Homeಮುಖಪುಟ'ಫಾಸ್ಟ್ಯಾಗ್' ಕೇಂದ್ರ ಸರ್ಕಾರದ ಯೋಜಿತ ಹಗಲು ದರೋಡೆ- ಆಮ್ ಆದ್ಮಿ ಪಕ್ಷ ಆರೋಪ

‘ಫಾಸ್ಟ್ಯಾಗ್’ ಕೇಂದ್ರ ಸರ್ಕಾರದ ಯೋಜಿತ ಹಗಲು ದರೋಡೆ- ಆಮ್ ಆದ್ಮಿ ಪಕ್ಷ ಆರೋಪ

'ಟೋಲ್ ರಸ್ತೆ ಬಳಸಲು ಇಚ್ಚಿಸದವರಿಗೆ ಸರ್ವೀಸ್ ರಸ್ತೆಗಳನ್ನು ನಿರ್ಮಿಸಿಕೊಡುವ ಜವಾಬ್ದಾರಿ‌ ರಸ್ತೆ ನಿರ್ಮಾಣ ಕಂಪೆನಿಗಳ ಮೇಲಿದೆ. ಆದರೂ ಬಹುತೇಕ ಕಡೆ ಈ ನಿಯಮ ಪಾಲಿಸಿಲ್ಲ’

- Advertisement -
- Advertisement -

“ನಮ್ಮ ರೈತರ ಭೂಮಿ ಕಸಿದುಕೊಂಡು, ನಮ್ಮ ತೆರಿಗೆಯಿಂದ ನಿರ್ಮಾಣ ಮಾಡಿದ ರಸ್ತೆಗಳಿಗೆ ಈಗಾಗಲೇ ರಸ್ತೆ ತೆರಿಗೆ ಎಂದು ಕಟ್ಟುತ್ತಿದ್ದೇವೆ. ಆದರೂ ಟೋಲ್ ಫೀ ಏಕೆ ಕಟ್ಟಬೇಕು. ಹಗಲು ದರೋಡೆಯನ್ನು ಸರ್ಕಾರ ಡಿಜಿಟಲೀಕರಣ ಮಾಡಿದ್ದು, ಫಾಸ್ಟ್ಯಾಗ್ ಮೂಲಕ ಯೋಜಿತ ದರೋಡೆಗೆ ಇಳಿದಿದೆ” ಎಂದು ಆಮ್ ಆದ್ಮಿ ಪಕ್ಷದ ಬೆಂಗಳೂರು ಘಟಕದ ಉಪಾಧ್ಯಕ್ಷ ಸುರೇಶ್ ರಾಥೋಡ್ ಆರೋಪಿಸಿದ್ದಾರೆ.

ಗುರುವಾರ (ಫೆ.18) ನಡೆದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಸುರೇಶ್ ರಾಥೋಡ್, ಸಾರಿಗೆ ಇಲಾಖೆ ರಸ್ತೆ ಶುಲ್ಕ ವಸೂಲಿ ಮಾಡುತ್ತಿದೆ. ಆದರೂ‌ ಟೋಲ್ ಶುಲ್ಕವನ್ನು ಯಾಕೆ ಕಟ್ಟಬೇಕು ಎಂದು ಪ್ರಶ್ನಿಸಿದ್ದಾರೆ. ರಸ್ತೆ ನಿರ್ಮಾಣ ಕಂಪೆನಿಗಳ ಅಡಿಯಾಳಾಗಿರುವ ಕೇಂದ್ರ ಸರ್ಕಾರ 18 ವರ್ಷ ಇದ್ದ ಟೋಲ್ ಸಂಗ್ರಹ ಗುರಿಯನ್ನು 30 ವರ್ಷಕ್ಕೆ ಏರಿಸಿದೆ. ಇದೊಂದು ಉದಾಹರಣೆ ಸಾಕು ಸರ್ಕಾರದ ಹಗಲು ದರೋಡೆಗೆ ಎಂದರು.

“ದೇಶದಲ್ಲಿ ದಿನವೊಂದಕ್ಕೆ 105 ಕೋಟಿ‌ಯಷ್ಟು ಟೋಲ್ ವಸೂಲಿಯಾಗುತ್ತಿದೆ. ಇಷ್ಟು ವರ್ಷಗಳ ಕಾಲ ವಸೂಲಿ ಮಾಡಿದ ಹಣ ಎಲ್ಲಿ ಹೋಯಿತು. ಟೋಲ್ ರಸ್ತೆ ಬಳಸಲು ಇಚ್ಚಿಸದವರಿಗೆ ಸರ್ವೀಸ್ ರಸ್ತೆಗಳನ್ನು ನಿರ್ಮಿಸಿಕೊಡುವ ಜವಾಬ್ದಾರಿ‌ ರಸ್ತೆ ನಿರ್ಮಾಣ ಕಂಪೆನಿಗಳ ಮೇಲಿದೆ. ಆದರೂ ಬಹುತೇಕ ಕಡೆ ಈ ನಿಯಮ ಪಾಲಿಸಿಲ್ಲ” ಎಂದು ಆಕ್ರೋಶ ಹೊರಹಾಕಿದ್ದಾರೆ.

ಇದನ್ನೂ ಓದಿ: ಟೋಲ್ ಪ್ಲಾಜಾ ಮುತ್ತಿಗೆ, ದೇಶಾದ್ಯಂತ ರೈಲು ತಡೆ ಹೋರಾಟಕ್ಕೆ ಸಂಯುಕ್ತ ಕಿಸಾನ್ ಮೋರ್ಚಾ ಕರೆ

ನೆಲಮಂಗಲ-ತುಮಕೂರು ಹೆದ್ದಾರಿ ಅತ್ಯಂತ ಕಳಪೆಯಿಂದ ಗುಣಮಟ್ಟದಿಂದ ಕೂಡಿದ್ದು, ಹೆದ್ದಾರಿ ಎನ್ನುವ ಪದಕ್ಕೆ ಅವಮಾನ ಮಾಡಿದಂತಿದೆ. ಆದರೂ ಟೋಲ್ ಶುಲ್ಕವನ್ನು ಅಮಾನುಷವಾಗಿ ವಸೂಲಿ ಮಾಡಲಾಗುತ್ತಿದೆ ಎಂದು ಕಿಡಿಕಾರಿದ್ದಾರೆ.

ರಾಜ್ಯದಲ್ಲಿ ಬೆರಳೆಣಿಕೆಯಷ್ಟು ರಸ್ತೆಗಳು ಮಾತ್ರ ಟೋಲ್ ಮುಕ್ತವಾಗಿದ್ದು, ಎಲ್ಲಾ ಕಡೆಯೂ ಜನಸಾಮಾನ್ಯರ ಹಣ ದೋಚಲಾಗುತ್ತಿದೆ. ಅಲ್ಲದೆ ರಾಜ್ಯ ಹೆದ್ದಾರಿಗಳಲ್ಲೂ ಟೋಲ್ ಸಂಗ್ರಹಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಮೊದಲ ಬಾರಿ ಅಧಿಕಾರ ಹಿಡಿದಾಗ ಮುನ್ನುಡಿ ಬರೆದಿದ್ದರು. ಎಲ್ಲಾ ರಾಜ್ಯ ಹೆದ್ದಾರಿಗಳಲ್ಲಿ ಸಂಚರಿಸಲು ಜನ ಹಣ ಕಟ್ಟಬೇಕಾದ ದಿನ ದೂರವಿಲ್ಲ ಎಂದು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Image result for bengalore navayug toll gate fastag
PC: Deccan Herald

ರಾಜಕೀಯ ಚಟುವಟಿಕೆಗಳ ಉಸ್ತುವಾರಿ ಫಣಿರಾಜ್ ಎಸ್‌.ವಿ ಮಾತನಾಡಿ, ಕೂಡಲೇ ಕೇಂದ್ರ ಹಾಗೂ ರಾಜ್ಯ ಸರ್ಕಾರ ಈ ಕುರಿತು ಸ್ಪಷ್ಟ ನಿರ್ಧಾರ ತೆಗೆದುಕೊಳ್ಳದಿದ್ದರೆ ಎಲ್ಲಾ ಟೋಲ್ ಪ್ಲಾಜಾಗಳ ಬಂದ್‌ ಚಳವಳಿ ಪ್ರಾರಂಭಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ವಿವಾದಿತ ಕೃಷಿ ಕಾನೂನುಗಳನ್ನು ವಿರೋಧಿಸಿ ನಡೆಯುತ್ತಿರುವ ರೈತ ಹೋರಾಟದಲ್ಲಿ ಈಗಾಗಲೇ ಪಂಜಾಬ್ ರಾಜ್ಯದಲ್ಲಿ ಅಕ್ಟೋಬರ್‌ 1 ರಿಂದ ಟೋಲ್‌ಪ್ಲಾಜಾಗಳನ್ನು ವಶಕ್ಕೆ ಪಡೆಯಲಾಗಿದೆ. ಫೆಬ್ರವರಿ 12ರಿಂದ ರಾಜಸ್ಥಾನದ ಟೋಲ್ ಪ್ಲಾಜಾಗಳನ್ನು ಜನರಿಗಾಗಿ ಫ್ರೀ ಮಾಡಲಾಗಿದೆ.


ಇದನ್ನೂ ಓದಿ: ರೈತ ಹೋರಾಟದ ಆಕ್ರೋಶ: ಪಂಜಾಬ್‌ ಸ್ಥಳೀಯ ಚುನಾವಣೆಯಲ್ಲಿ ಬಿಜೆಪಿ ಧೂಳಿಪಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...