Homeಮುಖಪುಟಕೇಂದ್ರದ 'ಕೃಷಿ ಮಾರುಕಟ್ಟೆ ನೀತಿ' ತಿರಸ್ಕರಿಸಿದ ರೈತ ಸಂಘಗಳು : ದೇಶದಾದ್ಯಂತ ಬೃಹತ್ ಹೋರಾಟಕ್ಕೆ ನಿರ್ಧಾರ

ಕೇಂದ್ರದ ‘ಕೃಷಿ ಮಾರುಕಟ್ಟೆ ನೀತಿ’ ತಿರಸ್ಕರಿಸಿದ ರೈತ ಸಂಘಗಳು : ದೇಶದಾದ್ಯಂತ ಬೃಹತ್ ಹೋರಾಟಕ್ಕೆ ನಿರ್ಧಾರ

ಹೊಸ ಮಾರುಕಟ್ಟೆ ನೀತಿ ಹಿಂಪಡೆದ ಕೃಷಿ ಕಾನೂನಿನ ಮರುಹುಟ್ಟು ಎಂದ ಎಸ್‌ಕೆಎಂ

- Advertisement -
- Advertisement -

ಕೇಂದ್ರ ಕೃಷಿ ಸಚಿವಾಲಯದ ‘ರಾಷ್ಟ್ರೀಯ ಕೃಷಿ ಮಾರುಕಟ್ಟೆ ನೀತಿ’ (NPFAM) ಕರಡನ್ನು ರೈತ ಸಂಘಟನೆಗಳು ತಿರಸ್ಕರಿಸಿದ್ದು, ಇದರ ವಿರುದ್ದ ದೇಶದ ಎಲ್ಲಾ ರಾಜ್ಯಗಳಲ್ಲಿ ಮಹಾ ಪಂಚಾಯತ್‌, ಬೃಹತ್ ಪ್ರತಿಭಟನಾ ಸಭೆಗಳನ್ನು ನಡೆಸಲು ನಿರ್ಧರಿಸಿವೆ.

ಈ ಹಿಂದೆ ವಾಪಸ್ ಪಡೆದಿರುವ ಮೂರು ಕರಾಳ ಕೃಷಿ ಕಾನೂನುಗಳನ್ನು ಕೃಷಿ ಮಾರುಕಟ್ಟೆ ನೀತಿಯ ಹೆಸರಿನಲ್ಲಿ ಹಿಂಬಾಗಿಲ ಮೂಲಕ ಜಾರಿಗೆ ತರಲು ಕೇಂದ್ರ ಸರ್ಕಾರ ಮುಂದಾಗಿದೆ ಎಂದು ರೈತ ಸಂಘಟನೆಗಳು ಆರೋಪಿಸಿವೆ.

ಹೊಸ ನೀತಿಯ ವಿರುದ್ದ ಹೋರಾಟ ನಡೆಸುತ್ತಿರುವ ರೈತರನ್ನು ಬೆಂಬಲಿಸುವಂತೆ ಆಗ್ರಹಿಸಿ ಫೆಬ್ರವರಿ 8 ಮತ್ತು 9ರಂದು ದೇಶದಾದ್ಯಂತ ಎಲ್ಲಾ ಸಂಸದರ ನಿವಾಸ, ಕಚೇರಿಗಳ ಮುಂದೆ ಸಾಮೂಹಿಕ ಪ್ರತಿಭಟನೆ ನಡೆಸಲು ರೈತ ಸಂಘಟನೆಗಳು ತೀರ್ಮಾನಿಸಿವೆ. ಶುಕ್ರವಾರ (ಜನವರಿ 24, 2025) ನವದೆಹಲಿಯಲ್ಲಿ ನಡೆದ ಸಂಯುಕ್ತ ಕಿಸಾನ್ ಮೋರ್ಚಾದ (ಎಸ್‌ಕೆಎಂ) ಮಹಾಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

ಶುಕ್ರವಾರ (ಜ.24) ನಡೆದ ಎಸ್‌ಕೆಎಂ ಮಹಾಸಭೆ

“ಕೇಂದ್ರದ ಕೃಷಿ ಮಾರುಕಟ್ಟೆ ನೀತಿಯು ಈ ಹಿಂದೆ ಹಿಂಪಡೆಯಲಾದ ಮೂರು ಕೃಷಿ ಕಾನೂನುಗಳ ಹೊಸ ರೂಪವಾಗಿದೆ. ರಾಜ್ಯ ಸರ್ಕಾರಗಳ ಮೂಲಕ ಹಿಂಬಾಗಿಲಲ್ಲಿ ಬಲವಂತವಾಗಿ ಇದನ್ನು ಜಾರಿಗೆ ತರಲು ಕೇಂದ್ರ ಮುಂದಾಗಿದೆ. ಈ ನೀತಿಯು ರೈತ ವಿರೋಧಿ ಮತ್ತು ರಾಜ್ಯ ಸರ್ಕಾರಗಳ ವಿರೋಧಿಯಾಗಿದೆ” ಎಂದು 2020-21ರಲ್ಲಿ ಸಾಮೂಹಿಕ ರೈತ ಆಂದೋಲನದ ನೇತೃತ್ವ ವಹಿಸಿದ್ದ ಕೃಷಿ ಸಂಘಗಳ ಒಕ್ಕೂಟವಾದ ಎಸ್‌ಕೆಎಂ ಹೇಳಿದೆ.

ಮಾರ್ಚ್ 5ರಿಂದ ‘ಪ್ರತಿರೋಧ ರ್‍ಯಾಲಿ’

ಎಸ್‌ಕೆಎಂ ರಾಜ್ಯ ಸಮಿತಿಗಳ ನಾಯಕರು ಆಯಾ ರಾಜ್ಯಗಳ ಮುಖ್ಯಮಂತ್ರಿಯನ್ನು ಭೇಟಿಯಾಗಿ ಹೊಸ ಕೃಷಿ ಮಾರುಕಟ್ಟೆ ನೀತಿಯ ವಿರುದ್ದ ವಿಧಾನಸಭೆಗಳಲ್ಲಿ ನಿರ್ಣಯ ಅಂಗೀಕರಿಸುವಂತೆ ಮತ್ತು ಅದನ್ನು ವಾಪಸ್ ಹಿಂಪಡೆಯಲು ಕೇಂದ್ರವನ್ನು ಆಗ್ರಹಿಸುವಂತೆ ಮನವಿ ಮಾಡಲಿದ್ದಾರೆ. ಯಾವುದಾದರು ರಾಜ್ಯ ಸರ್ಕಾರ ರೈತರ ಮನವಿಯನ್ನು ಗಣನೆಗೆ ತೆಗೆದುಕೊಳ್ಳದಿದ್ದರೆ, ಆ ರಾಜ್ಯದ ರಾಜಧಾನಿ, ಜಿಲ್ಲಾ ಕೇಂದ್ರಗಳು ಮತ್ತು ಉಪ ಜಿಲ್ಲಾ ಕೇಂದ್ರಗಳಲ್ಲಿ ಮಾರ್ಚ್ 5ರಿಂದ ಮಹಾಪಂಚಾಯತ್, ರೈತ ಸಮಾವೇಶಗಳನ್ನು
ಆಯೋಜಿಸುವ ಮೂಲಕ ಮಹಾ ಪ್ರತಿರೋಧ ರ್‍ಯಾಲಿ ನಡೆಸಲಾಗುವುದು ಎಂದು ಎಸ್‌ಕೆಂಎಂ ಎಚ್ಚರಿಸಿದೆ.

ಶುಕ್ರವಾರ (ಜ.24) ನಡೆದ ಎಸ್‌ಕೆಎಂ ಮಹಾಸಭೆ

ಎಂಎನ್‌ಸಿಗಳಿಗೆ ಸಹಾಯ ಮಾಡುವ ಹುನ್ನಾರ

ಹೊಸ ನೀತಿಯು ಸರ್ಕಾರಿ ಬೆಂಬಲಿತ ಕೃಷಿ ಮಾರುಕಟ್ಟೆಗಳ ಮೇಲಿನ ನೇರ ದಾಳಿಯಾಗಿದೆ. ಇದು ಬಹುರಾಷ್ಟ್ರೀಯ ಕಂಪನಿಗಳಿಗೆ ಸಹಾಯ ಮಾಡುವ ಸಲುವಾಗಿ ಮಾರುಕಟ್ಟೆಗಳನ್ನು ಖಾಸಗೀಕರಣಗೊಳಿಸುವ ಗುರಿಯನ್ನು ಹೊಂದಿದೆ. ದೊಡ್ಡ ಕಂಪನಿಗಳು ಕೃಷಿ ಚಿಲ್ಲರೆ ವ್ಯಾಪಾರ ಮತ್ತು ಕೃಷಿ ಸಂಸ್ಕರಣಾ ಉದ್ಯಮವನ್ನು ನಿಯಂತ್ರಿಸಲು ಇದು ಸಹಾಯ ಮಾಡುತ್ತದೆ ಎಂದು ಎಸ್‌ಕೆಎಂ ಆರೋಪಿಸಿದೆ.

ಹೊಸ ಕೃಷಿ ಮಾರುಕಟ್ಟೆ ನೀತಿಯು ರೈತ ಉತ್ಪಾದಕ ಸಂಸ್ಥೆಗಳು (ಎಫ್‌ಪಿಒ) ಮತ್ತು ಇ-ರಾಷ್ಟ್ರೀಯ ಕೃಷಿ ಮಾರುಕಟ್ಟೆಯ ಮೂಲಕ ಸ್ಥಳೀಯ ಗ್ರಾಮೀಣ ಮಂಡಿಗಳನ್ನು ಜೋಡಿಸುತ್ತದೆ. ಎಫ್‌ಪಿಒ, ಸಹಕಾರಿ ಸಂಘಗಳು ಮತ್ತು ಸ್ವಸಹಾಯ ಗುಂಪುಗಳ ಮೂಲಕ ಒಪ್ಪಂದ ಕೃಷಿಯನ್ನು ಜಾರಿಗೊಳಿಸುತ್ತದೆ. ಆಹಾರ ಸಂಸ್ಕಾರಕ ಮೌಲ್ಯವರ್ಧಿತ ಸರಪಳಿಗಳಿಗೆ ಅಗ್ಗದ ಪೂರೈಕೆಯನ್ನು ಖಚಿತಪಡಿಸುತ್ತದೆ ಮತ್ತು ಕೃಷಿಯನ್ನು ಭವಿಷ್ಯದ ವ್ಯಾಪಾರ ಮತ್ತು ಷೇರು ಮಾರುಕಟ್ಟೆಯೊಂದಿಗೆ ಸಂಪರ್ಕಿಸುತ್ತದೆ. ಇವೆಲ್ಲವೂ ವಿಶ್ವ ವ್ಯಾಪಾರ ಸಂಸ್ಥೆ (ಡಬ್ಲ್ಯುಟಿಒ) ಮತ್ತು ವಿಶ್ವಬ್ಯಾಂಕ್ ಅನತಿಯಂತೆ ನಡೆಯುತ್ತಿವೆ ಎಂದು ಎಸ್‌ಕೆಎಂ ಹೇಳಿದೆ.

ಶುಕ್ರವಾರ (ಜ.24) ನಡೆದ ಎಸ್‌ಕೆಎಂ ಮಹಾಸಭೆ

ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಘೋಷಣೆ, ಸರ್ಕಾರಿ ಸಂಗ್ರಹಣೆ ಮತ್ತು ಸಾರ್ವಜನಿಕ ವಿತರಣಾ ವ್ಯವಸ್ಥೆಗೆ ಪೂರೈಕೆಗಾಗಿ ಆಹಾರ ಸಂಗ್ರಹಣೆ ಸೇರಿದಂತೆ ಯಾವುದೇ ವಿಚಾರಗಳು ಹೊಸ ಕೃಷಿ ಮಾರುಕಟ್ಟೆ ನೀತಿಯಲ್ಲಿ ಇಲ್ಲ. ಇದು ಬಫರ್ ಸ್ಟಾಕ್‌ಗಳನ್ನು ಮಾತ್ರ ಪೂರೈಸುತ್ತದೆ ಎಂದು ಎಸ್‌ಕೆಂ ತಿಳಿಸಿದೆ.

ರೈತ ಸಂಘಗಳ ನಾಯಕರಾದ ಹನ್ನನ್ ಮೊಲ್ಲಾ, ಜೋಗಿಂದರ್ ಸಿಂಗ್ ಉಗ್ರನ್, ರಾಕೇಶ್ ಟಿಕಾಯತ್, ರೇವುಲಾ ವೆಂಕಯ್ಯ, ಸತ್ಯವಾನ್ ಮತ್ತು ಡಾ. ಸುನಿಲಂ ಜೊತೆ 12 ರಾಜ್ಯಗಳ 73 ರೈತ ಸಂಘಟನೆಗಳ 165 ಪ್ರತಿನಿಧಿಗಳು ಎಸ್‌ಕೆಎಂನ ಸಾಮಾನ್ಯ ಸಭೆಯಲ್ಲಿ ಹಾಜರಿದ್ದರು.

ಸಭೆಯು ನಾಲ್ಕು ಕಾರ್ಮಿಕ ಸಂಹಿತೆಗಳನ್ನು ಜಾರಿಗೆ ತರುವ ಕ್ರಮವನ್ನೂ ಖಂಡಿಸಿದೆ ಮತ್ತು ಕಾರ್ಮಿಕ ಸಂಘಗಳ ಪ್ರತಿರೋಧದ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿದೆ.

ಆರ್‌ಎಸ್‌ಎಸ್‌ ಸೇರುವಂತೆ ಸರ್ಕಾರಿ ಕಾಲೇಜು ಆಡಳಿತದಿಂದ ಒತ್ತಡ : ಹೈಕೋರ್ಟ್ ಮೆಟ್ಟಿಲೇರಿದ ಉಪನ್ಯಾಸಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...

‘ರಾಮನಿಗೆ ಅವಮಾನಿಸಿದ್ದಕ್ಕೆ ಶಾಯಿ ಎರಚಿದೆ’: ಜಂತರ್ ಮಂತರ್‌ನಲ್ಲಿ ಅಭಿಜೀತ್ ದೀಪ್ಕೆ ಮೇಲಿನ ದಾಳಿಯನ್ನು ಸಮರ್ಥಿಸಿಕೊಂಡ ಬರ್ಖಾ ಟ್ರೆಹಾನ್

ನವದೆಹಲಿ: ದೇಶದ ರಾಜಧಾನಿಯ ಜಂತರ್ ಮಂತರ್‌ನಲ್ಲಿ ಜುಲೈ 18 ರ ಶನಿವಾರದಂದು ನಡೆದ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡುತ್ತಿದ್ದ ‘ಜಿರಳೆ ಜನತಾ ಪಕ್ಷ’ದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಮೇಲೆ ಶಾಯಿ ಎರಚಿದ...

ಸರ್ವಪಕ್ಷ ಸಭೆ: TMC ಬಂಡಾಯ ಸಂಸದರಿಗೆ ಸ್ಪೆಷಲ್ ಸೀಟು, INDIA ಮೈತ್ರಿಕೂಟದ ಸಂಸದರು ವಾಕೌಟ್

ಸಂಸತ್ತಿನ ಮುಂಗಾರು ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ರವಿವಾರ ನಡೆದ ಸರ್ವಪಕ್ಷಗಳ ಸಭೆಯು ತೀವ್ರ ರಾಜಕೀಯ ಸಂಘರ್ಷಕ್ಕೆ ಸಾಕ್ಷಿಯಾಗಿದೆ. ತೃಣಮೂಲ ಕಾಂಗ್ರೆಸ್ (TMC) ಪಕ್ಷದಿಂದ ಬಂಡಾಯವೆದ್ದ ಸಂಸದರಿಗೆ ಕೇಂದ್ರ ಸರ್ಕಾರವು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ಹಾದಿ ತಪ್ಪಿಸಲು BJP ಪಿತೂರಿ: ಸಿಜೆಪಿ ಗಂಭೀರ ಆರೋಪ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್ (NEET) ಪರೀಕ್ಷಾ ಹಗರಣದ ವಿರುದ್ಧ ಜಂತರ್ ಮಂತರ್‌ನಲ್ಲಿ ಸೋನಮ್ ವಾಂಗ್ಚುಕ್ ಹಾಗೂ ಕಾಕ್ರೋಚ್ ಜನತಾ ಪಾರ್ಟಿ (CJP) ಯುವಜನರು ನಡೆಸುತ್ತಿರುವ ಹೋರಾಟದ ಮೈದಾನದಿಂದ ಆತಂಕಕಾರಿ ವರದಿಗಳು...