HomeUncategorizedಬೆಳ್ಳಿಚುಕ್ಕಿ: ಸೌರ ಮಂಡಲದಲ್ಲಿ ಅತ್ಯಂತ ವೇಗವಾಗಿ ಸೂರ್ಯನ ಸುತ್ತ ಸುತ್ತವ ಗ್ರಹ!

ಬೆಳ್ಳಿಚುಕ್ಕಿ: ಸೌರ ಮಂಡಲದಲ್ಲಿ ಅತ್ಯಂತ ವೇಗವಾಗಿ ಸೂರ್ಯನ ಸುತ್ತ ಸುತ್ತವ ಗ್ರಹ!

- Advertisement -
- Advertisement -

ಸೂರ್ಯನಿಂದ ಕೇವಲ 5.79ಕೋಟಿ ಕಿಲೋ ಮೀಟರ್ ದೂರದಲ್ಲಿ ಇರುವ ಗ್ರಹವೇ ಬುಧ ಗ್ರಹ. ಬುಧ ಗ್ರಹ ಸೌರಮಂಡಲದ ಇತರ ಗ್ರಹಗಳಿಗೆ ಹೋಲಿಸಿದರೆ ಅತ್ಯಂತ ಚಿಕ್ಕ ಗ್ರಹ (ಪ್ಲೂಟೋ ಬುಧಕ್ಕಿಂತಲೂ ಚಿಕ್ಕ ‘ಗ್ರಹ’ ಆದರೆ ಪ್ಲೂಟೋವನ್ನು ಆಗಸ್ಟ್ 2008ರಿಂದ ಗ್ರಹಗಳ ಪಟ್ಟಿಯಿಂದ ಕೈಬಿಟ್ಟು ಕುಬ್ಜ ಗ್ರಹದ ಪಟ್ಟಿಗೆ ಸೇರಿಸಲಾಗಿದೆ). ಬುಧ ಸೂರ್ಯನಿಗೆ ಬಹಳ ಹತ್ತಿರವಿರುವ ಗ್ರಹವಾದುದರಿಂದ, ಈ ಗ್ರಹವು 88 ಭೂದಿನಗಳಲ್ಲಿ ಸೂರ್ಯನ ಸುತ್ತ ಒಂದು ಸುತ್ತು ಸುತ್ತುತ್ತದೆ. ಅಲ್ಲದೆ, ತನ್ನ ಅಕ್ಷದ ಸುತ್ತ ಸುತ್ತಲು 58 ಭೂ ದಿನಗಳನ್ನು ತೆಗೆದುಕೊಳ್ಳುತ್ತೆ. ಹಾಗಾಗಿ, ಬುಧ ಗ್ರಹದಲ್ಲಿ ಸುಮಾರು ಒಂದೂವರೆ ದಿನವಾದರೆ (ತನ್ನ ಅಕ್ಷದ ಸುತ್ತ ಸುತ್ತುವ ಸಮಯದ ಒಂದೂವರೆ ಪಟ್ಟು) ಒಂದು ವರ್ಷವಾದಂತೆ! ಇದು ಸೌರ ಮಂಡಲದ ಇನ್ನಿತರ ಎಲ್ಲಾ ಗ್ರಹಗಳಿಗಿಂತ ಅತ್ಯಂತ ವೇಗವಾಗಿ ಸೂರ್ಯನ ಸುತ್ತ ಸುತ್ತುವ ಗ್ರಹ.

ಬುಧ ಗ್ರಹದಲ್ಲಿ ಸೂರ್ಯನ ಶಾಖ ವಿಪರೀತವಾಗಿ ಹೆಚ್ಚಿರುತ್ತದೆ. ಸೂರ್ಯನ ಬೆಳಕು ಬೀಳುವ ಪ್ರದೇಶಗಳಲ್ಲಿ 420 ಡಿಗ್ರಿ ಸೆಲ್ಸಿಯಸ್ ತಾಪಮಾನವಿದ್ದು, ರಾತ್ರಿಯ ಸಮಯದಲ್ಲಿ ಅಲ್ಲಿನ ಪ್ರದೇಶಗಳಲ್ಲಿ -180 ಡಿಗ್ರಿ ಸೆಲ್ಸಿಯಸ್ ತಾಪಮಾನ ಹೊಂದಿರುತ್ತದೆ. ಇಂತಹ ತೀವ್ರವಾದ ತಾಪಮಾನ ವ್ಯತ್ಯಾಸದಿಂದ ಕೂಡಿರುವ ಬುಧ ಗ್ರಹದಲ್ಲಿ ಪ್ರಸ್ತುತದ ವಿಜ್ಞಾನಕ್ಕೆ ತಿಳಿದಿರುವ ಯಾವ ಜೀವರಾಶಿಯು ಜೀವಿಸಲು ಸಾಧ್ಯವಿಲ್ಲ ಎಂಬ ತಿಳುವಳಿಕೆ ಇದೆ. ಇಂತಹ ವಿಪರೀತ ಸ್ಥಿತಿಯಿರುವ ಪ್ರದೇಶದಲ್ಲಿ ಬಾಹ್ಯಾಕಾಶ ನೌಕೆಯನ್ನು ಕಳುಹಿಸಿ ಈ ಗ್ರಹವನ್ನು ಅಧ್ಯಯನ ಮಾಡುವುದು ಕಷ್ಟಕರ. ಇದಕ್ಕೆ ಇನ್ನೊಂದು ಕಾರಣವೂ ಇದೆ. ಯಾವುದೇ ಬಾಹ್ಯಾಕಾಶ ನೌಕೆಯನ್ನು ಬುಧ ಗ್ರಹದ ಅಧ್ಯಯನಕ್ಕೆ ಭೂಮಿಯಿಂದ ಕಳುಹಿಸಿದರೆ, ಆ ನೌಕೆಯು ಸೂರ್ಯನ ದಿಕ್ಕಿಗೆ ಪ್ರಯಾಣ ಮಾಡಬೇಕಾಗಿರುವುದರಿಂದ, ನೌಕೆಯನ್ನು ಬುಧ ಗ್ರಹಕ್ಕಿಂತಲೂ ದೊಡ್ಡದಾಗಿರುವ ಸೂರ್ಯನು ತನ್ನತ್ತ ಸೆಳೆಯುವ ಸಾಧ್ಯತೆಗಳೇ ಹೆಚ್ಚಾಗಿರುತ್ತವೆ. ಆದುದರಿಂದ, ಬುಧ ಗ್ರಹದ ಅಧ್ಯಯನ ಸ್ವಲ್ಪ ಕಷ್ಠವೇ.

ಹೀಗಿದ್ದರೂ, ತಂತ್ರಜ್ಞಾನದ ಸಹಾಯದಿಂದ, 1970-75ರಲ್ಲಿ ಬುಧ ಗ್ರಹಕ್ಕೆ ಪ್ರಥಮ ಬಾಹ್ಯಾಕಾಶ ನೌಕೆಯಾದ ಮೆರಿನಿಯರ್ 10 (Meriner 10) ಎಂಬ ನೌಕೆಯನ್ನು ಕಳುಹಿಸಲಾಯಿತು. ಮಾನವನಿಗೆ ಮೊದಲ ಬಾರಿಗೆ ಬುಧ ಗ್ರಹದ ಭೂಪ್ರದೇಶ ತೋರಿಸಲು ಈ ನೌಕೆಯೇ ಸಹಾಯ ಮಾಡಿದ್ದು. ಜೊತೆಗೆ ಬುಧ ಗ್ರಹದಲ್ಲಿ ತೆಳುವಾದ ವಾತವರಣವಿರುವುದನ್ನು ಇದು ಖಾತರಿಪಡಿಸಿತು. ಬುಧ ಗ್ರಹದ ಭೂಪ್ರದೇಶವು ಚಂದ್ರನ ಮೇಲೆ ಕಾಣುವ ಕುಳಿಗಳ ಹಾಗೆಯೇ ಇರುವುದನ್ನು ಮೆರಿನಿಯರ್ 10 ತೆಗೆದ ಚಿತ್ರಗಳು ನಮಗೆ ತೋರಿಸಿದವು. ಅಲ್ಲದೆ 20074 ರಲ್ಲಿ ಉಡಾವಣೆ ಮಾಡಿದ ಮೆಸೆಂಜರ್ ನೌಕೆಯು 2011ರಲ್ಲಿ ಬುಧ ಗ್ರಹದ ಕಕ್ಷೆಗೆ ತೆರಳಿ ಬುಧ ಗ್ರಹದ ಶೇ.100 ರಷ್ಟು ಭೂಪ್ರದೇಶದ ನಕ್ಷೆಯನ್ನು ತಯಾರಿಸಿತು. ಅಲ್ಲದೆ, ಯುರೋಪ್ ಬಾಹ್ಯಾಕಾಶ ಸಂಸ್ಥೆ ಮತ್ತು ಜಪಾನ್ ಬಾಹ್ಯಾಕಾಶ ಸಂಸ್ಥೆಯ ಜಂಟಿ ಯೋಜನೆಯಲ್ಲಿ, 2018ರಲ್ಲಿ ಉಡಾವಣೆಯಾಗಿರುವ ಬೆಪಿ-ಕೊಲಾಂಬೋ ನೌಕೆಯು 2015ರಲ್ಲಿ ಬುಧ ಗ್ರಹದ ಕಕ್ಷೆಗೆ ತೆರಳಲಿದ್ದು, ಬುಧ ಗ್ರಹದಲ್ಲಿ ಇನ್ನಷ್ಟು ಅಧ್ಯಯನ ನಡೆಸಿ ಮತ್ತಷ್ಟು ವಿಸ್ಮಯಕಾರಿ ವಿಷಯಗಳ ಮೇಲೆ ಬೆಳಕು ಚೆಲ್ಲುವ ಸಾಧ್ಯತೆ ಇದೆ.

ಭೂಮಿಯ ಆಕಾಶದಲ್ಲಿ ಬರಿಗಣ್ಣಿಗೆ ಕಾಣಬಹುದಾದ ಐದು ಗ್ರಹಗಳಲ್ಲಿ ಬುಧ ಗ್ರಹವು ಒಂದು. ಆದರೆ, ಈ ಗ್ರಹವು ಸೂರ್ಯನಿಗೆ ಹತ್ತಿರವಿರುವುದರಿಂದ, ಭೂಮಿಯ ಆಕಾಶದಲ್ಲಿ, ಸೂರ್ಯನ ಬೆಳಕಿನಲ್ಲಿ ಇದನ್ನು ಗುರುತಿಸುವುದು ಕಷ್ಟವಾಗಿರುತ್ತದೆ ಅಲ್ಲದೆ, ಸೂರ್ಯನ ಜೊತೆಯೇ ಈ ಗ್ರಹವು ಮುಳುಗುತ್ತಿರುತ್ತದೆ. ಆದರೆ, ಈ ತಿಂಗಳ 12ರಂದು ಸೂರ್ಯನಿಂದ ಅತೀ ಹೆಚ್ಚು ದೂರದಲ್ಲಿ ಕಾಣುವ ಬುಧ ಗ್ರಹವನ್ನು, ಪಶ್ಚಿಮ ದಿಕ್ಕಿನಲ್ಲಿ ಶುಕ್ರ ಗ್ರಹದ ಸಹಾಯದಿಂದ ಗುರುತಿಸಬಹುದು. ಅಂದೇ ಬುಧ ಗ್ರಹ ಬಹಳ ಪ್ರಕಾಶ ಮಾನವಾಗಿ ಹೊಳೆಯುತ್ತಿರುತ್ತದೆ. ಆ ದಿನದ ಸಂಜೆ ಮೋಡಗಳಿಲ್ಲದೆ ಹೋದರೆ, ಬುಧ, ಶುಕ್ರ, ಮಂಗಳ ಗ್ರಹಗಳನ್ನು ಮತ್ತು ಚಂದ್ರನನ್ನು ಸೂರ್ಯ ಮುಳುಗಿದ ನಂತರ ಪಶ್ಚಿಮದಿಕ್ಕಿನಲ್ಲಿ ಕಾಣಬಹುದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...