Homeಮುಖಪುಟಮೋದಿ ಸರ್ಕಾರದಿಂದ ಫ್ಯಾಸಿಸಂ ದಾಳಿ: ದೀಪಂಕರ್ ಭಟ್ಟಾಚಾರ್ಯ

ಮೋದಿ ಸರ್ಕಾರದಿಂದ ಫ್ಯಾಸಿಸಂ ದಾಳಿ: ದೀಪಂಕರ್ ಭಟ್ಟಾಚಾರ್ಯ

- Advertisement -
- Advertisement -

ನರೇಂದ್ರ ಮೋದಿ ನೇತೃತ್ವದ ಕೇಂದ್ರದ ಬಿಜೆಪಿ ಸರ್ಕಾರ ದೇಶದ ಜನರ ಮೇಲೆ ಫ್ಯಾಸಿಸಂ ದಾಳಿ ನಡೆಸುತ್ತಿದೆ. ಇದಕ್ಕೆ ದೃತಿಗೆಡದೆ ಸಮರ್ಥವಾಗಿ ಪ್ರತಿರೋಧ ಒಡ್ಡುವ ಮೂಲಕ ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಆಶಯಗಳನ್ನು ಉಳಿಸಲು ಸಾರ್ವಜನಿಕರು ಕಟಿಬದ್ಧರಾಗಬೇಕಿದೆ ಎಂದು ಸಿಪಿಐ (ಎಂಎಲ್) ಲಿಬರೇಶನ್ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ದೀಪಂಕರ್ ಭಟ್ಟಾಚಾರ್ಯ ಹೇಳಿದರು.

ರಾಯಚೂರಿನ ಸಿಂಧನೂರು ನಗರದ ಟೌನ್‌ಹಾಲ್ ಸಭಾಂಗಣದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಸಿಪಿಐ(ಎಂಎಲ್) ಲಿಬರೇಶನ್ ಪಕ್ಷದ 2ನೇ ರಾಜ್ಯ ಸಮ್ಮೇಳನ ಉದ್ಘಾಟಿಸಿ ಮಾತನಾಡಿದ ಅವರು, ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರು ‘ಈ ದೇಶ ಹಿಂದೂ ರಾಷ್ಟ್ರ ಏನಾದರೂ ಆದರೆ ಅದಕ್ಕಿಂತ ದೊಡ್ಡ ದುರಂತ ಬೇರೊಂದಿಲ್ಲ’ ಎಂದು ಹೇಳಿದ್ದಾರೆ. ಆದರೆ, ಪ್ರಜಾಪ್ರಭುತ್ವ ಮತ್ತು ಸಂವಿಧಾನಕ್ಕೆ ವಿರುದ್ಧವಾಗಿ ಬಿಜೆಪಿ ಮತ್ತು ಆರ್‌ಎಸ್‌ಎಸ್ ದೇಶವನ್ನು ಹಿಂದೂ ರಾಷ್ಟ್ರ ಮಾಡಲು ಹೊರಟಿವೆ. ಸಮಾಜವನ್ನು ಒಂದುಗೂಡಿಸುವುದಕ್ಕಿಂತ ವಿಭಜಿಸುವ ಕೃತ್ಯ ಯಥೇಚ್ಛವಾಗಿ ನಡೆಯುತ್ತಿದೆ. ಎರಡು ನೂರು ವರ್ಷ ದೇಶವನ್ನು ಆಳಿದ ಬ್ರಿಟೀಷರನ್ನು ತ್ಯಾಗ, ಬಲಿದಾನಗಳ ಮೂಲಕ ಈ ದೇಶದ ಸ್ವಾತಂತಂತ್ರ್ಯ ಸೇನಾನಿಗಳು ತೊಲಗಿಸಿದ್ದಾರೆ. ಆದರೆ, ಇಂದು ದೇಶದ ಆಡಳಿತ ಚುಕ್ಕಾಣಿ ಹಿಡಿದವರು ಸಾಮ್ರಾಜ್ಯ ಶಾಹಿಗಳೊಂದಿಗೆ ಶಾಮೀಲಾಗುವ ಮೂಲಕ ದೇಶದ ಸಂಪತ್ತನ್ನು ಲೂಟಿ ಹೊಡೆಯುತ್ತಿದ್ದಾರೆ ಎಂದು ಆಪಾದಿಸಿದರು.

ಜಾಗತೀಕರಣ, ಉದಾರೀಕರಣ ಹಾಗೂ ಖಾಸಗೀಕರಣದಿಂದಾಗಿ ಸರ್ಕಾರದ ಕಾನೂನುಗಳು ವರ್ಷದಿಂದ ವರ್ಷಕ್ಕೆ ಕಠಿಣಗೊಳ್ಳುತ್ತಿವೆ. ಸಾರ್ವಜನಿಕ ಉದ್ದಿಮೆಗಳು ವರ್ಷದಿಂದ ವರ್ಷಕ್ಕೆ ಖಾಸಗಿಯವರ ಪಾಲಾಗುತ್ತಿವೆ. ಅಂಬಾನಿ, ಆದಾನಿಯಂತವರು ಸಾರ್ವಜನಿಕ ಉದ್ಯಮಗಳನ್ನು ತಮ್ಮ ಕಬ್ಜಾಕ್ಕೆ ತೆಗೆದುಕೊಳ್ಳುವ ಮೂಲಕ ಸಂಪತ್ತನ್ನು ದ್ವಿಗುಣಗೊಳಿಸಿಕೊಳ್ಳುತ್ತಿದ್ದಾರೆ. ಘನತೆಯುಕ್ತ ಬದುಕು ನಡೆಸಬೇಕಾದ ಕಾರ್ಮಿಕರನ್ನು ದೇಶದ ಆಡಳಿತಾರೂಢ ಸರ್ಕಾರ ಕಾರ್ಮಿಕ ಕಾನೂನುಗಳಿಗೆ ಮನಬಂದಂತೆ ತಿದ್ದುಪಡಿ ತರುವ ಮೂಲಕ ಗುಲಾಮಗಿರಿಗೆ ತಳ್ಳುತ್ತಿದೆ. ದುಡಿಯುವ ವರ್ಗದ ಜನರು ಇನ್ನಿಲ್ಲದ ಸಂಕಷ್ಟ ಎದುರಿಸುತ್ತಿದ್ದಾರೆ. ಕಾರ್ಪೋರೇಟ್ ಮತ್ತು ಕೋಮುವಾದಿಗಳನ್ನು ಪ್ರತಿರೋಧಿಸುವ ಸವಾಲು ನಮ್ಮೆಲ್ಲರ ಮುಂದಿದೆ. ಇದಕ್ಕೆ ದೀರ್ಘ ಸಂಘರ್ಷವೇ ಬೇಕಿದೆ. ದೇಶದಲ್ಲಿ ಎಲ್ಲ ಎಡ ಪಕ್ಷಗಳು ಒಗ್ಗಟ್ಟಾಗಿ ಪರ್ಯಾಯವನ್ನು ಹುಡುಕಬೇಕಿದೆ. ಇಲ್ಲದೇ ಹೋದರೆ ದೇಶದ ದುಡಿಯುವ ವರ್ಗ ಮತ್ತಷ್ಟು ತೊಂದರೆಗೀಡಲಾಗಲಿದೆ ಎಂದು ಹೇಳಿದರು.

ಸಿಪಿಐ(ಎಂಎಲ್) ಲಿಬರೇಶನ್ ರಾಜ್ಯ ಕಾರ್ಯದರ್ಶಿ ಕ್ಲಿಫ್ಟನ್ ಡಿ ರೊಜಾರಿಯೋ ಮಾತನಾಡಿ, ದೇಶದಲ್ಲಿ  ಇಂದು ಎಲ್ಲ ದುಡಿಯುವ ಜನರು ಕಡುಕಷ್ಟ ಕಾಲದಲ್ಲಿ ಬದುಕುತ್ತಿದ್ದಾರೆ. ಬಿಜೆಪಿ ಅಜೆಂಡಾ ಬಹುತ್ವ ಭಾರತವನ್ನು ಹಿಂದೂ ರಾಷ್ಟ್ರ ಮಾಡುವುದಾಗಿದೆ. ಹಿಂದೂರಾಷ್ಟ್ರ ಪರಿಕಲ್ಪನೆಯೇ ಪ್ರಜಾಪ್ರಭುತ್ವ ಮತ್ತು ಸಂವಿಧಾನಕ್ಕೆ ಬಂದೊದಗಿದ ಆಪತ್ತಾಗಿದೆ. ಒಂದು ವೇಳೆ ಹಿಂದೂ ರಾಷ್ಟ್ರ ಕಲ್ಪನೆ ಸಾಕಾರಗೊಂಡಿದ್ದಾದರೆ ಈ ದೇಶದಲ್ಲಿ ಪುನಃ ಜಾತಿ ಶ್ರೇಣಿಕೃತ ವ್ಯವಸ್ಥೆ ಬಂದು ತಳ ಸಮುದಾಯಗಳು ಇನ್ನಷ್ಟು ಸಂಕಷ್ಟ, ದಬ್ಬಾಳಿಕೆಯನ್ನು ಎದುರಿಸಲಿ. ಹಾಗಾಗಿ ಫ್ಯಾಸಿಸಂ ಸೋಲಿಸಲು ಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಮಣಿಸಬೇಕು ಎಂದು ಕರೆ ನೀಡಿದರು.

ಸಿಪಿಐ(ಎಂ) ಪಕ್ಷದ ರಾಜ್ಯ ಕಾರ್ಯದರ್ಶಿ ಯು.ಬಸವರಾಜ ಮಾತನಾಡಿ, ಜನರಿಗೆ ಹುಸಿ ಭ್ರಮೆಯನ್ನು ತುಂಬುತ್ತಿರುವ ಸರ್ಕಾರಗಳಿಂದಾಗಿ ಇಂದು ಭಾರತ ಹಸಿವಿನ ಸೂಚ್ಯಂಕದಲ್ಲಿ 111ನೇ ಸ್ಥಾನಕ್ಕೆ ತಲುಪಿದೆ. ಅಂಬಾನಿ, ಆದಾನಿ ಸೇರಿದಂತೆ ದೇಶದ ನೂರಕ್ಕೂ ಹೆಚ್ಚು ಶ್ರೀಮಂತರ ಆಸ್ತಿ ವರ್ಷದಿಂದ ವರ್ಷಕ್ಕೆ ಭಾರೀ ಪ್ರಮಾಣದಲ್ಲಿ ಏರುತ್ತಿದ್ದರೆ, ಬಡವರ ತಲಾ ಆದಾಯ ತೀವ್ರ ಕುಸಿತ ಕಂಡಿದೆ. ಮೋದಿಯವರ ಸರ್ಕಾರ ಬಹುಜನರ ಮೇಲೆ ವಿಪರೀತ ತೆರಿಗೆಯನ್ನು ಹೇರಿ, ಶ್ರೀಮಂತರ ಸಾಲವನ್ನು ಮನ್ನಾ ಮಾಡುತ್ತಿದೆ. ಆರ್‌ಎಸ್‌ಎಸ್ ಮತ್ತು ಹಿಂದೂಪರ ಸಂಘಟನೆಗಳು ಕಾರ್ಪೋರೇಟ್ ಶಕ್ತಿಗಳೊಂದಿಗೆ ಶಾಮೀಲಾಗಿದ್ದಾರೆ. ಬಿಜೆಪಿ ಪ್ರಜಾಸತ್ತಾತ್ಮಕ ಹಕ್ಕುಗಳನ್ನು ದಮನ ಮಾಡುತ್ತಿದೆ. ಜನಪರವಾಗಿ ಧ್ವನಿ ಎತ್ತಿದವರನ್ನು ಜೈಲಿಗೆ ಹಾಕುವ ಮೂಲಕ ದಬ್ಬಾಳಿಕೆ ನೀತಿ ಅನುಸರಿಸುತ್ತಿದೆ. ಹಾಗಾಗಿ ಎಡ ಚಳವಳಿಯನ್ನು ಇನ್ನಷ್ಟು ಗಟ್ಟಿಗೊಳಿಸುವ ಮೂಲಕ ಕೋಮುವಾದಿ ಶಕ್ತಿಗಳಿಗೆ ಸರಿಯಾದ ಪಾಠ ಕಲಿಸಬೇಕಿದೆ ಎಂದು ಹೇಳಿದರು.

ಐಪ್ವಾ ಸಂಘಟನೆಯ ರಾಷ್ಟ್ರೀಯ ಅಧ್ಯಕ್ಷೆ ರತಿರಾವ್ ಅವರು ಮಾತನಾಡಿ, ಕೋಮುವಾದ, ಕಾರ್ಪೋರೇಟ್‌ವಾದ ಮತ್ತು ಮನುವಾದ ಮಹಿಳಾ ಅನುಪಾತದ ಮೇಲೆ ವ್ಯಾಪಕ ಪರಿಣಾಮ ಬೀರುತ್ತಿದೆ. ಪುರುಷ ಪ್ರಧಾನ ವ್ಯವಸ್ಥೆ ಭ್ರೂಣ ಹತ್ಯೆಯಂತಹ ಪೈಶಾಚಿಕ ಕೃತ್ಯಗಳನ್ನು ಪೋಷಿಸುತ್ತಿದೆ. ಈ ದುರ್ದಾಳಿಯನ್ನು ಸಮರ್ಥವಾಗಿ ಪ್ರತಿರೋಧಿಸಬೇಕು ಎಂದು ಕರೆ ನೀಡಿದರು.

ಸಿಪಿಐ ಜಿಲ್ಲಾ ಕಾರ್ಯದರ್ಶಿ ಬಾಷುಮಿಯಾ ಅವರು ಮಾತನಾಡಿ, ಹುಸಿ ರಾಷ್ಟ್ರೀಯ ವಾದವನ್ನೇ ಆರ್‌ಎಸ್‌ಎಸ್ ಮತ್ತು ಹಿಂದೂಪರ ಸಂಘಟನೆಗಳು ಸಮಾಜದಲ್ಲಿ ಬಿತ್ತುವ ಮೂಲಕ ಸಮಾಜವನ್ನು ಒಡೆಯುತ್ತಿವೆ. ಇದಕ್ಕೆ ಕಮ್ಯುನಿಸ್ಟರು ಚಳವಳಿಗಳ ಮೂಲಕವೇ ಉತ್ತರ ಕೊಡಬೇಕಿದೆ ಎಂದರು.

ಬೃಹತ್ ರ‍್ಯಾಲಿ:  ನಗರದ ಎಪಿಎಂಸಿಯಿಂದ ಟೌನ್‌ಹಾಲ್‌ವರೆಗೆ ಬೃಹತ್ ರ‍್ಯಾಲಿ ನಡೆಯಿತು. ಭಗತ್ ಸಿಂಗ್ ಆಟೋ ಚಾಲಕರ ಸಂಘದ ಅಧ್ಯಕ್ಷ ಬಸವರಾಜ ಕೊಂಡೆ ಅವರ ನೇತೃತ್ವದಲ್ಲಿ ಹುತಾತ್ಮರ ಭಾವಚಿತ್ರಗಳೊಂದಿಗೆ 100ಕ್ಕೂ ಹೆಚ್ಚು ಆಟೋಗಳ ರ‍್ಯಾಲಿ ಗಮನ ಸೆಳೆಯಿತು. ರ‍್ಯಾಲಿಯಲ್ಲಿ ಅಪಾರ ಸಂಖ್ಯೆಯ ಕಾರ್ಯಕರ್ತರು, ಸಾರ್ವಜನಿಕರು, ವಿವಿಧ ಜಿಲ್ಲೆಗಳ ಮುಖಂಡರು, ಕಾರ್ಯಕರ್ತರು ಭಾಗವಹಿಸಿದ್ದರು.

ಇದನ್ನೂ ಓದಿ : ಜೆಡಿಎಸ್‌ನಿಂದ ಸಿಎಂ ಇಬ್ರಾಹಿಂ, ಸಿ ಕೆ ನಾಣು ಉಚ್ಚಾಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...