Homeಕರ್ನಾಟಕಮಾನಸಿಕ ದೌರ್ಬಲ್ಯವಿರುವ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ: ನಾಲಗೆ ಹರಿಬಿಟ್ಟ ಬಿ.ಸಿ ಪಾಟೀಲ

ಮಾನಸಿಕ ದೌರ್ಬಲ್ಯವಿರುವ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ: ನಾಲಗೆ ಹರಿಬಿಟ್ಟ ಬಿ.ಸಿ ಪಾಟೀಲ

"ಸರ್ಕಾರದ ಕೃಷಿ ನೀತಿಯಿಂದ ಮನನೊಂದು ಯಾರೂ ಆತ್ಮಹತ್ಯೆ ಮಾಡಿಕೊಳ್ಳುತ್ತಿಲ್ಲ"

- Advertisement -
- Advertisement -

ರೈತರ ಆತ್ಮಹತ್ಯೆಯ ಕುರಿತು ಈ ಹಿಂದೆ ವಿವಾದಾತ್ಮಕ ಹೇಳಿಕೆ ನೀಡಿದ್ದ ರಾಜ್ಯದ ಕೃಷಿ ಸಚಿವ ಬಿ ಸಿ ಪಾಟೀಲ ಮತ್ತೊಮ್ಮೆ ತಮ್ಮ ನಾಲಗೆಯನ್ನು ಹರಿಬಿಟ್ಟಿದ್ದಾರೆ. “ಮಾನಸಿಕ ದೌರ್ಬಲ್ಯ ಇರುವ ರೈತರು ಮಾತ್ರ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ” ಎಂದು ಹೇಳಿದ್ದಾರೆ.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿ ಸಿ ಪಾಟೀಲ್, “ಉದ್ಯಮಿಗಳು ಸೇರಿದಂತೆ ಎಲ್ಲರೂ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಸರ್ಕಾರದ ಕೃಷಿ ನೀತಿಯಿಂದ ಮನನೊಂದು ಯಾರೂ ಆತ್ಮಹತ್ಯೆ ಮಾಡಿಕೊಳ್ಳುತ್ತಿಲ್ಲ. ಮಾನಸಿಕ ದೌರ್ಬಲ್ಯ ಹೊಂದಿರುವವರಷ್ಟೇ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ” ಎಂದು ಹೇಳಿದ್ದಾರೆ.

“ಆತ್ಮಹತ್ಯೆ ಮಾಡಿಕೊಂಡ ರೈತನ ಮನೆಗೆ ಹೋಗಿ ಹಾರ ಹಾಕಿದರೆ ಆತ್ಮಹತ್ಯೆ ನಿಲ್ಲುವುದಿಲ್ಲ. ರೈತರ ಆತ್ಮಸ್ಥೈರ್ಯ ತುಂಬುವ ಕೆಲಸ ಮಾಡಬೇಕಿದೆ. ಇದಕ್ಕಾಗಿಯೇ ಪ್ರಧಾನಮಂತ್ರಿ ಅವರು ಆತ್ಮನಿರ್ಭರ್‌ ಭಾರತ ಯೋಜನೆಯಡಿ 493 ಕೋಟಿಯನ್ನು ಆಹಾರ ಸಂಸ್ಕರಣೆಗೆ ಕೊಟ್ಟಿದ್ದಾರೆ. ಈ ಯೋಜನೆಯಡಿ ದೇಶದಲ್ಲಿ ಮೊದಲ ಹೆಜ್ಜೆ ಇಟ್ಟಿರುವ ರಾಜ್ಯ ಈಗಾಗಲೇ ಒಂದು ಜಿಲ್ಲೆ, ಒಂದು ಬೆಳೆ ಎಂಬುದನ್ನು ಗುರುತಿಸಿ, ಪ್ರತಿ ವಾರ 50 ರೈತರಿಗೆ ಆಹಾರ ಸಂಸ್ಕರಣೆ ವಿಷಯದಲ್ಲಿ ತರಬೇತಿ ನೀಡಲು ಇಲ್ಲಿನ ಸಿಎಫ್‌ಟಿಆರ್‌ಐ ಜತೆ ಒಪ್ಪಂದ ಮಾಡಿಕೊಂಡಿದೆ” ಎಂದರು.

ಇದನ್ನೂ ಓದಿ: ಹೇಡಿಗಳು ರೈತರೋ ಅಥವಾ ನಿಮ್ಮ ಸಂಸದರು, ಸರ್ಕಾರವೋ?: ಬಿ.ಸಿ ಪಾಟೀಲ್‌ಗೆ ಕಾಂಗ್ರೆಸ್ ಪ್ರಶ್ನೆ

“ದೆಹಲಿಯಲ್ಲಿ ಪಂಜಾಬ್ ಮತ್ತು ಹರಿಯಾಣದ ರೈತರಷ್ಟೇ ಪ್ರತಿಭಟನೆ ನಡೆಸುತ್ತಿದ್ದಾರೆ. ಇದೇ ರೈತರು ಶರದ್‌ಪವಾರ್ ಕೃಷಿ ಸಚಿವರಾಗಿದ್ದಾಗ ಬೆಂಬಲ ಬೆಲೆ, ಎಪಿಎಂಸಿ ಮಾರುಕಟ್ಟೆ ವ್ಯವಸ್ಥೆ ವಿರೋಧಿಸಿ ಪ್ರತಿಭಟಿಸಿದ್ದರು. ಈಗ ರೈತರಿಗೆ ಅನುಕೂಲವಾಗುವಂತಹ ತಿದ್ದುಪಡಿಗಳನ್ನೂ ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ” ಎಂದು ಹೇಳಿದ್ದಾರೆ.

ಈ ಹಿಂದೆಯೂ ಆತ್ಮಹತ್ಯೆ ಮಾಡಿಕೊಳ್ಳುವ ರೈತರನ್ನು ಹೇಡಿಗಳು ಎಂದು ಸಚಿವರು ಹೇಳಿದ್ದರು. ಇದರ ವಿರುದ್ಧ ರಾಜ್ಯದಲ್ಲಿ ವ್ಯಾಪಕ ಖಂಡನೆ ವ್ಯಕ್ತವಾಗಿತ್ತು.


ಇದನ್ನೂ ಓದಿ: ರೈತರನ್ನು ಹೇಡಿಗಳು ಎಂದ ಬಿ.ಸಿ.ಪಾಟೀಲ್: ಎಚ್.ಡಿ. ಕುಮಾರಸ್ವಾಮಿ ತಿರುಗೇಟು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...