Homeಮುಖಪುಟ'ಫಾಸ್ಟ್ಯಾಗ್' ಕೇಂದ್ರ ಸರ್ಕಾರದ ಯೋಜಿತ ಹಗಲು ದರೋಡೆ- ಆಮ್ ಆದ್ಮಿ ಪಕ್ಷ ಆರೋಪ

‘ಫಾಸ್ಟ್ಯಾಗ್’ ಕೇಂದ್ರ ಸರ್ಕಾರದ ಯೋಜಿತ ಹಗಲು ದರೋಡೆ- ಆಮ್ ಆದ್ಮಿ ಪಕ್ಷ ಆರೋಪ

'ಟೋಲ್ ರಸ್ತೆ ಬಳಸಲು ಇಚ್ಚಿಸದವರಿಗೆ ಸರ್ವೀಸ್ ರಸ್ತೆಗಳನ್ನು ನಿರ್ಮಿಸಿಕೊಡುವ ಜವಾಬ್ದಾರಿ‌ ರಸ್ತೆ ನಿರ್ಮಾಣ ಕಂಪೆನಿಗಳ ಮೇಲಿದೆ. ಆದರೂ ಬಹುತೇಕ ಕಡೆ ಈ ನಿಯಮ ಪಾಲಿಸಿಲ್ಲ’

- Advertisement -
- Advertisement -

“ನಮ್ಮ ರೈತರ ಭೂಮಿ ಕಸಿದುಕೊಂಡು, ನಮ್ಮ ತೆರಿಗೆಯಿಂದ ನಿರ್ಮಾಣ ಮಾಡಿದ ರಸ್ತೆಗಳಿಗೆ ಈಗಾಗಲೇ ರಸ್ತೆ ತೆರಿಗೆ ಎಂದು ಕಟ್ಟುತ್ತಿದ್ದೇವೆ. ಆದರೂ ಟೋಲ್ ಫೀ ಏಕೆ ಕಟ್ಟಬೇಕು. ಹಗಲು ದರೋಡೆಯನ್ನು ಸರ್ಕಾರ ಡಿಜಿಟಲೀಕರಣ ಮಾಡಿದ್ದು, ಫಾಸ್ಟ್ಯಾಗ್ ಮೂಲಕ ಯೋಜಿತ ದರೋಡೆಗೆ ಇಳಿದಿದೆ” ಎಂದು ಆಮ್ ಆದ್ಮಿ ಪಕ್ಷದ ಬೆಂಗಳೂರು ಘಟಕದ ಉಪಾಧ್ಯಕ್ಷ ಸುರೇಶ್ ರಾಥೋಡ್ ಆರೋಪಿಸಿದ್ದಾರೆ.

ಗುರುವಾರ (ಫೆ.18) ನಡೆದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಸುರೇಶ್ ರಾಥೋಡ್, ಸಾರಿಗೆ ಇಲಾಖೆ ರಸ್ತೆ ಶುಲ್ಕ ವಸೂಲಿ ಮಾಡುತ್ತಿದೆ. ಆದರೂ‌ ಟೋಲ್ ಶುಲ್ಕವನ್ನು ಯಾಕೆ ಕಟ್ಟಬೇಕು ಎಂದು ಪ್ರಶ್ನಿಸಿದ್ದಾರೆ. ರಸ್ತೆ ನಿರ್ಮಾಣ ಕಂಪೆನಿಗಳ ಅಡಿಯಾಳಾಗಿರುವ ಕೇಂದ್ರ ಸರ್ಕಾರ 18 ವರ್ಷ ಇದ್ದ ಟೋಲ್ ಸಂಗ್ರಹ ಗುರಿಯನ್ನು 30 ವರ್ಷಕ್ಕೆ ಏರಿಸಿದೆ. ಇದೊಂದು ಉದಾಹರಣೆ ಸಾಕು ಸರ್ಕಾರದ ಹಗಲು ದರೋಡೆಗೆ ಎಂದರು.

“ದೇಶದಲ್ಲಿ ದಿನವೊಂದಕ್ಕೆ 105 ಕೋಟಿ‌ಯಷ್ಟು ಟೋಲ್ ವಸೂಲಿಯಾಗುತ್ತಿದೆ. ಇಷ್ಟು ವರ್ಷಗಳ ಕಾಲ ವಸೂಲಿ ಮಾಡಿದ ಹಣ ಎಲ್ಲಿ ಹೋಯಿತು. ಟೋಲ್ ರಸ್ತೆ ಬಳಸಲು ಇಚ್ಚಿಸದವರಿಗೆ ಸರ್ವೀಸ್ ರಸ್ತೆಗಳನ್ನು ನಿರ್ಮಿಸಿಕೊಡುವ ಜವಾಬ್ದಾರಿ‌ ರಸ್ತೆ ನಿರ್ಮಾಣ ಕಂಪೆನಿಗಳ ಮೇಲಿದೆ. ಆದರೂ ಬಹುತೇಕ ಕಡೆ ಈ ನಿಯಮ ಪಾಲಿಸಿಲ್ಲ” ಎಂದು ಆಕ್ರೋಶ ಹೊರಹಾಕಿದ್ದಾರೆ.

ಇದನ್ನೂ ಓದಿ: ಟೋಲ್ ಪ್ಲಾಜಾ ಮುತ್ತಿಗೆ, ದೇಶಾದ್ಯಂತ ರೈಲು ತಡೆ ಹೋರಾಟಕ್ಕೆ ಸಂಯುಕ್ತ ಕಿಸಾನ್ ಮೋರ್ಚಾ ಕರೆ

ನೆಲಮಂಗಲ-ತುಮಕೂರು ಹೆದ್ದಾರಿ ಅತ್ಯಂತ ಕಳಪೆಯಿಂದ ಗುಣಮಟ್ಟದಿಂದ ಕೂಡಿದ್ದು, ಹೆದ್ದಾರಿ ಎನ್ನುವ ಪದಕ್ಕೆ ಅವಮಾನ ಮಾಡಿದಂತಿದೆ. ಆದರೂ ಟೋಲ್ ಶುಲ್ಕವನ್ನು ಅಮಾನುಷವಾಗಿ ವಸೂಲಿ ಮಾಡಲಾಗುತ್ತಿದೆ ಎಂದು ಕಿಡಿಕಾರಿದ್ದಾರೆ.

ರಾಜ್ಯದಲ್ಲಿ ಬೆರಳೆಣಿಕೆಯಷ್ಟು ರಸ್ತೆಗಳು ಮಾತ್ರ ಟೋಲ್ ಮುಕ್ತವಾಗಿದ್ದು, ಎಲ್ಲಾ ಕಡೆಯೂ ಜನಸಾಮಾನ್ಯರ ಹಣ ದೋಚಲಾಗುತ್ತಿದೆ. ಅಲ್ಲದೆ ರಾಜ್ಯ ಹೆದ್ದಾರಿಗಳಲ್ಲೂ ಟೋಲ್ ಸಂಗ್ರಹಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಮೊದಲ ಬಾರಿ ಅಧಿಕಾರ ಹಿಡಿದಾಗ ಮುನ್ನುಡಿ ಬರೆದಿದ್ದರು. ಎಲ್ಲಾ ರಾಜ್ಯ ಹೆದ್ದಾರಿಗಳಲ್ಲಿ ಸಂಚರಿಸಲು ಜನ ಹಣ ಕಟ್ಟಬೇಕಾದ ದಿನ ದೂರವಿಲ್ಲ ಎಂದು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Image result for bengalore navayug toll gate fastag
PC: Deccan Herald

ರಾಜಕೀಯ ಚಟುವಟಿಕೆಗಳ ಉಸ್ತುವಾರಿ ಫಣಿರಾಜ್ ಎಸ್‌.ವಿ ಮಾತನಾಡಿ, ಕೂಡಲೇ ಕೇಂದ್ರ ಹಾಗೂ ರಾಜ್ಯ ಸರ್ಕಾರ ಈ ಕುರಿತು ಸ್ಪಷ್ಟ ನಿರ್ಧಾರ ತೆಗೆದುಕೊಳ್ಳದಿದ್ದರೆ ಎಲ್ಲಾ ಟೋಲ್ ಪ್ಲಾಜಾಗಳ ಬಂದ್‌ ಚಳವಳಿ ಪ್ರಾರಂಭಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ವಿವಾದಿತ ಕೃಷಿ ಕಾನೂನುಗಳನ್ನು ವಿರೋಧಿಸಿ ನಡೆಯುತ್ತಿರುವ ರೈತ ಹೋರಾಟದಲ್ಲಿ ಈಗಾಗಲೇ ಪಂಜಾಬ್ ರಾಜ್ಯದಲ್ಲಿ ಅಕ್ಟೋಬರ್‌ 1 ರಿಂದ ಟೋಲ್‌ಪ್ಲಾಜಾಗಳನ್ನು ವಶಕ್ಕೆ ಪಡೆಯಲಾಗಿದೆ. ಫೆಬ್ರವರಿ 12ರಿಂದ ರಾಜಸ್ಥಾನದ ಟೋಲ್ ಪ್ಲಾಜಾಗಳನ್ನು ಜನರಿಗಾಗಿ ಫ್ರೀ ಮಾಡಲಾಗಿದೆ.


ಇದನ್ನೂ ಓದಿ: ರೈತ ಹೋರಾಟದ ಆಕ್ರೋಶ: ಪಂಜಾಬ್‌ ಸ್ಥಳೀಯ ಚುನಾವಣೆಯಲ್ಲಿ ಬಿಜೆಪಿ ಧೂಳಿಪಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...