HomeUncategorizedಬೆಳ್ಳಿಚುಕ್ಕಿ: ಸೌರ ಮಂಡಲದಲ್ಲಿ ಅತ್ಯಂತ ವೇಗವಾಗಿ ಸೂರ್ಯನ ಸುತ್ತ ಸುತ್ತವ ಗ್ರಹ!

ಬೆಳ್ಳಿಚುಕ್ಕಿ: ಸೌರ ಮಂಡಲದಲ್ಲಿ ಅತ್ಯಂತ ವೇಗವಾಗಿ ಸೂರ್ಯನ ಸುತ್ತ ಸುತ್ತವ ಗ್ರಹ!

- Advertisement -
- Advertisement -

ಸೂರ್ಯನಿಂದ ಕೇವಲ 5.79ಕೋಟಿ ಕಿಲೋ ಮೀಟರ್ ದೂರದಲ್ಲಿ ಇರುವ ಗ್ರಹವೇ ಬುಧ ಗ್ರಹ. ಬುಧ ಗ್ರಹ ಸೌರಮಂಡಲದ ಇತರ ಗ್ರಹಗಳಿಗೆ ಹೋಲಿಸಿದರೆ ಅತ್ಯಂತ ಚಿಕ್ಕ ಗ್ರಹ (ಪ್ಲೂಟೋ ಬುಧಕ್ಕಿಂತಲೂ ಚಿಕ್ಕ ‘ಗ್ರಹ’ ಆದರೆ ಪ್ಲೂಟೋವನ್ನು ಆಗಸ್ಟ್ 2008ರಿಂದ ಗ್ರಹಗಳ ಪಟ್ಟಿಯಿಂದ ಕೈಬಿಟ್ಟು ಕುಬ್ಜ ಗ್ರಹದ ಪಟ್ಟಿಗೆ ಸೇರಿಸಲಾಗಿದೆ). ಬುಧ ಸೂರ್ಯನಿಗೆ ಬಹಳ ಹತ್ತಿರವಿರುವ ಗ್ರಹವಾದುದರಿಂದ, ಈ ಗ್ರಹವು 88 ಭೂದಿನಗಳಲ್ಲಿ ಸೂರ್ಯನ ಸುತ್ತ ಒಂದು ಸುತ್ತು ಸುತ್ತುತ್ತದೆ. ಅಲ್ಲದೆ, ತನ್ನ ಅಕ್ಷದ ಸುತ್ತ ಸುತ್ತಲು 58 ಭೂ ದಿನಗಳನ್ನು ತೆಗೆದುಕೊಳ್ಳುತ್ತೆ. ಹಾಗಾಗಿ, ಬುಧ ಗ್ರಹದಲ್ಲಿ ಸುಮಾರು ಒಂದೂವರೆ ದಿನವಾದರೆ (ತನ್ನ ಅಕ್ಷದ ಸುತ್ತ ಸುತ್ತುವ ಸಮಯದ ಒಂದೂವರೆ ಪಟ್ಟು) ಒಂದು ವರ್ಷವಾದಂತೆ! ಇದು ಸೌರ ಮಂಡಲದ ಇನ್ನಿತರ ಎಲ್ಲಾ ಗ್ರಹಗಳಿಗಿಂತ ಅತ್ಯಂತ ವೇಗವಾಗಿ ಸೂರ್ಯನ ಸುತ್ತ ಸುತ್ತುವ ಗ್ರಹ.

ಬುಧ ಗ್ರಹದಲ್ಲಿ ಸೂರ್ಯನ ಶಾಖ ವಿಪರೀತವಾಗಿ ಹೆಚ್ಚಿರುತ್ತದೆ. ಸೂರ್ಯನ ಬೆಳಕು ಬೀಳುವ ಪ್ರದೇಶಗಳಲ್ಲಿ 420 ಡಿಗ್ರಿ ಸೆಲ್ಸಿಯಸ್ ತಾಪಮಾನವಿದ್ದು, ರಾತ್ರಿಯ ಸಮಯದಲ್ಲಿ ಅಲ್ಲಿನ ಪ್ರದೇಶಗಳಲ್ಲಿ -180 ಡಿಗ್ರಿ ಸೆಲ್ಸಿಯಸ್ ತಾಪಮಾನ ಹೊಂದಿರುತ್ತದೆ. ಇಂತಹ ತೀವ್ರವಾದ ತಾಪಮಾನ ವ್ಯತ್ಯಾಸದಿಂದ ಕೂಡಿರುವ ಬುಧ ಗ್ರಹದಲ್ಲಿ ಪ್ರಸ್ತುತದ ವಿಜ್ಞಾನಕ್ಕೆ ತಿಳಿದಿರುವ ಯಾವ ಜೀವರಾಶಿಯು ಜೀವಿಸಲು ಸಾಧ್ಯವಿಲ್ಲ ಎಂಬ ತಿಳುವಳಿಕೆ ಇದೆ. ಇಂತಹ ವಿಪರೀತ ಸ್ಥಿತಿಯಿರುವ ಪ್ರದೇಶದಲ್ಲಿ ಬಾಹ್ಯಾಕಾಶ ನೌಕೆಯನ್ನು ಕಳುಹಿಸಿ ಈ ಗ್ರಹವನ್ನು ಅಧ್ಯಯನ ಮಾಡುವುದು ಕಷ್ಟಕರ. ಇದಕ್ಕೆ ಇನ್ನೊಂದು ಕಾರಣವೂ ಇದೆ. ಯಾವುದೇ ಬಾಹ್ಯಾಕಾಶ ನೌಕೆಯನ್ನು ಬುಧ ಗ್ರಹದ ಅಧ್ಯಯನಕ್ಕೆ ಭೂಮಿಯಿಂದ ಕಳುಹಿಸಿದರೆ, ಆ ನೌಕೆಯು ಸೂರ್ಯನ ದಿಕ್ಕಿಗೆ ಪ್ರಯಾಣ ಮಾಡಬೇಕಾಗಿರುವುದರಿಂದ, ನೌಕೆಯನ್ನು ಬುಧ ಗ್ರಹಕ್ಕಿಂತಲೂ ದೊಡ್ಡದಾಗಿರುವ ಸೂರ್ಯನು ತನ್ನತ್ತ ಸೆಳೆಯುವ ಸಾಧ್ಯತೆಗಳೇ ಹೆಚ್ಚಾಗಿರುತ್ತವೆ. ಆದುದರಿಂದ, ಬುಧ ಗ್ರಹದ ಅಧ್ಯಯನ ಸ್ವಲ್ಪ ಕಷ್ಠವೇ.

ಹೀಗಿದ್ದರೂ, ತಂತ್ರಜ್ಞಾನದ ಸಹಾಯದಿಂದ, 1970-75ರಲ್ಲಿ ಬುಧ ಗ್ರಹಕ್ಕೆ ಪ್ರಥಮ ಬಾಹ್ಯಾಕಾಶ ನೌಕೆಯಾದ ಮೆರಿನಿಯರ್ 10 (Meriner 10) ಎಂಬ ನೌಕೆಯನ್ನು ಕಳುಹಿಸಲಾಯಿತು. ಮಾನವನಿಗೆ ಮೊದಲ ಬಾರಿಗೆ ಬುಧ ಗ್ರಹದ ಭೂಪ್ರದೇಶ ತೋರಿಸಲು ಈ ನೌಕೆಯೇ ಸಹಾಯ ಮಾಡಿದ್ದು. ಜೊತೆಗೆ ಬುಧ ಗ್ರಹದಲ್ಲಿ ತೆಳುವಾದ ವಾತವರಣವಿರುವುದನ್ನು ಇದು ಖಾತರಿಪಡಿಸಿತು. ಬುಧ ಗ್ರಹದ ಭೂಪ್ರದೇಶವು ಚಂದ್ರನ ಮೇಲೆ ಕಾಣುವ ಕುಳಿಗಳ ಹಾಗೆಯೇ ಇರುವುದನ್ನು ಮೆರಿನಿಯರ್ 10 ತೆಗೆದ ಚಿತ್ರಗಳು ನಮಗೆ ತೋರಿಸಿದವು. ಅಲ್ಲದೆ 20074 ರಲ್ಲಿ ಉಡಾವಣೆ ಮಾಡಿದ ಮೆಸೆಂಜರ್ ನೌಕೆಯು 2011ರಲ್ಲಿ ಬುಧ ಗ್ರಹದ ಕಕ್ಷೆಗೆ ತೆರಳಿ ಬುಧ ಗ್ರಹದ ಶೇ.100 ರಷ್ಟು ಭೂಪ್ರದೇಶದ ನಕ್ಷೆಯನ್ನು ತಯಾರಿಸಿತು. ಅಲ್ಲದೆ, ಯುರೋಪ್ ಬಾಹ್ಯಾಕಾಶ ಸಂಸ್ಥೆ ಮತ್ತು ಜಪಾನ್ ಬಾಹ್ಯಾಕಾಶ ಸಂಸ್ಥೆಯ ಜಂಟಿ ಯೋಜನೆಯಲ್ಲಿ, 2018ರಲ್ಲಿ ಉಡಾವಣೆಯಾಗಿರುವ ಬೆಪಿ-ಕೊಲಾಂಬೋ ನೌಕೆಯು 2015ರಲ್ಲಿ ಬುಧ ಗ್ರಹದ ಕಕ್ಷೆಗೆ ತೆರಳಲಿದ್ದು, ಬುಧ ಗ್ರಹದಲ್ಲಿ ಇನ್ನಷ್ಟು ಅಧ್ಯಯನ ನಡೆಸಿ ಮತ್ತಷ್ಟು ವಿಸ್ಮಯಕಾರಿ ವಿಷಯಗಳ ಮೇಲೆ ಬೆಳಕು ಚೆಲ್ಲುವ ಸಾಧ್ಯತೆ ಇದೆ.

ಭೂಮಿಯ ಆಕಾಶದಲ್ಲಿ ಬರಿಗಣ್ಣಿಗೆ ಕಾಣಬಹುದಾದ ಐದು ಗ್ರಹಗಳಲ್ಲಿ ಬುಧ ಗ್ರಹವು ಒಂದು. ಆದರೆ, ಈ ಗ್ರಹವು ಸೂರ್ಯನಿಗೆ ಹತ್ತಿರವಿರುವುದರಿಂದ, ಭೂಮಿಯ ಆಕಾಶದಲ್ಲಿ, ಸೂರ್ಯನ ಬೆಳಕಿನಲ್ಲಿ ಇದನ್ನು ಗುರುತಿಸುವುದು ಕಷ್ಟವಾಗಿರುತ್ತದೆ ಅಲ್ಲದೆ, ಸೂರ್ಯನ ಜೊತೆಯೇ ಈ ಗ್ರಹವು ಮುಳುಗುತ್ತಿರುತ್ತದೆ. ಆದರೆ, ಈ ತಿಂಗಳ 12ರಂದು ಸೂರ್ಯನಿಂದ ಅತೀ ಹೆಚ್ಚು ದೂರದಲ್ಲಿ ಕಾಣುವ ಬುಧ ಗ್ರಹವನ್ನು, ಪಶ್ಚಿಮ ದಿಕ್ಕಿನಲ್ಲಿ ಶುಕ್ರ ಗ್ರಹದ ಸಹಾಯದಿಂದ ಗುರುತಿಸಬಹುದು. ಅಂದೇ ಬುಧ ಗ್ರಹ ಬಹಳ ಪ್ರಕಾಶ ಮಾನವಾಗಿ ಹೊಳೆಯುತ್ತಿರುತ್ತದೆ. ಆ ದಿನದ ಸಂಜೆ ಮೋಡಗಳಿಲ್ಲದೆ ಹೋದರೆ, ಬುಧ, ಶುಕ್ರ, ಮಂಗಳ ಗ್ರಹಗಳನ್ನು ಮತ್ತು ಚಂದ್ರನನ್ನು ಸೂರ್ಯ ಮುಳುಗಿದ ನಂತರ ಪಶ್ಚಿಮದಿಕ್ಕಿನಲ್ಲಿ ಕಾಣಬಹುದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...