Homeಮುಖಪುಟಪ್ರಾರ್ಥನೆ ಸಲ್ಲಿಸಲು ಹೊರಟಿದ್ದ ಫಾರೂಕ್‌ಗೆ ತಡೆ,ಮೆಹಬೂಬಾ ಮುಫ್ತಿ ಖಂಡನೆ

ಪ್ರಾರ್ಥನೆ ಸಲ್ಲಿಸಲು ಹೊರಟಿದ್ದ ಫಾರೂಕ್‌ಗೆ ತಡೆ,ಮೆಹಬೂಬಾ ಮುಫ್ತಿ ಖಂಡನೆ

ಪ್ರಾರ್ಥನೆಗೆ ತೆರಳದಂತೆ ತಡೆಯೊಡ್ಡುವುದು ಹಕ್ಕುಗಳ ಸಂಪೂರ್ಣ ಉಲ್ಲಂಘನೆಯಾಗಿದೆ ಮತ್ತು ಖಂಡನೀಯವಾಗಿದೆ ಎಂದು ಮೆಹಬೂಬಾ ಮುಫ್ತಿ ಹೇಳಿದ್ದಾರೆ.

- Advertisement -
- Advertisement -

ಪವಿತ್ರ ಮಿಲಾದ್‌–ಉನ್‌–ನಬಿ ಆಚರಣೆಯ ಹಿನ್ನೆಲೆಯಲ್ಲಿ ಶ್ರೀನಗರದ ಹಝರತ್‌ಬಲ್ ದರ್ಗಾಕ್ಕೆ ಪ್ರಾರ್ಥನೆ ಸಲ್ಲಿಸಲು ಹೊರಟ್ಟಿದ್ದ ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಅವರನ್ನು ಆಡಳಿತ ತಡೆಹಿಡಿದಿದೆ ಎಂದು ನ್ಯಾಷನಲ್‌ ಕಾನ್ಫರೆನ್ಸ್ ಪಕ್ಷ ಆರೋಪಿಸಿದೆ.

“ಪಕ್ಷವು ಪ್ರಾರ್ಥನೆ ಮಾಡುವ ಮೂಲಭೂತ ಹಕ್ಕಿನ ಉಲ್ಲಂಘನೆಯನ್ನು ಖಂಡಿಸುತ್ತದೆ, ವಿಶೇಷವಾಗಿ ಮಿಲಾದ್‌–ಉನ್‌–ನಬಿ ಹಬ್ಬದ ಶುಭ ಸಂದರ್ಭದಲ್ಲಿ” ಎಂದು ಟ್ವೀಟ್ ಮಾಡಿದೆ.

‘ಜಮ್ಮು ಮತ್ತು ಕಾಶ್ಮೀರ ಆಡಳಿತವು ಪಕ್ಷದ ಅಧ್ಯಕ್ಷ ಫಾರೂಕ್ ಅಬ್ದುಲ್ಲಾ ಅವರು ಪ್ರಾರ್ಥನೆ ಸಲ್ಲಿಸಲು ಹಝರತ್‌ಬಲ್‌ ದರ್ಗಾಕ್ಕೆ ತೆರಳದಂತೆ ತಡೆ ಹಿಡಿದಿದ್ದಾರೆ. ಮಿಲಾದ್‌–ಉನ್‌–ನಬಿ ಯಂತಹ ಶುಭ ಸಂದರ್ಭದಲ್ಲಿ ಪ್ರಾರ್ಥನೆ ಸಲ್ಲಿಸಲು ಅವಕಾಶ ನೀಡದೇ, ವ್ಯಕ್ತಿಯೊಬ್ಬರ ಮೂಲಭೂತ ಹಕ್ಕನ್ನು ಕಿತ್ತುಕೊಂಡಿದ್ದಾರೆ. ಇದನ್ನು ಜೆಕೆಎನ್‌ಸಿ ಖಂಡಿಸುತ್ತದೆ’ ಎಂದು ಜೆಕೆಎನ್‌ಸಿ ಪಕ್ಷ ಟ್ವಿಟರ್‌‌ನಲ್ಲಿ ಆರೋಪಿಸಿದೆ.

ಇದನ್ನೂ ಓದಿ: ದೇಶ ನಡೆಯುತ್ತಿರುವುದು ಸಂವಿಧಾನದ ಮೇಲೆ; ಬಿಜೆಪಿ ಪ್ರಣಾಳಿಕೆಯ ಮೇಲಲ್ಲ: ಮೆಹಬೂಬಾ ಮುಫ್ತಿ

ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ (ಪಿಡಿಪಿ) ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಕೂಡ ಜಮ್ಮು ಕಾಶ್ಮೀರ ಆಡಳಿತದ ವರ್ತನೆಯನ್ನು ಖಂಡಿಸಿ, ಟ್ವೀಟ್ ಮಾಡಿದ್ದಾರೆ. “ಪ್ರಾರ್ಥನೆಗೆ ತೆರಳದಂತೆ ತಡೆಯೊಡ್ಡುವುದು ಹಕ್ಕುಗಳ ಸಂಪೂರ್ಣ ಉಲ್ಲಂಘನೆಯಾಗಿದೆ ಮತ್ತು ಹೆಚ್ಚು ಖಂಡನೀಯವಾಗಿದೆ” ಎಂದಿದ್ದಾರೆ.

ಜಮ್ಮು ಮತ್ತು ಕಾಶ್ಮೀರದಲ್ಲಿ 2019ರ ಆಗಸ್ಟ್ 5 ಆರ್ಟಿಕಲ್ 370 ರದ್ದತಿಗೆ ಮೊದಲು ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಬಂಧನದಲ್ಲಿಡಲಾಗಿತ್ತು. ಕೊರೊನಾ ಸಾಂಕ್ರಾಮಿಕ ರೋಗದಿಂದ ಲಾಕ್‌ಡೌನ್ ಘೋಷಣೆಯಾಗುವ ಕೆಲವೇ ದಿನಗಳ ಮೊದಲು ಅಂದರೆ, ಈ ವರ್ಷದ ಮಾರ್ಚ್‌‌ನಲ್ಲಿ ಬಿಡುಗಡೆ ಮಾಡಲಾಗಿತ್ತು.

ಸದ್ಯ ಕಾಶ್ಮೀರದಲ್ಲಿ ಪೀಪಲ್ಸ್ ಅಲೈಯನ್ಸ್ ಫಾರ್ ಗುಪ್ಕರ್ ಡಿಕ್ಲರೇಶನ್‌ ಎಂಬ ಗುಂಪು ಸ್ಥಾಪಿಸಲಾಗಿದ್ದು, 370 ನೇ ವಿಧಿ ಪುನಃಸ್ಥಾಪನೆ ಮತ್ತು ಕಾಶ್ಮೀರದ ನಿರ್ಣಯಕ್ಕಾಗಿ ಹೋರಾಡಲು ಈ ಗುಂಪು ಸಜ್ಜಾಗಿದೆ.


ಇದನ್ನೂ ಓದಿ: ಕೇಂದ್ರ ಸರ್ಕಾರ ನಮ್ಮಿಂದ ಕಿತ್ತುಕೊಂಡದ್ದನ್ನು ಮರಳಿ ಪಡೆಯಬೇಕಾಗಿದೆ: ಮೆಹಬೂಬಾ ಮುಫ್ತಿ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...