HomeUncategorizedಬೆಳ್ಳಿಚುಕ್ಕಿ: ಸೌರ ಮಂಡಲದಲ್ಲಿ ಅತ್ಯಂತ ವೇಗವಾಗಿ ಸೂರ್ಯನ ಸುತ್ತ ಸುತ್ತವ ಗ್ರಹ!

ಬೆಳ್ಳಿಚುಕ್ಕಿ: ಸೌರ ಮಂಡಲದಲ್ಲಿ ಅತ್ಯಂತ ವೇಗವಾಗಿ ಸೂರ್ಯನ ಸುತ್ತ ಸುತ್ತವ ಗ್ರಹ!

- Advertisement -
- Advertisement -

ಸೂರ್ಯನಿಂದ ಕೇವಲ 5.79ಕೋಟಿ ಕಿಲೋ ಮೀಟರ್ ದೂರದಲ್ಲಿ ಇರುವ ಗ್ರಹವೇ ಬುಧ ಗ್ರಹ. ಬುಧ ಗ್ರಹ ಸೌರಮಂಡಲದ ಇತರ ಗ್ರಹಗಳಿಗೆ ಹೋಲಿಸಿದರೆ ಅತ್ಯಂತ ಚಿಕ್ಕ ಗ್ರಹ (ಪ್ಲೂಟೋ ಬುಧಕ್ಕಿಂತಲೂ ಚಿಕ್ಕ ‘ಗ್ರಹ’ ಆದರೆ ಪ್ಲೂಟೋವನ್ನು ಆಗಸ್ಟ್ 2008ರಿಂದ ಗ್ರಹಗಳ ಪಟ್ಟಿಯಿಂದ ಕೈಬಿಟ್ಟು ಕುಬ್ಜ ಗ್ರಹದ ಪಟ್ಟಿಗೆ ಸೇರಿಸಲಾಗಿದೆ). ಬುಧ ಸೂರ್ಯನಿಗೆ ಬಹಳ ಹತ್ತಿರವಿರುವ ಗ್ರಹವಾದುದರಿಂದ, ಈ ಗ್ರಹವು 88 ಭೂದಿನಗಳಲ್ಲಿ ಸೂರ್ಯನ ಸುತ್ತ ಒಂದು ಸುತ್ತು ಸುತ್ತುತ್ತದೆ. ಅಲ್ಲದೆ, ತನ್ನ ಅಕ್ಷದ ಸುತ್ತ ಸುತ್ತಲು 58 ಭೂ ದಿನಗಳನ್ನು ತೆಗೆದುಕೊಳ್ಳುತ್ತೆ. ಹಾಗಾಗಿ, ಬುಧ ಗ್ರಹದಲ್ಲಿ ಸುಮಾರು ಒಂದೂವರೆ ದಿನವಾದರೆ (ತನ್ನ ಅಕ್ಷದ ಸುತ್ತ ಸುತ್ತುವ ಸಮಯದ ಒಂದೂವರೆ ಪಟ್ಟು) ಒಂದು ವರ್ಷವಾದಂತೆ! ಇದು ಸೌರ ಮಂಡಲದ ಇನ್ನಿತರ ಎಲ್ಲಾ ಗ್ರಹಗಳಿಗಿಂತ ಅತ್ಯಂತ ವೇಗವಾಗಿ ಸೂರ್ಯನ ಸುತ್ತ ಸುತ್ತುವ ಗ್ರಹ.

ಬುಧ ಗ್ರಹದಲ್ಲಿ ಸೂರ್ಯನ ಶಾಖ ವಿಪರೀತವಾಗಿ ಹೆಚ್ಚಿರುತ್ತದೆ. ಸೂರ್ಯನ ಬೆಳಕು ಬೀಳುವ ಪ್ರದೇಶಗಳಲ್ಲಿ 420 ಡಿಗ್ರಿ ಸೆಲ್ಸಿಯಸ್ ತಾಪಮಾನವಿದ್ದು, ರಾತ್ರಿಯ ಸಮಯದಲ್ಲಿ ಅಲ್ಲಿನ ಪ್ರದೇಶಗಳಲ್ಲಿ -180 ಡಿಗ್ರಿ ಸೆಲ್ಸಿಯಸ್ ತಾಪಮಾನ ಹೊಂದಿರುತ್ತದೆ. ಇಂತಹ ತೀವ್ರವಾದ ತಾಪಮಾನ ವ್ಯತ್ಯಾಸದಿಂದ ಕೂಡಿರುವ ಬುಧ ಗ್ರಹದಲ್ಲಿ ಪ್ರಸ್ತುತದ ವಿಜ್ಞಾನಕ್ಕೆ ತಿಳಿದಿರುವ ಯಾವ ಜೀವರಾಶಿಯು ಜೀವಿಸಲು ಸಾಧ್ಯವಿಲ್ಲ ಎಂಬ ತಿಳುವಳಿಕೆ ಇದೆ. ಇಂತಹ ವಿಪರೀತ ಸ್ಥಿತಿಯಿರುವ ಪ್ರದೇಶದಲ್ಲಿ ಬಾಹ್ಯಾಕಾಶ ನೌಕೆಯನ್ನು ಕಳುಹಿಸಿ ಈ ಗ್ರಹವನ್ನು ಅಧ್ಯಯನ ಮಾಡುವುದು ಕಷ್ಟಕರ. ಇದಕ್ಕೆ ಇನ್ನೊಂದು ಕಾರಣವೂ ಇದೆ. ಯಾವುದೇ ಬಾಹ್ಯಾಕಾಶ ನೌಕೆಯನ್ನು ಬುಧ ಗ್ರಹದ ಅಧ್ಯಯನಕ್ಕೆ ಭೂಮಿಯಿಂದ ಕಳುಹಿಸಿದರೆ, ಆ ನೌಕೆಯು ಸೂರ್ಯನ ದಿಕ್ಕಿಗೆ ಪ್ರಯಾಣ ಮಾಡಬೇಕಾಗಿರುವುದರಿಂದ, ನೌಕೆಯನ್ನು ಬುಧ ಗ್ರಹಕ್ಕಿಂತಲೂ ದೊಡ್ಡದಾಗಿರುವ ಸೂರ್ಯನು ತನ್ನತ್ತ ಸೆಳೆಯುವ ಸಾಧ್ಯತೆಗಳೇ ಹೆಚ್ಚಾಗಿರುತ್ತವೆ. ಆದುದರಿಂದ, ಬುಧ ಗ್ರಹದ ಅಧ್ಯಯನ ಸ್ವಲ್ಪ ಕಷ್ಠವೇ.

ಹೀಗಿದ್ದರೂ, ತಂತ್ರಜ್ಞಾನದ ಸಹಾಯದಿಂದ, 1970-75ರಲ್ಲಿ ಬುಧ ಗ್ರಹಕ್ಕೆ ಪ್ರಥಮ ಬಾಹ್ಯಾಕಾಶ ನೌಕೆಯಾದ ಮೆರಿನಿಯರ್ 10 (Meriner 10) ಎಂಬ ನೌಕೆಯನ್ನು ಕಳುಹಿಸಲಾಯಿತು. ಮಾನವನಿಗೆ ಮೊದಲ ಬಾರಿಗೆ ಬುಧ ಗ್ರಹದ ಭೂಪ್ರದೇಶ ತೋರಿಸಲು ಈ ನೌಕೆಯೇ ಸಹಾಯ ಮಾಡಿದ್ದು. ಜೊತೆಗೆ ಬುಧ ಗ್ರಹದಲ್ಲಿ ತೆಳುವಾದ ವಾತವರಣವಿರುವುದನ್ನು ಇದು ಖಾತರಿಪಡಿಸಿತು. ಬುಧ ಗ್ರಹದ ಭೂಪ್ರದೇಶವು ಚಂದ್ರನ ಮೇಲೆ ಕಾಣುವ ಕುಳಿಗಳ ಹಾಗೆಯೇ ಇರುವುದನ್ನು ಮೆರಿನಿಯರ್ 10 ತೆಗೆದ ಚಿತ್ರಗಳು ನಮಗೆ ತೋರಿಸಿದವು. ಅಲ್ಲದೆ 20074 ರಲ್ಲಿ ಉಡಾವಣೆ ಮಾಡಿದ ಮೆಸೆಂಜರ್ ನೌಕೆಯು 2011ರಲ್ಲಿ ಬುಧ ಗ್ರಹದ ಕಕ್ಷೆಗೆ ತೆರಳಿ ಬುಧ ಗ್ರಹದ ಶೇ.100 ರಷ್ಟು ಭೂಪ್ರದೇಶದ ನಕ್ಷೆಯನ್ನು ತಯಾರಿಸಿತು. ಅಲ್ಲದೆ, ಯುರೋಪ್ ಬಾಹ್ಯಾಕಾಶ ಸಂಸ್ಥೆ ಮತ್ತು ಜಪಾನ್ ಬಾಹ್ಯಾಕಾಶ ಸಂಸ್ಥೆಯ ಜಂಟಿ ಯೋಜನೆಯಲ್ಲಿ, 2018ರಲ್ಲಿ ಉಡಾವಣೆಯಾಗಿರುವ ಬೆಪಿ-ಕೊಲಾಂಬೋ ನೌಕೆಯು 2015ರಲ್ಲಿ ಬುಧ ಗ್ರಹದ ಕಕ್ಷೆಗೆ ತೆರಳಲಿದ್ದು, ಬುಧ ಗ್ರಹದಲ್ಲಿ ಇನ್ನಷ್ಟು ಅಧ್ಯಯನ ನಡೆಸಿ ಮತ್ತಷ್ಟು ವಿಸ್ಮಯಕಾರಿ ವಿಷಯಗಳ ಮೇಲೆ ಬೆಳಕು ಚೆಲ್ಲುವ ಸಾಧ್ಯತೆ ಇದೆ.

ಭೂಮಿಯ ಆಕಾಶದಲ್ಲಿ ಬರಿಗಣ್ಣಿಗೆ ಕಾಣಬಹುದಾದ ಐದು ಗ್ರಹಗಳಲ್ಲಿ ಬುಧ ಗ್ರಹವು ಒಂದು. ಆದರೆ, ಈ ಗ್ರಹವು ಸೂರ್ಯನಿಗೆ ಹತ್ತಿರವಿರುವುದರಿಂದ, ಭೂಮಿಯ ಆಕಾಶದಲ್ಲಿ, ಸೂರ್ಯನ ಬೆಳಕಿನಲ್ಲಿ ಇದನ್ನು ಗುರುತಿಸುವುದು ಕಷ್ಟವಾಗಿರುತ್ತದೆ ಅಲ್ಲದೆ, ಸೂರ್ಯನ ಜೊತೆಯೇ ಈ ಗ್ರಹವು ಮುಳುಗುತ್ತಿರುತ್ತದೆ. ಆದರೆ, ಈ ತಿಂಗಳ 12ರಂದು ಸೂರ್ಯನಿಂದ ಅತೀ ಹೆಚ್ಚು ದೂರದಲ್ಲಿ ಕಾಣುವ ಬುಧ ಗ್ರಹವನ್ನು, ಪಶ್ಚಿಮ ದಿಕ್ಕಿನಲ್ಲಿ ಶುಕ್ರ ಗ್ರಹದ ಸಹಾಯದಿಂದ ಗುರುತಿಸಬಹುದು. ಅಂದೇ ಬುಧ ಗ್ರಹ ಬಹಳ ಪ್ರಕಾಶ ಮಾನವಾಗಿ ಹೊಳೆಯುತ್ತಿರುತ್ತದೆ. ಆ ದಿನದ ಸಂಜೆ ಮೋಡಗಳಿಲ್ಲದೆ ಹೋದರೆ, ಬುಧ, ಶುಕ್ರ, ಮಂಗಳ ಗ್ರಹಗಳನ್ನು ಮತ್ತು ಚಂದ್ರನನ್ನು ಸೂರ್ಯ ಮುಳುಗಿದ ನಂತರ ಪಶ್ಚಿಮದಿಕ್ಕಿನಲ್ಲಿ ಕಾಣಬಹುದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...