Homeಮುಖಪುಟಕೇಂದ್ರದ 'ಕೃಷಿ ಮಾರುಕಟ್ಟೆ ನೀತಿ' ತಿರಸ್ಕರಿಸಿದ ರೈತ ಸಂಘಗಳು : ದೇಶದಾದ್ಯಂತ ಬೃಹತ್ ಹೋರಾಟಕ್ಕೆ ನಿರ್ಧಾರ

ಕೇಂದ್ರದ ‘ಕೃಷಿ ಮಾರುಕಟ್ಟೆ ನೀತಿ’ ತಿರಸ್ಕರಿಸಿದ ರೈತ ಸಂಘಗಳು : ದೇಶದಾದ್ಯಂತ ಬೃಹತ್ ಹೋರಾಟಕ್ಕೆ ನಿರ್ಧಾರ

ಹೊಸ ಮಾರುಕಟ್ಟೆ ನೀತಿ ಹಿಂಪಡೆದ ಕೃಷಿ ಕಾನೂನಿನ ಮರುಹುಟ್ಟು ಎಂದ ಎಸ್‌ಕೆಎಂ

- Advertisement -
- Advertisement -

ಕೇಂದ್ರ ಕೃಷಿ ಸಚಿವಾಲಯದ ‘ರಾಷ್ಟ್ರೀಯ ಕೃಷಿ ಮಾರುಕಟ್ಟೆ ನೀತಿ’ (NPFAM) ಕರಡನ್ನು ರೈತ ಸಂಘಟನೆಗಳು ತಿರಸ್ಕರಿಸಿದ್ದು, ಇದರ ವಿರುದ್ದ ದೇಶದ ಎಲ್ಲಾ ರಾಜ್ಯಗಳಲ್ಲಿ ಮಹಾ ಪಂಚಾಯತ್‌, ಬೃಹತ್ ಪ್ರತಿಭಟನಾ ಸಭೆಗಳನ್ನು ನಡೆಸಲು ನಿರ್ಧರಿಸಿವೆ.

ಈ ಹಿಂದೆ ವಾಪಸ್ ಪಡೆದಿರುವ ಮೂರು ಕರಾಳ ಕೃಷಿ ಕಾನೂನುಗಳನ್ನು ಕೃಷಿ ಮಾರುಕಟ್ಟೆ ನೀತಿಯ ಹೆಸರಿನಲ್ಲಿ ಹಿಂಬಾಗಿಲ ಮೂಲಕ ಜಾರಿಗೆ ತರಲು ಕೇಂದ್ರ ಸರ್ಕಾರ ಮುಂದಾಗಿದೆ ಎಂದು ರೈತ ಸಂಘಟನೆಗಳು ಆರೋಪಿಸಿವೆ.

ಹೊಸ ನೀತಿಯ ವಿರುದ್ದ ಹೋರಾಟ ನಡೆಸುತ್ತಿರುವ ರೈತರನ್ನು ಬೆಂಬಲಿಸುವಂತೆ ಆಗ್ರಹಿಸಿ ಫೆಬ್ರವರಿ 8 ಮತ್ತು 9ರಂದು ದೇಶದಾದ್ಯಂತ ಎಲ್ಲಾ ಸಂಸದರ ನಿವಾಸ, ಕಚೇರಿಗಳ ಮುಂದೆ ಸಾಮೂಹಿಕ ಪ್ರತಿಭಟನೆ ನಡೆಸಲು ರೈತ ಸಂಘಟನೆಗಳು ತೀರ್ಮಾನಿಸಿವೆ. ಶುಕ್ರವಾರ (ಜನವರಿ 24, 2025) ನವದೆಹಲಿಯಲ್ಲಿ ನಡೆದ ಸಂಯುಕ್ತ ಕಿಸಾನ್ ಮೋರ್ಚಾದ (ಎಸ್‌ಕೆಎಂ) ಮಹಾಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

ಶುಕ್ರವಾರ (ಜ.24) ನಡೆದ ಎಸ್‌ಕೆಎಂ ಮಹಾಸಭೆ

“ಕೇಂದ್ರದ ಕೃಷಿ ಮಾರುಕಟ್ಟೆ ನೀತಿಯು ಈ ಹಿಂದೆ ಹಿಂಪಡೆಯಲಾದ ಮೂರು ಕೃಷಿ ಕಾನೂನುಗಳ ಹೊಸ ರೂಪವಾಗಿದೆ. ರಾಜ್ಯ ಸರ್ಕಾರಗಳ ಮೂಲಕ ಹಿಂಬಾಗಿಲಲ್ಲಿ ಬಲವಂತವಾಗಿ ಇದನ್ನು ಜಾರಿಗೆ ತರಲು ಕೇಂದ್ರ ಮುಂದಾಗಿದೆ. ಈ ನೀತಿಯು ರೈತ ವಿರೋಧಿ ಮತ್ತು ರಾಜ್ಯ ಸರ್ಕಾರಗಳ ವಿರೋಧಿಯಾಗಿದೆ” ಎಂದು 2020-21ರಲ್ಲಿ ಸಾಮೂಹಿಕ ರೈತ ಆಂದೋಲನದ ನೇತೃತ್ವ ವಹಿಸಿದ್ದ ಕೃಷಿ ಸಂಘಗಳ ಒಕ್ಕೂಟವಾದ ಎಸ್‌ಕೆಎಂ ಹೇಳಿದೆ.

ಮಾರ್ಚ್ 5ರಿಂದ ‘ಪ್ರತಿರೋಧ ರ್‍ಯಾಲಿ’

ಎಸ್‌ಕೆಎಂ ರಾಜ್ಯ ಸಮಿತಿಗಳ ನಾಯಕರು ಆಯಾ ರಾಜ್ಯಗಳ ಮುಖ್ಯಮಂತ್ರಿಯನ್ನು ಭೇಟಿಯಾಗಿ ಹೊಸ ಕೃಷಿ ಮಾರುಕಟ್ಟೆ ನೀತಿಯ ವಿರುದ್ದ ವಿಧಾನಸಭೆಗಳಲ್ಲಿ ನಿರ್ಣಯ ಅಂಗೀಕರಿಸುವಂತೆ ಮತ್ತು ಅದನ್ನು ವಾಪಸ್ ಹಿಂಪಡೆಯಲು ಕೇಂದ್ರವನ್ನು ಆಗ್ರಹಿಸುವಂತೆ ಮನವಿ ಮಾಡಲಿದ್ದಾರೆ. ಯಾವುದಾದರು ರಾಜ್ಯ ಸರ್ಕಾರ ರೈತರ ಮನವಿಯನ್ನು ಗಣನೆಗೆ ತೆಗೆದುಕೊಳ್ಳದಿದ್ದರೆ, ಆ ರಾಜ್ಯದ ರಾಜಧಾನಿ, ಜಿಲ್ಲಾ ಕೇಂದ್ರಗಳು ಮತ್ತು ಉಪ ಜಿಲ್ಲಾ ಕೇಂದ್ರಗಳಲ್ಲಿ ಮಾರ್ಚ್ 5ರಿಂದ ಮಹಾಪಂಚಾಯತ್, ರೈತ ಸಮಾವೇಶಗಳನ್ನು
ಆಯೋಜಿಸುವ ಮೂಲಕ ಮಹಾ ಪ್ರತಿರೋಧ ರ್‍ಯಾಲಿ ನಡೆಸಲಾಗುವುದು ಎಂದು ಎಸ್‌ಕೆಂಎಂ ಎಚ್ಚರಿಸಿದೆ.

ಶುಕ್ರವಾರ (ಜ.24) ನಡೆದ ಎಸ್‌ಕೆಎಂ ಮಹಾಸಭೆ

ಎಂಎನ್‌ಸಿಗಳಿಗೆ ಸಹಾಯ ಮಾಡುವ ಹುನ್ನಾರ

ಹೊಸ ನೀತಿಯು ಸರ್ಕಾರಿ ಬೆಂಬಲಿತ ಕೃಷಿ ಮಾರುಕಟ್ಟೆಗಳ ಮೇಲಿನ ನೇರ ದಾಳಿಯಾಗಿದೆ. ಇದು ಬಹುರಾಷ್ಟ್ರೀಯ ಕಂಪನಿಗಳಿಗೆ ಸಹಾಯ ಮಾಡುವ ಸಲುವಾಗಿ ಮಾರುಕಟ್ಟೆಗಳನ್ನು ಖಾಸಗೀಕರಣಗೊಳಿಸುವ ಗುರಿಯನ್ನು ಹೊಂದಿದೆ. ದೊಡ್ಡ ಕಂಪನಿಗಳು ಕೃಷಿ ಚಿಲ್ಲರೆ ವ್ಯಾಪಾರ ಮತ್ತು ಕೃಷಿ ಸಂಸ್ಕರಣಾ ಉದ್ಯಮವನ್ನು ನಿಯಂತ್ರಿಸಲು ಇದು ಸಹಾಯ ಮಾಡುತ್ತದೆ ಎಂದು ಎಸ್‌ಕೆಎಂ ಆರೋಪಿಸಿದೆ.

ಹೊಸ ಕೃಷಿ ಮಾರುಕಟ್ಟೆ ನೀತಿಯು ರೈತ ಉತ್ಪಾದಕ ಸಂಸ್ಥೆಗಳು (ಎಫ್‌ಪಿಒ) ಮತ್ತು ಇ-ರಾಷ್ಟ್ರೀಯ ಕೃಷಿ ಮಾರುಕಟ್ಟೆಯ ಮೂಲಕ ಸ್ಥಳೀಯ ಗ್ರಾಮೀಣ ಮಂಡಿಗಳನ್ನು ಜೋಡಿಸುತ್ತದೆ. ಎಫ್‌ಪಿಒ, ಸಹಕಾರಿ ಸಂಘಗಳು ಮತ್ತು ಸ್ವಸಹಾಯ ಗುಂಪುಗಳ ಮೂಲಕ ಒಪ್ಪಂದ ಕೃಷಿಯನ್ನು ಜಾರಿಗೊಳಿಸುತ್ತದೆ. ಆಹಾರ ಸಂಸ್ಕಾರಕ ಮೌಲ್ಯವರ್ಧಿತ ಸರಪಳಿಗಳಿಗೆ ಅಗ್ಗದ ಪೂರೈಕೆಯನ್ನು ಖಚಿತಪಡಿಸುತ್ತದೆ ಮತ್ತು ಕೃಷಿಯನ್ನು ಭವಿಷ್ಯದ ವ್ಯಾಪಾರ ಮತ್ತು ಷೇರು ಮಾರುಕಟ್ಟೆಯೊಂದಿಗೆ ಸಂಪರ್ಕಿಸುತ್ತದೆ. ಇವೆಲ್ಲವೂ ವಿಶ್ವ ವ್ಯಾಪಾರ ಸಂಸ್ಥೆ (ಡಬ್ಲ್ಯುಟಿಒ) ಮತ್ತು ವಿಶ್ವಬ್ಯಾಂಕ್ ಅನತಿಯಂತೆ ನಡೆಯುತ್ತಿವೆ ಎಂದು ಎಸ್‌ಕೆಎಂ ಹೇಳಿದೆ.

ಶುಕ್ರವಾರ (ಜ.24) ನಡೆದ ಎಸ್‌ಕೆಎಂ ಮಹಾಸಭೆ

ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಘೋಷಣೆ, ಸರ್ಕಾರಿ ಸಂಗ್ರಹಣೆ ಮತ್ತು ಸಾರ್ವಜನಿಕ ವಿತರಣಾ ವ್ಯವಸ್ಥೆಗೆ ಪೂರೈಕೆಗಾಗಿ ಆಹಾರ ಸಂಗ್ರಹಣೆ ಸೇರಿದಂತೆ ಯಾವುದೇ ವಿಚಾರಗಳು ಹೊಸ ಕೃಷಿ ಮಾರುಕಟ್ಟೆ ನೀತಿಯಲ್ಲಿ ಇಲ್ಲ. ಇದು ಬಫರ್ ಸ್ಟಾಕ್‌ಗಳನ್ನು ಮಾತ್ರ ಪೂರೈಸುತ್ತದೆ ಎಂದು ಎಸ್‌ಕೆಂ ತಿಳಿಸಿದೆ.

ರೈತ ಸಂಘಗಳ ನಾಯಕರಾದ ಹನ್ನನ್ ಮೊಲ್ಲಾ, ಜೋಗಿಂದರ್ ಸಿಂಗ್ ಉಗ್ರನ್, ರಾಕೇಶ್ ಟಿಕಾಯತ್, ರೇವುಲಾ ವೆಂಕಯ್ಯ, ಸತ್ಯವಾನ್ ಮತ್ತು ಡಾ. ಸುನಿಲಂ ಜೊತೆ 12 ರಾಜ್ಯಗಳ 73 ರೈತ ಸಂಘಟನೆಗಳ 165 ಪ್ರತಿನಿಧಿಗಳು ಎಸ್‌ಕೆಎಂನ ಸಾಮಾನ್ಯ ಸಭೆಯಲ್ಲಿ ಹಾಜರಿದ್ದರು.

ಸಭೆಯು ನಾಲ್ಕು ಕಾರ್ಮಿಕ ಸಂಹಿತೆಗಳನ್ನು ಜಾರಿಗೆ ತರುವ ಕ್ರಮವನ್ನೂ ಖಂಡಿಸಿದೆ ಮತ್ತು ಕಾರ್ಮಿಕ ಸಂಘಗಳ ಪ್ರತಿರೋಧದ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿದೆ.

ಆರ್‌ಎಸ್‌ಎಸ್‌ ಸೇರುವಂತೆ ಸರ್ಕಾರಿ ಕಾಲೇಜು ಆಡಳಿತದಿಂದ ಒತ್ತಡ : ಹೈಕೋರ್ಟ್ ಮೆಟ್ಟಿಲೇರಿದ ಉಪನ್ಯಾಸಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...