ಪವಿತ್ರ ಮಿಲಾದ್–ಉನ್–ನಬಿ ಆಚರಣೆಯ ಹಿನ್ನೆಲೆಯಲ್ಲಿ ಶ್ರೀನಗರದ ಹಝರತ್ಬಲ್ ದರ್ಗಾಕ್ಕೆ ಪ್ರಾರ್ಥನೆ ಸಲ್ಲಿಸಲು ಹೊರಟ್ಟಿದ್ದ ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಅವರನ್ನು ಆಡಳಿತ ತಡೆಹಿಡಿದಿದೆ ಎಂದು ನ್ಯಾಷನಲ್ ಕಾನ್ಫರೆನ್ಸ್ ಪಕ್ಷ ಆರೋಪಿಸಿದೆ.
“ಪಕ್ಷವು ಪ್ರಾರ್ಥನೆ ಮಾಡುವ ಮೂಲಭೂತ ಹಕ್ಕಿನ ಉಲ್ಲಂಘನೆಯನ್ನು ಖಂಡಿಸುತ್ತದೆ, ವಿಶೇಷವಾಗಿ ಮಿಲಾದ್–ಉನ್–ನಬಿ ಹಬ್ಬದ ಶುಭ ಸಂದರ್ಭದಲ್ಲಿ” ಎಂದು ಟ್ವೀಟ್ ಮಾಡಿದೆ.
J&K administration has blocked the residence of Party President Dr Farooq Abdullah and stopped him from offering prayers at Dargah Hazratbal. JKNC condemns this infringement of fundamental right to pray, especially on the auspicious occasion of Milad Un Nabi SAW.
— JKNC (@JKNC_) October 30, 2020
‘ಜಮ್ಮು ಮತ್ತು ಕಾಶ್ಮೀರ ಆಡಳಿತವು ಪಕ್ಷದ ಅಧ್ಯಕ್ಷ ಫಾರೂಕ್ ಅಬ್ದುಲ್ಲಾ ಅವರು ಪ್ರಾರ್ಥನೆ ಸಲ್ಲಿಸಲು ಹಝರತ್ಬಲ್ ದರ್ಗಾಕ್ಕೆ ತೆರಳದಂತೆ ತಡೆ ಹಿಡಿದಿದ್ದಾರೆ. ಮಿಲಾದ್–ಉನ್–ನಬಿ ಯಂತಹ ಶುಭ ಸಂದರ್ಭದಲ್ಲಿ ಪ್ರಾರ್ಥನೆ ಸಲ್ಲಿಸಲು ಅವಕಾಶ ನೀಡದೇ, ವ್ಯಕ್ತಿಯೊಬ್ಬರ ಮೂಲಭೂತ ಹಕ್ಕನ್ನು ಕಿತ್ತುಕೊಂಡಿದ್ದಾರೆ. ಇದನ್ನು ಜೆಕೆಎನ್ಸಿ ಖಂಡಿಸುತ್ತದೆ’ ಎಂದು ಜೆಕೆಎನ್ಸಿ ಪಕ್ಷ ಟ್ವಿಟರ್ನಲ್ಲಿ ಆರೋಪಿಸಿದೆ.
ಇದನ್ನೂ ಓದಿ: ದೇಶ ನಡೆಯುತ್ತಿರುವುದು ಸಂವಿಧಾನದ ಮೇಲೆ; ಬಿಜೆಪಿ ಪ್ರಣಾಳಿಕೆಯ ಮೇಲಲ್ಲ: ಮೆಹಬೂಬಾ ಮುಫ್ತಿ
ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ (ಪಿಡಿಪಿ) ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಕೂಡ ಜಮ್ಮು ಕಾಶ್ಮೀರ ಆಡಳಿತದ ವರ್ತನೆಯನ್ನು ಖಂಡಿಸಿ, ಟ್ವೀಟ್ ಮಾಡಿದ್ದಾರೆ. “ಪ್ರಾರ್ಥನೆಗೆ ತೆರಳದಂತೆ ತಡೆಯೊಡ್ಡುವುದು ಹಕ್ಕುಗಳ ಸಂಪೂರ್ಣ ಉಲ್ಲಂಘನೆಯಾಗಿದೆ ಮತ್ತು ಹೆಚ್ಚು ಖಂಡನೀಯವಾಗಿದೆ” ಎಂದಿದ್ದಾರೆ.
Preventing Farooq sahab from offering prayers on Milad Un Nabi SAW at Hazratbal exposes GOI’s deep paranoia & their iron fist approach towards J&K. Its a gross violation of our rights & is highly condemnable
— Mehbooba Mufti (@MehboobaMufti) October 30, 2020
ಜಮ್ಮು ಮತ್ತು ಕಾಶ್ಮೀರದಲ್ಲಿ 2019ರ ಆಗಸ್ಟ್ 5 ಆರ್ಟಿಕಲ್ 370 ರದ್ದತಿಗೆ ಮೊದಲು ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಬಂಧನದಲ್ಲಿಡಲಾಗಿತ್ತು. ಕೊರೊನಾ ಸಾಂಕ್ರಾಮಿಕ ರೋಗದಿಂದ ಲಾಕ್ಡೌನ್ ಘೋಷಣೆಯಾಗುವ ಕೆಲವೇ ದಿನಗಳ ಮೊದಲು ಅಂದರೆ, ಈ ವರ್ಷದ ಮಾರ್ಚ್ನಲ್ಲಿ ಬಿಡುಗಡೆ ಮಾಡಲಾಗಿತ್ತು.
ಸದ್ಯ ಕಾಶ್ಮೀರದಲ್ಲಿ ಪೀಪಲ್ಸ್ ಅಲೈಯನ್ಸ್ ಫಾರ್ ಗುಪ್ಕರ್ ಡಿಕ್ಲರೇಶನ್ ಎಂಬ ಗುಂಪು ಸ್ಥಾಪಿಸಲಾಗಿದ್ದು, 370 ನೇ ವಿಧಿ ಪುನಃಸ್ಥಾಪನೆ ಮತ್ತು ಕಾಶ್ಮೀರದ ನಿರ್ಣಯಕ್ಕಾಗಿ ಹೋರಾಡಲು ಈ ಗುಂಪು ಸಜ್ಜಾಗಿದೆ.
ಇದನ್ನೂ ಓದಿ: ಕೇಂದ್ರ ಸರ್ಕಾರ ನಮ್ಮಿಂದ ಕಿತ್ತುಕೊಂಡದ್ದನ್ನು ಮರಳಿ ಪಡೆಯಬೇಕಾಗಿದೆ: ಮೆಹಬೂಬಾ ಮುಫ್ತಿ


