Homeಮುಖಪುಟಸ್ವಾಭಾವಿಕವೆನಿಸುವಂತೆ ಮುನ್ನುಗ್ಗಿರುವ ಕೃತಕ ಬದ್ಧಿಮತ್ತೆ; ಸಾರ್ವಜನಿಕರ ಒಳತಿನ ಪ್ರಶ್ನೆ ಕೇಳುವವರಾರು?

ಸ್ವಾಭಾವಿಕವೆನಿಸುವಂತೆ ಮುನ್ನುಗ್ಗಿರುವ ಕೃತಕ ಬದ್ಧಿಮತ್ತೆ; ಸಾರ್ವಜನಿಕರ ಒಳತಿನ ಪ್ರಶ್ನೆ ಕೇಳುವವರಾರು?

- Advertisement -
- Advertisement -

ಇತ್ತೀಚಿಗೆ ಸಾಮಾಜಿಕ ಜಾಲತಾಣದ ದೈತ್ಯ ಟೆಕ್ ಕಂಪನಿ ಫೇಸ್‌ಬುಕ್ ತನ್ನ ಬ್ರಾಂಡ್ ಹೆಸರನ್ನು ’ಮೆಟಾ’ ಎಂದು ಬದಲಾಯಿಸಿಕೊಂಡಾಗ, ಅದೊಂದು ರಿಬ್ರಾಂಡಿಂಗ್ ಎಕ್ಸರ್‌ಸೈಸ್ ಎಂಬಂತೆ ಹಲವು ಮಾಧ್ಯಮಗಳು ಉಪೇಕ್ಷಿಸಿದ್ದಿದೆ. ಎಲ್ಲೋ ಕೆಲವು ಮಾಧ್ಯಮಗಳು ಫೇಸ್‌ಬುಕ್ ಸಂಸ್ಥೆ ಇಲ್ಲಿಯವರೆಗೂ ಸೃಷ್ಟಿಸಿರುವ ಅಪಸವ್ಯಗಳ ಹಿನ್ನೆಲೆಯಲ್ಲಿ ಮತ್ತು ಆ ಸಂಸ್ಥೆಯ ಮಾಜಿ ನೌಕರರು ಸೋರಿಕೆ ಮಾಡಿದ ದಾಖಲೆಗಳ ಬೆಳಕಿನಲ್ಲಿ ತಂತ್ರಜ್ಞಾನ ಆಧಾರಿತ, ಡೇಟಾ ಆಧಾರಿತ ಸಾಮಾಜಿಕ ಮಾಧ್ಯಮಗಳು ಜನಸಮೂಹಗಳಲ್ಲಿ ಸೃಷ್ಟಿಸಿರುವ ಒಡಕನ್ನು, ಧ್ರುವೀಕರಣವನ್ನು, ಪ್ರಭುತ್ವಗಳು ಅದನ್ನು ಬಳಸಿಕೊಂಡ ಬಗೆಯನ್ನು ಅವಲೋಕಿಸಿ ಚರ್ಚಿಸಿದ್ದು ಕೂಡ ನಡೆಯಿತು. ಈ ಚರ್ಚೆಯ ಸಮಯದಲ್ಲಿ ಮುಖ್ಯವಾಗಿ ಗೋಚರಿಸಿದ್ದು: ಒಂದು ಸಮಯದಲ್ಲಿ ಹೆಚ್ಚು ಪ್ರಜಾಸತ್ತಾತ್ಮಕಗೊಳಿಸುವ ನಿಟ್ಟಿನಲ್ಲಿ ಬೆಳೆಯುತ್ತದೆ ಎಂದು ನಂಬಿದ್ದ ಇಂಟರ್‌ನೆಟ್, ಈ ದೈತ್ಯ ಟೆಕ್ ಸಂಸ್ಥೆಗಳ ಹಿಡಿತದಲ್ಲಿ ಸಿಕ್ಕಿ, ನೋಡನೋಡುತ್ತಿದ್ದಂತೆಯೇ ಅದು ಸರ್ವಾಧಿಕಾರಿಯ ರೀತಿಯಲ್ಲಿ ಬೆಳೆಯಿತೆಲ್ಲಾ ಎಂಬ ಅಚ್ಚರಿ ಮತ್ತು ಆತಂಕ. ಎಷ್ಟೋ ದೇಶಗಳಲ್ಲಿ ಅವು, ತನ್ನಂತಹ ವ್ಯವಸ್ಥೆಯನ್ನೇ ಬೆಂಬಲಿಸುವ ರಾಜಕೀಯ ಪಕ್ಷಗಳಿಗೆ ಚುನಾವಣೆಗಳನ್ನು ಗೆಲ್ಲಲು ಸಹಕರಿಸಿದರೆ ಮತ್ತೆ ಕೆಲವು ದೇಶಗಳಲ್ಲಿ ಅಲ್ಪಸಂಖ್ಯಾತರ, ಅವಕಾಶವಂಚಿತರ, ವಲಸಿಗರ ವಿರೋಧಿ ವೇದಿಕೆಯಾಗಿ ಹೆಚ್ಚು ಕಾರ್ಯನಿರ್ವಹಿಸುತ್ತಾ ಸಾಗಿತು ಎಂಬುದೂ ಕೂಡ ವಿದಿತವೇ.

ಈಗ ಇಂಟರ್‌ನೆಟ್ ವೆಬ್3ಯತ್ತ ಹೆಜ್ಜೆ ಹಾಕುತ್ತಿದೆ. ಹಿಂದೊಮ್ಮೆ ಪ್ರೋಗ್ರಾಮ್ ಮಾಡಿದಷ್ಟು ಮಾತ್ರ ಕೆಲಸ ಮಾಡುತ್ತಿದ್ದ ತಂತ್ರಜ್ಞಾನ, ತಾನು ಬೆಳೆದಂತೆ ತಾನೇ ಕಲಿಯುವ ‘ಮೆಶಿನ್ ಲರ್ನಿಂಗ್‌’ಗೆ ಮುಂದಾಯಿತು. ಈ ಯಂತ್ರ ಕಲಿಕೆ ಇಂದು ಹಿಂದೆಂದಿಗಿಂತಲೂ ಅಗಾಧವಾಗಿ ಬೆಳೆದಿದೆ. ಈ ಯಂತ್ರ ಕಲಿಕೆ ಎಷ್ಟು ಮುಂದುವರಿದಿದೆ ಎಂದರೆ, ಪ್ರೋಗ್ರಾಮ್‌ಗಳ ಮೂಲಕ ಏನನ್ನು ಮಾಡಬೇಕು ಎಂಬ ನಿರ್ದೇಶನಗಳ ತತ್ವವನ್ನು ಮೀರಿ ತಾನೇ ಹೊಸ ಕೆಲಸ ನಿರ್ವಹಿಸುವ, ನಿರೀಕ್ಷೆ ಮಾಡಲಾರದ ನಿರ್ಣಯ ತೆಗೆದುಕೊಳ್ಳುವ ಕೃತಕ ಬುದ್ಧಿಮತ್ತೆ ಅದಕ್ಕೆ ಬೆಳೆಯುತ್ತದೆ. ಇದಕ್ಕೆ ಕಂಪ್ಯೂಟಿಂಗ್ ಕ್ಷೇತ್ರದಲ್ಲಿ ಆಗಿರುವ ಮಹತ್ತರ ವಿದ್ಯಮಾನಗಳು ಸಹಕರಿಸಿವೆ. ಈ ಯಂತ್ರ ಕಲಿಕೆಗೆ ಬಿಗ್‌ಡೇಟಾ ಎಂಬ ಮಾಹಿತಿಯನ್ನು ಕ್ರೋಢೀಕರಿಸಿ ಅದನ್ನು ಅವಲೋಕಿಸಿ ಬಳಸುವ ತಂತ್ರಜ್ಞಾನ ಕೂಡ ಒಂದು ದೊಡ್ಡ ಕೊಡುಗೆಯನ್ನು ನೀಡಿದೆ. ಈಗ ಈ ಕೃತಕ ಬುದ್ಧಿಮತ್ತೆಯ ತಂತ್ರಜ್ಞಾನ ಪತ್ರಿಕೋದ್ಯಮವನ್ನೂ ಒಳಗೊಂಡಂತೆ, ಆರೋಗ್ಯ, ಶಿಕ್ಷಣ, ಪೊಲೀಸಿಂಗ್, ಉತ್ಪಾದನೆ, ಎಚ್‌ಆರ್, ಸಾಗಣೆ, ಸಂಚಾರ ಮುಂತಾದ ಕ್ಷೇತ್ರಗಳಿಗೆ ಲಗ್ಗೆ ಇಟ್ಟಿದೆ. ಇದು ಹಲವು ವಲಯಗಳಲ್ಲಿ ಕ್ರಾಂತಿಕಾರಕ ಬದಲಾವಣೆಗಳನ್ನು ತರಬಲ್ಲದು ಎಂದು ಇದರ ಮೇಲೆ ಹೂಡಿಕೆ ಮಾಡಿದವರು ಪ್ರತಿಪಾದಿಸುತ್ತಿದ್ದರಾದರೂ, ಈ ಕ್ರಾಂತಿ ಒಡ್ಡಬಹುದಾದ ಅಪಾಯಗಳ ಮೇಲೆ ನಿರೀಕ್ಷಿತ ಮಟ್ಟದ ಚರ್ಚೆಗಳಾಗುತ್ತಿಲ್ಲ. ಸಾಮಾಜಿಕ ಮಾಧ್ಯಮಗಳು ಮಾಹಿತಿ/ಜ್ಞಾನ ಉತ್ಪಾದನೆಯಿಂದ ಹಿಡಿದು ಹಂಚಿಕೆಯವರೆಗೂ ಹೇಗೆ ಅವನ್ನು ಪ್ರಜಾಸತ್ತಾತ್ಮಗೊಳಿಸಲಿವೆ ಎಂಬ ಮೊದಲಿನ ನಂಬಿಕೆಗೆ ವ್ಯತಿರಿಕ್ತವಾಗಿ ಮೂರೋ ನಾಲ್ಕೋ ಕಂಪನಿಗಳು ಸ್ವಾಮ್ಯ ಸಾಧಿಸಿರುವಂತೆಯೇ, ಈ ಕ್ರಾಂತಿ ಕೂಡ ಎಂಬ ಚರ್ಚೆಗಳಿವೆ.


ಅಕ್ಟೋಬರ್ ಕೊನೆಯಲ್ಲಿ ಫೇಸ್‌ಬುಕ್, ’ಮೆಟಾ’ ಎಂದು ರಿಬ್ರಾಂಡ್ ಮಾಡಿಕೊಂಡ ನಂತರ ಅದರ ಸಿಇಒ ಮಾರ್ಕ್ ಝುಕರ್ಬಗ್, ಮುಂದೆ ಆ ಸಂಸ್ಥೆ ತೆರೆದುಕೊಳ್ಳಲಿರುವ ’ಮೆಟಾವರ್ಸ್’ಗೆ ಪ್ರಚಾರ ಎಂಬಂತೆ ಸುಮಾರು ಎರಡು ನಿಮಿಷಗಳ ವಿಡಿಯೋವನ್ನು ಬಿಡುಗಡೆ ಮಾಡಿದರು. ಝುಕರ್ಬಗ್ ತನ್ನ ಪ್ರತಿಕೃತಿಯನ್ನು ಸೃಷ್ಟಿಸಿಕೊಂಡು, ಬಾಹ್ಯಾಕಾಶದಲ್ಲಿ ತನ್ನ ಗೆಳೆಯರೊಂದಿಗೆ (ಅವುಗಳೂ ಪ್ರತಿಕೃತಿಗಳೇ) ಮತ್ತು ರೊಬೋಟ್ ಒಂದರೊಂದಿಗೆ ಇಸ್ಪೀಟ್ ಆಡುವುದು, ನಡುವೆ ನಿಜ ಲೋಕದ ತನ್ನ ಗೆಳೆಯರೊಂದಿಗೆ ಸಂಭಾಷಿಸುವುದು ಹೀಗೆ ಮುಂದುವರೆಯುತ್ತದೆ. ಮುಂದಿನ ಸಾಮಾಜಿಕ ಮಾಧ್ಯಮದಲ್ಲಿ/ಮೆಟಾವರ್ಸ್‌ನಲ್ಲಿ ನಾವೆಲ್ಲಾ ಹೀಗೆ ಸೋಶಿಯಲೈಸ್ ಮಾಡುತ್ತೇವೆ ಅಥವಾ ಕನೆಕ್ಟ್ ಆಗುತ್ತೇವೆ ಎಂಬ ಸಂದೇಶದೊಂದಿಗೆ ಆ ವಿಡಿಯೋ ಮುಕ್ತಾಯವಾಗುತ್ತದೆ. ಇದು ’ವರ್ಚುಯಲ್ ರಿಯಾಲಿಟಿ’ ಲೋಕ. ಇಲ್ಲಿ ಕೂಡ ಎಐ ಅಪಾರ ಬಗೆಗಳಲ್ಲಿ ಬಳಕೆಯಾಗಲಿದೆ. ಒಂದು ಕನ್ನಡಕದ ರೀತಿಯ ಸಾಧನವನ್ನು ಹಾಕಿಕೊಂಡು, ನಮ್ಮ ಪ್ರತಿಕೃತಿಯನ್ನು ಸೃಷ್ಟಿಸಿಕೊಂಡು, ನಮ್ಮ ಮಾತುಗಳನ್ನು ಅರ್ಥ ಮಾಡಿಕೊಂಡು, ಆ ಮಾತುಗಳ ಅರ್ಥದ ರೀತಿಯಲ್ಲಿ ಬೇಕಾದ ಜಗತ್ತನ್ನು ಸೃಷ್ಟಿ ಮಾಡಿ, ಅದಕ್ಕೆ ಸ್ಪಂದಿಸಿ ವ್ಯವಹರಿಸುವ ಈ ವರ್ಚುಯಲ್ ಲೋಕದ ಸೃಷ್ಟಿಗೆ ಕೃತಕ ಬುದ್ಧಿಮತ್ತೆ ಅನನ್ಯವಾಗಿ ಜತೆಗೂಡಲಿದೆ.

ಇಂತಹ ವರ್ಚುಯಲ್ ಲೋಕದಲ್ಲಿ ಸೃಷ್ಟಿಯಾಗುವ ಭ್ರಾಮುಕ ಜಗತ್ತಿನಲ್ಲಿ ಇಂದು ಉಂಟಾಗಿರುವ ಸಮಸ್ಯೆಗಳಿಗೆ ಪರಿಹಾರ ಇರಬಲ್ಲುದೇ? ಇಂದು ಜಗತ್ತನ್ನು ಬಾಧಿಸುತ್ತಿರುವ ತೀವ್ರ ಧ್ರುವೀಕರಣವನ್ನು ಆ ಜಗತ್ತಿನಲ್ಲಿ ಸರಿಪಡಿಸುವ ಶಕ್ತಿ ಇದೆಯೇ? ಇಂದಿನ ತೀವ್ರ ಅಸಮಾನತೆಯನ್ನು ಹೋಗಲಾಡಿಸುವ ಶಕ್ತಿ ಅಲ್ಲಿದೆಯೇ? ಇದಕ್ಕೆ ಉತ್ತರ ಕಂಡುಕೊಳ್ಳುವುದು ಅಲ್ಲಿ ಹೂಡಿಕೆ ಮಾಡುತ್ತಿರುವ ದೈತ್ಯ ಕಾರ್ಪೊರೆಟ್ ಶಕ್ತಿಗಳಿಗೆ ಬೇಕಾಗಿಲ್ಲ. ಭೂಮಿಯ ಡಿಜಿಟಲ್ ರೂಪವನ್ನು ಹಂಚಿ ಟ್ರೇಡ್ ಮಾಡುವ, ಒಡೆತನ ನೀಡುವ ಬಗ್ಗೆ ಆ ಕಂಪನಿಗಳು ಚಿಂತೆ ಮಾಡುತ್ತಿವೆ. ಅದೆಲ್ಲಾ ಇರಲಿ, ಇಂತಹ ವರ್ಚುಯಲ್ ಜಗತ್ತಿನ ಸೃಷ್ಟಿಗೆ ಬಳಕೆಯಾಗುವ ಬಳಕೆದಾರನ ಮಾಹಿತಿಯ ರಕ್ಷಣೆ ಬಗ್ಗೆ, ಗೌಪ್ಯತೆಯ ಬಗ್ಗೆ ನೀತಿ ನಿಯಮಗಳನ್ನು ರೂಪಿಸುವ ನಿಟ್ಟಿನಲ್ಲಿ ಜಗತ್ತಿನ ಹಲವು ದೇಶಗಳ ಆಡಳಿತ ವ್ಯವಸ್ಥೆಗಳು ಚಿಂತನೆ ನಡೆಸಿವೆಯೇ? ನಮ್ಮ ಭಾರತದಲ್ಲಂತೂ ಇದರ ಬಗ್ಗೆ ಪ್ರಭುತ್ವ ಹೆಚ್ಚು ತಲೆಕೆಡಿಸಿಕೊಂಡಂತೆ ಕಂಡಿಲ್ಲ. ಸದ್ಯದ ಸಾಮಾಜಿಕ ಜಾಲತಾಣ ಸಂಸ್ಥೆಗಳು ತನ್ನ ರಾಜಕೀಯಕ್ಕೆ ಸಹಕರಿಸುತ್ತಿರುವಾಗ, ಅದರ ಮುಂದುವರೆದ ತಂತ್ರಜ್ಞಾನ ಕೂಡ ತನ್ನತ್ತಲೇ ವಾಲಬಹುದೆಂಬ ಲೆಕ್ಕಾಚಾರ ಇರಬಹುದೇ ಅದಕ್ಕೆ?

1997ರಲ್ಲಿ ಐಬಿಎಂ ಸಂಸ್ಥೆಯ ಡೀಪ್ ಬ್ಲೂ ಸೂಪರ್ ಕಂಪ್ಯೂಟರ್ ಅಂದಿನ ಚೆಸ್ ವಿಶ್ವ ಚಾಂಪಿಯನ್ ಗ್ಯಾರಿ ಕ್ಯಾಸ್ಪರೋವ್ ಅವರನ್ನು ಸೋಲಿಸಿದಾಗ ಬಹುಷಃ ಈ ಕೃತಕ ಬುದ್ಧಿಮತ್ತೆ ಈ ಮಟ್ಟಕ್ಕೆ ಬೆಳೆಯುತ್ತದೆ ಎಂಬುದನ್ನು ಊಹಿಸಿದವರು ಕಡಿಮೆ ಇದ್ದಾರು. ಆದರೆ ಈಗ ಕನಿಷ್ಠ ಪಶ್ಚಿಮದ ದೇಶದ ಚಿಂತಕರು, ತಜ್ಞರು, ತತ್ವ ಶಾಸ್ತ್ರಜ್ಞರು ಇದರ ಬಗ್ಗೆ ಹೆಚ್ಚುಹೆಚ್ಚು ಮಾತನಾಡಲು ಪ್ರಾರಂಭಿಸಿದ್ದಾರೆ. ಉದಾಹರಣೆಗೆ, ಇಸ್ರೇಲ್‌ನ ಇತಿಹಾಸದ ಪ್ರೊಫೆಸರ್ ಮತ್ತು ಸಾರ್ವಜನಿಕ ಬುದ್ಧಿಜೀವಿ ಯುವಲ್ ಹರಾರಿ ಅವರು, ಎಐ ತಂತ್ರಜ್ಞಾನ ಒಡ್ಡಬಹುದಾದ ಸಮಸ್ಯೆಗಳ ಬಗ್ಗೆ ಸಂದೇಹ ವ್ಯಕ್ತಪಡಿಸುತ್ತಲೇ ಬಂದಿದ್ದಾರೆ. ಒಂದು ಹಂತದಲ್ಲಿ ಉತ್ಪಾದನೆ ಯಾಂತ್ರೀಕೃತವಾದಾಗ, ಹಲವು ಉದ್ಯೋಗಗಳು ನಷ್ಟವಾದರೂ, ಆ ಯಂತ್ರಗಳನ್ನು ಮುನ್ನಡೆಸಬೇಕಾದ ಒಂದು ಪಡೆ ಅಗತ್ಯವಿದ್ದರಿಂದ ಅದಕ್ಕಾಗಿ ಹೊಸ ನೌಕರಪಡೆಯನ್ನು ಸೃಷ್ಟಿಮಾಡಬೇಕಾಗಿ ಬಂತು. ಆ ನಿಟ್ಟಿನಲ್ಲಿ ಕಡಿತಗೊಂಡ ಉದ್ಯೋಗಗಳ ಪ್ರಮಾಣ ಆತಂಕಕಾರಿಯಾಗಿರಲಿಲ್ಲ. ಆದರೆ ಎಐ ಸೃಷ್ಟಿಸುವ ಆಟೋಮೇಷನ್ ಬೇರೆ ತೆರನಾದದ್ದು. ಇದು ಊಹಿಸಲೂ ಕಷ್ಟವಾದಷ್ಟು ಜನರ ಉದ್ಯೋಗವನ್ನು ಕಡಿತಗೊಳಿಸುತ್ತದೆ. ಇದಕ್ಕೆ ಸರ್ಕಾರಗಳು ಯಾವ ರೀತಿಯಲ್ಲಿ ಸಿದ್ಧವಾಗಿವೆ ಎಂಬುದು ಹರಾರಿ ಅವರ ಚಿಂತನೆಯ ಸಾರ. ಉದಾಹರಣೆಗೆ ಚಾಲಕರಿಲ್ಲದ ಕಾರು ಸಾಕಾರವಾಗುವುದರತ್ತ ದಾಪುಗಾಲಿಟ್ಟಿದೆ. ಇದು ಎಷ್ಟು ಜನರನ್ನು ಚಾಲಕ ವೃತ್ತಿಯಿಂದ ಹೊರದಬ್ಬಬಹುದು ಎಂಬ ಊಹೆಯೇ ಭಯಂಕರವಾಗಿದೆ. ಹಿಂದಿನ ಕೈಗಾರೀಕರಣ ಕಾರ್ಮಿಕರನ್ನು ’ರಿಸ್ಟ್ರಕ್ಚರ್’ ಮಾಡಿ ಬೇರೆ ಉದ್ಯೋಗ ನೀಡಬಹುದಾದ ರೀತಿಯಲ್ಲಿತ್ತು. ಆದರೆ ಈ ಎಐ ಕ್ರಾಂತಿ ಬೇರೆಯೇ ರೀತಿಯದ್ದು. ಈಗಾಗಲೇ ಅಮೆಜಾನ್ ಕಂಪನಿ ಮನುಷ್ಯರ ಜೊತೆಗೆ ವ್ಯವಹರಿಸಬಲ್ಲ ಕೃತಕ ಬುದ್ಧಿಮತ್ತೆಯ ಡ್ರೋಣ್ ಮೂಲಕ ವಸ್ತುಗಳನ್ನು ಡೆಲಿವರಿ ಮಾಡುವ ಪೇಟೆಂಟ್ ತೆಗೆದುಕೊಂಡಿದೆ. ಇಲ್ಲಿ ಸಾವಿರಾರು ಡ್ರೋನ್‌ಗಳನ್ನು ಚಲಾಯಿಸಲು ಬಹುಷಃ ಬೇಕಾಗಿರುವುದು ಕೆಲವೇ ಕೆಲವರು. ಈ ನಿಟ್ಟಿನಲ್ಲಿ ಸಾಗಾಣೆ ಸರಪಳಿಯಲ್ಲಿ ನಷ್ಟವಾಗಬಹುದಾದ ಉದ್ಯೋಗಗಳ ಬಗ್ಗೆ ಸರ್ಕಾರಗಳಿಗೆ ಯೋಜನೆಯೇನಾದರೂ ಇದೆಯೇ?

ಇನ್ನು ಈ ಎಐ ಬಳಕೆ ಹಲವು ನೈತಿಕ ಬಿಕ್ಕಟ್ಟುಗಳನ್ನು ಸೃಷ್ಟಿಸುತ್ತಿರುವುದು ಕೂಡ ಈಗಾಗಲೇ ದಾಖಲಾಗಿದೆ. ಉದಾಹರಣೆಗೆ ಅಮೆರಿಕದ ಕೆಲವು ಕಡೆ ಜೈಲಿನಲ್ಲಿರುವ ಕೈದಿಗಳಿಗೆ ’ಪೆರೋಲ್’ ನೀಡುವುದಕ್ಕೆ ಪ್ರಾಯೋಗಿಕವಾಗಿ ಬಳಸಲಾದ ಎಐ ತಂತ್ರಜ್ಞಾನ. ಕೈದಿಗಳಿಗೆ ಜೈಲಿನಿಂದ ಕೆಲವು ವರ್ಷಗಳ ಕಾಲ ತಾತ್ಕಾಲಿಕ ಬಿಡುಗಡೆ ಮಾಡಲು ಅಥವಾ ಜೈಲಿನಲ್ಲಿನ ಅವರ ನಡವಳಿಕೆಯ ಪ್ರಕಾರ ಅವರ ಕಾರಾಗೃಹ ಅವಧಿಗೂ ಮುಂಚಿತವಾಗಿ ಬಿಡುಗಡೆ ಮಾಡಲು ನಿರ್ಧರಿಸಲು ಹಲವು ಪುಟಗಳ ದಾಖಲೆಗಳನ್ನು ಓದಿ, ಅದರ ಪ್ರಕಾರ ಮುಂದಿನ ನಿರ್ಣಯ ಕೈಗೊಳ್ಳಬೇಕಿದೆ. ಇದು ಮನುಷ್ಯರು ಅವಲೋಕಿಸಿ ಮಾಡಬೇಕಾದ ಕರ್ತವ್ಯವಾಗಿದ್ದರೂ ಇದಕ್ಕೆ ಅಗತ್ಯ ಮಾನವ ಸಂಪನ್ಮೂಲಗಳು ಇಲ್ಲ. ಮನುಷ್ಯನ ರೀತಿಯಲ್ಲಿಯೇ ಆದರೆ ಅವನಿಗಿಂತಲೂ ದಾಖಲೆಗಳನ್ನು ವೇಗವಾಗಿ ಓದುವ, ನೂರಾರು ಪ್ಯಾರಾಮೀಟರ್‌ಗಳನ್ನು ಮನುಷ್ಯರಂತೆಯೇ ಅಥವಾ ಅವನಿಗಿಂತಲೂ ಚುರುಕಾಗಿ ಅವಲೋಕಿಸುವ ಮತ್ತು ನಿರ್ಣಯ ಕೈಗೊಳ್ಳುವ ತಂತ್ರಜ್ಞಾನವನ್ನು ಅಭಿವೃದ್ಧಿಪಡಿಸಿ ಪ್ರಯೋಗ ಮಾಡಲಾಯಿತು. ಎಷ್ಟೋ ಬಾರಿ ಮನುಷ್ಯರು ಜನಾಂಗ ಮತ್ತು ವ್ಯಕ್ತಿಗಳ ಬಗ್ಗೆ ಪೂರ್ವಾಗ್ರಹಪೀಡಿತರಾಗಿರಲು ಸಾಧ್ಯವಿದ್ದು, ಪೆರೋಲ್ ನಿರ್ಣಯಗಳಲ್ಲಿ ಅದು ರಿಫ್ಲೆಕ್ಟ್ ಆಗುವ ಸಾಧ್ಯತೆಯಿರುತ್ತದೆ. ಆದುದರಿಂದ ಕೃತಕ ಬುದ್ಧಿಮತ್ತೆಯ ಯಂತ್ರ ನಿಷ್ಪಕ್ಷಪಾತವಾಗಿ ಕಾರ್ಯನಿರ್ವಹಿಸಬಲ್ಲದು ಎಂದು ಕೂಡ ಬಣ್ಣಿಸಲಾಗಿತ್ತು. ಈ ಪ್ರಯೋಗದ ನಂತರ ಮಾಡಿದ ಅಧ್ಯಯನ ತಿಳಿಸಿದ ಸತ್ಯ ಅಘಾತಕಾರಿಯಾಗಿತ್ತು. ಈ ಮೆಶಿನ್ ಕಲಿಕೆಗೆ ಯಾವ ಡೇಟಾ ಬಳಕೆ ಮಾಡಲಾಗಿತ್ತೋ ಅದು ಕೂಡ ಪೂರ್ವಾಗ್ರಹಗಳಿಂದ ಕೂಡಿದ್ದರಿಂದ ಮೆಶಿನ್ ಕಲಿಕೆ ಕೂಡ ಅದೇ ನಿಟ್ಟಿನಲ್ಲಿತ್ತು. ಎಷ್ಟೋ ಜನ ಅರ್ಹ ಬ್ಲಾಕ್ ಸಮುದಾಯದ ವ್ಯಕ್ತಿಗಳಿಗೆ ಈ ಯಂತ್ರ ಪೆರೋಲ್ ನಿರಾಕರಿಸಿದ್ದು ಈ ಅಧ್ಯಯನದಿಂದ ತಿಳಿದುಬಂತು. ಇದೇ ರೀತಿಯ ಮತ್ತೊಂದು ಉದಾಹರಣೆಯಲ್ಲಿ, ಹಲವು ಕಾರಣಗಳಿಂದ ಪುನರ್ವಸತಿ ಶಿಬಿರಗಳಲ್ಲಿ ಇರುವ ತಾಯಂದಿರು ಹಡೆದಾಗ, ಮಗುವಿಗೆ ಮುಂದೆ ಅವರು ಅಪಾಯಕಾರಿಯಾಗಬಲ್ಲರೇ ಎಂಬುದನ್ನು ಪತ್ತೆ ಹಚ್ಚಿ ಮಗುವನ್ನು ಬೇರೆ ಕಡೆಗೆ ಆರೈಕೆಗೆ ವರ್ಗಾಯಿಸುವುದಕ್ಕೆ ಕೂಡ ಎಐ ತಂತ್ರಜ್ಞಾನವನ್ನು ಬಳಸಲಾಗಿತ್ತು. ಅಲ್ಲಿ ಕೂಡ ಆ ಯಂತ್ರ ಬ್ಲಾಕ್ ಸಮುದಾಯದ ತಾಯಂದಿರ ಮೇಲೆ ತಾರತಮ್ಯ ಎಸಗಿದ್ದು ಅಧ್ಯಯನಗಳಿಂದ ತಿಳಿದುಬಂದಿದೆ. ಈ ರೀತಿ ಎಐ ತಂತ್ರಜ್ಞಾನ ಈಗಿರುವ ತಾರತಮ್ಯವನ್ನು ಬಲಪಡಿಸದಂತೆ, ಅಸಮಾನತೆಯನ್ನು ತೀವ್ರಗೊಳಿಸದಂತೆ ಸರಿ ದಿಕ್ಕಿನಲ್ಲಿ ಸಾಗಬೇಕಿರುವಂತೆ ಮಾಡುವ ನೈತಿಕ ಬಿಕ್ಕಟ್ಟುಗಳು ಕೂಡ ತಲೆದೋರಿವೆ.

ಫೋಟೋ ಹೊಡೆದು ಪತ್ತೆ ಹಚ್ಚಿ ಕಣ್ಗಾವಲು ನಡೆಸುವ, ಫೋಟೋಗಳನ್ನು ಮ್ಯಾಚ್ ಮಾಡುವ, ನಕಲಿ ವಿಡಿಯೋಗಳನ್ನು ಸೃಷ್ಟಿಸುವ ಡೀಪ್ ಫೇಕ್, ಹೀಗೆ ಕೃತಕ ಬುದ್ಧಿಮತ್ತೆ ಸೃಷ್ಟಿಸುತ್ತಿರುವ ಸವಾಲುಗಳು, ಈ ಸದ್ಯಕ್ಕೆ ಅದು ನಮಗೆ ನೀಡುತ್ತಿರುವ ಒಳ್ಳೆಯ ಭವಿಷ್ಯದಭರವಸೆಯನ್ನು ಮೀರಿಸುತ್ತಿರುವುದಕ್ಕೆ ಅನೇಕ ಉದಾಹರಣೆಗಳಿವೆ. ಕಥೆ-ಕವಿತೆ ಬರೆದು, ರಿಪೋರ್ಟ್‌ಗಳನ್ನು ಬರೆದು ಸೃಜನಶೀಲ ಕೆಲಸದ ಮಹತ್ವವನ್ನು ಅಲ್ಲಗಳೆಯುವ ಅಪಾಯ, ಉಳಿದೆಲ್ಲಾ ಕಳವಳಕಾರಿ ಆತಂಕಗಳಿಗೆ ಹೋಲಿಸಿದರೆ, ನಿಜಕ್ಕೂ ಅತಿ ಸಣ್ಣಸಂಗತಿಯಂತೆ ಕಾಣುತ್ತದೆ.

ಈ ನಿಟ್ಟಿನಲ್ಲಿ ಎಐ ಬಗ್ಗೆ ಕೆಲವು ಆಯಾಮಗಳಲ್ಲಿ ಚರ್ಚೆಗಳನ್ನು ಈ ಸಂಚಿಕೆಯಲ್ಲಿ ಪ್ರಾರಂಭಿಸಿದ್ದೇವೆ. ಈ ತಂತ್ರಜ್ಞಾನದ ತಿಳಿವಳಿಕೆ ದೃಷ್ಟಿ ಮತ್ತು ಇದರ ಬೆಳವಣಿಗೆಯ ಪ್ರಕ್ರಿಯೆಯಲ್ಲಿ ಸಾರ್ವಜನಿಕರ ಸ್ಟೇಕ್ ಕೂಡ ಇರಬೇಕೆಂಬ ಕಾಳಜಿ ಪತ್ರಿಕೆಯದ್ದು. ಆ ನಿಟ್ಟಿನಲ್ಲಿ ಇದರ ಬಗ್ಗೆ ಸರಣಿ ಲೇಖನಗಳು ಮುಂದುವರೆಯಲಿವೆ.

  • – ಗುರುಪ್ರಸಾದ್ ಡಿ ಎನ್

ಇದನ್ನೂ ಓದಿ: ಪಾವ್ಲೊ ಫ್ರೆಯರೆಗೆ ನೂರು; ಮಾನವೀಕರಣ ಮತ್ತು ಪ್ರಜಾತಾಂತ್ರಿಕ ಶಿಕ್ಷಣಕ್ಕೆ ಮರುಚಿಂತನೆ ಅಗತ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...