Homeಚಳವಳಿಉಪವಾಸ ನಿರತ ರೈತ ನಾಯಕ ದಲ್ಲೆವಾಲ್ ಆಸ್ಪತ್ರೆಗೆ ಸ್ಥಳಾಂತರ ಮಾಡಿ - ಪಂಜಾಬ್ ಸರ್ಕಾರಕ್ಕೆ ಸುಪ್ರೀಂಕೋರ್ಟ್...

ಉಪವಾಸ ನಿರತ ರೈತ ನಾಯಕ ದಲ್ಲೆವಾಲ್ ಆಸ್ಪತ್ರೆಗೆ ಸ್ಥಳಾಂತರ ಮಾಡಿ – ಪಂಜಾಬ್ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಗಡುವು

- Advertisement -
- Advertisement -

ಒಂದು ತಿಂಗಳಿನಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ರೈತ ಮುಖಂಡ ಜಗಜಿತ್ ಸಿಂಗ್ ದಲ್ಲೆವಾಲ್ ಅವರನ್ನು ಆಸ್ಪತ್ರೆಗೆ ಸ್ಥಳಾಂತರಿಸುವಂತೆ ಮನವೊಲಿಸಲು ಸುಪ್ರೀಂ ಕೋರ್ಟ್ ಶನಿವಾರ ಪಂಜಾಬ್ ಸರ್ಕಾರಕ್ಕೆ ಡಿಸೆಂಬರ್ 31 ರವರೆಗೆ ಕಾಲಾವಕಾಶ ನೀಡಿದೆ. ವಿಚಾರಣೆ ವೇಳೆ ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಮತ್ತು ಉಜ್ಜಲ್ ಭುಯಾನ್ ಅವರ ರಜಾಕಾಲದ ಪೀಠವು ಪರಿಸ್ಥಿತಿ ಉಲ್ಬಣಗೊಳ್ಳಲು ಅವಕಾಶ ಮಾಡಿಕೊಟ್ಟಿದ್ದಕ್ಕಾಗಿ ಮತ್ತು ದಲ್ಲೆವಾಲ್‌ಗೆ ವೈದ್ಯಕೀಯ ನೆರವು ನೀಡಲು ಕೋರ್ಟ್‌ ನೀಡಿದ್ದ ಈ ಹಿಂದಿನ ನಿರ್ದೇಶನಗಳನ್ನು ಅನುಸರಿಸದಿದ್ದಕ್ಕಾಗಿ ಪಂಜಾಬ್ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿತು. ಉಪವಾಸ ನಿರತ ರೈತ ನಾಯಕ

ಈ ವೇಳೆ ತನ್ನ ಅಸಹಾಯಕತೆಯನ್ನು ವ್ಯಕ್ತಪಡಿಸಿದ ಪಂಜಾಬ್ ಸರ್ಕಾರ, ದಲ್ಲೆವಾಲ್ ಅವರನ್ನು ಸುತ್ತುವರಿದು ಅವರನ್ನು ಆಸ್ಪತ್ರೆಗೆ ಕರೆದೊಯ್ಯದಂತೆ ತಡೆದು ಪ್ರತಿಭಟನಾಕಾರು ಭಾರಿ ಪ್ರತಿರೋಧ ವ್ಯಕ್ತಪಡಿಸುತ್ತಿದ್ದಾರೆ ಎಂದು ಹೇಳಿದೆ. ಅಷ್ಟೆ ಅಲ್ಲದೆ, ತಜ್ಞರ ತಂಡವು ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ದಲ್ಲೆವಾಲ್ ಅವರನ್ನು ಆಸ್ಪತ್ರೆಗೆ ಸ್ಥಳಾಂತರಿಸುವಂತೆ ಮನವೊಲಿಸಲು ಪ್ರಯತ್ನಿಸಿದೆ ಎಂದು ಪಂಜಾಬ್ ಸರ್ಕಾರವನ್ನು ಪ್ರತಿನಿಧಿಸುವ ಅಡ್ವೊಕೇಟ್ ಜನರಲ್ ಗುರ್ಮಿಂದರ್ ಸಿಂಗ್ ಸುಪ್ರೀಂಕೋರ್ಟ್‌ನ ಪೀಠಕ್ಕೆ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಅವರು (ದಲ್ಲೆವಾಲ್) ಡ್ರಿಪ್ಸ್ ಸೇರಿದಂತೆ ಯಾವುದೇ ರೀತಿಯ ವೈದ್ಯಕೀಯ ಸಹಾಯವನ್ನು ನಿರಾಕರಿಸಿದ್ದಾರೆ. ಇದು ಚಳುವಳಿಯ ಕಾರಣವನ್ನು ದುರ್ಬಲಗೊಳಿಸುತ್ತದೆ ಎಂದು ಅವರು ಪ್ರತಿಪಾದಿಸುತ್ತಿದ್ದಾರೆ” ಎಂದು ಅವರು ತಿಳಿಸಿದರು. ಅಡ್ವೊಕೇಟ್ ಜನರಲ್ ಅವರ ಈ ಉತ್ತರಕ್ಕೆ ಕೆರಳಿದ ಕೋರ್ಟ್, ಪರಿಸ್ಥಿತಿಯನ್ನು ಹತೋಟಿಯಲ್ಲಿಡಲು ಪಂಜಾಬ್ ಸರ್ಕಾರವು ಸಾಕಷ್ಟು ಪ್ರಯತ್ನ ಮಾಡಿಲ್ಲ ಎಂದು ದೂಷಿಸಿತು. ಉಪವಾಸ ನಿರತ ರೈತ ನಾಯಕ

ಅಷ್ಟೆ ಅಲ್ಲದೆ, ಮತ್ತು ದಲ್ಲೆವಾಲ್ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲು ಬಿಡದ ರೈತ ಮುಖಂಡರು ಆತ್ಮಹತ್ಯೆಗೆ ಪ್ರಚೋದನೆಯ ಕ್ರಿಮಿನಲ್ ಅಪರಾಧದಲ್ಲಿ ಭಾಗಿಯಾಗಿದ್ದಾರೆ ಎಂದು ಕೋರ್ಟ್ ಹೇಳಿದೆ.

ಪರಿಸ್ಥಿತಿಯನ್ನು ಖಾತರಿಪಡಿಸಿದರೆ ಕೇಂದ್ರದಿಂದ ಯಾವುದೇ ರೀತಿಯ ಲಾಜಿಸ್ಟಿಕ್ಸ್ ಬೆಂಬಲವನ್ನು ಪಡೆಯಲು ಪಂಜಾಬ್ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಅನುಮತಿ ನೀಡಿದೆ. ಜೊತೆಗೆ, ದಲ್ಲೆವಾಲ್ ಅನ್ನು ಆಸ್ಪತ್ರೆಗೆ ಸ್ಥಳಾಂತರಿಸುವ ನಿರ್ದೇಶನವನ್ನು ರಾಜ್ಯ ಸರ್ಕಾರವು ಅನುಸರಿಸಲಿದೆ ಎಂದು ಆಶಿಸುವುದಾಗಿ ಹೇಳಿದೆ.

ದಲ್ಲೆವಾಲ್ ಅವರು ಕೆಲವು ರೀತಿಯ “ಗುಂಪು ಒತ್ತಡ”ದಲ್ಲಿದ್ದಾರೆ ಮತ್ತು ಅವರನ್ನು ಆಸ್ಪತ್ರೆಗೆ ಸ್ಥಳಾಂತರಿಸಲು ಅನುಮತಿಸದ ರೈತ ಮುಖಂಡರು ಅವರ ಹಿತೈಷಿಗಳಾಗಿ ಕಾಣುತ್ತಿಲ್ಲ ಎಂದು ಪೀಠ ಹೇಳಿದೆ. ಈ ರೈತರು ಅವರ ಜೀವದ ಬಗ್ಗೆ ಕಾಳಜಿ ಹೊಂದಿದ್ದಾರೆಯೇ ಅಥವಾ ಬೇರೆ ಏನನ್ನಾದರೂ ಬಯಸುತ್ತಿದ್ದಾರೆಯೆ? ಎಂದು ಕೇಳಿರುವ ಕೋರ್ಟ್, ಈ ಬಗ್ಗೆ ನಾವು ಹೆಚ್ಚು ಹೇಳಲು ಬಯಸುವುದಿಲ್ಲ, ಆದರೆ ಪಂಜಾಬ್ ಸರ್ಕಾರವು ನಮ್ಮ ನಿರ್ದೇಶನಗಳನ್ನು ಅನುಸರಿಸುತ್ತದೆ ಎಂದು ಭಾವಿಸುತ್ತೇವೆ ಎಂದು ಹೇಳಿದೆ.

ಶುಕ್ರವಾರ, ದಲ್ಲೆವಾಲ್ ಅವರ ಸ್ಥಿತಿಯ ಬಗ್ಗೆ ಸುಪ್ರೀಂ ಕೋರ್ಟ್ ಕಳವಳ ವ್ಯಕ್ತಪಡಿಸಿತು ಮತ್ತು ಅವರಿಗೆ ವೈದ್ಯಕೀಯ ನೆರವು ನೀಡುವುದನ್ನು ಖಚಿತಪಡಿಸಿಕೊಳ್ಳಲು ಪಂಜಾಬ್ ಸರ್ಕಾರಕ್ಕೆ ನಿರ್ದೇಶನ ನೀಡಿತ್ತು. ಅಲ್ಲದೆ, ದಲ್ಲೆವಾಲ್‌ಗೆ ವೈದ್ಯಕೀಯ ನೆರವು ನೀಡುವಂತೆ ನಿರ್ದೇಶಿಸಿದ ಆದೇಶವನ್ನು ಪಾಲಿಸದಿದ್ದಕ್ಕಾಗಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಮತ್ತು ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ವಿರುದ್ಧದ ನ್ಯಾಯಾಂಗ ನಿಂದನೆ ಅರ್ಜಿಯ ಮೇಲೆ ಪಂಜಾಬ್ ಸರ್ಕಾರಕ್ಕೆ ನೋಟಿಸ್ ನೀಡಿತ್ತು.

ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಯ ಕಾನೂನಾತ್ಮಕ ಖಾತರಿ ಸೇರಿದಂತೆ ರೈತರ ಬೇಡಿಕೆಗಳನ್ನು ಅಂಗೀಕರಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಲು ದಲ್ಲೆವಾಲ್ ಅವರು ನವೆಂಬರ್ 26 ರಿಂದ ಖಾನೌರಿ ಗಡಿಯಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಅಣ್ಣಾ ವಿವಿ ಅತ್ಯಾಚಾರ ಪ್ರಕರಣ : ಮಹಿಳಾ ಅಧಿಕಾರಿಗಳ ಎಸ್‌ಐಟಿ ರಚಿಸಿದ ಮದ್ರಾಸ್ ಹೈಕೋರ್ಟ್, ₹25 ಲಕ್ಷ ಪರಿಹಾರ ನೀಡಲು ಸೂಚನೆ

ಅಣ್ಣಾ ವಿವಿ ಅತ್ಯಾಚಾರ ಪ್ರಕರಣ : ಮಹಿಳಾ ಅಧಿಕಾರಿಗಳ ಎಸ್‌ಐಟಿ ರಚಿಸಿದ ಮದ್ರಾಸ್ ಹೈಕೋರ್ಟ್, ₹25 ಲಕ್ಷ ಪರಿಹಾರ ನೀಡಲು ಸೂಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...