Homeಮುಖಪುಟಕೇಂದ್ರದ 'ಕೃಷಿ ಮಾರುಕಟ್ಟೆ ನೀತಿ' ತಿರಸ್ಕರಿಸಿದ ರೈತ ಸಂಘಗಳು : ದೇಶದಾದ್ಯಂತ ಬೃಹತ್ ಹೋರಾಟಕ್ಕೆ ನಿರ್ಧಾರ

ಕೇಂದ್ರದ ‘ಕೃಷಿ ಮಾರುಕಟ್ಟೆ ನೀತಿ’ ತಿರಸ್ಕರಿಸಿದ ರೈತ ಸಂಘಗಳು : ದೇಶದಾದ್ಯಂತ ಬೃಹತ್ ಹೋರಾಟಕ್ಕೆ ನಿರ್ಧಾರ

ಹೊಸ ಮಾರುಕಟ್ಟೆ ನೀತಿ ಹಿಂಪಡೆದ ಕೃಷಿ ಕಾನೂನಿನ ಮರುಹುಟ್ಟು ಎಂದ ಎಸ್‌ಕೆಎಂ

- Advertisement -
- Advertisement -

ಕೇಂದ್ರ ಕೃಷಿ ಸಚಿವಾಲಯದ ‘ರಾಷ್ಟ್ರೀಯ ಕೃಷಿ ಮಾರುಕಟ್ಟೆ ನೀತಿ’ (NPFAM) ಕರಡನ್ನು ರೈತ ಸಂಘಟನೆಗಳು ತಿರಸ್ಕರಿಸಿದ್ದು, ಇದರ ವಿರುದ್ದ ದೇಶದ ಎಲ್ಲಾ ರಾಜ್ಯಗಳಲ್ಲಿ ಮಹಾ ಪಂಚಾಯತ್‌, ಬೃಹತ್ ಪ್ರತಿಭಟನಾ ಸಭೆಗಳನ್ನು ನಡೆಸಲು ನಿರ್ಧರಿಸಿವೆ.

ಈ ಹಿಂದೆ ವಾಪಸ್ ಪಡೆದಿರುವ ಮೂರು ಕರಾಳ ಕೃಷಿ ಕಾನೂನುಗಳನ್ನು ಕೃಷಿ ಮಾರುಕಟ್ಟೆ ನೀತಿಯ ಹೆಸರಿನಲ್ಲಿ ಹಿಂಬಾಗಿಲ ಮೂಲಕ ಜಾರಿಗೆ ತರಲು ಕೇಂದ್ರ ಸರ್ಕಾರ ಮುಂದಾಗಿದೆ ಎಂದು ರೈತ ಸಂಘಟನೆಗಳು ಆರೋಪಿಸಿವೆ.

ಹೊಸ ನೀತಿಯ ವಿರುದ್ದ ಹೋರಾಟ ನಡೆಸುತ್ತಿರುವ ರೈತರನ್ನು ಬೆಂಬಲಿಸುವಂತೆ ಆಗ್ರಹಿಸಿ ಫೆಬ್ರವರಿ 8 ಮತ್ತು 9ರಂದು ದೇಶದಾದ್ಯಂತ ಎಲ್ಲಾ ಸಂಸದರ ನಿವಾಸ, ಕಚೇರಿಗಳ ಮುಂದೆ ಸಾಮೂಹಿಕ ಪ್ರತಿಭಟನೆ ನಡೆಸಲು ರೈತ ಸಂಘಟನೆಗಳು ತೀರ್ಮಾನಿಸಿವೆ. ಶುಕ್ರವಾರ (ಜನವರಿ 24, 2025) ನವದೆಹಲಿಯಲ್ಲಿ ನಡೆದ ಸಂಯುಕ್ತ ಕಿಸಾನ್ ಮೋರ್ಚಾದ (ಎಸ್‌ಕೆಎಂ) ಮಹಾಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

ಶುಕ್ರವಾರ (ಜ.24) ನಡೆದ ಎಸ್‌ಕೆಎಂ ಮಹಾಸಭೆ

“ಕೇಂದ್ರದ ಕೃಷಿ ಮಾರುಕಟ್ಟೆ ನೀತಿಯು ಈ ಹಿಂದೆ ಹಿಂಪಡೆಯಲಾದ ಮೂರು ಕೃಷಿ ಕಾನೂನುಗಳ ಹೊಸ ರೂಪವಾಗಿದೆ. ರಾಜ್ಯ ಸರ್ಕಾರಗಳ ಮೂಲಕ ಹಿಂಬಾಗಿಲಲ್ಲಿ ಬಲವಂತವಾಗಿ ಇದನ್ನು ಜಾರಿಗೆ ತರಲು ಕೇಂದ್ರ ಮುಂದಾಗಿದೆ. ಈ ನೀತಿಯು ರೈತ ವಿರೋಧಿ ಮತ್ತು ರಾಜ್ಯ ಸರ್ಕಾರಗಳ ವಿರೋಧಿಯಾಗಿದೆ” ಎಂದು 2020-21ರಲ್ಲಿ ಸಾಮೂಹಿಕ ರೈತ ಆಂದೋಲನದ ನೇತೃತ್ವ ವಹಿಸಿದ್ದ ಕೃಷಿ ಸಂಘಗಳ ಒಕ್ಕೂಟವಾದ ಎಸ್‌ಕೆಎಂ ಹೇಳಿದೆ.

ಮಾರ್ಚ್ 5ರಿಂದ ‘ಪ್ರತಿರೋಧ ರ್‍ಯಾಲಿ’

ಎಸ್‌ಕೆಎಂ ರಾಜ್ಯ ಸಮಿತಿಗಳ ನಾಯಕರು ಆಯಾ ರಾಜ್ಯಗಳ ಮುಖ್ಯಮಂತ್ರಿಯನ್ನು ಭೇಟಿಯಾಗಿ ಹೊಸ ಕೃಷಿ ಮಾರುಕಟ್ಟೆ ನೀತಿಯ ವಿರುದ್ದ ವಿಧಾನಸಭೆಗಳಲ್ಲಿ ನಿರ್ಣಯ ಅಂಗೀಕರಿಸುವಂತೆ ಮತ್ತು ಅದನ್ನು ವಾಪಸ್ ಹಿಂಪಡೆಯಲು ಕೇಂದ್ರವನ್ನು ಆಗ್ರಹಿಸುವಂತೆ ಮನವಿ ಮಾಡಲಿದ್ದಾರೆ. ಯಾವುದಾದರು ರಾಜ್ಯ ಸರ್ಕಾರ ರೈತರ ಮನವಿಯನ್ನು ಗಣನೆಗೆ ತೆಗೆದುಕೊಳ್ಳದಿದ್ದರೆ, ಆ ರಾಜ್ಯದ ರಾಜಧಾನಿ, ಜಿಲ್ಲಾ ಕೇಂದ್ರಗಳು ಮತ್ತು ಉಪ ಜಿಲ್ಲಾ ಕೇಂದ್ರಗಳಲ್ಲಿ ಮಾರ್ಚ್ 5ರಿಂದ ಮಹಾಪಂಚಾಯತ್, ರೈತ ಸಮಾವೇಶಗಳನ್ನು
ಆಯೋಜಿಸುವ ಮೂಲಕ ಮಹಾ ಪ್ರತಿರೋಧ ರ್‍ಯಾಲಿ ನಡೆಸಲಾಗುವುದು ಎಂದು ಎಸ್‌ಕೆಂಎಂ ಎಚ್ಚರಿಸಿದೆ.

ಶುಕ್ರವಾರ (ಜ.24) ನಡೆದ ಎಸ್‌ಕೆಎಂ ಮಹಾಸಭೆ

ಎಂಎನ್‌ಸಿಗಳಿಗೆ ಸಹಾಯ ಮಾಡುವ ಹುನ್ನಾರ

ಹೊಸ ನೀತಿಯು ಸರ್ಕಾರಿ ಬೆಂಬಲಿತ ಕೃಷಿ ಮಾರುಕಟ್ಟೆಗಳ ಮೇಲಿನ ನೇರ ದಾಳಿಯಾಗಿದೆ. ಇದು ಬಹುರಾಷ್ಟ್ರೀಯ ಕಂಪನಿಗಳಿಗೆ ಸಹಾಯ ಮಾಡುವ ಸಲುವಾಗಿ ಮಾರುಕಟ್ಟೆಗಳನ್ನು ಖಾಸಗೀಕರಣಗೊಳಿಸುವ ಗುರಿಯನ್ನು ಹೊಂದಿದೆ. ದೊಡ್ಡ ಕಂಪನಿಗಳು ಕೃಷಿ ಚಿಲ್ಲರೆ ವ್ಯಾಪಾರ ಮತ್ತು ಕೃಷಿ ಸಂಸ್ಕರಣಾ ಉದ್ಯಮವನ್ನು ನಿಯಂತ್ರಿಸಲು ಇದು ಸಹಾಯ ಮಾಡುತ್ತದೆ ಎಂದು ಎಸ್‌ಕೆಎಂ ಆರೋಪಿಸಿದೆ.

ಹೊಸ ಕೃಷಿ ಮಾರುಕಟ್ಟೆ ನೀತಿಯು ರೈತ ಉತ್ಪಾದಕ ಸಂಸ್ಥೆಗಳು (ಎಫ್‌ಪಿಒ) ಮತ್ತು ಇ-ರಾಷ್ಟ್ರೀಯ ಕೃಷಿ ಮಾರುಕಟ್ಟೆಯ ಮೂಲಕ ಸ್ಥಳೀಯ ಗ್ರಾಮೀಣ ಮಂಡಿಗಳನ್ನು ಜೋಡಿಸುತ್ತದೆ. ಎಫ್‌ಪಿಒ, ಸಹಕಾರಿ ಸಂಘಗಳು ಮತ್ತು ಸ್ವಸಹಾಯ ಗುಂಪುಗಳ ಮೂಲಕ ಒಪ್ಪಂದ ಕೃಷಿಯನ್ನು ಜಾರಿಗೊಳಿಸುತ್ತದೆ. ಆಹಾರ ಸಂಸ್ಕಾರಕ ಮೌಲ್ಯವರ್ಧಿತ ಸರಪಳಿಗಳಿಗೆ ಅಗ್ಗದ ಪೂರೈಕೆಯನ್ನು ಖಚಿತಪಡಿಸುತ್ತದೆ ಮತ್ತು ಕೃಷಿಯನ್ನು ಭವಿಷ್ಯದ ವ್ಯಾಪಾರ ಮತ್ತು ಷೇರು ಮಾರುಕಟ್ಟೆಯೊಂದಿಗೆ ಸಂಪರ್ಕಿಸುತ್ತದೆ. ಇವೆಲ್ಲವೂ ವಿಶ್ವ ವ್ಯಾಪಾರ ಸಂಸ್ಥೆ (ಡಬ್ಲ್ಯುಟಿಒ) ಮತ್ತು ವಿಶ್ವಬ್ಯಾಂಕ್ ಅನತಿಯಂತೆ ನಡೆಯುತ್ತಿವೆ ಎಂದು ಎಸ್‌ಕೆಎಂ ಹೇಳಿದೆ.

ಶುಕ್ರವಾರ (ಜ.24) ನಡೆದ ಎಸ್‌ಕೆಎಂ ಮಹಾಸಭೆ

ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಘೋಷಣೆ, ಸರ್ಕಾರಿ ಸಂಗ್ರಹಣೆ ಮತ್ತು ಸಾರ್ವಜನಿಕ ವಿತರಣಾ ವ್ಯವಸ್ಥೆಗೆ ಪೂರೈಕೆಗಾಗಿ ಆಹಾರ ಸಂಗ್ರಹಣೆ ಸೇರಿದಂತೆ ಯಾವುದೇ ವಿಚಾರಗಳು ಹೊಸ ಕೃಷಿ ಮಾರುಕಟ್ಟೆ ನೀತಿಯಲ್ಲಿ ಇಲ್ಲ. ಇದು ಬಫರ್ ಸ್ಟಾಕ್‌ಗಳನ್ನು ಮಾತ್ರ ಪೂರೈಸುತ್ತದೆ ಎಂದು ಎಸ್‌ಕೆಂ ತಿಳಿಸಿದೆ.

ರೈತ ಸಂಘಗಳ ನಾಯಕರಾದ ಹನ್ನನ್ ಮೊಲ್ಲಾ, ಜೋಗಿಂದರ್ ಸಿಂಗ್ ಉಗ್ರನ್, ರಾಕೇಶ್ ಟಿಕಾಯತ್, ರೇವುಲಾ ವೆಂಕಯ್ಯ, ಸತ್ಯವಾನ್ ಮತ್ತು ಡಾ. ಸುನಿಲಂ ಜೊತೆ 12 ರಾಜ್ಯಗಳ 73 ರೈತ ಸಂಘಟನೆಗಳ 165 ಪ್ರತಿನಿಧಿಗಳು ಎಸ್‌ಕೆಎಂನ ಸಾಮಾನ್ಯ ಸಭೆಯಲ್ಲಿ ಹಾಜರಿದ್ದರು.

ಸಭೆಯು ನಾಲ್ಕು ಕಾರ್ಮಿಕ ಸಂಹಿತೆಗಳನ್ನು ಜಾರಿಗೆ ತರುವ ಕ್ರಮವನ್ನೂ ಖಂಡಿಸಿದೆ ಮತ್ತು ಕಾರ್ಮಿಕ ಸಂಘಗಳ ಪ್ರತಿರೋಧದ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿದೆ.

ಆರ್‌ಎಸ್‌ಎಸ್‌ ಸೇರುವಂತೆ ಸರ್ಕಾರಿ ಕಾಲೇಜು ಆಡಳಿತದಿಂದ ಒತ್ತಡ : ಹೈಕೋರ್ಟ್ ಮೆಟ್ಟಿಲೇರಿದ ಉಪನ್ಯಾಸಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...