Homeಚಳವಳಿಟೋಲ್‌ಪ್ಲಾಝಾಗಳನ್ನು ಅನಿರ್ದಿಷ್ಟಾವಧಿಗೆ ವಶಕ್ಕೆ ಪಡೆದ ರೈತ ಹೋರಾಟಗಾರರು!

ಟೋಲ್‌ಪ್ಲಾಝಾಗಳನ್ನು ಅನಿರ್ದಿಷ್ಟಾವಧಿಗೆ ವಶಕ್ಕೆ ಪಡೆದ ರೈತ ಹೋರಾಟಗಾರರು!

ಡಿಸೆಂಬರ್‌ 25 ರಂದು ರೈತ ಸಂಘಗಳ ಸದಸ್ಯರು ಮೂರು ದಿನಗಳ ಮಟ್ಟಿಗೆ ಹರಿಯಾಣದಲ್ಲಿ ಹಲವಾರು ಟೋಲ್‌ಪ್ಲಾಝಾಗಳನ್ನು ವಶಪಡಿಸಿಕೊಂಡಿದ್ದರು.

- Advertisement -
- Advertisement -

ಡಿಸೆಂಬರ್ 25 ರಂದು ಹರಿಯಾಣದ ಹಲವಾರು ಟೋಲ್‌‌ಪ್ಲಾಝಾಗಳನ್ನು ಮೂರು ದಿನಗಳ ಮಟ್ಟಿಗೆ ವಶಕ್ಕೆ ಪಡೆದಿದ್ದ ರೈತರು ಇದೀಗ ತಮ್ಮ ನಿರ್ಧಾರವನ್ನು ಬದಲಿಸಿದ್ದಾರೆ. ತಮ್ಮ ಪ್ರತಿಭಟನೆಯನ್ನು ಇನ್ನಷ್ಟು ತೀವ್ರಗೊಳಿಸಲು ತೀರ್ಮಾನಿಸಿರುವ ಹೋರಾಟಗಾರರು ಟೋಲ್‌ಪ್ಲಾಝಾಗಳನ್ನು ಅನಿರ್ದಿಷ್ಟಾವಧಿಯವರೆಗೆ ವಶದಲ್ಲೇ ಇರಿಸಿಕೊಳ್ಳುವುದಾಗಿ ಹೇಳಿದ್ದಾರೆ.

ಶನಿವಾರ ರಾತ್ರಿ ನಡೆದ ಸಭೆಯಲ್ಲಿ ರೈತ ನಾಯಕರು, ತಮ್ಮ ಬೇಡಿಕೆಗಳನ್ನು ಕೇಂದ್ರ ಸರಕಾರ ಈಡೇರಿಸುವವರೆಗೆ ಪ್ರಯಾಣಿಕರ ಮೇಲೆ ಟೋಲ್ ಕಂಪೆನಿಗಳು ಶುಲ್ಕ ವಿಧಿಸುವುದಕ್ಕೆ ನಾವು ಅವಕಾಶ ನೀಡುವುದಿಲ್ಲ ಎಂಬ ತೀರ್ಮಾನಕ್ಕೆ ಬಂದಿದ್ದಾರೆ.

ಇದನ್ನೂ ಓದಿ: ತೀವ್ರಗೊಂಡ ಹೋರಾಟ: ಟೋಲ್‌ ಪ್ಲಾಜಾಗಳನ್ನು ವಶಕ್ಕೆ ಪಡೆದ ರೈತರು

ಭಾರತೀಯ ಕಿಸಾನ್ ಒಕ್ಕೂಟದ ಅಧ್ಯಕ್ಷ ಗುರುನಮ್ ಸಿಂಗ್ ಚಾರುನಿ, ‘‘ನಾವು ರೈತರು ಸೇರಿದಂತೆ ರೈತ ಒಕ್ಕೂಟಗಳ ಪ್ರತಿನಿಧಿಗಳನ್ನು ಭೇಟಿಯಾಗಿ, ಪ್ರಯಾಣಿಕರ ಮೇಲೆ ಟೋಲ್ ಕಂಪೆನಿಗಳು ಶುಲ್ಕ ವಿಧಿಸುವುದಕ್ಕೆ ನಾವು ಅವಕಾಶ ನೀಡುವುದಿಲ್ಲ ಎಂಬ ತೀರ್ಮಾನಕ್ಕೆ ಬರಲಾಗಿದೆ. ದೆಹಲಿ ಗಡಿಯಲ್ಲಿ ಪ್ರತಿಭಟನೆ ಅಂತ್ಯಗೊಳ್ಳುವವರೆಗೆ ರಾಜ್ಯದ ಎಲ್ಲಾ ಟೋಲ್‌ ಪ್ಲಾಝಾಗಳಲ್ಲಿ ರೈತರು ಪ್ರತಿಭಟನೆ ಮುಂದುವರಿಸಲಿದ್ದಾರೆ’’ ಎಂದು ಹೇಳಿದ್ದಾರೆ.

ಡಿಸೆಂಬರ್‌ 25 ರಂದು ರೈತ ಸಂಘಗಳ ಸದಸ್ಯರು ಹರಿಯಾಣದಲ್ಲಿ ಹಲವಾರು ಟೋಲ್‌ಪ್ಲಾಝಾಗಳನ್ನು ವಶಪಡಿಸಿಕೊಂಡಿದ್ದರು. ದೆಹಲಿಯನ್ನು ಬೇರೆ ಬೇರೆ ಉತ್ತರದ ರಾಜ್ಯಗಳೊಂದಿಗೆ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 44 ರಲ್ಲಿರುವ ಕಾರ್ನಾಲ್‌ನಲ್ಲಿರುವ ಬಸ್ತಾರಾ ಟೋಲ್ ಪ್ಲಾಜಾ, ಅಸ್ಸಂಧ್-ಕರ್ನಾಲ್ ಹೆದ್ದಾರಿಯಲ್ಲಿನ ಗುಲ್ಲರ್‌ಪುರ ಟೋಲ್ ಪ್ಲಾಜಾ ಮತ್ತು ಹಿಸಾರ್-ಚಂಡೀಗಡ ಹೆದ್ದಾರಿಯಲ್ಲಿರುವ ಕುರುಕ್ಷೇತ್ರದ ಥೋನಾ ಟೋಲ್ ಪ್ಲಾಜಾದಲ್ಲಿ ಹಾಕಿದ್ದ ಬ್ಯಾರಿಕೇಡ್‌ಗಳನ್ನು ರೈತರು ಬಲವಂತವಾಗಿ ಸರಿಸಿದ್ದರು.

ಇದನ್ನೂ ಓದಿ: ಮತ್ತೊಂದು ಮಾತುಕತೆಗೆ ಮುಂದಾದ ಕೇಂದ್ರ – ತಮ್ಮ ನಿಲುವು ಸ್ಪಷ್ಟಪಡಿಸಿದ ರೈತ ಮುಖಂಡರು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

1 COMMENT

  1. Why the farmers not potting sim to Airtel ….why not BSNL….Is farmers are misleaded … Or a farmer protesting system forced the innocent farmers to believe Artel is government institution…. Looks very funny….

LEAVE A REPLY

Please enter your comment!
Please enter your name here

- Advertisment -

Must Read

ಮುಂದುವರಿದ ಬಿಜೆಪಿ ನಾಯಕರ ದ್ವೇಷ ಭಾಷಣ; ‘ಕಾಂಗ್ರೆಸ್ ದೇಶದಲ್ಲಿ ಷರಿಯಾ ಕಾನೂನು ಜಾರಿಗೆ ತರಲಿದೆ’...

0
ಸಂಪತ್ತು ಮರು ಹಂಚಿಕೆ ಕುರಿತು ದ್ವೇಷ ಭಾಷಣ ಮಾಡಿದ್ದ ಪ್ರಧಾನಿ ನರೇಂದ್ರ ಮೋದಿಯವರ ನಂತರ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕೂಡ ಮಂಗಳವಾರ ಕಾಂಗ್ರೆಸ್ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. 'ಕಾಂಗ್ರೆಸ್...