HomeUncategorizedಬೆಳ್ಳಿಚುಕ್ಕಿ: ಸೌರ ಮಂಡಲದಲ್ಲಿ ಅತ್ಯಂತ ವೇಗವಾಗಿ ಸೂರ್ಯನ ಸುತ್ತ ಸುತ್ತವ ಗ್ರಹ!

ಬೆಳ್ಳಿಚುಕ್ಕಿ: ಸೌರ ಮಂಡಲದಲ್ಲಿ ಅತ್ಯಂತ ವೇಗವಾಗಿ ಸೂರ್ಯನ ಸುತ್ತ ಸುತ್ತವ ಗ್ರಹ!

- Advertisement -
- Advertisement -

ಸೂರ್ಯನಿಂದ ಕೇವಲ 5.79ಕೋಟಿ ಕಿಲೋ ಮೀಟರ್ ದೂರದಲ್ಲಿ ಇರುವ ಗ್ರಹವೇ ಬುಧ ಗ್ರಹ. ಬುಧ ಗ್ರಹ ಸೌರಮಂಡಲದ ಇತರ ಗ್ರಹಗಳಿಗೆ ಹೋಲಿಸಿದರೆ ಅತ್ಯಂತ ಚಿಕ್ಕ ಗ್ರಹ (ಪ್ಲೂಟೋ ಬುಧಕ್ಕಿಂತಲೂ ಚಿಕ್ಕ ‘ಗ್ರಹ’ ಆದರೆ ಪ್ಲೂಟೋವನ್ನು ಆಗಸ್ಟ್ 2008ರಿಂದ ಗ್ರಹಗಳ ಪಟ್ಟಿಯಿಂದ ಕೈಬಿಟ್ಟು ಕುಬ್ಜ ಗ್ರಹದ ಪಟ್ಟಿಗೆ ಸೇರಿಸಲಾಗಿದೆ). ಬುಧ ಸೂರ್ಯನಿಗೆ ಬಹಳ ಹತ್ತಿರವಿರುವ ಗ್ರಹವಾದುದರಿಂದ, ಈ ಗ್ರಹವು 88 ಭೂದಿನಗಳಲ್ಲಿ ಸೂರ್ಯನ ಸುತ್ತ ಒಂದು ಸುತ್ತು ಸುತ್ತುತ್ತದೆ. ಅಲ್ಲದೆ, ತನ್ನ ಅಕ್ಷದ ಸುತ್ತ ಸುತ್ತಲು 58 ಭೂ ದಿನಗಳನ್ನು ತೆಗೆದುಕೊಳ್ಳುತ್ತೆ. ಹಾಗಾಗಿ, ಬುಧ ಗ್ರಹದಲ್ಲಿ ಸುಮಾರು ಒಂದೂವರೆ ದಿನವಾದರೆ (ತನ್ನ ಅಕ್ಷದ ಸುತ್ತ ಸುತ್ತುವ ಸಮಯದ ಒಂದೂವರೆ ಪಟ್ಟು) ಒಂದು ವರ್ಷವಾದಂತೆ! ಇದು ಸೌರ ಮಂಡಲದ ಇನ್ನಿತರ ಎಲ್ಲಾ ಗ್ರಹಗಳಿಗಿಂತ ಅತ್ಯಂತ ವೇಗವಾಗಿ ಸೂರ್ಯನ ಸುತ್ತ ಸುತ್ತುವ ಗ್ರಹ.

ಬುಧ ಗ್ರಹದಲ್ಲಿ ಸೂರ್ಯನ ಶಾಖ ವಿಪರೀತವಾಗಿ ಹೆಚ್ಚಿರುತ್ತದೆ. ಸೂರ್ಯನ ಬೆಳಕು ಬೀಳುವ ಪ್ರದೇಶಗಳಲ್ಲಿ 420 ಡಿಗ್ರಿ ಸೆಲ್ಸಿಯಸ್ ತಾಪಮಾನವಿದ್ದು, ರಾತ್ರಿಯ ಸಮಯದಲ್ಲಿ ಅಲ್ಲಿನ ಪ್ರದೇಶಗಳಲ್ಲಿ -180 ಡಿಗ್ರಿ ಸೆಲ್ಸಿಯಸ್ ತಾಪಮಾನ ಹೊಂದಿರುತ್ತದೆ. ಇಂತಹ ತೀವ್ರವಾದ ತಾಪಮಾನ ವ್ಯತ್ಯಾಸದಿಂದ ಕೂಡಿರುವ ಬುಧ ಗ್ರಹದಲ್ಲಿ ಪ್ರಸ್ತುತದ ವಿಜ್ಞಾನಕ್ಕೆ ತಿಳಿದಿರುವ ಯಾವ ಜೀವರಾಶಿಯು ಜೀವಿಸಲು ಸಾಧ್ಯವಿಲ್ಲ ಎಂಬ ತಿಳುವಳಿಕೆ ಇದೆ. ಇಂತಹ ವಿಪರೀತ ಸ್ಥಿತಿಯಿರುವ ಪ್ರದೇಶದಲ್ಲಿ ಬಾಹ್ಯಾಕಾಶ ನೌಕೆಯನ್ನು ಕಳುಹಿಸಿ ಈ ಗ್ರಹವನ್ನು ಅಧ್ಯಯನ ಮಾಡುವುದು ಕಷ್ಟಕರ. ಇದಕ್ಕೆ ಇನ್ನೊಂದು ಕಾರಣವೂ ಇದೆ. ಯಾವುದೇ ಬಾಹ್ಯಾಕಾಶ ನೌಕೆಯನ್ನು ಬುಧ ಗ್ರಹದ ಅಧ್ಯಯನಕ್ಕೆ ಭೂಮಿಯಿಂದ ಕಳುಹಿಸಿದರೆ, ಆ ನೌಕೆಯು ಸೂರ್ಯನ ದಿಕ್ಕಿಗೆ ಪ್ರಯಾಣ ಮಾಡಬೇಕಾಗಿರುವುದರಿಂದ, ನೌಕೆಯನ್ನು ಬುಧ ಗ್ರಹಕ್ಕಿಂತಲೂ ದೊಡ್ಡದಾಗಿರುವ ಸೂರ್ಯನು ತನ್ನತ್ತ ಸೆಳೆಯುವ ಸಾಧ್ಯತೆಗಳೇ ಹೆಚ್ಚಾಗಿರುತ್ತವೆ. ಆದುದರಿಂದ, ಬುಧ ಗ್ರಹದ ಅಧ್ಯಯನ ಸ್ವಲ್ಪ ಕಷ್ಠವೇ.

ಹೀಗಿದ್ದರೂ, ತಂತ್ರಜ್ಞಾನದ ಸಹಾಯದಿಂದ, 1970-75ರಲ್ಲಿ ಬುಧ ಗ್ರಹಕ್ಕೆ ಪ್ರಥಮ ಬಾಹ್ಯಾಕಾಶ ನೌಕೆಯಾದ ಮೆರಿನಿಯರ್ 10 (Meriner 10) ಎಂಬ ನೌಕೆಯನ್ನು ಕಳುಹಿಸಲಾಯಿತು. ಮಾನವನಿಗೆ ಮೊದಲ ಬಾರಿಗೆ ಬುಧ ಗ್ರಹದ ಭೂಪ್ರದೇಶ ತೋರಿಸಲು ಈ ನೌಕೆಯೇ ಸಹಾಯ ಮಾಡಿದ್ದು. ಜೊತೆಗೆ ಬುಧ ಗ್ರಹದಲ್ಲಿ ತೆಳುವಾದ ವಾತವರಣವಿರುವುದನ್ನು ಇದು ಖಾತರಿಪಡಿಸಿತು. ಬುಧ ಗ್ರಹದ ಭೂಪ್ರದೇಶವು ಚಂದ್ರನ ಮೇಲೆ ಕಾಣುವ ಕುಳಿಗಳ ಹಾಗೆಯೇ ಇರುವುದನ್ನು ಮೆರಿನಿಯರ್ 10 ತೆಗೆದ ಚಿತ್ರಗಳು ನಮಗೆ ತೋರಿಸಿದವು. ಅಲ್ಲದೆ 20074 ರಲ್ಲಿ ಉಡಾವಣೆ ಮಾಡಿದ ಮೆಸೆಂಜರ್ ನೌಕೆಯು 2011ರಲ್ಲಿ ಬುಧ ಗ್ರಹದ ಕಕ್ಷೆಗೆ ತೆರಳಿ ಬುಧ ಗ್ರಹದ ಶೇ.100 ರಷ್ಟು ಭೂಪ್ರದೇಶದ ನಕ್ಷೆಯನ್ನು ತಯಾರಿಸಿತು. ಅಲ್ಲದೆ, ಯುರೋಪ್ ಬಾಹ್ಯಾಕಾಶ ಸಂಸ್ಥೆ ಮತ್ತು ಜಪಾನ್ ಬಾಹ್ಯಾಕಾಶ ಸಂಸ್ಥೆಯ ಜಂಟಿ ಯೋಜನೆಯಲ್ಲಿ, 2018ರಲ್ಲಿ ಉಡಾವಣೆಯಾಗಿರುವ ಬೆಪಿ-ಕೊಲಾಂಬೋ ನೌಕೆಯು 2015ರಲ್ಲಿ ಬುಧ ಗ್ರಹದ ಕಕ್ಷೆಗೆ ತೆರಳಲಿದ್ದು, ಬುಧ ಗ್ರಹದಲ್ಲಿ ಇನ್ನಷ್ಟು ಅಧ್ಯಯನ ನಡೆಸಿ ಮತ್ತಷ್ಟು ವಿಸ್ಮಯಕಾರಿ ವಿಷಯಗಳ ಮೇಲೆ ಬೆಳಕು ಚೆಲ್ಲುವ ಸಾಧ್ಯತೆ ಇದೆ.

ಭೂಮಿಯ ಆಕಾಶದಲ್ಲಿ ಬರಿಗಣ್ಣಿಗೆ ಕಾಣಬಹುದಾದ ಐದು ಗ್ರಹಗಳಲ್ಲಿ ಬುಧ ಗ್ರಹವು ಒಂದು. ಆದರೆ, ಈ ಗ್ರಹವು ಸೂರ್ಯನಿಗೆ ಹತ್ತಿರವಿರುವುದರಿಂದ, ಭೂಮಿಯ ಆಕಾಶದಲ್ಲಿ, ಸೂರ್ಯನ ಬೆಳಕಿನಲ್ಲಿ ಇದನ್ನು ಗುರುತಿಸುವುದು ಕಷ್ಟವಾಗಿರುತ್ತದೆ ಅಲ್ಲದೆ, ಸೂರ್ಯನ ಜೊತೆಯೇ ಈ ಗ್ರಹವು ಮುಳುಗುತ್ತಿರುತ್ತದೆ. ಆದರೆ, ಈ ತಿಂಗಳ 12ರಂದು ಸೂರ್ಯನಿಂದ ಅತೀ ಹೆಚ್ಚು ದೂರದಲ್ಲಿ ಕಾಣುವ ಬುಧ ಗ್ರಹವನ್ನು, ಪಶ್ಚಿಮ ದಿಕ್ಕಿನಲ್ಲಿ ಶುಕ್ರ ಗ್ರಹದ ಸಹಾಯದಿಂದ ಗುರುತಿಸಬಹುದು. ಅಂದೇ ಬುಧ ಗ್ರಹ ಬಹಳ ಪ್ರಕಾಶ ಮಾನವಾಗಿ ಹೊಳೆಯುತ್ತಿರುತ್ತದೆ. ಆ ದಿನದ ಸಂಜೆ ಮೋಡಗಳಿಲ್ಲದೆ ಹೋದರೆ, ಬುಧ, ಶುಕ್ರ, ಮಂಗಳ ಗ್ರಹಗಳನ್ನು ಮತ್ತು ಚಂದ್ರನನ್ನು ಸೂರ್ಯ ಮುಳುಗಿದ ನಂತರ ಪಶ್ಚಿಮದಿಕ್ಕಿನಲ್ಲಿ ಕಾಣಬಹುದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...