Homeಕರ್ನಾಟಕಫೆಬ್ರವರಿ 15ರ ವರೆಗೆ ಫಾಸ್ಟ್ಯಾಗ್‌ ಗಡುವು ವಿಸ್ತರಣೆ

ಫೆಬ್ರವರಿ 15ರ ವರೆಗೆ ಫಾಸ್ಟ್ಯಾಗ್‌ ಗಡುವು ವಿಸ್ತರಣೆ

ಹೊಸ ಆದೇಶದ ಪ್ರಕಾರ ಮುಂದಿನ ತಿಂಗಳ ಅರ್ಧದವರೆಗೂ, ವಾಹನ ಸವಾರರು ನಗದು ಅಥವಾ ಫಾಸ್ಟ್ಯಾಗ್‌ ಮೂಲಕ ಟೋಲ್‌ ಪಾವತಿ ಮಾಡಬಹುದಾಗಿದೆ.

- Advertisement -
- Advertisement -

ಜನವರಿ ಒಂದರಿಂದ ಟೋಲ್ ಪ್ಲಾಜಾಗಳಲ್ಲಿ ಫಾಸ್ಟ್ಯಾಗ್ ಕಡ್ಡಾಯ ಎಂದಿದ್ದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಫಾಸ್ಟ್ಯಾಗ್ ಗಡುವನ್ನು ಮತ್ತೆ ವಿಸ್ತರಣೆ ಮಾಡಿದೆ. ಫೆ.15ರ ವರೆಗೆ ರಾಷ್ಟ್ರೀಯ ಹೆದ್ದಾರಿಯ ಟೋಲ್‌ ಪ್ಲಾಜಾಗಳಲ್ಲಿ ನಗದು ಮತ್ತು ಫಾಸ್ಟ್ಯಾಗ್‌ ಲೈನ್ ಕಾರ್ಯ ನಿರ್ವಹಿಸಲಿವೆ.

ಫಾಸ್ಟ್ಯಾಗ್ ಇಲ್ಲದ ವಾಹನಕ್ಕೆ ಟೋಲ್ ಗೇಟ್‌ನಲ್ಲಿ ಅಧಿಕ ಶುಲ್ಕ ವಸೂಲು ಮಾಡಲು ಈ ಹಿಂದೆ ನಿರ್ಧರಿಸಲಾಗಿತ್ತು. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಈ ಸಂಬಂಧ ಹೊಸ ಆದೇಶವನ್ನು ಹೊರಡಿಸಿದೆ.

ಆದೇಶದ ಪ್ರಕಾರ ಮುಂದಿನ ತಿಂಗಳ ಅರ್ಧದವರೆಗೂ, ವಾಹನ ಸವಾರರು ನಗದು ಅಥವಾ ಫಾಸ್ಟ್ಯಾಗ್‌ ಬಳಸಿ ಟೋಲ್‌ ಪಾವತಿ ಮಾಡಬಹುದಾಗಿದೆ. ಫಾಸ್ಟ್ಯಾಗ್‌ ಲೈನ್‌ನಲ್ಲಿ ಈಗಿನಂತೆಯೇ ಕೇವಲ ಫಾಸ್ಟ್ಯಾಗ್‌ ಮೂಲಕವೇ ಪಾವತಿ ಪ್ರಕ್ರಿಯೆ ಮುಂದುವರಿಯಲಿದೆ.

ಇದನ್ನೂ ಓದಿ: ಪಕ್ಷಗಳಿಲ್ಲದ ಗ್ರಾಮ ಪಂಚಾಯ್ತಿ ಚುನಾವಣೆಯಲ್ಲಿ ‘ಈ ಪಕ್ಷಗಳ ಬೆಂಬಲಿತರ’ ಸಾಧನೆ ಎಷ್ಟು?

ಸದ್ಯ ದೇಶಾದ್ಯಂತ ಶೇ. 70 ರಿಂದ 80 ರಷ್ಟು ವಾಹನಗಳಲ್ಲಿ ಫಾಸ್ಟ್ಯಾಗ್‌ (FasTag) ಅಳವಡಿಸಿಕೊಳ್ಳಲಾಗಿದೆ. ಹಳೆಯ ಆದೇಶದಂತೆ ಫಾಸ್ಟ್ಯಾಗ್‌ ಹಾಕಿಸಿಕೊಳ್ಳಲು ಡಿಸೆಂಬರ್ 31 ಕೊನೆಯ ದಿನವಾಗಿತ್ತು.

ಟೋಲ್‌ಗಳನ್ನು ಕ್ಯಾಶ್ ಲೆಸ್ ಮಾಡುವ ನಿಟ್ಟಿನಲ್ಲಿ ಕಾನೂನು ಅಗತ್ಯ ಕ್ರಮಗಳನ್ನು ಫೆ. 15ರ ಒಳಗೆ ಪೂರೈಸಿಕೊಳ್ಳುವಂತೆ ಭೂಸಾರಿಗೆ ಇಲಾಖೆ, ರಾಷ್ಟ್ರೀಯ ಅಭಿವೃದ್ಧಿ ಪ್ರಾಧಿಕಾರಕ್ಕೆ ತಿಳಿಸಿದೆ.

ಟೋಲ್ ಪ್ಲಾಜಾಗಳಲ್ಲಿ ಹಣ ಪಾವತಿಸುತ್ತಾ ಸಮಯ ವ್ಯರ್ಥವಾಗುವುದನ್ನು ತಡೆಯಲು, ಟೋಲ್‌ಗೇಟ್‌ಗಳಲ್ಲಿ ಉದ್ದದ ಕ್ಯೂಗಳನ್ನು ತಡೆಯಲು ಫಾಸ್ಟ್ಯಾಗ್ ವ್ಯವಸ್ಥೆಯನ್ನು ಜಾರಿಗೆ ತರಲಾಗಿದೆ. ಇದರಿಂದ ವಾಹನಗಳು ಟೋಲ್ ಪ್ಲಾಜಾದಲ್ಲಿ ನಿಲ್ಲಿಸಿ, ಪೇಮೆಂಟ್ ಮಾಡುವ ಅಗತ್ಯವಿರುವುದಿಲ್ಲ. ಟೋಲ್ ಮೂಲಕ ವಾಹನ ಹಾದು ಹೋಗುತ್ತಿರುವಂತೆಯೇ, ಫಾಸ್ಟ್ಯಾಗ್ ಮೂಲಕ ಟೋಲ್ ಶುಲ್ಕ ಕಡಿತವಾಗುತ್ತದೆ.


ಇದನ್ನೂ ಓದಿ: ರಿಲಾಯನ್ಸ್ ಬಹಿಷ್ಕರಿಸಲು ಕರೆ: ರೈತ ಹೋರಾಟ ಬೆಂಬಲಿಸಿ ಸಿಂಧನೂರಿನಲ್ಲಿ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...