮಣಿಶಂಕರ್ ಅಯ್ಯರ್

"ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರು ಇಂಡಿಯಾ ಬಣದ ಸಂಚಾಲಕರಾಗಲು ಸೂಕ್ತ" ಎಂದು ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಪ್ರತಿಪಾದಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅಯ್ಯರ್, ತಮಿಳುನಾಡು ಮುಖ್ಯಮಂತ್ರಿ ಇಂಡಿಯಾ ಬಣದ ಸಂಚಾಲಕರಾಗಲು ಉತ್ತಮ...

ಬೆಂಗಳೂರು: ಮತ್ತು ಬೆರೆಸಿದ ಪಾನೀಯ ನೀಡಿ ಗೆಳೆಯ ಮತ್ತು ಆತನ ಸ್ನೇಹಿತನಿಂದ ಅತ್ಯಾಚಾರ, ಬೆದರಿಕೆ: ಕಾಲೇಜು ವಿದ್ಯಾರ್ಥಿನಿಯಿಂದ ದೂರು

19 ವರ್ಷದ ಖಾಸಗಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯ ಮತ್ತು ಅವನ ಸ್ನೇಹಿತನ ವಿರುದ್ಧ ಮಾದಕ ದ್ರವ್ಯ ಸೇವಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಿದ್ದಾಳೆ. ಜಕ್ಕೂರಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಗೆ...

ಮಕ್ಕಳಲ್ಲಿ ಹಿಂಸಾತ್ಮಕ ಪ್ರವೃತ್ತಿ ತಡೆಯಲು ಮೀನು-ಮಾಂಸ ಮಾರಾಟ ನಿಷೇಧ: ಬಿಹಾರ ಉಪಮುಖ್ಯಮಂತ್ರಿ

ಮಕ್ಕಳಲ್ಲಿ 'ಹಿಂಸಾತ್ಮಕ ಪ್ರವೃತ್ತಿ'ಗಳನ್ನು ನಿಲ್ಲಿಸುವ ಪ್ರಯತ್ನದಲ್ಲಿ ಧಾರ್ಮಿಕ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಅಥವಾ ಜನದಟ್ಟಣೆಯ ಸ್ಥಳಗಳ ಬಳಿ ಮಾಂಸ ಮತ್ತು ಮೀನು ಮಾರಾಟವನ್ನು ನಿಷೇಧಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಬಿಹಾರ ಉಪಮುಖ್ಯಮಂತ್ರಿ ವಿಜಯ್...

ದೆಹಲಿಯಲ್ಲಿ ಅರುಣಾಚಲದ ಮಹಿಳೆಯರಿಗೆ ಜನಾಂಗೀಯ ನಿಂದನೆ : ಪ್ರಕರಣ ದಾಖಲು

ದೆಹಲಿಯ ಮಾಳವೀಯ ನಗರದಲ್ಲಿ ಅರುಣಾಚಲ ಪ್ರದೇಶದ ಮೂವರು ಮಹಿಳೆಯರಿಗೆ ಜನಾಂಗೀಯ ನಿಂದನೆ ಮಾಡಿ, ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಫೆಬ್ರವರಿ 20 ಎಸಿ ದುರಸ್ತಿ ಸಂದರ್ಭದಲ್ಲಿ ಉಂಟಾದ ಸಣ್ಣ ಜಗಳವೊಂದು ಜನಾಂಗೀಯ ನಿಂದನೆಗೆ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿದ್ದ ಜಿಮ್ ಟ್ರೈನರ್ ‘ಮೊಹಮ್ಮದ್ ದೀಪಕ್’ ಅವರನ್ನು ಭೇಟಿಯಾದ ರಾಹುಲ್ ಗಾಂಧಿ 

ನವದೆಹಲಿ: ಕಳೆದ ತಿಂಗಳು ಕೋಟ್ದ್ವಾರದಲ್ಲಿರುವ ಅಹ್ಮದ್ ಅವರ ಬಾಬಾ ಸ್ಕೂಲ್ ಡ್ರೆಸ್ & ಮ್ಯಾಚಿಂಗ್ ಸೆಂಟರ್‌ನ ರಕ್ಷಣೆಗೆ ಬಂದು ಸುದ್ದಿಯಲ್ಲಿದ್ದ ಜಿಮ್ ತರಬೇತುದಾರ ದೀಪಕ್ ಅವರನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್...

‘ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ..’; ಛಲವಾದಿಗೆ ಸಚಿವ ಪ್ರಿಯಾಂಕ್‌ ತಿರುಗೇಟು

"ಸಂವಿಧಾನ ವಿರೋಧಿಸಿ ಕರಡು ಪ್ರತಿಯನ್ನು ಸುಟ್ಟಿದ್ದ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ" ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ...

ಅಮೆರಿಕದಿಂದ ದಾಳಿ ಬೆದರಿಕೆ : ಇರಾನ್ ತೊರೆಯುವಂತೆ ಭಾರತೀಯ ಪ್ರಜೆಗಳಿಗೆ ಸೂಚನೆ

ಅಮೆರಿಕದ ದಾಳಿ ಬೆದರಿಕೆ ಹಾಗೂ ಮತ್ತೆ ಪ್ರತಿಭಟನೆಗಳು ಭುಗಿಲೆದ್ದಿರುವ ಕಾರಣ, ಇರಾನ್‌ನಲ್ಲಿರುವ ಎಲ್ಲಾ ಭಾರತೀಯರು ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಸಾರಿಗೆ ವ್ಯವಸ್ಥೆಯ ಮೂಲಕ ತಕ್ಷಣ ದೇಶ ತೊರೆಯುವಂತೆ ತೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ...